Homeಅಂಕಣಗಳುಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ... ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

- Advertisement -
- Advertisement -

ಹೋದವಾರದ ಸಂಚಿಕೆಯಲ್ಲಿ ದೊರೆಸ್ವಾಮಿ 38 ದಿನ ಸಂಪಾದಕನಾಗಿದ್ದ ಅಪ್ರಬುದ್ಧ ಪತ್ರಕರ್ತ ಎಂದು ಹೇಳಿರುವ ಬಾಬು ಕೃಷ್ಣಮೂರ್ತಿಯ ಬಾಯಿ ಮುಚ್ಚಿಸಿದ್ದೇನೆ.

ಈ ಲೇಖನದಲ್ಲಿ ಗಾಂಧಿ ಹಂತಕ ಗೋಡ್ಸೆ ವಿಚಾರದಲ್ಲಿ ಎರಡು ಮಾತು ಹೇಳಲು ಬಯಸುತ್ತೇನೆ. ಗೋಡ್ಸೆ ಗಾಂಧೀಜಿ ಹತ್ಯೆಗೆ ಮೊದಲು ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದ. ರ‍್ಯಾಲಿಯ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದ ಸುಪ್ರಸಿದ್ದ ನ್ಯಾಯವಾದಿ ಬೇಲಿ ವಾಸುದೇವಮೂರ್ತಿಯವರ ಅತಿಥಿಯಾಗಿದ್ದ ಎಂದು ಪೌರವಾಣಿಯಲ್ಲಿ ವರದಿಯಾಗಿತ್ತು. ಅದನ್ನು ಪ್ರಶ್ನಿಸಿ ಬಾಬು ಕೃಷ್ಣಮೂರ್ತಿಯವರು ಗಾಂಧಿ ಹತ್ಯೆ ಸಂಬಂಧದಲ್ಲಿ ಬಂಧಿಗಳಾಗಿದ್ದ ಗೋಡ್ಸೆ ಮತ್ತು ನಾರಾಯಣ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆಯಲ್ಲಿ ತಾವು ಆ ದಿನಗಳಲ್ಲಿ ದೆಹಲಿಯ ಹೋಟೆಲ್‌ಗಳಲ್ಲಿ ಸುಳ್ಳು ಹೆಸರು ಬರೆಸಿ ವಾಸ್ತವ್ಯ ಮಾಡಿರುವುದಾಗಿ ಹೇಳಿದ್ದಾರೆ. ಆದ್ದರಿಂದ ಗೋಡ್ಸೆ ಆ ದಿನಗಳಲ್ಲಿ ಬೆಂಗಳೂರಿನಲ್ಲಿ ಇದ್ದಿದ್ದು ಸುಳ್ಳು ಎಂದು ಬಾಬು ಕೃಷ್ಣಮೂರ್ತಿ ಅಭಿಪ್ರಾಯಪಡುತ್ತಾರೆ.


ಇದನ್ನು ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…


 

