Homeಮುಖಪುಟಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

ಕೊರೊನಾ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದೇ? ಪೋಸ್ಟ್‌ ಕಾರ್ಡ್‌ ಹರಡಿದ ಮೂರು ಮಹಾಸುಳ್ಳುಗಳು.

- Advertisement -
- Advertisement -

ಸುಳ್ಳು 1 : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್‌ಗಳನ್ನು ಧರಿಸಬಾರದು.

ಹೀಗಂತ ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್‌ಗಳ ಕೊರತೆಯುಂಟಾಯಿತು. ಮಾರ್ಚ್ 14ರಂದು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‍ರವರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು.

ಅಂದಿನಿಂದ ತಿರುವನಂತಪುರದ ಸೆಂಟ್ರಲ್ ಜೈಲಿನ ಕೈದಿಗಳು ದಿನವೊಂದಕ್ಕೆ ಎರಡು ಸಾವಿರ ಮಾಸ್ಕ್‍ಗಳನ್ನು ತಯಾರಿಸಿ ವಿತರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ವಿಶ್ವ ಆರೋಗ್ಯ ಸಂಘಟನೆಯ ಸಲಹೆಯನ್ನು ತಿರಸ್ಕರಿಸಿ ಮಾಸ್ಕ್ ತಯಾರಿಸಿದ್ದಾರೆ ಎಂದು ದೂರಿದೆ.

ಸತ್ಯ: ಹತ್ತಿ ಬಟ್ಟೆಯ ಮಾಸ್ಕ್‌ಗಳು ಸುರಕ್ಷಿತವಾಗಿರುತ್ತವೆ ಮಾತ್ರವಲ್ಲ ಅದರಿಂದ ಯಾವುದೇ ತೊಂದರೆಯಿಲ್ಲ. ಅವುಗಳನ್ನು ಸುಲಭವಾಗಿ ಬಳಸಬಹುದು, ತೊಳೆದು ಮರುಬಳಕೆ ಸಹ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ಡಬ್ಲೂಎಚ್‍ಓ ವೆಬ್‍ಸೈಟ್‍ನಲ್ಲಿ ತಿಳಿಸಿಲ್ಲ ಕೂಡ.

ಕೇರಳ ಸರ್ಕಾರವನ್ನು ಕಂಡರಾಗದ ಈ ವೆಬ್‍ಸೈಟ್ ಸುಳ್ಳುಗಳನ್ನು ಹರಡುತ್ತಿದೆ ಅಷ್ಟೇ.

ಸುಳ್ಳು 2: ಗಲಭೆ ಮಾಡುವುದು ನಮ್ಮ ಸ್ವಭಾವವಲ್ಲ, ಗಲಭೆ ಮಾಡುವವರನ್ನು ಜೈಲಿಗೆ ಹಾಕುವುದು ನಮ್ಮ ಸ್ವಭಾವ ; ಅಮಿತ್ ಶಾ

ಆದರೆ ವಾಸ್ತವ ಏನೆಂದರೆ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಇದೇ ಅಮಿತ್ ಶಾ ಗುಜರಾತಿನ ಗೃಹ ಮಂತ್ರಿಯಾಗಿದ್ದರು. ಗಲಭೆಗೆ ಕುಮ್ಮಕ್ಕು ಕೊಟ್ಟ ಕಾರಣದಿಂದಾಗಿ ಶಾ ಮೇಲೆ ಹಲವಾರು ಪ್ರಕರಣಗಳಿದ್ದು ನಾನಾವತಿ ಆಯೋಗ ಈ ಕುರಿತು ತನಿಖೆ ನಡೆಸಿದೆ. ಈ ಕುರಿತು ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳುವುದು ಹೀಗೆ?

