Homeಕರ್ನಾಟಕಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

ಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

- Advertisement -
- Advertisement -

2017ರ ಡಿಸೆಂಬರ್‍ನ ಅಂತ್ಯಾರ್ಧದ ಅತ್ಯಂತ ಆತಂಕದ ದಿನಗಳವು! ಇಡೀ ಉತ್ತರ ಕನ್ನಡ ಕೋಮು ಕಿಚ್ಚಿನಲ್ಲಿ ಬೆಂದು ಬಸವಳಿದ ಸಂದರ್ಭವದು!! ಹೊನ್ನಾವರದ ಮೀನುಗಾರ ಕುಲದ ಪರೇಶ್ ಮೇಸ್ತಾ ನಿಗೂಢವಾಗಿ ಸತ್ತದ್ದನ್ನು ಸಂಘಪರಿವಾರದ ಧರ್ಮಾಕಾರಣ ಪಂಡಿತರು ಎದುರಾಗಿದ್ದ ಅಸೆಂಬ್ಲಿ ಇಲೆಕ್ಷನ್‍ಗೆ ಅಸ್ತ್ರವಾಗಿ ಮಾಡಿಕೊಂಡಿದ್ದರು. ಪರೇಶ್‍ನನ್ನು ಸಾಬರ ಸೈತಾನರು ಕೊಂದು ಕೆರೆಗೆಸೆದಿದ್ದಾರೆಂದು ಹುಸಿ ಹುಯಿಲೆಬ್ಬಿಸಿದ ಬಿಜೆಪಿ ಕೊಳ್ಳಿ ದೆವ್ವಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಯಲ್ಲಾಪುರದಂಥ ಆಯಕಟ್ಟಿನ ತಾಲ್ಲೂಕುಗಳಲ್ಲಿ ಕೋಮುಗಲಭೆ ಎಬ್ಬಿಸಿ ಕೇಕೆ ಹಾಕಿದವು. ಸಾಬರ ಅಟ್ಟಾಡಿಸಿ ಕಾಡಿತು; ಐಜಿಪಿ ಕಾರಿಗೆ, ಚಾಲಕನಿಗೇ ಬೆಂಕಿ ಹಾಕಲಾಯಿತು….

ಪರೇಶ್‍ನ ಪ್ರಕರಣ ಸಿಬಿಐ ವಹಿಸಬೇಕೆಂದು ಕೂಗು ಮಾರಿ ಶೋಭಕ್ಕ, ಅಸಡ್ಡಾಳ ಹಲಬುಗಾರ ಅನಂತ್ಮಾಣಿ ಆಗಿಯಾಗಿ ಯಡ್ಡಿ ಸಕಲ ಚೆಡ್ಡಿಗಳೆಲ್ಲ ಏಕಕಂಠದಲ್ಲಿ ಬೊಬ್ಬೆಹೊಡೆದರು. ಅಂದಿನ ಸಿದ್ದು ಸರ್ಕಾರ ಪ್ರತಿಷ್ಟೆಗೆ ಬೀಳದೆ ಪ್ರಕರಣ ಸಿಬಿಐಗೆ ವಹಿಸಿತು. ಮೋದಿ-ಶಾ ಮೂಗಿನಡಿಯೇ ಇರುವ ಸಿಬಿಐ ಮಾತ್ರ ಇವತ್ತಿಗೂ ಪರೇಶನ ಮುಸ್ಲಿಮರು ಹತ್ಯೆ ಮಾಡಿದ್ದಾರೋ ಅಥವಾ ಆತನೇ ಕಾಲು ಜಾರಿ ಕೆರೆಗೆ ಬಿದ್ದು ಸತ್ತನೋ ಎಂಬ ತನಿಖೆ ಮಾಡುತ್ತಲೇ ಇಲ್ಲ. ಆದರೆ ಬಿಜೆಪಿ ಪರೇಶ್ ಮೇಸ್ತಾನ ಮರಣ ಮಹಿಮೆಯನ್ನೇ ಪ್ರಣಾಳಿಕೆ ಮಾಡಿಕೊಂಡು ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಬಂಪರ್ ಎಮ್ಮೆಲ್ಲೆ ಕೊಯ್ಲು ಮಾಡಿತು. ಶಾಸಕರಾಗುವ ಕನಿಷ್ಠ ಯೋಗ್ಯತೆಯೂ ಇಲ್ಲದ ಕಾರವಾರದ ರೂಪಾಲಿ ನಾಯ್ಲ್, ಕುಮಟೆಯ ದಿನಕರ ಶೆಟ್ಟಿ, ಭಟ್ಕಳದ ಸುನೀಲ್ ನಾಯ್ಕ್ ಮತ್ತು ಶಿರಸಿಯ ಕಾಗೇರಿ ಮಾಣಿಗಳೆಲ್ಲ ಖುದ್ದು ದಿಗಿಲು ಬೀಳುವಂತೆ ವಿಧಾನಸೌಧಕ್ಕೆ ಎಂಟ್ರಿ ಹೊಡೆದಿದ್ದರು. ಸಾಯುವತನಕ ಪರೇಶನ ಫೋಟೋಕ್ಕೆ ಪೂಜೆ ಸಲ್ಲಿಸುವ ಋಣಕ್ಕೆ ಬಿದ್ದಿದ್ದರು.

ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶನ ಪಾರ್ಥಿವ ಶರೀರ ಕಂಡ ಕ್ಷಣವೇ ಶೂದ್ರ ಹುಡುಗರ ಮತಾಂಧ ಮಸಲತ್ತಿಗಿಳಿದ ಬಿಜೆಪಿಯ ಜನಿವಾರ ಲೀಡರ್‍ಗಳು ಚುನಾವಣೆಯ ಗೆಲುವಿನ ಗಣಿತ ಹಾಕತೊಡಗಿದ್ದರು. ಕಾರವಾರ, ಕುಮಟಾ, ಹೊನ್ನಾವರ ಮತ್ತು ಶಿರಸಿಯ ಸುಮಾರು 2,000 ಶೂದ್ರ ಹುಡುಗರು ಕಮ್ಯುನಲ್ ಕ್ರಿಮಿನಲ್ ಕೇಸ್‍ಗೆ ಬಿದ್ದರು. ಕೋರ್ಟ್-ಕಚೇರಿ ಅಲೆಯುತ್ತ ಉದ್ಯೋಗ, ವ್ಯವಹಾರ ಹಾಳು ಮಾಡಿಕೊಂಡರು. ಸರ್ಕಾರಿ ನೌಕರಿ ಸಿಗದಂತಾಯಿತು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ತಮ್ಮಿಂದ ಶಾಸಕರಾದವರ ಕೊರಳಪಟ್ಟಿ ಹಿಡಿದು ಕೇಸ್ ಖತಮ್ ಮಾಡಿಸುವಂತೆ ಒತ್ತಾಯಿಸತೊಡಗಿದರು. ಯಡ್ಡಿ ಜತೆಗಿನ “ಸಲಿಗೆ” ಬಳಸಿ ಸಿಎಂ ಒಪ್ಪಿಗೆಯೂ ಸೂಚಿಸಿದರು. ರೂಪಾಲಿಗೆ ಜಿಲ್ಲೆಯ ಬಿಜೆಪಿ ಪುರುಷ ಶಾಸಕರಿಗಿಂತ “ಗ್ರೇಟ್”ಎಂಬ ಪ್ರಶಂಸೆ ಬಂತು.

ಒಂದು ಹಂತದಲ್ಲಿ ಬಿಜೆಪಿಯ “ಗಂಡು ಎಮ್ಮಲ್ಲೆ”ಗಳೆಲ್ಲ ರೂಪಾಲಿ ಮೇಲೆ ಮುರುಕೊಂಡು ಬಿದ್ದರು. ಆಕೆ ಮಹಿಳಾ ಕೋಟಾದಲ್ಲಿ ಮಂತ್ರಿಗಿರಿಗೆ, ನಿಗಮದ ಪೀಠಕ್ಕೆ ಪ್ರಯತ್ನ ಪಟ್ಟಂತೆಲ್ಲಾ ಕಲ್ಲು ಹಾಕಿದರು. ಬಿಜೆಪಿಯಲ್ಲಿ ಶಾಸಕರ ಸಮರ ಜೋರಾಯಿತು. ತಂತಮ್ಮ ಕ್ಷೇತ್ರದಲ್ಲಿ ಹೇತ್ಲಾಂಡಿ ಎನಿಸಿಕೊಳ್ಳುವ ಭಯಕ್ಕೆ ಬಿದ್ದು ಗಂಡು ಶಾಸಕರು ಒಂದಾಗಿ ತಮ್ಮ ಶಿಷ್ಯರ ಮೇಲಿನ ಕಮ್ಯುನಲ್ ಕೇಸು ವಾಪಸ್ ಪಡೆಯುವಂತೆ ಯಡ್ಡಿಬಳಿ ಎಡತಾಕತೊಡಗಿದರು. ಇವರಿಗೂ ಯಡ್ಡಿ ‘ತಥಾಸ್ತು’ ಎಂದರು.

