Homeಅಂಕಣಗಳುಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ... ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

- Advertisement -
- Advertisement -

ಹೋದವಾರದ ಸಂಚಿಕೆಯಲ್ಲಿ ದೊರೆಸ್ವಾಮಿ 38 ದಿನ ಸಂಪಾದಕನಾಗಿದ್ದ ಅಪ್ರಬುದ್ಧ ಪತ್ರಕರ್ತ ಎಂದು ಹೇಳಿರುವ ಬಾಬು ಕೃಷ್ಣಮೂರ್ತಿಯ ಬಾಯಿ ಮುಚ್ಚಿಸಿದ್ದೇನೆ.

ಈ ಲೇಖನದಲ್ಲಿ ಗಾಂಧಿ ಹಂತಕ ಗೋಡ್ಸೆ ವಿಚಾರದಲ್ಲಿ ಎರಡು ಮಾತು ಹೇಳಲು ಬಯಸುತ್ತೇನೆ. ಗೋಡ್ಸೆ ಗಾಂಧೀಜಿ ಹತ್ಯೆಗೆ ಮೊದಲು ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದ. ರ‍್ಯಾಲಿಯ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದ ಸುಪ್ರಸಿದ್ದ ನ್ಯಾಯವಾದಿ ಬೇಲಿ ವಾಸುದೇವಮೂರ್ತಿಯವರ ಅತಿಥಿಯಾಗಿದ್ದ ಎಂದು ಪೌರವಾಣಿಯಲ್ಲಿ ವರದಿಯಾಗಿತ್ತು. ಅದನ್ನು ಪ್ರಶ್ನಿಸಿ ಬಾಬು ಕೃಷ್ಣಮೂರ್ತಿಯವರು ಗಾಂಧಿ ಹತ್ಯೆ ಸಂಬಂಧದಲ್ಲಿ ಬಂಧಿಗಳಾಗಿದ್ದ ಗೋಡ್ಸೆ ಮತ್ತು ನಾರಾಯಣ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆಯಲ್ಲಿ ತಾವು ಆ ದಿನಗಳಲ್ಲಿ ದೆಹಲಿಯ ಹೋಟೆಲ್‌ಗಳಲ್ಲಿ ಸುಳ್ಳು ಹೆಸರು ಬರೆಸಿ ವಾಸ್ತವ್ಯ ಮಾಡಿರುವುದಾಗಿ ಹೇಳಿದ್ದಾರೆ. ಆದ್ದರಿಂದ ಗೋಡ್ಸೆ ಆ ದಿನಗಳಲ್ಲಿ ಬೆಂಗಳೂರಿನಲ್ಲಿ ಇದ್ದಿದ್ದು ಸುಳ್ಳು ಎಂದು ಬಾಬು ಕೃಷ್ಣಮೂರ್ತಿ ಅಭಿಪ್ರಾಯಪಡುತ್ತಾರೆ.


ಇದನ್ನು ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…


 