ಗಾಂಧಿ ಹತ್ಯೆಗೆ ಎಷ್ಟೋ ಮೊದಲು ವರದಿಯಾಗಿರುವ ಸುದ್ದಿ ಇದು. ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂಬುದು ಬಾಬುವಿನ ಆಪಾದನೆ. ಈ ಸುದ್ದಿಯನ್ನು ಆ ದಿನ ಪೌರವಾಣಿ ಪತ್ರಿಕೆಯಲ್ಲಿ ಹಾಕುವುದಕ್ಕೆ ಮೊದಲೇ ನ್ಯಾಯಾಲಯದ ಕಡತಗಳನ್ನು ನಾನು ನೋಡಬೇಕಾಗಿತ್ತು ಎಂದು ಅವರು ಅಭಿಪ್ರಾಯಪಡುವಂತಿದೆ. ನಾವು ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂದು ಅವರು ಹೇಳುವುದು ತಪ್ಪು. ಗಾಂಧೀಜಿಯನ್ನು ಮುಂದೆ ಗೋಡ್ಸೆ ಕೊಲ್ಲುತ್ತಾನೆ ಅದರಿಂದ ಅವನ ಹೆಸರನ್ನು ಈಗಲೇ Expose ಮಾಡಿಬಿಡೋಣ ಎಂದು ನಾವು ಈ ಸುದ್ದಿಯನ್ನು ಹರಿಯಬಿಟ್ಟೆವು ಎಂಬುದು ಕೃಷ್ಣಮೂರ್ತಿಗಳ ಗ್ರಹಿಕೆ ಇರಬಹುದು. ಇದು ವಿತಂಡವಾದ. ಆರ್‌ಎಸ್‌ಎಸ್ ರ‍್ಯಾಲಿಗೆ ಬರೆದೆ ಇದ್ದ, ಸ್ವಾಗತ ಸಮಿತಿ ಅಧ್ಯಕ್ಷರ ಅತಿಥಿಯಾಗಿ ಇರದೇ ಇದ್ದ ಗೋಡ್ಸೆ ಬಗೆಗೆ ಸುಳ್ಳು ಸುದ್ದಿ ಹಾಕುವ ಅಗತ್ಯವಾದರೂ ನನಗಾಗಲಿ, ನಮ್ಮ ಹಿರಿಯ ಭಾತ್ಮೀದಾರ ಎಚ್.ಎನ್ ನಾರಾಯಣರಾಯರಿಗಾಗಲಿ ಏನಿತ್ತು?

ನಾನು ಭಾರತ ಮಾತೆಯ ಆಣೆಮಾಡಿ ಹೇಳುತ್ತೇನೆ. ಈ ಸುದ್ದಿಯನ್ನು ಎಲ್ಲ ಇತರ ಸುದ್ದಿಗಳನ್ನು ಹಾಕುವಂತೆ ಸಹಜವಾಗಿ ಹಾಕಿದ್ದೇನೆ. News is sacred ಎಂಬುದು ಪತ್ರಿಕಾ ಧರ್ಮ. ಈ ಸುದ್ದಿಯನ್ನು ಹಾಕುವಾಗಲೂ ಅದೇ ಭಾವನೆಯಿಂದ ಹಾಕಿದ್ದೇವೆ. ಈ ಸುದ್ದಿಯನ್ನು ನಾವು ಸೃಷ್ಟಿಸಿಲ್ಲ. ಇದ್ದದ್ದನ್ನು ಇದ್ದಹಾಗೆ ಮುದ್ರಿಸಿದ್ದೆವು.


ಇದನ್ನು ಓದಿ: ಸುಳ್ಳು ಮತ್ತು ಸತ್ಯದ ಸಂಘರ್ಷ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕುರಿತು ‘ನ್ಯಾಯಪಥ’ ವಿಶೇಷ ಸಂಚಿಕೆ


ಇನ್ನು ಗೋಡ್ಸೆ ಮತ್ತು ಇತರರು ನ್ಯಾಯಾಲಯದ ಮುಂದೆ ನುಡಿದಿರುವ ವಿಷಯ ಅವರು ಯಾವುದೋ ಕೃತ್ಯಗಳನ್ನು ಮುಚ್ಚಿಡಲು ಆ ತಾರೀಕುಗಳಲ್ಲಿ ದಿಲ್ಲಿಯ ಹೋಟೆಲ್‌ಗಳಲ್ಲಿ ಇದ್ದುದ್ದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಎರಡು ದಿನ ಬೇರೆ ಬೇರೆ ಹೋಟೆಲ್‌ಗಳಲ್ಲಿ ಇದ್ದುದ್ದಾಗಿಯೂ ಎರಡು ಕಡೆ ಹೆಸರು ಬದಲಿಸಿಕೊಂಡು ಒಂದೊಂದು ಹೋಟೆಲ್‌ನಲ್ಲಿ ಬೇರೆ-ಬೇರೆ ಹೆಸರುಗಳನ್ನು ನಮೂದಿಸಿರುವುದಾಗಿ ಹೇಳಿದ್ದಾರೆ. ಈ ಹುಟ್ಟು ಸುಳ್ಳುಗಾರರ ಮಾತನ್ನು ಹೇಗೆ ನಂಬುವುದು? ಇವರು ಹೇಳಿರುವುದೆಲ್ಲ ಸುಳ್ಳು ಎಂಬುದನ್ನು ನಮ್ಮ ಪತ್ರಿಕೆಯಲ್ಲಿನ ವರದಿ ಖಚಿತಪಡಿಸುತ್ತದೆ.

