Homeಮುಖಪುಟಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

ಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ನೋಟು ರದ್ದತಿ, ಜಿಎಸ್‌ಟಿ ಜಾರಿ ನಂತರದಿಂದ ದೇಶದ ಜಿಡಿಪಿ ಇಳಿಮುಖದಲ್ಲಿ ಸಾಗುತ್ತಿದೆ. ಪ್ರಧಾನಿ ಮೋದಿಯವರು ಮೊದಲ ಬಾರಿ ಆಯ್ಕೆಯಾದಾಗ 5 ವರ್ಷಗಳಲ್ಲಿ 10 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಅಂದಿದ್ದರು. ಈವರೆಗೆ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಲೆಕ್ಕಕೊಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಧಿವೇಶನದಲ್ಲಿ ಬಜೆಟ್‌ ಮೇಲಿನ ಚರ್ಚೆಯ ಕುತು ಮಾತನಾಡಿದ ಅವರು, ಹೊಸ ಉದ್ಯೋಗ ಸೃಷ್ಟಿಯ ಕತೆ ಇರಲಿ, ಕೋಟ್ಯಂತರ ಮಂದಿ ಇದ್ದ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಒಮ್ಮೆ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ. ಅಲ್ಲಿನ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುವ ಹಂತದಲ್ಲಿವೆ. ದೇಶದ ಆರ್ಥಿಕ ಸ್ಥಿತಿ ಪ್ರಗತಿಯ ಹಾದಿಯಲ್ಲಿದ್ದರೆ ಉದ್ದಿಮೆಗಳೇಕೆ ಬಾಗಿಲು ಮುಚ್ಚುತ್ತವೆ? ನಿನ್ನೆ ಬಿಜೆಪಿ ಸಚಿವರೊಬ್ಬರು ಭಾರತ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಬದಲಾಗಿದೆ ಅಂದಿದ್ದರು. ಹಾಗಾದರೆ ನಮ್ಮ‌ ರಾಜ್ಯದ ತೆರಿಗೆ ಪಾಲು, ಜಿಎಸ್‌ಟಿ ಪರಿಹಾರ, ವಿಶೇಷ ಅನುದಾನಗಳಿಗೆ ಕೇಂದ್ರ ಕತ್ತರಿ ಹಾಕಿರುವುದು ಯಾಕೆ? ದೇಶದ ಜಿಡಿಪಿ ಕುಂಟುತ್ತಾ ಸಾಗುತ್ತಿರುವಾಗ ಆರ್ಥಿಕತೆ ಹೇಗೆ ಬೆಳೆಯುತ್ತೆ? ಎಂದು ಪ್ರಶ್ನಿಸಿದ್ದಾರೆ.

2013-14 ರಲ್ಲಿ ರೂ.1,04,000 ಕೋಟಿಯಿದ್ದ ಬಜೆಟ್ ಗಾತ್ರ 2018-19ಕ್ಕೆ ರೂ.2,09,000 ಕೋಟಿಗೆ ಏರಿಕೆಯಾಗಿತ್ತು. 2018-19ರಲ್ಲಿ ನಮ್ಮ‌ ಸರ್ಕಾರ ರೂ.41,000 ಕೋಟಿ ಸಾಲ ಮಾಡಿತ್ತು, ಈಗಿನ ಸರ್ಕಾರ ರೂ.52,918 ಕೋಟಿ ಸಾಲ ಮಾಡುತ್ತಿದೆ. ಈಗ ಹೇಳಲಿ ಸಾಲ ಮಾಡಿ ಹೋಳಿಗೆ ತಿನ್ನುತ್ತಿರೋದು ಯಾರು ಅಂತ? 2019-20ನೇ ಸಾಲಿಗೆ ಕೇಂದ್ರದ ಅನುದಾನ ರೂ.19,840 ಕೋಟಿ ಬರಬೇಕಿತ್ತು, ಆದರೆ ಅದು ರೂ.15,444 ಕೋಟಿಗೆ ಇಳಿದಿದೆ. 15ನೇ ಹಣಕಾಸು ಆಯೋಗದ ವರದಿ ಪ್ರಕಾರ 2023-24ಕ್ಕೆ ಕೇಂದ್ರದಿಂದ ಬರುವ ಅನುದಾನ ರೂ.16,705 ಕೋಟಿ ಆಗಲಿದೆ. ವರ್ಷ ಕಳೆದಂತೆ ಈ ಅನುದಾನದ ಪ್ರಮಾಣ ನಮ್ಮ ರಾಜ್ಯಕ್ಕೆ ಮಾತ್ರ ಕಡಿಮೆಯಾಗುವುದು ಯಾಕೆ ಎಂದಿದ್ದಾರೆ.

