Homeಮುಖಪುಟ12 ಗಂಟೆಗೆ ಪತ್ರಿಕಾಗೋಷ್ಠಿ ಕರೆದ ಕಮಲ್‌ನಾಥ್‌: ರಾಜೀನಾಮೆ ಸಾಧ್ಯತೆ

12 ಗಂಟೆಗೆ ಪತ್ರಿಕಾಗೋಷ್ಠಿ ಕರೆದ ಕಮಲ್‌ನಾಥ್‌: ರಾಜೀನಾಮೆ ಸಾಧ್ಯತೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ರವರು ವಿಶ್ವಾಸಮತ ಯಾಚನೆಗೆ ಎರಡು ಗಂಟೆಗಳ ಮುನ್ನ ಪತ್ರಿಕಾಗೋಷ್ಠಿ ಕರೆದಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಗೋಜಿಗೆ ಹೋಗದೇ ರಾಜೀನಾಮೆ ನೀಡುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂ ಆದೇಶದಂತೆ ಇಂದು 2 ಗಂಟೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಿಗಧಿಯಾಗಿದೆ. ಆದರೆ ಸ್ಪೀಕರ್‌ ಒಟ್ಟು 22 ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದರಿಂದ 206 ಸದಸ್ಯರ ವಿಧಾನಸಭಾ ಬಲಾಬಲದಲ್ಲಿ ಕಾಂಗ್ರೆಸ್‌ ಬಲ 92ಕ್ಕೆ ಕುಸಿದಿದ್ದು ಏಳು ಇತರ ಸದಸ್ಯರ ಬೆಂಬಲದೊಂದಿದೆ 99ಕ್ಕೆ ಬಂದು ನಿಂತಿದೆ. ಬಹುಮತಕ್ಕೆ ಇನ್ನು ಐವರು ಸದಸ್ಯರ ಕೊರತೆಯನ್ನು ಕಾಂಗ್ರೆಸ್‌ ಎದುರಿಸುತ್ತಿದೆ.

ಇನ್ನೊಂದೆಡೆ 107 ಸದಸ್ಯರನ್ನೊಳಗೊಂಡ ಬಿಜೆಪಿ ಪಕ್ಷವು ಸರಳ ಬಹುಮತ ಹೊಂದಿದ್ದು ಅಧಿಕಾರಕ್ಕೇರಲು ಬಕಪಕ್ಷಿಯಂತೆ ಕಾದು ಕುಳಿತಿದೆ. ಆದರೂ ಕೊನೆಕ್ಷಣದವರೆಗೂ ರಾಜಕೀಯ ಆಗುಹೋಗುಗಳನ್ನು ಹತ್ತಿರದಿಂದ ವೀಕ್ಷಿಸಲು ಕಾಂಗ್ರೆಸ್‌ ಸಜ್ಜುಗೊಂಡಿದೆ.

ಕಳೆದ ವರ್ಷ ರಾಜ್ಯ ವಿಧಾನಸಭೆಯ ಮಾನ್ಸೂನ್ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಮಸೂದೆಯ ಪರವಾಗಿ ಇಬ್ಬರು ಬಿಜೆಪಿ ಶಾಸಕರಾದ ನಾರಾಯಣ್ ತ್ರಿಪಾಠಿ ಮತ್ತು ಶರದ್ ಕೋಲ್ ಅವರು ಮತದಾನವನ್ನು ಉಲ್ಲೇಖಿಸಿ ಕಾನೂನು ಮತ್ತು ಶಾಸಕಾಂಗ ವ್ಯವಹಾರಗಳ ಸಚಿವ ಪಿಸಿ ಶರ್ಮಾ ಮಾತನಾಡಿ “ಆಗ ಇಬ್ಬರು ಶಾಸಕರು ಇದ್ದರು. ಆದರೆ ಈ ಬಾರಿ ಬಿಜೆಪಿಯ ಕಡೆಯಿಂದ ಕನಿಷ್ಠ ಎಂಟು ಶಾಸಕರು ನಮಗೆ ಮತ ಚಲಾಯಿಸುತ್ತಾರೆ.” ಎಂದಿದ್ದಾರೆ. ಆ ಮೂಲಕ ಸರ್ಕಾರ ಉಳಿಸಿಕೊಳ್ಳುವ ತಮ್ಮ ಆಶಾವಾದವನ್ನು ಜೀವಂತವಾಗಿಟ್ಟುಕೊಂಡಿದ್ದಾರೆ.

ಆದರೆ, ಮತ್ತೊಬ್ಬ ಕಾಂಗ್ರೆಸ್ ಮುಖಂಡರೊಬ್ಬರು, “ಪ್ರತಿಪಕ್ಷದ ಕಡೆಯಿಂದ ಐದು ಶಾಸಕರನ್ನು ಪಡೆಯುವುದು ಅಸಂಭವವಾಗಿದೆ, ಈಗ ತಕ್ಕಡಿ ಬಿಜೆಪಿಯ ಪರವಾಗಿ ಓರೆಯಾಗುತ್ತಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ ಯಾವುದೇ ಬಿಜೆಪಿ ಶಾಸಕರು ನಮ್ಮ ಕಡೆಗೆ ಬರಲು ಇಷ್ಟಪಡುವುದಿಲ್ಲ. ವಿಶೇಷವಾಗಿ ಬಿಜೆಪಿ ಬಲವಾದ ಕೇಂದ್ರ ನಾಯಕತ್ವವನ್ನು ಹೊಂದಿರುವಾಗ ಈ ಸಮಯದಲ್ಲಿ ದಂಗೆ ಏಳುವುದು ಅವರ ರಾಜಕೀಯ ಜೀವನವನ್ನು ಅಪಾಯಕ್ಕೆ ತಳ್ಳುವ ಸಂಭವವಿದೆ. ದುರದೃಷ್ಟವಶಾತ್, ನಾವು ಕರ್ನಾಟಕದಂತಹ ಪರಿಸ್ಥಿತಿಯತ್ತ ಸಾಗುತ್ತಿದ್ದೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...