Homeಕರ್ನಾಟಕಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

ಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

- Advertisement -
- Advertisement -

2017ರ ಡಿಸೆಂಬರ್‍ನ ಅಂತ್ಯಾರ್ಧದ ಅತ್ಯಂತ ಆತಂಕದ ದಿನಗಳವು! ಇಡೀ ಉತ್ತರ ಕನ್ನಡ ಕೋಮು ಕಿಚ್ಚಿನಲ್ಲಿ ಬೆಂದು ಬಸವಳಿದ ಸಂದರ್ಭವದು!! ಹೊನ್ನಾವರದ ಮೀನುಗಾರ ಕುಲದ ಪರೇಶ್ ಮೇಸ್ತಾ ನಿಗೂಢವಾಗಿ ಸತ್ತದ್ದನ್ನು ಸಂಘಪರಿವಾರದ ಧರ್ಮಾಕಾರಣ ಪಂಡಿತರು ಎದುರಾಗಿದ್ದ ಅಸೆಂಬ್ಲಿ ಇಲೆಕ್ಷನ್‍ಗೆ ಅಸ್ತ್ರವಾಗಿ ಮಾಡಿಕೊಂಡಿದ್ದರು. ಪರೇಶ್‍ನನ್ನು ಸಾಬರ ಸೈತಾನರು ಕೊಂದು ಕೆರೆಗೆಸೆದಿದ್ದಾರೆಂದು ಹುಸಿ ಹುಯಿಲೆಬ್ಬಿಸಿದ ಬಿಜೆಪಿ ಕೊಳ್ಳಿ ದೆವ್ವಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಯಲ್ಲಾಪುರದಂಥ ಆಯಕಟ್ಟಿನ ತಾಲ್ಲೂಕುಗಳಲ್ಲಿ ಕೋಮುಗಲಭೆ ಎಬ್ಬಿಸಿ ಕೇಕೆ ಹಾಕಿದವು. ಸಾಬರ ಅಟ್ಟಾಡಿಸಿ ಕಾಡಿತು; ಐಜಿಪಿ ಕಾರಿಗೆ, ಚಾಲಕನಿಗೇ ಬೆಂಕಿ ಹಾಕಲಾಯಿತು….

ಪರೇಶ್‍ನ ಪ್ರಕರಣ ಸಿಬಿಐ ವಹಿಸಬೇಕೆಂದು ಕೂಗು ಮಾರಿ ಶೋಭಕ್ಕ, ಅಸಡ್ಡಾಳ ಹಲಬುಗಾರ ಅನಂತ್ಮಾಣಿ ಆಗಿಯಾಗಿ ಯಡ್ಡಿ ಸಕಲ ಚೆಡ್ಡಿಗಳೆಲ್ಲ ಏಕಕಂಠದಲ್ಲಿ ಬೊಬ್ಬೆಹೊಡೆದರು. ಅಂದಿನ ಸಿದ್ದು ಸರ್ಕಾರ ಪ್ರತಿಷ್ಟೆಗೆ ಬೀಳದೆ ಪ್ರಕರಣ ಸಿಬಿಐಗೆ ವಹಿಸಿತು. ಮೋದಿ-ಶಾ ಮೂಗಿನಡಿಯೇ ಇರುವ ಸಿಬಿಐ ಮಾತ್ರ ಇವತ್ತಿಗೂ ಪರೇಶನ ಮುಸ್ಲಿಮರು ಹತ್ಯೆ ಮಾಡಿದ್ದಾರೋ ಅಥವಾ ಆತನೇ ಕಾಲು ಜಾರಿ ಕೆರೆಗೆ ಬಿದ್ದು ಸತ್ತನೋ ಎಂಬ ತನಿಖೆ ಮಾಡುತ್ತಲೇ ಇಲ್ಲ. ಆದರೆ ಬಿಜೆಪಿ ಪರೇಶ್ ಮೇಸ್ತಾನ ಮರಣ ಮಹಿಮೆಯನ್ನೇ ಪ್ರಣಾಳಿಕೆ ಮಾಡಿಕೊಂಡು ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಬಂಪರ್ ಎಮ್ಮೆಲ್ಲೆ ಕೊಯ್ಲು ಮಾಡಿತು. ಶಾಸಕರಾಗುವ ಕನಿಷ್ಠ ಯೋಗ್ಯತೆಯೂ ಇಲ್ಲದ ಕಾರವಾರದ ರೂಪಾಲಿ ನಾಯ್ಲ್, ಕುಮಟೆಯ ದಿನಕರ ಶೆಟ್ಟಿ, ಭಟ್ಕಳದ ಸುನೀಲ್ ನಾಯ್ಕ್ ಮತ್ತು ಶಿರಸಿಯ ಕಾಗೇರಿ ಮಾಣಿಗಳೆಲ್ಲ ಖುದ್ದು ದಿಗಿಲು ಬೀಳುವಂತೆ ವಿಧಾನಸೌಧಕ್ಕೆ ಎಂಟ್ರಿ ಹೊಡೆದಿದ್ದರು. ಸಾಯುವತನಕ ಪರೇಶನ ಫೋಟೋಕ್ಕೆ ಪೂಜೆ ಸಲ್ಲಿಸುವ ಋಣಕ್ಕೆ ಬಿದ್ದಿದ್ದರು.

ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶನ ಪಾರ್ಥಿವ ಶರೀರ ಕಂಡ ಕ್ಷಣವೇ ಶೂದ್ರ ಹುಡುಗರ ಮತಾಂಧ ಮಸಲತ್ತಿಗಿಳಿದ ಬಿಜೆಪಿಯ ಜನಿವಾರ ಲೀಡರ್‍ಗಳು ಚುನಾವಣೆಯ ಗೆಲುವಿನ ಗಣಿತ ಹಾಕತೊಡಗಿದ್ದರು. ಕಾರವಾರ, ಕುಮಟಾ, ಹೊನ್ನಾವರ ಮತ್ತು ಶಿರಸಿಯ ಸುಮಾರು 2,000 ಶೂದ್ರ ಹುಡುಗರು ಕಮ್ಯುನಲ್ ಕ್ರಿಮಿನಲ್ ಕೇಸ್‍ಗೆ ಬಿದ್ದರು. ಕೋರ್ಟ್-ಕಚೇರಿ ಅಲೆಯುತ್ತ ಉದ್ಯೋಗ, ವ್ಯವಹಾರ ಹಾಳು ಮಾಡಿಕೊಂಡರು. ಸರ್ಕಾರಿ ನೌಕರಿ ಸಿಗದಂತಾಯಿತು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ತಮ್ಮಿಂದ ಶಾಸಕರಾದವರ ಕೊರಳಪಟ್ಟಿ ಹಿಡಿದು ಕೇಸ್ ಖತಮ್ ಮಾಡಿಸುವಂತೆ ಒತ್ತಾಯಿಸತೊಡಗಿದರು. ಯಡ್ಡಿ ಜತೆಗಿನ “ಸಲಿಗೆ” ಬಳಸಿ ಸಿಎಂ ಒಪ್ಪಿಗೆಯೂ ಸೂಚಿಸಿದರು. ರೂಪಾಲಿಗೆ ಜಿಲ್ಲೆಯ ಬಿಜೆಪಿ ಪುರುಷ ಶಾಸಕರಿಗಿಂತ “ಗ್ರೇಟ್”ಎಂಬ ಪ್ರಶಂಸೆ ಬಂತು.

ಒಂದು ಹಂತದಲ್ಲಿ ಬಿಜೆಪಿಯ “ಗಂಡು ಎಮ್ಮಲ್ಲೆ”ಗಳೆಲ್ಲ ರೂಪಾಲಿ ಮೇಲೆ ಮುರುಕೊಂಡು ಬಿದ್ದರು. ಆಕೆ ಮಹಿಳಾ ಕೋಟಾದಲ್ಲಿ ಮಂತ್ರಿಗಿರಿಗೆ, ನಿಗಮದ ಪೀಠಕ್ಕೆ ಪ್ರಯತ್ನ ಪಟ್ಟಂತೆಲ್ಲಾ ಕಲ್ಲು ಹಾಕಿದರು. ಬಿಜೆಪಿಯಲ್ಲಿ ಶಾಸಕರ ಸಮರ ಜೋರಾಯಿತು. ತಂತಮ್ಮ ಕ್ಷೇತ್ರದಲ್ಲಿ ಹೇತ್ಲಾಂಡಿ ಎನಿಸಿಕೊಳ್ಳುವ ಭಯಕ್ಕೆ ಬಿದ್ದು ಗಂಡು ಶಾಸಕರು ಒಂದಾಗಿ ತಮ್ಮ ಶಿಷ್ಯರ ಮೇಲಿನ ಕಮ್ಯುನಲ್ ಕೇಸು ವಾಪಸ್ ಪಡೆಯುವಂತೆ ಯಡ್ಡಿಬಳಿ ಎಡತಾಕತೊಡಗಿದರು. ಇವರಿಗೂ ಯಡ್ಡಿ ‘ತಥಾಸ್ತು’ ಎಂದರು.

