Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...