ಗಾಂಧಿ ಹತ್ಯೆಗೆ ಎಷ್ಟೋ ಮೊದಲು ವರದಿಯಾಗಿರುವ ಸುದ್ದಿ ಇದು. ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂಬುದು ಬಾಬುವಿನ ಆಪಾದನೆ. ಈ ಸುದ್ದಿಯನ್ನು ಆ ದಿನ ಪೌರವಾಣಿ ಪತ್ರಿಕೆಯಲ್ಲಿ ಹಾಕುವುದಕ್ಕೆ ಮೊದಲೇ ನ್ಯಾಯಾಲಯದ ಕಡತಗಳನ್ನು ನಾನು ನೋಡಬೇಕಾಗಿತ್ತು ಎಂದು ಅವರು ಅಭಿಪ್ರಾಯಪಡುವಂತಿದೆ. ನಾವು ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂದು ಅವರು ಹೇಳುವುದು ತಪ್ಪು. ಗಾಂಧೀಜಿಯನ್ನು ಮುಂದೆ ಗೋಡ್ಸೆ ಕೊಲ್ಲುತ್ತಾನೆ ಅದರಿಂದ ಅವನ ಹೆಸರನ್ನು ಈಗಲೇ Expose ಮಾಡಿಬಿಡೋಣ ಎಂದು ನಾವು ಈ ಸುದ್ದಿಯನ್ನು ಹರಿಯಬಿಟ್ಟೆವು ಎಂಬುದು ಕೃಷ್ಣಮೂರ್ತಿಗಳ ಗ್ರಹಿಕೆ ಇರಬಹುದು. ಇದು ವಿತಂಡವಾದ. ಆರ್‌ಎಸ್‌ಎಸ್ ರ‍್ಯಾಲಿಗೆ ಬರೆದೆ ಇದ್ದ, ಸ್ವಾಗತ ಸಮಿತಿ ಅಧ್ಯಕ್ಷರ ಅತಿಥಿಯಾಗಿ ಇರದೇ ಇದ್ದ ಗೋಡ್ಸೆ ಬಗೆಗೆ ಸುಳ್ಳು ಸುದ್ದಿ ಹಾಕುವ ಅಗತ್ಯವಾದರೂ ನನಗಾಗಲಿ, ನಮ್ಮ ಹಿರಿಯ ಭಾತ್ಮೀದಾರ ಎಚ್.ಎನ್ ನಾರಾಯಣರಾಯರಿಗಾಗಲಿ ಏನಿತ್ತು?

ನಾನು ಭಾರತ ಮಾತೆಯ ಆಣೆಮಾಡಿ ಹೇಳುತ್ತೇನೆ. ಈ ಸುದ್ದಿಯನ್ನು ಎಲ್ಲ ಇತರ ಸುದ್ದಿಗಳನ್ನು ಹಾಕುವಂತೆ ಸಹಜವಾಗಿ ಹಾಕಿದ್ದೇನೆ. News is sacred ಎಂಬುದು ಪತ್ರಿಕಾ ಧರ್ಮ. ಈ ಸುದ್ದಿಯನ್ನು ಹಾಕುವಾಗಲೂ ಅದೇ ಭಾವನೆಯಿಂದ ಹಾಕಿದ್ದೇವೆ. ಈ ಸುದ್ದಿಯನ್ನು ನಾವು ಸೃಷ್ಟಿಸಿಲ್ಲ. ಇದ್ದದ್ದನ್ನು ಇದ್ದಹಾಗೆ ಮುದ್ರಿಸಿದ್ದೆವು.


ಇದನ್ನು ಓದಿ: ಸುಳ್ಳು ಮತ್ತು ಸತ್ಯದ ಸಂಘರ್ಷ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕುರಿತು ‘ನ್ಯಾಯಪಥ’ ವಿಶೇಷ ಸಂಚಿಕೆ


ಇನ್ನು ಗೋಡ್ಸೆ ಮತ್ತು ಇತರರು ನ್ಯಾಯಾಲಯದ ಮುಂದೆ ನುಡಿದಿರುವ ವಿಷಯ ಅವರು ಯಾವುದೋ ಕೃತ್ಯಗಳನ್ನು ಮುಚ್ಚಿಡಲು ಆ ತಾರೀಕುಗಳಲ್ಲಿ ದಿಲ್ಲಿಯ ಹೋಟೆಲ್‌ಗಳಲ್ಲಿ ಇದ್ದುದ್ದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಎರಡು ದಿನ ಬೇರೆ ಬೇರೆ ಹೋಟೆಲ್‌ಗಳಲ್ಲಿ ಇದ್ದುದ್ದಾಗಿಯೂ ಎರಡು ಕಡೆ ಹೆಸರು ಬದಲಿಸಿಕೊಂಡು ಒಂದೊಂದು ಹೋಟೆಲ್‌ನಲ್ಲಿ ಬೇರೆ-ಬೇರೆ ಹೆಸರುಗಳನ್ನು ನಮೂದಿಸಿರುವುದಾಗಿ ಹೇಳಿದ್ದಾರೆ. ಈ ಹುಟ್ಟು ಸುಳ್ಳುಗಾರರ ಮಾತನ್ನು ಹೇಗೆ ನಂಬುವುದು? ಇವರು ಹೇಳಿರುವುದೆಲ್ಲ ಸುಳ್ಳು ಎಂಬುದನ್ನು ನಮ್ಮ ಪತ್ರಿಕೆಯಲ್ಲಿನ ವರದಿ ಖಚಿತಪಡಿಸುತ್ತದೆ.

