Homeಚಳವಳಿಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ.

- Advertisement -
- Advertisement -

ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಸಂಗತಿ. ಇದೇ ಉದ್ದೇಶದಿಂದ ನೂರಾರು, ಸಾವಿರಾರು ಮಂದಿ ಸೇರುವ ಸಭೆ-ಸಮಾರಂಭಗಳನ್ನು ರದ್ದುಪಡಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಬಂಧಿಸಿದೆ ಹೇರಿದೆ. ಫುಡ್ ಜಂಕ್ಷನ್‌ಗಳನ್ನು ನಿಷೇಧಿಸಿದೆ. ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದು ಆಗಿದೆ. ಅದ್ದೂರಿ ಮದುವೆಗಳಿಗೂ ಬ್ರೇಕ್ ಬಿದ್ದಿದೆ. ಹೋಟೆಲ್‌ಗಳಿಗೂ ಮುಚ್ಚುವಂತೆ ಆದೇಶಿಸಲಾಗಿದೆ. ಹಣವಂತರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಬಡವರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕರಿಗೆ ನಿಯಮ ಅನ್ವಯ  ಆದರೆ ಬಹುತೇಕರಿಗೆ ಅದು ಲೆಕ್ಕಕ್ಕಿಲ್ಲ. ಸರ್ಕಾರದ ಅದೇಶ ಗಾರ್ಮೆಂಟ್ಸ್ ಮತ್ತು ದೊಡ್ಡದೊಡ್ಡ ಕಂಪನಿಗಳಿಗೆ ಅನ್ವಯವಾಗುವುದಿಲ್ಲ ಏಕೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರದ ಕಂಪನಿಗಳು ತಮ್ಮ ಕಾರ್ಮಿಕರನ್ನು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತೆ ಸೂಚನೆ ನೀಡಿವೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬಿಡದಿ, ಬೊಮ್ಮಸಂದ್ರ, ಅತ್ತಿಬೆಲೆ, ವೀರಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ದೊಡ್ಡದೊಡ್ಡ ಕಂಪನಿಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ ಗಳಿಗೆ ಸರ್ಕಾರದ ಆದೇಶ ಅನ್ವಯವಾಗುತ್ತಿಲ್ಲ. ನೂರಾರು ಮಂದಿ ಕಾರ್ಮಿಕರು ಅಕ್ಕ- ಪಕ್ಕದಲ್ಲಿಯೇ ನಿಂತು ಕೆಲಸ ಮಾಡುವ ಜಾಗದಲ್ಲಿ ಕೊರೊನಾ ಹರಡುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಗಾರ್ಮೆಂಟ್ಸ್‌ಗಳಲ್ಲಿ ಮಹಿಳಾ ಕಾರ್ಮಿಕರು ಸಾಮೂಹಿಕವಾಗಿಯೇ ಕುಳಿತು ಒಬ್ಬರನ್ನೊಬ್ಬರು ಮುಟ್ಟುತ್ತ ಕೆಲಸ ಮಾಡುವಂತಹ ಪರಿಸ್ಥಿತಿ ಇದೆ. ಒಂದು ಅಂದಾಜಿನ ಪ್ರಕಾರ 10 ಲಕ್ಷ ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ದುಡಿಯುತ್ತಿದ್ದಾರೆ. ಆ ಕಾರ್ಮಿಕರೆಲ್ಲ ಬೇರೆಬೇರೆ ಪ್ರದೇಶದಿಂದ ಬರುತ್ತಾರೆ. ಹಾಗಿದ್ದಾಗ ಅವರಿಗೂ ಕೊರೊನಾ ವೈರಸ್ ಹರಡುತ್ತದಲ್ಲವೇ? ಸರ್ಕಾರ ಒಬ್ಬರಿಗೆ ಒಂದು ನೀತಿ ಮತ್ತೊಬ್ಬರಿಗೆ ಒಂದು ನೀತಿ ಅನುಸರಿಸುತ್ತಿರುವುದು ತಪ್ಪಲ್ಲವೇ?

