Homeಮುಖಪುಟಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ...!!

ಕಾಫಿ ಡೆ ಸಂಸ್ಥಾಪಕ ಸಿದ್ದಾರ್ಥರ ಖಾತೆಯಿಂದ 20 ಬಿಲಿಯನ್ ಕಾಣೆ…!!

- Advertisement -
- Advertisement -

ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಖಾತೆಯಿಂದ 20 ಬಿಲಿಯನ್ ರೂಪಾಯಿಗಳು ಕಾಣೆಯಾಗಿದೆ ಎಂದು ಅವರ ನಿಧನದ ನಂತರ ಅದರ ಮಂಡಳಿಯು ಪ್ರಾರಂಭಿಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ತಿಂಗಳುಗಳ ಕಾಲ ನಡೆದ ಈ ತನಿಖೆಯು ಭಾರತದ ಅತಿದೊಡ್ಡ ಕಾಫಿ ಕೆಫೆಯ ಹಣಕಾಸಿನ ವಹಿವಾಟುಗಳನ್ನು ಮತ್ತು ಡಜನ್ ಗಟ್ಟಲೆ ಉದ್ಯಮಿಗಳ ಒಡೆತನದ ಖಾಸಗಿ ಕಂಪನಿಗಳೊಂದಿಗಿನ ವ್ಯವಹಾರಗಳನ್ನು ಪರಿಶೀಲಿಸಿದೆ. ಕರಡು ವರದಿಯಲ್ಲಿ ನೂರಕ್ಕಿಂತಲೂ ಹೆಚ್ಚು ಪುಟಗಳಿವೆ. ಇದು ಕಾಣೆಯಾದ ಕೋಟ್ಯಂತರ ರೂಪಾಯಿಗಳ ಬಗ್ಗೆ ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ.

ವರದಿಯು ಈ ವಾರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿ ಅಂತಿಮ ಹಂತದಲ್ಲಿದೆ ಅದು ಬಿಡುಗಡೆಯ ಮೊದಲು ನಿಖರವಾದ ವಿವರಗಳು ಬದಲಾಗಬಹುದು. ಒಬ್ಬರ ಪ್ರಕಾರ ಕಾಣೆಯಾದ ಹಣವು 25 ಬಿಲಿಯನ್ ರುಪಾಯಿಗಿಂತಳಲೂ ಹೆಚ್ಚಿದೆ ಎನ್ನಲಾಗಿದೆ.

“ತನಿಖಾ ವರದಿಯು ಇನ್ನೂ ಅಂತಿಮಗೊಂಡಿಲ್ಲ, ಪ್ರಗತಿಯಲ್ಲಿದೆ. ನಿರ್ದೇಶಕರ ಮಂಡಳಿ ಮತ್ತು ಕಂಪನಿಗೆ ಈ ಸಮಯದಲ್ಲಿ ಅದರ ವಿಷಯದ ಬಗ್ಗೆ ತಿಳಿದಿಲ್ಲ. ಆದ್ದರಿಂದ ತನಿಖೆಯ ಬಗ್ಗೆ ಊಹಿಸುವುದು ಸರಿಯಲ್ಲ” ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಸಿದ್ಧಾರ್ಥರವರ ಕುಟುಂಬ ಹಾಗೂ ಆಡಳಿತ ಮಂಡಳಿಯ ಆದ್ಯತೆ ಏನೆಂದರೆ, ಇಂತಹ ಪ್ರತಿಕೂಲ ವಾತಾವರಣದಲ್ಲೂ ವ್ಯವಹಾರವನ್ನು ನಡೆಸುವುದು, ಎಲ್ಲಾ ಶೇರುದಾರರ ಹಾಗೂ 30,000 ಉದ್ಯೋಗಿಗಳ ಭಾದ್ಯತೆಯನ್ನು ಪೂರೈಸುವುದಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

ಕಳೆದ ವರ್ಷ 59 ​​ವರ್ಷದ ಕೆಫೆ ಕಾಫಿ ಡೆ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಮಂಗಳೂರಿನ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ಧಾರ್ಥ ಸಹಿ ಮಾಡಿದಂತೆ ಕಂಡುಬರುವ ಕಾಫಿ ಡೆ ಮಂಡಳಿ ಮತ್ತು ಉದ್ಯೋಗಿಗಳಿಗೆ ನೀಡಿದ ಪತ್ರಗಳಲ್ಲಿ ಭಾರಿ ಸಾಲಗಳ ಬಗ್ಗೆ ವಿವರಿಸಲಾಗಿತ್ತು. ಅದರಲ್ಲಿ ಸಾಲದಾತರು ಮತ್ತು ತೆರಿಗೆ ಅಧಿಕಾರಿಗಳ ಒತ್ತಡದ ಬಗ್ಗೆ ಕೂಡ ದೂರಲಾಗಿತ್ತು. ಕಂಪನಿಯ ಹಣಕಾಸು ವಹಿವಾಟಿನ ಸಂಪೂರ್ಣ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆಂದು ಅದು ಹೇಳಿತ್ತು.

