Homeಮುಖಪುಟಎನ್.ಪಿ.ಆರ್ - ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

ಎನ್.ಪಿ.ಆರ್ – ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

- Advertisement -
- Advertisement -

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜನರಿಂದ ಯಾವ ರೀತಿ ಮಾಹಿತಿ ಪಡೆಯಬೇಕು, ಯಾವ ಪ್ರಶ್ನೆಗಳನ್ನು ಕೇಳಬೇಕು ಎಂಬ ಬಗ್ಗೆ ತರಬೇತಿ ನೀಡಿ ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ. ಶಿಕ್ಷಕರು ಎನ್.ಪಿ.ಆರ್ ಮತ್ತು ಜನಗಣತಿಗೆ ಸಂಬಂಧ ಏಪ್ರಿಲ್ 15 ರಿಂದ ಮನೆಮನೆ ಭೇಟಿ ನೀಡಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಸಿದ್ದರಾಗಿ ನಿಂತಿದ್ದಾರೆ.

ಎನ್ ಪಿ.ಆರ್ ಗಣತಿ ವೇಳೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪ್ರತಿಯೊಂದು ಪ್ರಶ್ನೆಗೂ ಉತ್ತರ ಸಮರ್ಪಕವಾಗಿರಬೇಕು. ಆಧಾರ್ ನಂಬರ್, ಜನ್ಮದಿನಾಂಕ, ತಂದೆ-ತಾಯಿಯ ಸಂಪೂರ್ಣ ಮಾಹಿತಿ ನೀಡಬೇಕು. ತಂದೆ ಹುಟ್ಟಿದ ಗ್ರಾಮ, ತಾಯಿಯ ತವರಿನ ಕುರಿತು ಮಾಹಿತಿ ನೀಡಬೇಕು. ಪ್ರತಿಯೊಬ್ಬ ವ್ಯಕ್ತಿಯ ಆಧಾರ್ ಮತ್ತು ಜನ್ಮದಿನಾಂಕವನ್ನು ನೀಡಲೇಬೇಕು. ವ್ಯಕ್ತಿಯ ತಂದೆ, ತಾಯಿ, ಹೆಂಡತಿ, ಗಂಡ, ಮಕ್ಕಳ ವಿವರಗಳನ್ನು ಕೊಡಬೇಕು.

ಬಹುತೇಕರಿಗೆ ತಮ್ಮ ತಂದೆ-ತಾಯಿಗಳು ಯಾವ ಗ್ರಾಮದಲ್ಲಿ ಜನಿಸಿದರು.  ಎಲ್ಲಿಂದ ಬಂದವರು ಎಂಬ ಬಗ್ಗೆ ಮಾಹಿತಿಯೇ ಇಲ್ಲ. ತಂದೆ-ತಾಯಿಗಳ ಜನ್ಮದಿನಾಂಕವೂ ಇಲ್ಲ. ಅಷ್ಟೇ ಅಲ್ಲ ಬಹುತೇಕರಿಗೆ 1980ಕ್ಕೂ ಮೊದಲು ಜನಿಸಿದವರಿಗೆ ಜನ್ಮ ಪ್ರಮಾಣ ಪತ್ರಗಳೇ ಇಲ್ಲ. ನಂತರದವರಿಗೂ ಇಲ್ಲ. ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಇರುವ ಜನ್ಮದಿನಾಂಕವನ್ನು ಬಿಟ್ಟರೆ ಬೇರೊಂದು ಪ್ರಮಾಣ ಪತ್ರ ಇಲ್ಲ. ಹಾಗಾಗಿ ಮಾಹಿತಿ ನೀಡುವಾಗ ಅಪ್ಪ-ಅಮ್ಮಂದಿರ ಹುಟ್ಟಿದ ಗ್ರಾಮದ ಬಗ್ಗೆ ಮಾಹಿತಿ ನೀಡದಿದ್ದರೆ ಮಾಹಿತಿ ಕೊಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗಲಾಗುತ್ತದೆ..

ಕೇಂದ್ರ ಸರ್ಕಾರ ಎನ್.ಪಿ.ಆರ್ ಗಣತಿಯ ಬಗ್ಗೆ ಪ್ರಶ್ನಾವಳಿ ಅಂತಿಮಗೊಳಿಸಿಲ್ಲ ಎಂದು ಹೇಳುತ್ತಿದೆ. ಕೆಲವು ಪ್ರಶ್ನೆಗಳನ್ನು ತೆಗೆದುಹಾಕುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ದೇಶಾದ್ಯಂತ ಪ್ರತಿಭಟನೆಗಳು ನಡೆಸುತ್ತಿವೆ. ಸುಮಾರು 10ಕ್ಕೂ ಹೆಚ್ಚು ರಾಜ್ಯಗಳು ಎನ್.ಪಿ.ಆರ್. ನಡೆಸುವುದಿಲ್ಲವೆಂದು ನಿರ್ಣಯ ಕೈಗೊಂಡಿವೆ. ಕೇಂದ್ರ ಸರ್ಕಾರ ಎನ್.ಪಿ.ಆರ್ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಜನರನ್ನು ಗೊಂದಲದಲ್ಲಿಟ್ಟಿದೆ. ಎನ್.ಪಿ.ಆರ್ ಪ್ರಶ್ನಾವಳಿಗಳು ಸ್ಪಷ್ಟಗೊಂಡಿಲ್ಲ. ಆದರೆ ತರಬೇತಿ ಪಡೆದಿರುವ ಶಿಕ್ಷಕರು ಜನರ ವಿರೋಧದ ನಡುವೆಯೂ ಎನ್.ಪಿ.ಆರ್ ಗಣತಿಗೆ ಸಿದ್ದತೆ ನಡೆಸಿದ್ದಾರೆ.

ಎನ್.ಪಿ.ಆರ್. ಗಣತಿದಾರರಿಗೆ ಮಾಹಿತಿ ನೀಡುವುದು ಕಡ್ಡಾಯವೇನಲ್ಲ. ಆದರೆ ಜನರು ಮಾಹಿತಿ ನೀಡದಿದ್ದರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗುತ್ತಾರೆ. ಇಂಥವರ ಮೇಲೆ ಮುಂದಿನ ದಿನಗಳಲ್ಲಿ ಕಣ್ಗಾವಲು ಇಡುವ ಸಾಧ್ಯತೆ ಇದೆ. ಎನ್.ಪಿ.ಆರ್. ಗಣತಿಯಲ್ಲಿ 14 ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ಪೂರ್ಣ ಮಾಹಿತಿ ನೀಡಬೇಕೆಂದೇನೂ ಇಲ್ಲದಿದ್ದರು ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದು. ಗಣತಿದಾರರು ಏಪ್ರಿಲ್ 15ರಿಂದ ಮಾಡಲಿರುವ ಎನ್.ಪಿ.ಆರ್ ಗಣತಿಯ ಸಂದರ್ಭ ಯಾವ ಸಮಸ್ಯೆಗಳನ್ನು ಎದುರಿಸುತ್ತಾರೋ, ಜನರ ಪ್ರತಿಕ್ರಿಯೆ ಹೇಗಿರುತ್ತದೋ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...