ಬೆಂಗಳೂರಿನ ಉಪನಗರವೆಂದೇ ಬಿಂಬಿಸಲಾಗುತ್ತಿರುವ ತುಮಕೂರಿನಲ್ಲೂ ಕೂಡ ಹಲವು ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್‌ಗಳು ಇವೆ. ಡಾಬಸ್‌ಪೇಟೆಯ ಬಳಿ ಸೋಂಪುರ ಕೈಗಾರಿಕಾ ಪ್ರದೇಶವಿದೆ. ತುಮಕೂರಿನ ವಸಂತ ನರಸಾಪುರದಲ್ಲಿ ಖಾಸಗಿ ಸಹಭಾಗಿತ್ವದ ಫುಡ್ ಪಾರ್ಕಿನಲ್ಲಿ ಕಾಯಂ, ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 800 ಕಾರ್ಮಿಕರಿದ್ದಾರೆ. ಅಲ್ಲಿಯೂ ಹಲವು ಕಾರ್ಖಾನೆಗಳು ಇವೆ. ಅಂತರಸನಹಳ್ಳಿಯ ಕೈಗಾರಿಕಾ ವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಪ್ತ ಮುಖೇಶ್ ಕುಮಾರ್ ಗಾರ್ಗ್ ಒಡೆತನದ VS ಪ್ರಾಡಕ್ಟ್ (ತಂಬಾಕು), VSN ಪ್ರಾಡಕ್ಟ್ (ಪಾನ್ ಮಸಾಲ), VSN ಪಾನ್ ಪ್ರಾಡಕ್ಟ್ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ 800 ಮಂದಿ ಏಕಕಾಲದಲ್ಲಿ ಪಾನ್ ಮಸಾಲ, ತಂಬಾಕು ತಯಾರಿಕೆಯಲ್ಲಿ ತೊಡಗಿರುತ್ತಾರೆ. ಸಾಮಾನ್ಯ ಜನರಿಗೆ ಇರುವ ಈ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಇಲ್ಲವೇ?

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಾರ್ಮಿಕ ಮುಖಂಡ ಸೈಯದ್ ಮುಜೀಬ್, ತುಮಕೂರು ನಗರ ವ್ಯಾಪ್ತಿಯಲ್ಲಿ ಸುಮಾರು 400 ಕಾರ್ಖಾನೆಗಳಿವೆ. ನಿತ್ಯವೂ ಬೆಳಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಬಗೆ ಬಗೆಯ ಕಾರ್ಮಿಕರು ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ. ನಗರದಲ್ಲಿರುವ ಜನರಿಗೆ ಕೊರೊನಾ ವೈರಸ್ ಹರಡುವುದಾದರೆ ಕೈಗಾರಿಕಾ ಕಾರ್ಮಿಕರಿಗೆ ಹರಡುವುದಿಲ್ಲವೇ? ಅವರದ್ದು ಜೀವವಲ್ಲವೇ? ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒಂದೆಡೆ ಸೇರಿದರೆ ರೋಗ ಹರಡುವ ಬೀತಿ ಇದ್ದರೆ ಒಟ್ಟಾಗಿ ದುಡಿಯುವ ಕಾರ್ಮಿಕರಿಗೆ ಬರುವುದಿಲ್ಲವೇ? ಇಂತಹ ತಾರತಮ್ಯವನ್ನು ಸರ್ಕಾರ ಬಿಡಬೇಕು. ಈ ನಾಡು ಕಟ್ಟುವಲ್ಲಿ, ಆರ್ಥಿಕತೆ ಸೃಷ್ಟಿಸುವಲ್ಲಿ ಮಹಿಳೆಯರ ಪಾಲು ಹೆಚ್ಚಿದೆ. ಅಂಥವರ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ  ಅನುಸರಿಸುತ್ತಿದೆ. ಅವರಿಗೂ ರಜೆ ಕೊಡಬೇಕು ಎಂದು ಒತ್ತಾಯಿಸಿದರು.