ಕಂತ್ರಿ ಕಸರತ್ತಿನಲ್ಲಿ ನಿಸ್ಸೀಮನಾದ ದಿನಕರ ಶೆಟ್ಟಿ ಎದುರಾಳಿ ರೂಪಾಲಿಗೆ ಮುಖಭಂಗ ಮಾಡಲು ಒಳಗೊಳಗೇ ಪ್ರಯತ್ನ ನಡೆಸಿದ್ದರು. ಹೀಗಾಗಿ ಮೊನ್ನೆ ಕುಮಟಾದ ನಾಲ್ಕು ಪ್ರಕರಣದ 18 ಜನರ ಮೇಲಿನ ಕೇಸು ಸರ್ಕಾರ ವಾಪಸ್ ಪಡೆದಿದೆ. ಅಷ್ಟೇ ಅಲ್ಲ ಕಾರವಾರದ ಕೇಸ್ ನಿಖಾಲಿ ನೆನೆಗುದಿಗೆ ಬಿದ್ದಿದೆ ಎಂಬ ಗುಲ್ಲು ಎಬ್ಬಿಸಲಾಗಿದೆ. ಅಲ್ಲಿಗೆ ರೂಪಾಲಿ ನಾಯ್ಕ್ ಪೇಚಿಗೆ ಬಿದ್ದಂತಾಗಿದೆ. ಆಕೆ ಹೇಳಿಕೆ ಮೇಲೆ ಹೇಳಿಕೆ ಕೊಡುತ್ತ ತನ್ನ ಕ್ಷೇತ್ರದ ಪುಂಡರ ಮೇಲಿನ ಪ್ರಕರಣಗಳೂ ಸದ್ಯವೇ ಸರ್ಕಾರ ಹಿಂಪಡೆಯುತ್ತದೆಂದು ಸಮಜಾಯಿಸಿ ಕೊಡತೊಡಗಿದ್ದಾರೆ. ಸ್ಪೀಕರ್ ಕಾಗೇರಿಯೂ ಯೆಡ್ಡಿ ಬೇಕಂತಲೇ ತನ್ನ ಕ್ಷೇತ್ರದ ಗಲಭೆಗ್ರಸ್ತರ ಪ್ರಕರಣ ನಿಖಾಲಿ ಮಾಡಿಲ್ಲವೆಂಬ ಗುಮಾನಿಗೆ ಬಿದ್ದಿದ್ದಾರೆ. ಕಾಗೇರಿ ಎಂದಿದ್ದರೂ ಯಡ್ಡಿ ವಿರೋಧಿ ಪಾಳಯದ ಕಲಿ. ಭಟ್ಕಳದ ಸುನೀಲ್ ನಾಯ್ಕ್ ಇದೆಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಕಳ್ಳ ಕಾಸು ಮಾಡುವ ಸ್ಕೆಚ್‍ನಲ್ಲಿ ತಲ್ಲೀನನಾಗಿದ್ದಾನೆ. ಆದರೆ, ಒಂದಂತೂ ಖರೆ, ಪರೇಶ್ ಪ್ರಕರಣ ಕ್ರಿಮಿನಲ್ ಕೇಸ್ ಖತಮ್ ಬಿಜೆಪಿಯ ಶಾಸಕರ ನಡುವಿನ ಗ್ಯಾಂಗ್ ವಾರ್‍ಗೆ ಹೊಸ ಆಯಾಮವಂತೂ ಕೊಟ್ಟಿದೆ!!