ಕಂತ್ರಿ ಕಸರತ್ತಿನಲ್ಲಿ ನಿಸ್ಸೀಮನಾದ ದಿನಕರ ಶೆಟ್ಟಿ ಎದುರಾಳಿ ರೂಪಾಲಿಗೆ ಮುಖಭಂಗ ಮಾಡಲು ಒಳಗೊಳಗೇ ಪ್ರಯತ್ನ ನಡೆಸಿದ್ದರು. ಹೀಗಾಗಿ ಮೊನ್ನೆ ಕುಮಟಾದ ನಾಲ್ಕು ಪ್ರಕರಣದ 18 ಜನರ ಮೇಲಿನ ಕೇಸು ಸರ್ಕಾರ ವಾಪಸ್ ಪಡೆದಿದೆ. ಅಷ್ಟೇ ಅಲ್ಲ ಕಾರವಾರದ ಕೇಸ್ ನಿಖಾಲಿ ನೆನೆಗುದಿಗೆ ಬಿದ್ದಿದೆ ಎಂಬ ಗುಲ್ಲು ಎಬ್ಬಿಸಲಾಗಿದೆ. ಅಲ್ಲಿಗೆ ರೂಪಾಲಿ ನಾಯ್ಕ್ ಪೇಚಿಗೆ ಬಿದ್ದಂತಾಗಿದೆ. ಆಕೆ ಹೇಳಿಕೆ ಮೇಲೆ ಹೇಳಿಕೆ ಕೊಡುತ್ತ ತನ್ನ ಕ್ಷೇತ್ರದ ಪುಂಡರ ಮೇಲಿನ ಪ್ರಕರಣಗಳೂ ಸದ್ಯವೇ ಸರ್ಕಾರ ಹಿಂಪಡೆಯುತ್ತದೆಂದು ಸಮಜಾಯಿಸಿ ಕೊಡತೊಡಗಿದ್ದಾರೆ. ಸ್ಪೀಕರ್ ಕಾಗೇರಿಯೂ ಯೆಡ್ಡಿ ಬೇಕಂತಲೇ ತನ್ನ ಕ್ಷೇತ್ರದ ಗಲಭೆಗ್ರಸ್ತರ ಪ್ರಕರಣ ನಿಖಾಲಿ ಮಾಡಿಲ್ಲವೆಂಬ ಗುಮಾನಿಗೆ ಬಿದ್ದಿದ್ದಾರೆ. ಕಾಗೇರಿ ಎಂದಿದ್ದರೂ ಯಡ್ಡಿ ವಿರೋಧಿ ಪಾಳಯದ ಕಲಿ. ಭಟ್ಕಳದ ಸುನೀಲ್ ನಾಯ್ಕ್ ಇದೆಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಕಳ್ಳ ಕಾಸು ಮಾಡುವ ಸ್ಕೆಚ್‍ನಲ್ಲಿ ತಲ್ಲೀನನಾಗಿದ್ದಾನೆ. ಆದರೆ, ಒಂದಂತೂ ಖರೆ, ಪರೇಶ್ ಪ್ರಕರಣ ಕ್ರಿಮಿನಲ್ ಕೇಸ್ ಖತಮ್ ಬಿಜೆಪಿಯ ಶಾಸಕರ ನಡುವಿನ ಗ್ಯಾಂಗ್ ವಾರ್‍ಗೆ ಹೊಸ ಆಯಾಮವಂತೂ ಕೊಟ್ಟಿದೆ!!