ಕೆಫೆ ಕಾಫಿ ಡೆ 1,500 ಕ್ಕೂ ಹೆಚ್ಚು ಶಾಖೆಗಳು ದೇಶದಾದ್ಯಂತ ಹರಡಿದೆ. ಆದರೆ ಸಿದ್ದಾರ್ಥದ ಮರಣದ ನಂತರ ಅದರ ಷೇರುಗಳು ಸುಮಾರು 90% ನಷ್ಟು ಕುಸಿದವು ಮತ್ತು ಅದರ ಮಾರುಕಟ್ಟೆ ಮೌಲ್ಯವು ಸುಮಾರು 80 ದಶ ಲಕ್ಷಕ್ಕೆ ಇಳಿಯಿತು. ಫೆಬ್ರವರಿಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಯಿತು. ಮಾರ್ಚ್ 2019 ರ ಹೊತ್ತಿಗೆ ಕಾಫಿ ಡೇ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ಸುಮಾರು 24 ಶತಕೋಟಿ ರೂಪಾಯಿ ನಗದು ಮತ್ತು ನಗದು ಸಮಾನತೆಯನ್ನು ತೋರಿಸಿದೆ. ಇದು ಕಂಪನಿಯು ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳು.

ಆದಾಗ್ಯೂ ಸಿದ್ಧಾರ್ಥರ ಮರಣದ ನಂತರ, ಕಂಪನಿಯು ತೀವ್ರ ಬಿಕ್ಕಟ್ಟನ್ನು ಎದುರಿಸಿತು. ಕಂಪೆನಿಯು ದಿನನಿತ್ಯದ ಖರ್ಚಿಗೆ ಹೆಣಗಾಡುತ್ತಿದೆ ಮತ್ತು ಸಂಬಳವನ್ನು ಪಾವತಿಸುವುದು ಕೂಡಾ ಕಷ್ಟಕರವಾಗಿದೆ ಎಂದು ಹೇಳಲಾಗಿದೆ.

ಸಿದ್ಧಾರ್ಥ ಮತ್ತು ಅವರ ಹಲವಾರು ಉದ್ಯೋಗಿಗಳ ಒಡೆತನದ ಕಾಫಿ ಎಸ್ಟೇಟ್‌ಗಳನ್ನು ಬ್ಯಾಂಕ್ ಸಾಲಗಳಿಗೆ ಮೂಲಾಧಾರವಾಗಿ ಬಳಸಲಾಗಿದೆ. ಸಾಲವನ್ನು ಪಡೆಯಲು ಆಸ್ತಿಗಳ ಮೌಲ್ಯಮಾಪನಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಲ್ಲಿ ಕಂಡುಬಂದಿದೆ.

ಸಿದ್ಧಾರ್ಥರು ತಮ್ಮ ಪತ್ರದಲ್ಲಿ, “ನಾನು ಅತ್ಯುತ್ತಮವಾಗಿ ಪ್ರಯತ್ನಿಸಿದ್ದೇನೆ ಆದರೆ ಉದ್ಯಮಿಯಾಗಿ ವಿಫಲವಾದೆ” ಎಂದು ಬರೆದಿದ್ದರು. “ಎಲ್ಲಾ ತಪ್ಪುಗಳಿಗೆ ನಾನು ಮಾತ್ರ ಜವಾಬ್ದಾರನಾಗಿರುತ್ತೇನೆ” ಎಂದು ಪತ್ರವನ್ನು ಬರೆಯಲಾಗಿದೆ. “ಪ್ರತಿ ಹಣಕಾಸಿನ ವಹಿವಾಟು ನನ್ನ ಜವಾಬ್ದಾರಿಯಾಗಿದೆ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ನಿರ್ವಹಣೆಗಾರರಿಗೆ ನನ್ನ ಎಲ್ಲಾ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಂದಲೂ ಈ ಮಾಹಿತಿಯನ್ನು ನಾನು ಕೊಡದಿರುವ ಕಾರಣ ಎಲ್ಲದಕ್ಕೂ ನಾನು ಮಾತ್ರ ಜವಾಬ್ದಾರ” ಎಂದು ಬರೆದಿದ್ದರು.

ವರದಿ ಬಿಡುಗಡೆಯಾಗಲು ಹತ್ತಿರವಾಗುತ್ತಿದ್ದಂತೆ , ಕಾಫಿ ಡೇ ರಿಯಲ್ ಎಸ್ಟೇಟ್ ಆಸ್ತಿಗಳಿಗಾಗಿ ಬ್ಲ್ಯಾಕ್‌ಸ್ಟೋನ್ ಗ್ರೂಪ್ ನೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ. ಸುಮಾರು ಒಂದು ವಾರದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಉದ್ಯೋಗವನ್ನು ಉಳಿಸುವುದು ಮತ್ತು ಈ ಸಾಂಪ್ರದಾಯಿಕ ಭಾರತೀಯ ಬ್ರಾಂಡ್ ಅನ್ನು ಕಾಪಾಡುವುದು ಇದರ ಉದ್ದೇಶ” ಎಂದು ವಕ್ತಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...