ಪರೇಶ್ ಸಾವಿನ ನಂತರದ 140 ಪ್ರಕರಣ ಮತ್ತು ಟಿಪ್ಪು ಜಯಂತಿ ವಿರುದ್ಧ ಹಿಂದೂತ್ವದ ಕಹಳೆ ಮೊಳಗಿಸಿ ಸಿಕ್ಕಿಬಿದ್ದವರ ಕೇಸ್ ಖತಮ್ ಮಾಡಿಸಿ ಓಟ್ ಬ್ಯಾಂಕ್ ಭದ್ರತೆಗೆ ತಿಪ್ಪರಲಾಗ ಹಾಕುತ್ತಿರುವ ಜಿಲ್ಲೆಯ ಬಿಜೆಪಿ ಶಾಸಕ-ಸಂಸದ-ಮಂತ್ರಿಗೆ ಪರೇಶ್ ಸಾವಿನ ರಹಸ್ಯ ಭೇದಿಸಿ ಆತನ ಹೆತ್ತವರಿಗೆ ನ್ಯಾಯ ಕೊಡಿಸಬೇಕೆಂಬ ತುಡಿತವೇನೂ ಇಲ್ಲ. ಸಂಘಪರಿವಾರದ ರಿಂಗ್ ಮಾಸ್ಟರ್‍ಗಳಿಗೇ ಬೇಡದ ಈ ತನಿಖೆ ಉಸಾಬರಿ ಬಿಜೆಪಿಯ ಬೊಬ್ಬೆಕೋರರ ಅಸಲಿ ಅವತಾರ ಅನಾವರಣವಾಗುತ್ತದೆಂಬುದು ಸಂಘಸರದಾರಿಗೆ ಗೊತ್ತಿದೆ. ಹಾಗಾಗಿ ಸಿಬಿಐ ತನಿಖೆಗೆ ಬಿಜೆಪಿ ಭೂಪರೇ ಅಡ್ಡಗಾಲು ಹಾಕಿ ಕುಂತಿದ್ದಾರೆ. ಇವತ್ತಿಗೂ ಪರೇಶ್‍ನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯೇ ಬಂದಿಲ್ಲ! ಇವತ್ತಿನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅಂದು ಬಿಜೆಪಿ ರಷ್ಟ್ರಾಧ್ಯಕ್ಷನಾಗಿ ಪರೇಶ್‍ನ ಮನೆಗೆ ಬಂದು ಆತನ ಹೆತ್ತವರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು; ಅಂದಿನ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್, ಯಡ್ಡಿ ಸೇರಿದಂತೆ ವಗೈರೆ ಹಿರಿ-ಮರಿ ಪುಢಾರಿಗಳು ಸರತಿಯಂತೆ ಪರೇಶನ ಮನೆಗೆ ಬಂದು ಮೊಸಳೆ ಕಣ್ಣಿರು ಕೋಡಿ ಹರಿಸಿದ್ದರು.