2023-24 ರ ವೇಳೆಗೆ ರಾಜಸ್ವ ಆದಾಯ ರೂ.2,07,230 ಕೋಟಿ ಇರಲಿದ್ದು, ರಾಜಸ್ವ ಖರ್ಚು ರೂ. 2,54,062 ಕೋಟಿ ತಲುಪಲಿದೆ. ಇದರಿಂದ ರೂ.46,832 ಕೋಟಿ ರಾಜಸ್ವ ಕೊರತೆ ಎದುರಾಗಲಿದೆ. ಹೀಗಾದಾಗ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹೇಗೆ ಸಾಧ್ಯ? ಇದರಿಂದ ಸರ್ಕಾರ ಇನ್ನಷ್ಟು ಸಾಲದ ಮೊರೆ ಹೋಗಬೇಕಾಗುತ್ತದೆ. ಪ್ರಸಕ್ತ ಸಾಲಿನ ರಾಜಸ್ವ ಆದಾಯ ರೂ.1,77,255 ಕೋಟಿ ಇದೆ, ಇದರಲ್ಲಿ ಬದ್ಧತಾ ಖರ್ಚು ರೂ.1,55,191 ಕೋಟಿ. ಅಂದರೆ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ರೂ.22,064 ಕೋಟಿ ಹಣ ಉಳಿಯುತ್ತೆ. ಹೀಗಾದರೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸರ್ಕಾರ ಹಣ ಎಲ್ಲಿಂದ ತರುತ್ತೆ ಎಂದು ಕೇಳಿದರು.

15ನೇ ಹಣಕಾಸು ಆಯೋಗವು ಜನಸಂಖ್ಯೆ ಆಧಾರದ ಮೇಲೆ ರಾಜ್ಯಗಳ ಪಾಲು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಕರ್ನಾಟಕ ಸರಿಯಾಗಿ ನಿಭಾಯಿಸಿರುವುದಕ್ಕೆ ಬೋನಸ್ ಕೊಡುವುದರ ಬದಲು ನಮ್ಮ ಪಾಲು ಕಡಿತಗೊಳಿಸಿ ಬರೆ ಹಾಕಿದ್ದಾರೆ. ಇದ್ಯಾವ ರೀತಿಯ ನ್ಯಾಯ? ಇನ್ನೂ ಕಾಲ ಮಿಂಚಿಲ್ಲ, ನವೆಂಬರ್ 20ಕ್ಕೆ ಹಣಕಾಸು ಆಯೋಗ ತನ್ನ ಅಂತಿಮ ವರದಿ ನೀಡಲಿದೆ, ಅಷ್ಟರೊಳಗೆ ಪ್ರಧಾನಿಗಳು, ಹಣಕಾಸು ಸಚಿವರ ಜೊತೆ ಮಾತನಾಡಿ ಉಳಿದ 4 ವರ್ಷಗಳಿಗಾದ್ರೂ ನಮಗೆ ನ್ಯಾಯಯುತ ಪಾಲು ನೀಡುವಂತೆ ಮನವರಿಕೆ ಮಾಡಬೇಕು. ರಾಜ್ಯದ ಬಿಜೆಪಿ ಸಂಸದರು, ಸಚಿವರು, ನಾಯಕರುಗಳು ಈಗಲೇ ಎಚ್ಚೆತ್ತುಕೊಳ್ಳುವುದು ಸೂಕ್ತ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...