Homeಮುಖಪುಟಎನ್.ಪಿ.ಆರ್ - ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

ಎನ್.ಪಿ.ಆರ್ – ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

- Advertisement -
- Advertisement -

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜನರಿಂದ ಯಾವ ರೀತಿ ಮಾಹಿತಿ ಪಡೆಯಬೇಕು, ಯಾವ ಪ್ರಶ್ನೆಗಳನ್ನು ಕೇಳಬೇಕು ಎಂಬ ಬಗ್ಗೆ ತರಬೇತಿ ನೀಡಿ ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ. ಶಿಕ್ಷಕರು ಎನ್.ಪಿ.ಆರ್ ಮತ್ತು ಜನಗಣತಿಗೆ ಸಂಬಂಧ ಏಪ್ರಿಲ್ 15 ರಿಂದ ಮನೆಮನೆ ಭೇಟಿ ನೀಡಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಸಿದ್ದರಾಗಿ ನಿಂತಿದ್ದಾರೆ.

ಎನ್ ಪಿ.ಆರ್ ಗಣತಿ ವೇಳೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪ್ರತಿಯೊಂದು ಪ್ರಶ್ನೆಗೂ ಉತ್ತರ ಸಮರ್ಪಕವಾಗಿರಬೇಕು. ಆಧಾರ್ ನಂಬರ್, ಜನ್ಮದಿನಾಂಕ, ತಂದೆ-ತಾಯಿಯ ಸಂಪೂರ್ಣ ಮಾಹಿತಿ ನೀಡಬೇಕು. ತಂದೆ ಹುಟ್ಟಿದ ಗ್ರಾಮ, ತಾಯಿಯ ತವರಿನ ಕುರಿತು ಮಾಹಿತಿ ನೀಡಬೇಕು. ಪ್ರತಿಯೊಬ್ಬ ವ್ಯಕ್ತಿಯ ಆಧಾರ್ ಮತ್ತು ಜನ್ಮದಿನಾಂಕವನ್ನು ನೀಡಲೇಬೇಕು. ವ್ಯಕ್ತಿಯ ತಂದೆ, ತಾಯಿ, ಹೆಂಡತಿ, ಗಂಡ, ಮಕ್ಕಳ ವಿವರಗಳನ್ನು ಕೊಡಬೇಕು.

ಬಹುತೇಕರಿಗೆ ತಮ್ಮ ತಂದೆ-ತಾಯಿಗಳು ಯಾವ ಗ್ರಾಮದಲ್ಲಿ ಜನಿಸಿದರು.  ಎಲ್ಲಿಂದ ಬಂದವರು ಎಂಬ ಬಗ್ಗೆ ಮಾಹಿತಿಯೇ ಇಲ್ಲ. ತಂದೆ-ತಾಯಿಗಳ ಜನ್ಮದಿನಾಂಕವೂ ಇಲ್ಲ. ಅಷ್ಟೇ ಅಲ್ಲ ಬಹುತೇಕರಿಗೆ 1980ಕ್ಕೂ ಮೊದಲು ಜನಿಸಿದವರಿಗೆ ಜನ್ಮ ಪ್ರಮಾಣ ಪತ್ರಗಳೇ ಇಲ್ಲ. ನಂತರದವರಿಗೂ ಇಲ್ಲ. ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಇರುವ ಜನ್ಮದಿನಾಂಕವನ್ನು ಬಿಟ್ಟರೆ ಬೇರೊಂದು ಪ್ರಮಾಣ ಪತ್ರ ಇಲ್ಲ. ಹಾಗಾಗಿ ಮಾಹಿತಿ ನೀಡುವಾಗ ಅಪ್ಪ-ಅಮ್ಮಂದಿರ ಹುಟ್ಟಿದ ಗ್ರಾಮದ ಬಗ್ಗೆ ಮಾಹಿತಿ ನೀಡದಿದ್ದರೆ ಮಾಹಿತಿ ಕೊಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗಲಾಗುತ್ತದೆ..

ಕೇಂದ್ರ ಸರ್ಕಾರ ಎನ್.ಪಿ.ಆರ್ ಗಣತಿಯ ಬಗ್ಗೆ ಪ್ರಶ್ನಾವಳಿ ಅಂತಿಮಗೊಳಿಸಿಲ್ಲ ಎಂದು ಹೇಳುತ್ತಿದೆ. ಕೆಲವು ಪ್ರಶ್ನೆಗಳನ್ನು ತೆಗೆದುಹಾಕುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ದೇಶಾದ್ಯಂತ ಪ್ರತಿಭಟನೆಗಳು ನಡೆಸುತ್ತಿವೆ. ಸುಮಾರು 10ಕ್ಕೂ ಹೆಚ್ಚು ರಾಜ್ಯಗಳು ಎನ್.ಪಿ.ಆರ್. ನಡೆಸುವುದಿಲ್ಲವೆಂದು ನಿರ್ಣಯ ಕೈಗೊಂಡಿವೆ. ಕೇಂದ್ರ ಸರ್ಕಾರ ಎನ್.ಪಿ.ಆರ್ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಜನರನ್ನು ಗೊಂದಲದಲ್ಲಿಟ್ಟಿದೆ. ಎನ್.ಪಿ.ಆರ್ ಪ್ರಶ್ನಾವಳಿಗಳು ಸ್ಪಷ್ಟಗೊಂಡಿಲ್ಲ. ಆದರೆ ತರಬೇತಿ ಪಡೆದಿರುವ ಶಿಕ್ಷಕರು ಜನರ ವಿರೋಧದ ನಡುವೆಯೂ ಎನ್.ಪಿ.ಆರ್ ಗಣತಿಗೆ ಸಿದ್ದತೆ ನಡೆಸಿದ್ದಾರೆ.

ಎನ್.ಪಿ.ಆರ್. ಗಣತಿದಾರರಿಗೆ ಮಾಹಿತಿ ನೀಡುವುದು ಕಡ್ಡಾಯವೇನಲ್ಲ. ಆದರೆ ಜನರು ಮಾಹಿತಿ ನೀಡದಿದ್ದರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗುತ್ತಾರೆ. ಇಂಥವರ ಮೇಲೆ ಮುಂದಿನ ದಿನಗಳಲ್ಲಿ ಕಣ್ಗಾವಲು ಇಡುವ ಸಾಧ್ಯತೆ ಇದೆ. ಎನ್.ಪಿ.ಆರ್. ಗಣತಿಯಲ್ಲಿ 14 ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ಪೂರ್ಣ ಮಾಹಿತಿ ನೀಡಬೇಕೆಂದೇನೂ ಇಲ್ಲದಿದ್ದರು ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದು. ಗಣತಿದಾರರು ಏಪ್ರಿಲ್ 15ರಿಂದ ಮಾಡಲಿರುವ ಎನ್.ಪಿ.ಆರ್ ಗಣತಿಯ ಸಂದರ್ಭ ಯಾವ ಸಮಸ್ಯೆಗಳನ್ನು ಎದುರಿಸುತ್ತಾರೋ, ಜನರ ಪ್ರತಿಕ್ರಿಯೆ ಹೇಗಿರುತ್ತದೋ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...