Homeಮುಖಪುಟರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

ರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

ಈ ನೇಮಕಾತಿ ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್‌ ಪಕ್ಷ ಟೀಕಿಸಿ, ನಂತರ ರಾಜ್ಯಸಭೆಯಿಂದ ಹೊರನಡೆದಿದೆ.

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಮೇಲ್ಮನೆಗೆ ನಾಮಕರಣ ಮಾಡಿದರು. ಅವರಿಗೆ ಸದನದಲ್ಲಿ ಸೀಟು ಸಂಖ್ಯೆ 131 ನೀಡಲಾಗಿದೆ.

ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸದಸ್ಯರು ಗೊಗೊಯ್ ಅವರ ನೇಮಕವನ್ನು ವಿರೋಧಿಸಿದರು. ಶೇಮ್‌ ಎಂಬ ಘೋಷಣೆಗಳನ್ನು ಕೂಗಿದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮತ್ತು ಎಂಡಿಎಂಕೆ ಕೂಡ ಪ್ರತಿಭಟನೆಯಲ್ಲಿ ಸೇರಿಕೊಂಡವು.

ಈ ನೇಮಕಾತಿ ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್‌ ಪಕ್ಷ ಟೀಕಿಸಿ, ನಂತರ ರಾಜ್ಯಸಭೆಯಿಂದ ಹೊರನಡೆದಿದೆ.

ನ್ಯಾಯಮೂರ್ತಿ ಗೊಗೊಯ್ ಅವರು 2019 ರ ನವೆಂಬರ್‌ನಲ್ಲಿ ನಿವೃತ್ತಿಯಾದ ನಾಲ್ಕು ತಿಂಗಳ ನಂತರ ಮಾರ್ಚ್ 16 ರಂದು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರ ವಿರುದ್ಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಮದನ್ ಲೋಕೂರ್, ಎ.ಕೆ.ಪಟ್ನಾಯಕ್ ಮತ್ತು ಕುರಿಯನ್ ಜೋಸೆಫ್ ಖಂಡಿಸಿದ್ದಾರೆ. ಆದರೆ ಗೊಗೊಯ್ ಅವರು ತಮ್ಮ ನಾಮನಿರ್ದೇಶನವನ್ನು ಸಮರ್ಥಿಸಿಕೊಂಡಿದ್ದಾರೆ, ಶಾಸಕಾಂಗ ಮತ್ತು ನ್ಯಾಯಾಂಗವು ರಾಷ್ಟ್ರ ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂಬ ದೃಢನಿಶ್ಚಯದಿಂದಾಗಿ ಈ ಪ್ರಸ್ತಾಪವನ್ನು ಸ್ವೀಕರಿಸಿದ್ದೇನೆ ಎಂದು ಗೊಗೊಯ್‌ ಹೇಳಿದ್ದಾರೆ.

ಕೇವಲ ನಾಲ್ಕು ತಿಂಗಳ ಹಿಂದೆ ದೇಶದ ಉನ್ನತ ನ್ಯಾಯಾಧೀಶರಾಗಿ ನಿವೃತ್ತರಾದ ನ್ಯಾಯಮೂರ್ತಿ ಗೊಗೊಯ್ ಅವರು ಸಂಸತ್ತಿನಲ್ಲಿ ತಮ್ಮ ಉಪಸ್ಥಿತಿಯು “ನ್ಯಾಯಾಂಗದ ಅಭಿಪ್ರಾಯಗಳನ್ನು ಶಾಸಕಾಂಗ ಮತ್ತು ಉಪಾಧ್ಯಕ್ಷರ ಮುಂದೆ ಮಂಡಿಸಲು ಒಂದು ಅವಕಾಶವಾಗಿರುತ್ತದೆ” ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗೊಗೊಯ್ ಅವರನ್ನು ಸ್ವಾಗತಿಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು: “ಮಾಜಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಬರುವ ಅನೇಕ ಶ್ರೇಷ್ಠ ವ್ಯಕ್ತಿಗಳು ಒಳಗೊಂಡಂತೆ ರಾಜ್ಯಸಭೆಯು ಒಂದು ದೊಡ್ಡ ಸಂಪ್ರದಾಯವನ್ನು ಹೊಂದಿದೆ. ಇಂದು ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಗೊಗೊಯ್ ಖಂಡಿತವಾಗಿಯೂ ಅವರ ಅತ್ಯುತ್ತಮ ಕೊಡುಗೆಯನ್ನು ನೀಡುತ್ತಾರೆ. ಕಾಂಗ್ರೆಸ್‌ ಹೊರನಡೆಯುವ ಮೂಲಕ ಅನ್ಯಾಯ ಮಾಡಿದೆ” ಎಂದಿದ್ದಾರೆ.

ಪ್ರಮಾಣ ವಚನ ಸಂದರ್ಭದಲ್ಲಿ ನ್ಯಾಯಮೂರ್ತಿ ಗೊಗೊಯ್ ಅವರ ಪತ್ನಿ ರೂಪಂಜಲಿ ಗೊಗೊಯ್, ಮಗಳು ಮತ್ತು ಅಳಿಯ ಸಂಸತ್ತಿನಲ್ಲಿ ಉಪಸ್ಥಿತರಿದ್ದರು.

“ನಮ್ಮ ಸಂವಿಧಾನವು ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರಗಳನ್ನು ಬೇರ್ಪಡಿಸುವುದನ್ನು ಆಧರಿಸಿದೆ. ನ್ಯಾಯಾಂಗವು ನಂಬಿಕೆ ಮತ್ತು ವಿಶ್ವಾಸಗಳ ಗ್ರಹಿಕೆಗೆ ತಕ್ಕಂತೆ ಅಭಿವೃದ್ಧಿ ಹೊಂದುತ್ತದೆ. ಆದರೆ ಅವರು ಅದನ್ನು ಸೋಲಿಸಿದ್ದಾರೆ” ಎಂದು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ತಮ್ಮ ಮಾಜಿ ಸಹೋದ್ಯೋಗಿಯನ್ನು ಟೀಕಿಸಿದ್ದಾರೆ. ಅವರ ನಿರ್ಧಾರವು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಸಾಮಾನ್ಯ ಜನರ ವಿಶ್ವಾಸವನ್ನು ಋಣಾತ್ಮಕವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...