ಪರೇಶ್ ಸಾವಿನ ನಂತರದ 140 ಪ್ರಕರಣ ಮತ್ತು ಟಿಪ್ಪು ಜಯಂತಿ ವಿರುದ್ಧ ಹಿಂದೂತ್ವದ ಕಹಳೆ ಮೊಳಗಿಸಿ ಸಿಕ್ಕಿಬಿದ್ದವರ ಕೇಸ್ ಖತಮ್ ಮಾಡಿಸಿ ಓಟ್ ಬ್ಯಾಂಕ್ ಭದ್ರತೆಗೆ ತಿಪ್ಪರಲಾಗ ಹಾಕುತ್ತಿರುವ ಜಿಲ್ಲೆಯ ಬಿಜೆಪಿ ಶಾಸಕ-ಸಂಸದ-ಮಂತ್ರಿಗೆ ಪರೇಶ್ ಸಾವಿನ ರಹಸ್ಯ ಭೇದಿಸಿ ಆತನ ಹೆತ್ತವರಿಗೆ ನ್ಯಾಯ ಕೊಡಿಸಬೇಕೆಂಬ ತುಡಿತವೇನೂ ಇಲ್ಲ. ಸಂಘಪರಿವಾರದ ರಿಂಗ್ ಮಾಸ್ಟರ್‍ಗಳಿಗೇ ಬೇಡದ ಈ ತನಿಖೆ ಉಸಾಬರಿ ಬಿಜೆಪಿಯ ಬೊಬ್ಬೆಕೋರರ ಅಸಲಿ ಅವತಾರ ಅನಾವರಣವಾಗುತ್ತದೆಂಬುದು ಸಂಘಸರದಾರಿಗೆ ಗೊತ್ತಿದೆ. ಹಾಗಾಗಿ ಸಿಬಿಐ ತನಿಖೆಗೆ ಬಿಜೆಪಿ ಭೂಪರೇ ಅಡ್ಡಗಾಲು ಹಾಕಿ ಕುಂತಿದ್ದಾರೆ. ಇವತ್ತಿಗೂ ಪರೇಶ್‍ನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯೇ ಬಂದಿಲ್ಲ! ಇವತ್ತಿನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅಂದು ಬಿಜೆಪಿ ರಷ್ಟ್ರಾಧ್ಯಕ್ಷನಾಗಿ ಪರೇಶ್‍ನ ಮನೆಗೆ ಬಂದು ಆತನ ಹೆತ್ತವರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು; ಅಂದಿನ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್, ಯಡ್ಡಿ ಸೇರಿದಂತೆ ವಗೈರೆ ಹಿರಿ-ಮರಿ ಪುಢಾರಿಗಳು ಸರತಿಯಂತೆ ಪರೇಶನ ಮನೆಗೆ ಬಂದು ಮೊಸಳೆ ಕಣ್ಣಿರು ಕೋಡಿ ಹರಿಸಿದ್ದರು.