ಟಿಎಂಇಐಸಿ ಕಂಪನಿಯಲ್ಲಿ ಸುಮಾರು 800 ಕಾರ್ಮಿಕರು ದುಡಿಯುತ್ತಾರೆ. ಗುಬ್ಬಿ ಗೇಟ್‌ ಭಾಗದಲ್ಲಿರುವ ಗೋಕುಲ್ ದಾಸ್ ಗಾರ್ಮೆಂಟ್ಸ್ , ಶಾಯಿ ಗಾರ್ಮೆಂಟ್ಸ್‌ನಲ್ಲಿ ಒಬ್ಬರಿಗೊಬ್ಬರು ಅಂತರವಿಲ್ಲದೆ ದುಡಿಯುವ ಪರಿಸ್ಥಿತಿ ಇದೆ. ಎರಡು ಗಾರ್ಮೆಂಟ್ಸ್‌ಗಳಿಂದಲೂ 10 ಸಾವಿರ ಮಂದಿ ಮಹಿಳೆಯರು ದುಡಿಯುತ್ತಿದ್ದಾರೆ. ಅವರಿಗೆ ಯಾವುದೇ ಸುರಕ್ಷತೆ ಇಲ್ಲ. ಮಾಸ್ಕ್ ಕೂಡ ಹಾಕಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರೂ ಸ್ಪರ್ಶಿಸಿಕೊಂಡೇ ಕೆಲಸ ಮಾಡಬೇಕು. 100ಕ್ಕೂ ಹೆಚ್ಚು ಮಂದಿ ಸೇರುವ ಸಭೆ ಸಮಾಂಭಗಳು, ಮದುವೆಗಳು, ಪುಡ್ ಜಂಕ್ಷನ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚುವುದಾದರೆ ಇಲ್ಲೂ ಹಾಗೆ ಮಾಡಬೇಕಲ್ಲವೇ?  ಕಾರ್ಮಿಕರು ಕೆಲಸ ಮಾಡಲು ಸರ್ಕಾರ ಅವಕಾಶ ನೀಡಿ ಕೇವಲ ನಗರದಲ್ಲಿರುವವರನ್ನು ಮಾತ್ರ ರಕ್ಷಿಸಲು ಹೊರಟಿದೆಯೇ? ಈ ಪ್ರಶ್ನೆಗೆ ಉತ್ತರವಿಲ್ಲ.

ಬಡವರು ಕೆಲಸ ಮಾಡುವ ಕಂಪನಿಗಳಲ್ಲಿ ರಜೆ ನೀಡುತ್ತಿಲ್ಲ. ರಜೆ ನೀಡಿದರೆ ಸಂಬಳ ಸಹಿತ ರಜೆ ನೀಡಬೇಕಾಗುತ್ತದೆ ಎಂಬುದು ಕಂಪನಿಗಳ ಅಂಬೋಣ. ಅಂದರೆ ಇಷ್ಟು ದಿನ ಆ ಕಂಪನಿಗಾಗಿ ದುಡಿದವರಿಗೆ ಕಷ್ಟಕಾಲದಲ್ಲಿ ರಜೆ ಕೊಡಲು ಈ ಕಂಪನಿಗಳು ಹಿಂದೆ ಮುಂದೆ ನೋಡುತ್ತಿವೆ. ಸರ್ಕಾರಗಳು ಸಹ ಇವರನ್ನು ಮಾತಾಡಿಸುವುದಿಲ್ಲ. ದಿನ ದಿನದ ಲಾಭವಷ್ಟೇ ಮುಖ್ಯ ಹೊರತು ಬಡವರ ಪ್ರಾಣಗಳಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...