ಇವರೆಲ್ಲಾ ಈಗ ಗಪ್‍ಚುಪ್ ಆಗಿರುವುದೇ ಪರೇಶ್ ಮೇಸ್ತಾನ ಸಾಬರು ಕೊಂದಿಲ್ಲ ಎಂಬುದು ಖಾತ್ರಿಪಡಿಸುವಂತಿದೆ. ಅನಂತ್ಮಾಣಿಗೆ ರಾಜಕಾರಣದ ದೀಕ್ಷೆ ಕೊಟ್ಟು ಸಂಸದನಾಗಿ ಮಾಡಿದ್ದ ಆತನ ಗುರು-ಅಂದಿನ ಉತ್ತರ ಕನ್ನಡದ ಹಿಂದೂತ್ವದ ಬೆಂಕಿ ನಾಯಕ ಡಾ| ಚಿತ್ತರಂಜನ್ ಎಮ್ಮೆಲ್ಲೆಯಾಗಿದ್ದಾಗಲೇ ಹತನಾಗಿದ್ದರು. ಬಿಜೆಪಿ ವಾಜಪೇಯಿ ಸರ್ಕಾರವಿದ್ದಾಗಲೇ ಈ ಕೇಸ್ ಪತ್ತೆಯಾಗದ ಪ್ರಕರಣವೆಂದು ಸಿಬಿಐ “ಸಿ-ರಿಪೋರ್ಟ್” ಜಡಿದಿದೆ. ಭಟ್ಕಳದ ಮತ್ತೊಬ್ಬ ಹಿಂದೂ ಮುಂದಾಳು ತಿಮ್ಮಪ್ಪ ನಾಯ್ಕನ ಕೊಲೆ ತನಿಖೆಯೂ ಸರಿಯಾಗಿ ಆಗಲಿಲ್ಲ. ಈ ಹಳ್ಳ ಹಿಡಿದ ಕೇಸ್‍ಗಳ ಬಗ್ಗೆಯೇ ತಲೆಕೆಡಿಸಿಕೊಳ್ಳದ ಅನಂತ್ಮಾಣಿ, ಯಡ್ಡಿ, ಶೋಭಕ್ಕ, ಅಮಿತ್ ಶಾ, ಮೋದಿ. ಮುಂತಾದ ಹಿಂದೂ ಕುಲೋದ್ಧಾರಕರಿಗೆ ಪಾಪದ ಬೆಸ್ತರ ಹುಡುಗ ಪರೇಶ್‍ನ ಸಾವೆಲ್ಲಾ ಯಾವ ಲೆಕ್ಕ?

ಓಟ್ ಬ್ಯಾಂಕ್‍ಗಾಗಿ ಹೆಣದ ರಾಜಕಾರಣ ಮಾಡುವ ಬಿಜೆಪಿಗರ ಬಣ್ಣವೀಗ ಬಯಲಾಗುತ್ತಿದೆ. ಹಿಂದೂತ್ವದ ಅಮಲೇರಿಸಿಕೊಂಡು ಪರೇಶ್ ಸಾವಿನ ನಂತರ ದೊಂಬಿ-ಹಿಂಸಾಚಾರಕ್ಕಿಳಿದಿದ್ದ ಶೂದ್ರ ಹುಡುಗರಿಗೀಗ ಸತ್ಯ ಗೊತ್ತಾಗಿದೆ. 13-12-2017ರಂದು ಹೊನ್ನಾವರದ ಶನಿದೇವರ ಅಂಗಳ ಮತ್ತು ಸಾಬರ ಗುಡ್‍ಲಕ್ ಹೋಟೆಲಿನ ಮುಂಭಾಗದಲ್ಲಾದ ಪೊಲೀಸರ ಲಾಠಿ ಚಾರ್ಜ್‍ಗೆ ಬೆದರಿದ ಪರೇಶ್ ಮೇಸ್ತಾ ಬಚಾವಾಗಲು ಪಕ್ಕದ ಶೆಟ್ಟಿಕೆರೆ ಆವರಣ ಗೋಡೆ ಹಾರಿ ಅವಿತಿಟ್ಟುಕೊಳ್ಳುವ ಪ್ರಯತ್ನದಲ್ಲಿ ಕಾಲುಜಾರಿ ಕೆರೆಗೆ ಬಿದ್ದು ಸತ್ತಿದ್ದಾನೆ; ಆತನನ್ನು ಸಾಬರು ಸಾಯಿಸಿಲ್ಲ ಎಂದು ಈಗ ವ್ಯಾಖ್ಯಾನ ಮಾಡಲಾಗುತ್ತಿದೆ. ಪೊಲೀಸರಿಗೆ, ಸಿಬಿಐಗೆ ಮತ್ತು ಪ್ರಜ್ಞಾವಂತರಿಗೂ ಇದೇ ಜಿಜ್ಞಾಸೆಯಿದೆ. ಸಂಘ ಸರದಾರರಿಗೆ ಇದು ಮೊದಲೇ ಗೊತ್ತಿದೆ? ಆದರೆ ಹಿಂದೂತ್ವದ ಅಭಿಯಾನಕ್ಕಾಗಿ ಪರೇಶ್‍ನ ಸಂಘಿಗಳು ಬಿಡಲು ಸಿದ್ಧರಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...