Homeಕರ್ನಾಟಕಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

ಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

- Advertisement -
- Advertisement -

2017ರ ಡಿಸೆಂಬರ್‍ನ ಅಂತ್ಯಾರ್ಧದ ಅತ್ಯಂತ ಆತಂಕದ ದಿನಗಳವು! ಇಡೀ ಉತ್ತರ ಕನ್ನಡ ಕೋಮು ಕಿಚ್ಚಿನಲ್ಲಿ ಬೆಂದು ಬಸವಳಿದ ಸಂದರ್ಭವದು!! ಹೊನ್ನಾವರದ ಮೀನುಗಾರ ಕುಲದ ಪರೇಶ್ ಮೇಸ್ತಾ ನಿಗೂಢವಾಗಿ ಸತ್ತದ್ದನ್ನು ಸಂಘಪರಿವಾರದ ಧರ್ಮಾಕಾರಣ ಪಂಡಿತರು ಎದುರಾಗಿದ್ದ ಅಸೆಂಬ್ಲಿ ಇಲೆಕ್ಷನ್‍ಗೆ ಅಸ್ತ್ರವಾಗಿ ಮಾಡಿಕೊಂಡಿದ್ದರು. ಪರೇಶ್‍ನನ್ನು ಸಾಬರ ಸೈತಾನರು ಕೊಂದು ಕೆರೆಗೆಸೆದಿದ್ದಾರೆಂದು ಹುಸಿ ಹುಯಿಲೆಬ್ಬಿಸಿದ ಬಿಜೆಪಿ ಕೊಳ್ಳಿ ದೆವ್ವಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಯಲ್ಲಾಪುರದಂಥ ಆಯಕಟ್ಟಿನ ತಾಲ್ಲೂಕುಗಳಲ್ಲಿ ಕೋಮುಗಲಭೆ ಎಬ್ಬಿಸಿ ಕೇಕೆ ಹಾಕಿದವು. ಸಾಬರ ಅಟ್ಟಾಡಿಸಿ ಕಾಡಿತು; ಐಜಿಪಿ ಕಾರಿಗೆ, ಚಾಲಕನಿಗೇ ಬೆಂಕಿ ಹಾಕಲಾಯಿತು….

ಪರೇಶ್‍ನ ಪ್ರಕರಣ ಸಿಬಿಐ ವಹಿಸಬೇಕೆಂದು ಕೂಗು ಮಾರಿ ಶೋಭಕ್ಕ, ಅಸಡ್ಡಾಳ ಹಲಬುಗಾರ ಅನಂತ್ಮಾಣಿ ಆಗಿಯಾಗಿ ಯಡ್ಡಿ ಸಕಲ ಚೆಡ್ಡಿಗಳೆಲ್ಲ ಏಕಕಂಠದಲ್ಲಿ ಬೊಬ್ಬೆಹೊಡೆದರು. ಅಂದಿನ ಸಿದ್ದು ಸರ್ಕಾರ ಪ್ರತಿಷ್ಟೆಗೆ ಬೀಳದೆ ಪ್ರಕರಣ ಸಿಬಿಐಗೆ ವಹಿಸಿತು. ಮೋದಿ-ಶಾ ಮೂಗಿನಡಿಯೇ ಇರುವ ಸಿಬಿಐ ಮಾತ್ರ ಇವತ್ತಿಗೂ ಪರೇಶನ ಮುಸ್ಲಿಮರು ಹತ್ಯೆ ಮಾಡಿದ್ದಾರೋ ಅಥವಾ ಆತನೇ ಕಾಲು ಜಾರಿ ಕೆರೆಗೆ ಬಿದ್ದು ಸತ್ತನೋ ಎಂಬ ತನಿಖೆ ಮಾಡುತ್ತಲೇ ಇಲ್ಲ. ಆದರೆ ಬಿಜೆಪಿ ಪರೇಶ್ ಮೇಸ್ತಾನ ಮರಣ ಮಹಿಮೆಯನ್ನೇ ಪ್ರಣಾಳಿಕೆ ಮಾಡಿಕೊಂಡು ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಬಂಪರ್ ಎಮ್ಮೆಲ್ಲೆ ಕೊಯ್ಲು ಮಾಡಿತು. ಶಾಸಕರಾಗುವ ಕನಿಷ್ಠ ಯೋಗ್ಯತೆಯೂ ಇಲ್ಲದ ಕಾರವಾರದ ರೂಪಾಲಿ ನಾಯ್ಲ್, ಕುಮಟೆಯ ದಿನಕರ ಶೆಟ್ಟಿ, ಭಟ್ಕಳದ ಸುನೀಲ್ ನಾಯ್ಕ್ ಮತ್ತು ಶಿರಸಿಯ ಕಾಗೇರಿ ಮಾಣಿಗಳೆಲ್ಲ ಖುದ್ದು ದಿಗಿಲು ಬೀಳುವಂತೆ ವಿಧಾನಸೌಧಕ್ಕೆ ಎಂಟ್ರಿ ಹೊಡೆದಿದ್ದರು. ಸಾಯುವತನಕ ಪರೇಶನ ಫೋಟೋಕ್ಕೆ ಪೂಜೆ ಸಲ್ಲಿಸುವ ಋಣಕ್ಕೆ ಬಿದ್ದಿದ್ದರು.

ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶನ ಪಾರ್ಥಿವ ಶರೀರ ಕಂಡ ಕ್ಷಣವೇ ಶೂದ್ರ ಹುಡುಗರ ಮತಾಂಧ ಮಸಲತ್ತಿಗಿಳಿದ ಬಿಜೆಪಿಯ ಜನಿವಾರ ಲೀಡರ್‍ಗಳು ಚುನಾವಣೆಯ ಗೆಲುವಿನ ಗಣಿತ ಹಾಕತೊಡಗಿದ್ದರು. ಕಾರವಾರ, ಕುಮಟಾ, ಹೊನ್ನಾವರ ಮತ್ತು ಶಿರಸಿಯ ಸುಮಾರು 2,000 ಶೂದ್ರ ಹುಡುಗರು ಕಮ್ಯುನಲ್ ಕ್ರಿಮಿನಲ್ ಕೇಸ್‍ಗೆ ಬಿದ್ದರು. ಕೋರ್ಟ್-ಕಚೇರಿ ಅಲೆಯುತ್ತ ಉದ್ಯೋಗ, ವ್ಯವಹಾರ ಹಾಳು ಮಾಡಿಕೊಂಡರು. ಸರ್ಕಾರಿ ನೌಕರಿ ಸಿಗದಂತಾಯಿತು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ತಮ್ಮಿಂದ ಶಾಸಕರಾದವರ ಕೊರಳಪಟ್ಟಿ ಹಿಡಿದು ಕೇಸ್ ಖತಮ್ ಮಾಡಿಸುವಂತೆ ಒತ್ತಾಯಿಸತೊಡಗಿದರು. ಯಡ್ಡಿ ಜತೆಗಿನ “ಸಲಿಗೆ” ಬಳಸಿ ಸಿಎಂ ಒಪ್ಪಿಗೆಯೂ ಸೂಚಿಸಿದರು. ರೂಪಾಲಿಗೆ ಜಿಲ್ಲೆಯ ಬಿಜೆಪಿ ಪುರುಷ ಶಾಸಕರಿಗಿಂತ “ಗ್ರೇಟ್”ಎಂಬ ಪ್ರಶಂಸೆ ಬಂತು.

ಒಂದು ಹಂತದಲ್ಲಿ ಬಿಜೆಪಿಯ “ಗಂಡು ಎಮ್ಮಲ್ಲೆ”ಗಳೆಲ್ಲ ರೂಪಾಲಿ ಮೇಲೆ ಮುರುಕೊಂಡು ಬಿದ್ದರು. ಆಕೆ ಮಹಿಳಾ ಕೋಟಾದಲ್ಲಿ ಮಂತ್ರಿಗಿರಿಗೆ, ನಿಗಮದ ಪೀಠಕ್ಕೆ ಪ್ರಯತ್ನ ಪಟ್ಟಂತೆಲ್ಲಾ ಕಲ್ಲು ಹಾಕಿದರು. ಬಿಜೆಪಿಯಲ್ಲಿ ಶಾಸಕರ ಸಮರ ಜೋರಾಯಿತು. ತಂತಮ್ಮ ಕ್ಷೇತ್ರದಲ್ಲಿ ಹೇತ್ಲಾಂಡಿ ಎನಿಸಿಕೊಳ್ಳುವ ಭಯಕ್ಕೆ ಬಿದ್ದು ಗಂಡು ಶಾಸಕರು ಒಂದಾಗಿ ತಮ್ಮ ಶಿಷ್ಯರ ಮೇಲಿನ ಕಮ್ಯುನಲ್ ಕೇಸು ವಾಪಸ್ ಪಡೆಯುವಂತೆ ಯಡ್ಡಿಬಳಿ ಎಡತಾಕತೊಡಗಿದರು. ಇವರಿಗೂ ಯಡ್ಡಿ ‘ತಥಾಸ್ತು’ ಎಂದರು.

