Homeಮುಖಪುಟಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಗಾಂಧಿಯವರು ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದು ನಂಬಿದ್ದರು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸಂವಿಧಾನ ಸಭೆಯಲ್ಲಿ 1949ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲ ಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.

“ನಾವು ಒಂದು ಜಾತ್ಯತೀತ ರಾಷ್ಟ್ರ ಎಂದು ಹೇಳುವುದರಿಂದ ನಾವು ಅದ್ಭುತವಾದ ಔದಾರ್ಯಪೂರ್ಣವಾದುದನ್ನು ಮಾಡುತ್ತಿದ್ದೇವೆ ಎಂದಾಗಲೀ, ಜಗತ್ತಿಗೆ ನಮ್ಮ ಜೇಬಿನಿಂದ ಏನನ್ನಾದರೂ ಕೊಡುತ್ತಿದ್ದೇವೆ ಎಂದಾಗಲೀ, ನಾವು ಮಾಡಬಾರದನ್ನೇನ್ನಾದರೂ ಮಾಡುತ್ತಿದ್ದೇವೆ ಎಂದಾಗಲೀ ಅರ್ಥವಲ್ಲ. ಜಗತ್ತಿನ ಕೆಲವು ದಾರಿತಪ್ಪಿದ ಮತ್ತು ಹಿಂದುಳಿದ ರಾಷ್ಟ್ರಗಳನ್ನು ಹೊರತುಪಡಿಸಿ ಪ್ರತಿಯೊಂದು ದೇಶವು ಮಾಡಿರುವುದನ್ನೇ ನಾವು ಮಾಡಿದ್ದೇವೆ” ಎಂದು ಅವರು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಆ ಮೂಲಕ ನಾಗರಿಕ ಜಗತ್ತಿನಲ್ಲಿ ಒಪ್ಪಿತವಾದ ಜಾತ್ಯತೀತ ತತ್ವಗಳನ್ನು ಸಮರ್ಥಿಸಿದ್ದರು.

 

ದೇಶ ವಿಭಜನೆಯ ಹಿಂಸಾಚಾರದ ಬಳಿಕವೂ ಜಾತ್ಯತೀತತೆಯ ಪರಿಕಲ್ಪನೆಯನ್ನು ಸಮರ್ಥಿಸಬಲ್ಲ ನೈತಿಕ ಸ್ಥೈರ್ಯವಿದ್ದ ಜನರು ಅಂದು ಇದ್ದರೆ, ಇಂದು ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳಲ್ಲಿಯೂ ಈ ನಂಬಿಕೆ ಸವಕಲಾಗುತ್ತಿದೆ. ವಿಭಜನಕಾರಿ ಚಿಂತನೆಗಳಿಗೆ ಹಿಂದುತ್ವ ಪಕ್ಷಗಳ ಬಹಿರಂಗ ನಿಷ್ಟೆಗೆ ಎದುರಾಗಿ, ಜಾತ್ಯತೀತತೆಯ ಪರ ಹಿಂಜರಿಕೆಯ, ಚೈತನ್ಯವಿಲ್ಲದ ಪ್ರತಿರೋಧವಷ್ಟೇ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಿರುವವರು ಮಾತ್ರ ರಾಜಕೀಯ ರಂಗದಲ್ಲಿ ಜಾತ್ಯತೀತತೆಯನ್ನು ಪುನಶ್ಚೇತನಗೊಳಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳು

ಗಾಂಧಿಯವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿರಲಿಲ್ಲ. ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದವರು ನಂಬಿದ್ದರು.

ಇಂದಿನಂತೆ ಅಂದೂ ಕೂಡಾ ತಾವು ಗಾಂಧಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರಿದ್ದರು. ಆದರೆ, ಅವರು ಗಾಂಧಿಯವರ ಮೇಲಿನ ವಿಚಾರಗಳನ್ನು ತಿರಸ್ಕರಿಸಿ, ಪೌರತ್ವ ಕುರಿತ ಹಿಂದೂತ್ವವಾದಿಗಳ ಸಂಕುಚಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಸೀಮಿತಗೊಳಿಸುವ ಪರಿಕಲ್ಪನೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ್ದರು. ಅಂತವರಲ್ಲಿ ಒಬ್ಬರು ಕಾಂಗ್ರೆಸಿಗ ಮಹಾವೀರ ತ್ಯಾಗಿ. ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆಯನ್ನು ಮುಂದೂಡಿ, ನಂತರದಲ್ಲಿ ಈ ವಿಷಯದ ಕುರಿತು ನಿರ್ಧರಿಸಬೇಕು ಎಂದು ಅವರು ಸಂವಿಧಾನ ಸಭೆಗೆ ಸಲಹೆ ಮಾಡಿದ್ದರು.

