Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...