ಕಂತ್ರಿ ಕಸರತ್ತಿನಲ್ಲಿ ನಿಸ್ಸೀಮನಾದ ದಿನಕರ ಶೆಟ್ಟಿ ಎದುರಾಳಿ ರೂಪಾಲಿಗೆ ಮುಖಭಂಗ ಮಾಡಲು ಒಳಗೊಳಗೇ ಪ್ರಯತ್ನ ನಡೆಸಿದ್ದರು. ಹೀಗಾಗಿ ಮೊನ್ನೆ ಕುಮಟಾದ ನಾಲ್ಕು ಪ್ರಕರಣದ 18 ಜನರ ಮೇಲಿನ ಕೇಸು ಸರ್ಕಾರ ವಾಪಸ್ ಪಡೆದಿದೆ. ಅಷ್ಟೇ ಅಲ್ಲ ಕಾರವಾರದ ಕೇಸ್ ನಿಖಾಲಿ ನೆನೆಗುದಿಗೆ ಬಿದ್ದಿದೆ ಎಂಬ ಗುಲ್ಲು ಎಬ್ಬಿಸಲಾಗಿದೆ. ಅಲ್ಲಿಗೆ ರೂಪಾಲಿ ನಾಯ್ಕ್ ಪೇಚಿಗೆ ಬಿದ್ದಂತಾಗಿದೆ. ಆಕೆ ಹೇಳಿಕೆ ಮೇಲೆ ಹೇಳಿಕೆ ಕೊಡುತ್ತ ತನ್ನ ಕ್ಷೇತ್ರದ ಪುಂಡರ ಮೇಲಿನ ಪ್ರಕರಣಗಳೂ ಸದ್ಯವೇ ಸರ್ಕಾರ ಹಿಂಪಡೆಯುತ್ತದೆಂದು ಸಮಜಾಯಿಸಿ ಕೊಡತೊಡಗಿದ್ದಾರೆ. ಸ್ಪೀಕರ್ ಕಾಗೇರಿಯೂ ಯೆಡ್ಡಿ ಬೇಕಂತಲೇ ತನ್ನ ಕ್ಷೇತ್ರದ ಗಲಭೆಗ್ರಸ್ತರ ಪ್ರಕರಣ ನಿಖಾಲಿ ಮಾಡಿಲ್ಲವೆಂಬ ಗುಮಾನಿಗೆ ಬಿದ್ದಿದ್ದಾರೆ. ಕಾಗೇರಿ ಎಂದಿದ್ದರೂ ಯಡ್ಡಿ ವಿರೋಧಿ ಪಾಳಯದ ಕಲಿ. ಭಟ್ಕಳದ ಸುನೀಲ್ ನಾಯ್ಕ್ ಇದೆಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಕಳ್ಳ ಕಾಸು ಮಾಡುವ ಸ್ಕೆಚ್‍ನಲ್ಲಿ ತಲ್ಲೀನನಾಗಿದ್ದಾನೆ. ಆದರೆ, ಒಂದಂತೂ ಖರೆ, ಪರೇಶ್ ಪ್ರಕರಣ ಕ್ರಿಮಿನಲ್ ಕೇಸ್ ಖತಮ್ ಬಿಜೆಪಿಯ ಶಾಸಕರ ನಡುವಿನ ಗ್ಯಾಂಗ್ ವಾರ್‍ಗೆ ಹೊಸ ಆಯಾಮವಂತೂ ಕೊಟ್ಟಿದೆ!!