ಇವರೆಲ್ಲಾ ಈಗ ಗಪ್‍ಚುಪ್ ಆಗಿರುವುದೇ ಪರೇಶ್ ಮೇಸ್ತಾನ ಸಾಬರು ಕೊಂದಿಲ್ಲ ಎಂಬುದು ಖಾತ್ರಿಪಡಿಸುವಂತಿದೆ. ಅನಂತ್ಮಾಣಿಗೆ ರಾಜಕಾರಣದ ದೀಕ್ಷೆ ಕೊಟ್ಟು ಸಂಸದನಾಗಿ ಮಾಡಿದ್ದ ಆತನ ಗುರು-ಅಂದಿನ ಉತ್ತರ ಕನ್ನಡದ ಹಿಂದೂತ್ವದ ಬೆಂಕಿ ನಾಯಕ ಡಾ| ಚಿತ್ತರಂಜನ್ ಎಮ್ಮೆಲ್ಲೆಯಾಗಿದ್ದಾಗಲೇ ಹತನಾಗಿದ್ದರು. ಬಿಜೆಪಿ ವಾಜಪೇಯಿ ಸರ್ಕಾರವಿದ್ದಾಗಲೇ ಈ ಕೇಸ್ ಪತ್ತೆಯಾಗದ ಪ್ರಕರಣವೆಂದು ಸಿಬಿಐ “ಸಿ-ರಿಪೋರ್ಟ್” ಜಡಿದಿದೆ. ಭಟ್ಕಳದ ಮತ್ತೊಬ್ಬ ಹಿಂದೂ ಮುಂದಾಳು ತಿಮ್ಮಪ್ಪ ನಾಯ್ಕನ ಕೊಲೆ ತನಿಖೆಯೂ ಸರಿಯಾಗಿ ಆಗಲಿಲ್ಲ. ಈ ಹಳ್ಳ ಹಿಡಿದ ಕೇಸ್‍ಗಳ ಬಗ್ಗೆಯೇ ತಲೆಕೆಡಿಸಿಕೊಳ್ಳದ ಅನಂತ್ಮಾಣಿ, ಯಡ್ಡಿ, ಶೋಭಕ್ಕ, ಅಮಿತ್ ಶಾ, ಮೋದಿ. ಮುಂತಾದ ಹಿಂದೂ ಕುಲೋದ್ಧಾರಕರಿಗೆ ಪಾಪದ ಬೆಸ್ತರ ಹುಡುಗ ಪರೇಶ್‍ನ ಸಾವೆಲ್ಲಾ ಯಾವ ಲೆಕ್ಕ?

ಓಟ್ ಬ್ಯಾಂಕ್‍ಗಾಗಿ ಹೆಣದ ರಾಜಕಾರಣ ಮಾಡುವ ಬಿಜೆಪಿಗರ ಬಣ್ಣವೀಗ ಬಯಲಾಗುತ್ತಿದೆ. ಹಿಂದೂತ್ವದ ಅಮಲೇರಿಸಿಕೊಂಡು ಪರೇಶ್ ಸಾವಿನ ನಂತರ ದೊಂಬಿ-ಹಿಂಸಾಚಾರಕ್ಕಿಳಿದಿದ್ದ ಶೂದ್ರ ಹುಡುಗರಿಗೀಗ ಸತ್ಯ ಗೊತ್ತಾಗಿದೆ. 13-12-2017ರಂದು ಹೊನ್ನಾವರದ ಶನಿದೇವರ ಅಂಗಳ ಮತ್ತು ಸಾಬರ ಗುಡ್‍ಲಕ್ ಹೋಟೆಲಿನ ಮುಂಭಾಗದಲ್ಲಾದ ಪೊಲೀಸರ ಲಾಠಿ ಚಾರ್ಜ್‍ಗೆ ಬೆದರಿದ ಪರೇಶ್ ಮೇಸ್ತಾ ಬಚಾವಾಗಲು ಪಕ್ಕದ ಶೆಟ್ಟಿಕೆರೆ ಆವರಣ ಗೋಡೆ ಹಾರಿ ಅವಿತಿಟ್ಟುಕೊಳ್ಳುವ ಪ್ರಯತ್ನದಲ್ಲಿ ಕಾಲುಜಾರಿ ಕೆರೆಗೆ ಬಿದ್ದು ಸತ್ತಿದ್ದಾನೆ; ಆತನನ್ನು ಸಾಬರು ಸಾಯಿಸಿಲ್ಲ ಎಂದು ಈಗ ವ್ಯಾಖ್ಯಾನ ಮಾಡಲಾಗುತ್ತಿದೆ. ಪೊಲೀಸರಿಗೆ, ಸಿಬಿಐಗೆ ಮತ್ತು ಪ್ರಜ್ಞಾವಂತರಿಗೂ ಇದೇ ಜಿಜ್ಞಾಸೆಯಿದೆ. ಸಂಘ ಸರದಾರರಿಗೆ ಇದು ಮೊದಲೇ ಗೊತ್ತಿದೆ? ಆದರೆ ಹಿಂದೂತ್ವದ ಅಭಿಯಾನಕ್ಕಾಗಿ ಪರೇಶ್‍ನ ಸಂಘಿಗಳು ಬಿಡಲು ಸಿದ್ಧರಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...