ನೀವು ಕೊಲೆಗಡುಕರ ಮಾತನ್ನೇ ನಂಬಬೇಕೆನ್ನುತ್ತೀರಿ. ನಿಸ್ಪೃಹರಾಗಿ ಪೌರವಾಣಿ ಪತ್ರಿಕೆ ನಡೆಸಿದವರನ್ನು ನಂಬುವುದಿಲ್ಲ ಅನ್ನುತ್ತೀರಿ. ನಿಮಗೆ ನಿಮ್ಮ ದೇವರು ಸದ್ಬುದ್ಧಿ ಕೊಡಲಿ ಎಂದು ಆಶಿಸುತ್ತೇನೆ. ರುಮಾಲೆ ಚನ್ನಬಸಯ್ಯನವರು ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್ ಎಂದು ತಾಯಿನಾಡು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕಾಗಿ ಅಂದಿನ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಭೀಮಾಚಾರ್ಯರು ಮಾನನಷ್ಟ ಮೊಕದ್ದಮೆಯನ್ನು ಸಿ.ಒ ಮ್ಯಾಜಿಸ್ಟ್ರೇಟ್‌ ಕೋರ್ಟ್‌‌ನಲ್ಲಿ ಹಾಕಿದ್ದರು. ತುಮಕೂರಿನ ಕೆ.ರಂಗಯ್ಯಗಾರ್ ರುಮಾಲೆ ಪರವಾಗಿ ವಕೀಲಿಕೆ ವಹಿಸಿದ್ದರು. ನಾನು ಪೌರವಾಣಿ ಸಂಪಾದಕನಾಗಿ ಗೋಡ್ಸೆ ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾದ ಸುಪ್ರಸಿದ್ಧ ವಕೀಲರು ಆದ ಬೇಲಿವಾಸುದೇವಮೂರ್ತಿಯವರ ಆತಿಥ್ಯದಲ್ಲಿದ್ದ ಎಂಬುದನ್ನು ಪ್ರಕಟಿಸಿದ್ದೆ. ಆದ್ದರಿಂದ ಆ ಸುದ್ದಿಯಿದ್ದ ಪತ್ರಿಕೆಯ ಸಂಪುಟವನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ನನ್ನ ಸಾಕ್ಷ್ಯ ನುಡಿದೆ. ನಾಲ್ಕಾರು ಹಿಯರಿಂಗ್‌ಗಳು ಆದವು. ಅಷ್ಟರಲ್ಲಿ ಬೆಂಗಳೂರಿನ ಮತ್ತೊಬ್ಬ ಸುಪ್ರಸಿದ್ಧ ವಕೀಲರಾದ ಎಸ್.ಕೆ. ವೆಂಕಟರಂಗಯ್ಯಗಾರರು ಮಧ್ಯಪ್ರವೇಶಿಸಿ ಭೀಮಾಚಾರ್ಯರಿಗೂ, ರುಮಾಲೆ ಚೆನ್ನಬಸವಯ್ಯನವರಿಗೂ ರಾಜಿ ಮಾಡಿಸಿ ಕೇಸನ್ನು ವಾಪಸ್ ತೆಗೆಸಿದ್ದರು. ನನ್ನ ಪೌರವಾಣಿ ಪತ್ರಿಕೆಯ ಸಂಪುಟ ನ್ಯಾಯಾಲಯದಲ್ಲಿಯೇ ಉಳಿಯಿತು. ಅಂದಿನ ಪೌರವಾಣಿ ಪತ್ರಿಕೆಯ ಪ್ರತಿ Information Department ನಲ್ಲಿ ಸಿಗಬಹುದು.

ಬೇಲಿ ವಾಸುದೇವಮೂರ್ತಿಯವರು ಭೀಮಾಚಾರ್ಯರ ಬೀಗರು ಎಂಬುದನ್ನೂ ನಾನು ತಿಳಿಸಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...