ಪರೇಶ್ ಸಾವಿನ ನಂತರದ 140 ಪ್ರಕರಣ ಮತ್ತು ಟಿಪ್ಪು ಜಯಂತಿ ವಿರುದ್ಧ ಹಿಂದೂತ್ವದ ಕಹಳೆ ಮೊಳಗಿಸಿ ಸಿಕ್ಕಿಬಿದ್ದವರ ಕೇಸ್ ಖತಮ್ ಮಾಡಿಸಿ ಓಟ್ ಬ್ಯಾಂಕ್ ಭದ್ರತೆಗೆ ತಿಪ್ಪರಲಾಗ ಹಾಕುತ್ತಿರುವ ಜಿಲ್ಲೆಯ ಬಿಜೆಪಿ ಶಾಸಕ-ಸಂಸದ-ಮಂತ್ರಿಗೆ ಪರೇಶ್ ಸಾವಿನ ರಹಸ್ಯ ಭೇದಿಸಿ ಆತನ ಹೆತ್ತವರಿಗೆ ನ್ಯಾಯ ಕೊಡಿಸಬೇಕೆಂಬ ತುಡಿತವೇನೂ ಇಲ್ಲ. ಸಂಘಪರಿವಾರದ ರಿಂಗ್ ಮಾಸ್ಟರ್‍ಗಳಿಗೇ ಬೇಡದ ಈ ತನಿಖೆ ಉಸಾಬರಿ ಬಿಜೆಪಿಯ ಬೊಬ್ಬೆಕೋರರ ಅಸಲಿ ಅವತಾರ ಅನಾವರಣವಾಗುತ್ತದೆಂಬುದು ಸಂಘಸರದಾರಿಗೆ ಗೊತ್ತಿದೆ. ಹಾಗಾಗಿ ಸಿಬಿಐ ತನಿಖೆಗೆ ಬಿಜೆಪಿ ಭೂಪರೇ ಅಡ್ಡಗಾಲು ಹಾಕಿ ಕುಂತಿದ್ದಾರೆ. ಇವತ್ತಿಗೂ ಪರೇಶ್‍ನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯೇ ಬಂದಿಲ್ಲ! ಇವತ್ತಿನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅಂದು ಬಿಜೆಪಿ ರಷ್ಟ್ರಾಧ್ಯಕ್ಷನಾಗಿ ಪರೇಶ್‍ನ ಮನೆಗೆ ಬಂದು ಆತನ ಹೆತ್ತವರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು; ಅಂದಿನ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್, ಯಡ್ಡಿ ಸೇರಿದಂತೆ ವಗೈರೆ ಹಿರಿ-ಮರಿ ಪುಢಾರಿಗಳು ಸರತಿಯಂತೆ ಪರೇಶನ ಮನೆಗೆ ಬಂದು ಮೊಸಳೆ ಕಣ್ಣಿರು ಕೋಡಿ ಹರಿಸಿದ್ದರು.