“2010ರಲ್ಲಿ ನಾನು ಈ ಕೊಲೆಗಳ ಬಗ್ಗೆ ವರದಿ ಮಾಡಿದ್ದೆ. ನಾನು ಶಾರ ದೂರವಾಣಿ ಕರೆಗಳ ದಾಖಲೆ ಮತ್ತು ಗುಜರಾತ್ ರಾಜ್ಯದ ಗುಪ್ತಚರ ಇಲಾಖೆಯ ಆಂತರಿಕ ದಾಖಲೆಯನ್ನೂ ಮುಂದಿಟ್ಟಿದ್ದೆ. ಕೊಲ್ಲಬೇಕಾದವರನ್ನು ಕೊಂಡೊಯ್ಯುತ್ತಿರುವಾಗಲೇ ಈತ ಅಧಿಕಾರಿಗಳ ಜೊತೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದುದನ್ನು ಈ ದಾಖಲೆಗಳು ಸಾಬೀತುಪಡಿಸುತ್ತಿದ್ದವು. ನನ್ನ ತನಿಖಾ ವರದಿ ಪ್ರಕಟವಾದ ಎರಡು ವಾರಗಳಲ್ಲಿ ಶಾ ಬಂಧನವಾಗಿತ್ತು. ಮೂರು ತಿಂಗಳು ಜೈಲಿನಲ್ಲಿದ್ದರು.

ಸಿಬಿಐ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬೀ ಎಂಬ ಮುಸ್ಲಿಮರ ಕೊಲೆಯಲ್ಲಿನ ಪಾತ್ರದ ಬಗ್ಗೆ ಶಾ ವಿರುದ್ಧ ತನಿಖೆ ನಡೆಸುತ್ತಿತ್ತು. ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ಶಾರನ್ನು ಈ ಅಪರಾಧದ ಮುಖ್ಯ ಆರೋಪಿ ಮತ್ತು ಸಂಚುಕೋರ ಎಂದು ಹೆಸರಿಸಲಾಗಿತ್ತು. ಅದಲ್ಲದೇ ಆತನನ್ನು ಭೂಗತ ಗೂಂಡಾಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡ ವಸೂಲಿ ದಂಧೆಯ ಮುಖ್ಯಸ್ಥ ಎಂದೂ ಹೆಸರಿಸಿತ್ತು. ಈ ಆರೋಪಗಳು ಎಷ್ಟು ಗಂಭೀರವಾಗಿದ್ದವು ಎಂದರೆ, ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಬೆದರಿಸದಂತೆ ಸುಪ್ರೀಂಕೋರ್ಟ್ ಆತನನ್ನು ಎರಡು ವರ್ಷ ತನ್ನ ತವರು ರಾಜ್ಯ ಪ್ರವೇಶಿಸದಂತೆ ಗಡಿಪಾರು ಮಾಡಿತ್ತು.

ಸುಳ್ಳು 3 : ಮಾಂಸ ತಿಂದರೆ ಕೊರೊನಾ ಬರುತ್ತದೆಯೇ?

ಕನ್ನಡದ ಫೇಕ್‍ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‍ಸೈಟ್ ಕೊರೊನಾ ಬಂದುದರಿಂದ ಹ್ಯಾಂಡ್‍ಷೇಕ್ ಬದಲು ನಮಸ್ಕರಿಸುತ್ತಿದ್ದಾರೆ, ಸಸ್ಯಹಾರಿಗಳಾಗುತ್ತಿದ್ದಾರೆ ಮತ್ತು ಹೆಣವನ್ನು ಹೂಳುವ ಬದಲು ಸುಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ಮೂಲಕ ಅದು ಬ್ರಾಹ್ಮಣ್ಯದ ಶ್ರೇಷ್ಠತೆಯನ್ನು ಹೇರಲು ಪ್ರಯತ್ನಿಸುತ್ತಿದೆ ಅಷ್ಟೇ.

ಸತ್ಯ ಏನೆಂದರೇ ಮಾಂಸ ತಿನ್ನುವುದಕ್ಕೂ ಕೊರೊನಾಗೂ ಸಂಬಂಧವೇ ಇಲ್ಲ. ಮಾಂಸ ತಿನ್ನುವುದರಿಂದ ಕೊರೊನಾ ಬರುವುದಿಲ್ಲ.

ಇನ್ನು ಸತ್ತ ದೇಹವನ್ನು ಹೂಳುವುದರಿಂದ ಕೊರೊನಾ ಹರಡುವುದಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಭಯವನ್ನು ತಮ್ಮ ಧಾರ್ಮಿಕ ಮೌಢ್ಯಗಳನ್ನು ಹರಡಲು ಬಳಸುತ್ತಿದ್ದಾರೆ ಅಷ್ಟೇ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...