Homeಮುಖಪುಟದಿಗ್ವಿಜಯ್ ಸಿಂಗ್ ರನ್ನು ವಶಕ್ಕೆ ಪಡೆದ ಪೊಲೀಸರು

ದಿಗ್ವಿಜಯ್ ಸಿಂಗ್ ರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರನ್ನು ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಪ್ರದೇಶದ 22 ಬಂಡಾಯ ಶಾಸಕನ್ನು ಭೇಟಿಯಾಗಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಕಳೆದ ವಾರ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಪರವಾಗಿರುವ ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಕುಸಿಯುವ ಸಾಧ್ಯತೆಯಲ್ಲಿದೆ. ಶಾಸಕರನ್ನು ಬೆಂಗಳೂರಿನಲ್ಲಿ ಸೆರೆಯಲ್ಲಿಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇಂದು ಮುಂಜಾನೆ ಬೆಂಗಳೂರಿಗೆ ಬಂದಿಳಿದ ದಿಗ್ವಿಜಯ ಸಿಂಗ್ ಅವರನ್ನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ನಂತರ ನೇರವಾಗಿ ಉತ್ತರ ಬೆಂಗಳೂರಿನ ಯಲಹಂಕಾದ ರಾಮದಾ ಹೋಟೆಲ್ ಗೆ ತೆರಳಿದ್ದರು.

“ಅವರು ಹಿಂತಿರುಗಬೇಕೆಂದು ನಾವು ನಿರೀಕ್ಷಿಸುತ್ತಿದ್ದೇವೆ. ನಾನು ವೈಯಕ್ತಿಕವಾಗಿ ಐದು ಶಾಸಕರೊಂದಿಗೆ ಮಾತನಾಡಿದ್ದೇನೆ. ಅವರು ಸೆರೆಯಾಳುಗಳಾಗಿದ್ದಾರೆ ಹಾಗೂ ಅವರ ಫೋನ್‌ಗಳನ್ನು ಕಸಿದುಕೊಳ್ಳಲಾಗಿದೆ” ಎಂದು ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

“ಪ್ರತಿ ಕೋಣೆಯ ಮುಂದೆ ಪೊಲೀಸರು ಕಾಯುತ್ತಿದ್ದಾರೆ, ಅವರಲ್ಲಿ ಕೆಲವರು ತಮ್ಮ ಇಚ್ಛೆಗೆ ವಿರುದ್ಧವಾಗಿ ಬೆಂಗಳೂರಿನಲ್ಲಿದ್ದೇವೆ ಎಂದು ಹೇಳಿದ್ದಾರೆ” ಎಂದು ದಿಗ್ವಿಜಯ ಸಿಂಗ್ ಹೇಳಿದರು.

“ಬಿಜೆಪಿಯ ಪ್ರಜಾಪ್ರಭುತ್ವದ ಮಾದರಿ: ಶಾಸಕರು ಸಿಎಂ ಜೊತೆ ಮಾತನಾಡಲು ಸಾಧ್ಯವಿಲ್ಲ, ಶಾಸಕರು ತಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡಲು ಸಾಧ್ಯವಿಲ್ಲ, ಶಾಸಕರು ಸ್ಪೀಕರ್ ಜೊತೆ ಮಾತನಾಡಲು ಸಾಧ್ಯವಿಲ್ಲ, ಶಾಸಕರು ಪಕ್ಷದ ಮುಖಂಡರೊಂದಿಗೆ ಮಾತನಾಡಲು ಸಾಧ್ಯವಿಲ್ಲ. ಶಾಸಕರು ನಿಯಂತ್ರಿತ ಸನ್ನಿವೇಶಗಳಲ್ಲಿ ಮತ್ತು ವಿರೋಧ ಪಕ್ಷಗಳು ನಿಯೋಜಿಸಿರುವ ಗೂಂಡಾಗಳ ಕಣ್ಣಿನಡಿಯಲ್ಲಿ ಮಾತ್ರ ಮಾತನಾಡುತ್ತಾರೆ”ಎಂದು ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಬಿಜೆಪಿಯ ಸೆರೆಯಲ್ಲಿರುವ ನಮ್ಮ ಶಾಸಕರನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ನಮ್ಮ ಶಾಸಕರನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡುವವರೆಗೂ ನಾನು ಉಪವಾಸ ಸತ್ಯಾಗ್ರಹವನ್ನು ಘೋಷಿಸುತ್ತೇನೆ. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವೆ, ಸರ್ವಾಧಿಕಾರ ದೇಶದಲ್ಲಿ ಅಲ್ಲ” ಎಂದು ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನ 22 ಶಾಸಕರು ರಾಜೀನಾಮೆ ನೀಡಿ, ಕಮಲ್ ನಾಥ್ ಸರ್ಕಾರವನ್ನು ಕುಸಿಯುವ ಅಪಾಯಕ್ಕೆ ತಳ್ಳಿದ್ದಾರೆ. ಆರು ಕಾಂಗ್ರೆಸ್ ಶಾಸಕರ ರಾಜಿನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ ನಂತರ, ಪಕ್ಷವು ಈಗ 108 ಶಾಸಕರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...