ಇವರೆಲ್ಲಾ ಈಗ ಗಪ್‍ಚುಪ್ ಆಗಿರುವುದೇ ಪರೇಶ್ ಮೇಸ್ತಾನ ಸಾಬರು ಕೊಂದಿಲ್ಲ ಎಂಬುದು ಖಾತ್ರಿಪಡಿಸುವಂತಿದೆ. ಅನಂತ್ಮಾಣಿಗೆ ರಾಜಕಾರಣದ ದೀಕ್ಷೆ ಕೊಟ್ಟು ಸಂಸದನಾಗಿ ಮಾಡಿದ್ದ ಆತನ ಗುರು-ಅಂದಿನ ಉತ್ತರ ಕನ್ನಡದ ಹಿಂದೂತ್ವದ ಬೆಂಕಿ ನಾಯಕ ಡಾ| ಚಿತ್ತರಂಜನ್ ಎಮ್ಮೆಲ್ಲೆಯಾಗಿದ್ದಾಗಲೇ ಹತನಾಗಿದ್ದರು. ಬಿಜೆಪಿ ವಾಜಪೇಯಿ ಸರ್ಕಾರವಿದ್ದಾಗಲೇ ಈ ಕೇಸ್ ಪತ್ತೆಯಾಗದ ಪ್ರಕರಣವೆಂದು ಸಿಬಿಐ “ಸಿ-ರಿಪೋರ್ಟ್” ಜಡಿದಿದೆ. ಭಟ್ಕಳದ ಮತ್ತೊಬ್ಬ ಹಿಂದೂ ಮುಂದಾಳು ತಿಮ್ಮಪ್ಪ ನಾಯ್ಕನ ಕೊಲೆ ತನಿಖೆಯೂ ಸರಿಯಾಗಿ ಆಗಲಿಲ್ಲ. ಈ ಹಳ್ಳ ಹಿಡಿದ ಕೇಸ್‍ಗಳ ಬಗ್ಗೆಯೇ ತಲೆಕೆಡಿಸಿಕೊಳ್ಳದ ಅನಂತ್ಮಾಣಿ, ಯಡ್ಡಿ, ಶೋಭಕ್ಕ, ಅಮಿತ್ ಶಾ, ಮೋದಿ. ಮುಂತಾದ ಹಿಂದೂ ಕುಲೋದ್ಧಾರಕರಿಗೆ ಪಾಪದ ಬೆಸ್ತರ ಹುಡುಗ ಪರೇಶ್‍ನ ಸಾವೆಲ್ಲಾ ಯಾವ ಲೆಕ್ಕ?

ಓಟ್ ಬ್ಯಾಂಕ್‍ಗಾಗಿ ಹೆಣದ ರಾಜಕಾರಣ ಮಾಡುವ ಬಿಜೆಪಿಗರ ಬಣ್ಣವೀಗ ಬಯಲಾಗುತ್ತಿದೆ. ಹಿಂದೂತ್ವದ ಅಮಲೇರಿಸಿಕೊಂಡು ಪರೇಶ್ ಸಾವಿನ ನಂತರ ದೊಂಬಿ-ಹಿಂಸಾಚಾರಕ್ಕಿಳಿದಿದ್ದ ಶೂದ್ರ ಹುಡುಗರಿಗೀಗ ಸತ್ಯ ಗೊತ್ತಾಗಿದೆ. 13-12-2017ರಂದು ಹೊನ್ನಾವರದ ಶನಿದೇವರ ಅಂಗಳ ಮತ್ತು ಸಾಬರ ಗುಡ್‍ಲಕ್ ಹೋಟೆಲಿನ ಮುಂಭಾಗದಲ್ಲಾದ ಪೊಲೀಸರ ಲಾಠಿ ಚಾರ್ಜ್‍ಗೆ ಬೆದರಿದ ಪರೇಶ್ ಮೇಸ್ತಾ ಬಚಾವಾಗಲು ಪಕ್ಕದ ಶೆಟ್ಟಿಕೆರೆ ಆವರಣ ಗೋಡೆ ಹಾರಿ ಅವಿತಿಟ್ಟುಕೊಳ್ಳುವ ಪ್ರಯತ್ನದಲ್ಲಿ ಕಾಲುಜಾರಿ ಕೆರೆಗೆ ಬಿದ್ದು ಸತ್ತಿದ್ದಾನೆ; ಆತನನ್ನು ಸಾಬರು ಸಾಯಿಸಿಲ್ಲ ಎಂದು ಈಗ ವ್ಯಾಖ್ಯಾನ ಮಾಡಲಾಗುತ್ತಿದೆ. ಪೊಲೀಸರಿಗೆ, ಸಿಬಿಐಗೆ ಮತ್ತು ಪ್ರಜ್ಞಾವಂತರಿಗೂ ಇದೇ ಜಿಜ್ಞಾಸೆಯಿದೆ. ಸಂಘ ಸರದಾರರಿಗೆ ಇದು ಮೊದಲೇ ಗೊತ್ತಿದೆ? ಆದರೆ ಹಿಂದೂತ್ವದ ಅಭಿಯಾನಕ್ಕಾಗಿ ಪರೇಶ್‍ನ ಸಂಘಿಗಳು ಬಿಡಲು ಸಿದ್ಧರಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...