Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...