ಅವರದ್ದೇ ನಿಲುವನ್ನೇ ಗೃಹಮಂತ್ರಿ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯು ಪ್ರತಿಫಲಿಸುತ್ತದೆ. ತಮಗೆ ವಿಶೇಷ ಅವಕಾಶಗಳನ್ನು ಬೆಂಬಲಿಸುವುದಾದರೆ, ಅಲ್ಪಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ನೈತಿಕ ಹಕ್ಕಿಲ್ಲ ಎಂದವರು ಹೇಳಿದ್ದರು.

ತ್ಯಾಗಿಯ ವಿಚಾರಗಳನ್ನು ಮತ್ತು ಶಾ ಪುನರುಚ್ಛಾರವನ್ನು ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ತಿರಸ್ಕರಿಸಿದ್ದರು.

“ಈ ಪ್ರಸ್ತಾಪವನ್ನು ಬೆಂಬಲಿಸಲು ಇರುವ ಏಕೈಕ ಕಾರಣವೆಂದರೆ- ಯಾರೂ ಇದನ್ನು ಊಹಿಸಬಹುದು- ಅಲ್ಪಸಂಖ್ಯಾತರ ಹಕ್ಕುಗಳು ಸಾಂಬಂಧಿಕವಾಗಿರಬೇಕು ಎಂಬುದು. ಅದರ (ತ್ಯಾಗಿ ವಾದದ) ಅರ್ಥವೆಂದರೆ ನಾವು ಹಿಂದೂಸ್ಥಾನ್ ಪ್ರದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಹಕ್ಕುಗಳನ್ನು ನೀಡುವ ಮೊದಲು ಪಾಕಿಸ್ತಾನದ ಸಂವಿಧಾನ ಸಭೆಯು ಅಲ್ಪಸಂಖ್ಯಾತರಿಗೆ ಯಾವ ಹಕ್ಕುಗಳನ್ನು ನೀಡುತ್ತದೆ ಎಂದು ಕಾದುನೋಡಬೇಕು ಎಂಬುದು” ಎಂದು ಅಂಬೇಡ್ಕರ್ ಹೇಳಿದ್ದರು.

ಅವರು ಮುಂದುವರಿದು ಹೀಗೆ ಹೇಳಿದ್ದರು: “ಈಗ ಸ್ವಾಮಿ, ಎಲ್ಲಾ ಮತಬೇಧಗಳೊಂದಿಗೆ ನಾನು ಇಂತಹಾ ಯಾವುದೇ ವಿಚಾರಗಳನ್ನು ವಿರೋಧಿಸಬೇಕು. (ಇಲ್ಲಿನ) ಅಲ್ಪಸಂಖ್ಯಾತರ ಹಕ್ಕುಗಳು ಸಾಪೇಕ್ಷ (ಸಹಜ ಹಕ್ಕುಗಳು) ಹಕ್ಕುಗಳಾಗಿರಬೇಕು. ಬೇರೊಂದು ಪಕ್ಷವು (ಪಾಕಿಸ್ತಾನ) ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗೆ ಏನು ಮಾಡುತ್ತದೆ ಎಂಬಂತಹ ಯಾವುದೇ ಪರಿಗಣನೆಗೆ ಒಳಪಡಬಾರದು.

ಆದರೆ, ಸಂವಿಧಾನ ದ್ವೇಷಿ ಬಲಪಂಥೀಯರು ಇದೀಗ ಅದನ್ನೇ ಮಾಡುತ್ತಿದ್ದಾರೆ- ಧರ್ಮಾಧರಿತ ಪೌರತ್ವವನ್ನು ತರಲು ಹೊರಟಿರುವ ಮೂಲಕ! ಅವರು ಸಂವಿಧಾನದ ಮೂಲ ಆಶಯಗಳನ್ನು ನಾಶಮಾಡುತ್ತಿದ್ದಾರೆ. ಇದನ್ನು ವಿರೋಧಿಸದಿದ್ದರೇ, ನಮ್ಮ ಪವಿತ್ರ ಸಂವಿಧಾನಕ್ಕೇ ಕುತ್ತು ಬರಬಹುದು!

(ದೇಶ ವಿಭಜನೆಯ ಕಾಲದಲ್ಲಿ ನಿರಾಶ್ರಿತರಾದ ಹಿಂದೂ, ಮುಸ್ಲಿಂ ಮತ್ತು ಸಿಕ್ಖರ ಪೌರತ್ವ ಕುರಿತು ಕೂಡಾ ಬಲಪಂಥೀಯರು ಯಾವ ರೀತಿ ವಿಭಜನಕಾರಿ ನಿಲುವು ತಳೆದಿದ್ದರು ಎಂಬ ಬಗ್ಗೆ ಇನ್ನೊಂದು ಲೇಖನವನ್ನು ನಿರೀಕ್ಷಿಸಿ.)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...