ನೀವು ಕೊಲೆಗಡುಕರ ಮಾತನ್ನೇ ನಂಬಬೇಕೆನ್ನುತ್ತೀರಿ. ನಿಸ್ಪೃಹರಾಗಿ ಪೌರವಾಣಿ ಪತ್ರಿಕೆ ನಡೆಸಿದವರನ್ನು ನಂಬುವುದಿಲ್ಲ ಅನ್ನುತ್ತೀರಿ. ನಿಮಗೆ ನಿಮ್ಮ ದೇವರು ಸದ್ಬುದ್ಧಿ ಕೊಡಲಿ ಎಂದು ಆಶಿಸುತ್ತೇನೆ. ರುಮಾಲೆ ಚನ್ನಬಸಯ್ಯನವರು ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್ ಎಂದು ತಾಯಿನಾಡು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕಾಗಿ ಅಂದಿನ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಭೀಮಾಚಾರ್ಯರು ಮಾನನಷ್ಟ ಮೊಕದ್ದಮೆಯನ್ನು ಸಿ.ಒ ಮ್ಯಾಜಿಸ್ಟ್ರೇಟ್‌ ಕೋರ್ಟ್‌‌ನಲ್ಲಿ ಹಾಕಿದ್ದರು. ತುಮಕೂರಿನ ಕೆ.ರಂಗಯ್ಯಗಾರ್ ರುಮಾಲೆ ಪರವಾಗಿ ವಕೀಲಿಕೆ ವಹಿಸಿದ್ದರು. ನಾನು ಪೌರವಾಣಿ ಸಂಪಾದಕನಾಗಿ ಗೋಡ್ಸೆ ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾದ ಸುಪ್ರಸಿದ್ಧ ವಕೀಲರು ಆದ ಬೇಲಿವಾಸುದೇವಮೂರ್ತಿಯವರ ಆತಿಥ್ಯದಲ್ಲಿದ್ದ ಎಂಬುದನ್ನು ಪ್ರಕಟಿಸಿದ್ದೆ. ಆದ್ದರಿಂದ ಆ ಸುದ್ದಿಯಿದ್ದ ಪತ್ರಿಕೆಯ ಸಂಪುಟವನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ನನ್ನ ಸಾಕ್ಷ್ಯ ನುಡಿದೆ. ನಾಲ್ಕಾರು ಹಿಯರಿಂಗ್‌ಗಳು ಆದವು. ಅಷ್ಟರಲ್ಲಿ ಬೆಂಗಳೂರಿನ ಮತ್ತೊಬ್ಬ ಸುಪ್ರಸಿದ್ಧ ವಕೀಲರಾದ ಎಸ್.ಕೆ. ವೆಂಕಟರಂಗಯ್ಯಗಾರರು ಮಧ್ಯಪ್ರವೇಶಿಸಿ ಭೀಮಾಚಾರ್ಯರಿಗೂ, ರುಮಾಲೆ ಚೆನ್ನಬಸವಯ್ಯನವರಿಗೂ ರಾಜಿ ಮಾಡಿಸಿ ಕೇಸನ್ನು ವಾಪಸ್ ತೆಗೆಸಿದ್ದರು. ನನ್ನ ಪೌರವಾಣಿ ಪತ್ರಿಕೆಯ ಸಂಪುಟ ನ್ಯಾಯಾಲಯದಲ್ಲಿಯೇ ಉಳಿಯಿತು. ಅಂದಿನ ಪೌರವಾಣಿ ಪತ್ರಿಕೆಯ ಪ್ರತಿ Information Department ನಲ್ಲಿ ಸಿಗಬಹುದು.

ಬೇಲಿ ವಾಸುದೇವಮೂರ್ತಿಯವರು ಭೀಮಾಚಾರ್ಯರ ಬೀಗರು ಎಂಬುದನ್ನೂ ನಾನು ತಿಳಿಸಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...