Homeಮುಖಪುಟಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ...

ಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಆದರೆ ಇಂದು??

- Advertisement -
- Advertisement -

ಮಾರ್ಚ್ ಇಪ್ಪತ್ತನೇ ದಿನಾಂಕವನ್ನು ವಿಶ್ವ ಗುಬ್ಬಚ್ಚಿಗಳ ದಿನವನ್ನಾಗಿ‌ ಆಚರಿಸಲಾಗುತ್ತದೆ.‌ (World house sparrow day) ಪಕ್ಷಿ ಪ್ರೇಮಿಗಳ ಹೊರತಾಗಿ ಹೆಚ್ಚಿನವರು ಇದರ ಬಗ್ಗೆ ಆಸ್ಥೆ ತೋರುವುದೂ ಇಲ್ಲ.

‌ನಿಸ್ಸಂಶಯವಾಗಿಯೂ ಅತ್ಯಂತ ಕ್ಷಿಪ್ರಗತಿಯಲ್ಲಿ ಅಳಿವಿನಂಚಿಗೆ ಸರಿಯುತ್ತಿರುವ ಪ್ರಮುಖ ಪಕ್ಷಿಗಳಲ್ಲಿ ಗುಬ್ಬಚ್ಚಿ ಪ್ರಮುಖವಾದುದು. ಸಾಮಾನ್ಯವಾಗಿ ಚಿಕ್ಕದಾದ ಶರೀರವಿರುವವರ ಬಗ್ಗೆ ಬರೆಯುವಾಗ
ಗುಬ್ಬಚ್ಚಿ ದೇಹದವನು/ಳು ಎಂಬ ಉಪಮೆ ಬಳಸಲಾಗುತ್ತದೆ. ಅದಕ್ಕೆ ಕಾರಣ ಗುಬ್ಬಚ್ಚಿಯ ಪುಟ್ಟ ದೇಹ.
ಗುಬ್ಬಚ್ಚಿಗಳು ಸಾಮಾನ್ಯವಾಗಿ ಜನರ ನಡುವೆಯೇ ಗೂಡು ಕಟ್ಟುವುದರಿಂದಲೇ ಅವನ್ನು ಮನೆ ಗುಬ್ಬಚ್ಚಿ ಎನ್ನುತ್ತಾರೆ.

ಗುಬ್ಬಚ್ಚಿಗಳನ್ನು ಹುಡುಕಲು ಗುಡ್ಡ, ಬೆಟ್ಟ, ತೋಟ, ಕಾಡು,ಹಳ್ಳಿಗಳಿಗೆ ಹೋಗಬೇಕಾಗಿದ್ದಿರಲಿಲ್ಲ. ಅದು ಅತ್ಯಂತ ಸರಳ ಮತ್ತು ಕಲಾತ್ಮಕ ಗೂಡುಗಳನ್ನು ಹಂಚಿನ ಕಟ್ಟಡದ ಮೇಲ್ಚಾವಣಿಯ ಒಳಭಾಗದ ಪಕ್ಕಾಸು, ರೀಪುಗಳನ್ನು ಆಧಾರವಾಗಿಟ್ಟುಕೊಂಡು ಕಟ್ಟುತ್ತವೆ. ಅವು ಕಸಗಳ ರಾಶಿಯನ್ನೇ ತಂದು ಹಾಕುತ್ತವೆಂದು, ಹಿಕ್ಕೆ ಹಾಕುತ್ತವೆಂದೂ ನಾವೆಲ್ಲಾ ಅವುಗಳನ್ನು ಓಡಿಸುತ್ತೇವೆ. ನಾವೆಷ್ಟೇ ಓಡಿಸಿದರೂ ಅದು ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದು ಅಷ್ಟು ಸುಲಭವಾಗಿ ಆ ಸ್ಥಳವನ್ನು ಬಿಟ್ಟು ಹೋಗುವುದಿಲ್ಲ. ನಾವು ಮತ್ತೆ ಮತ್ತೆ ಅದರ ಗೂಡನ್ನು ಕಿತ್ತೆಸೆದರೆ ಅಪಾಯದ ಮುನ್ಸೂಚನೆಯರಿತು ಅದು ಬೇರೆ ಸ್ಥಳ ಹುಡುಕುತ್ತದೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಅದು ಮನುಷ್ಯನಿಂದ ತನಗೆ ಮತ್ತು ತನ್ನ ಸಂತಾನಕ್ಕೆ ಅಪಾಯವಿಲ್ಲ ಎಂಬ ಕಾರಣಕ್ಕೂ ಮನುಷ್ಯನ ವಾಸಸ್ಥಾನವನ್ನೇ ಹೆಚ್ಚು ಇಷ್ಟಪಡುತ್ತದೆ. ಆದರೆ ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಪ್ರಸ್ತುತ ಗುಬ್ಬಚ್ಚಿಗಳ ಸಂತಾನ ಶೀಘ್ರಗತಿಯಲ್ಲಿ ಅಳಿವಿನಂಚಿಗೆ ಸಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಗುಬ್ಬಚ್ಚಿಗಳನ್ನು ಚಿತ್ರದಲ್ಲೋ, ಟಿ.ವಿ.ಪರದೆಯ ಮೇಲೋ ನಮ್ಮ ಮಕ್ಕಳಿಗೆ ತೋರಿಸಬೇಕಾದ ದಿನಗಳು ಬೇಗನೇ ಬರಬಹುದು.

ಸುಮಾರು ಹದಿನೈದಿಪ್ಪತ್ತು ವರ್ಷಗಳ ಹಿಂದೆ ಸಾಮಾನ್ಯರಲ್ಲಿ ಸಾಮಾನ್ಯರಿಗೆ, ಎಳೆಯ ಮಕ್ಕಳಿಗೆಲ್ಲಾ ಗುಬ್ಬಚ್ಚಿಗಳ ಬಗ್ಗೆ ಒಳ್ಳೆಯ ತಿಳುವಳಿಕೆ ಇತ್ತು. ಇಂದು ಗುಬ್ಬಚ್ಚಿಗಳ ಬಗ್ಗೆ ಪಕ್ಷಿ ಶಾಸ್ತ್ರಜ್ಞರು, ಪರಿಸರ ತಜ್ಞರು ಮಾತ್ರ ಅಧಿಕೃತವಾಗಿ ಮಾತನಾಡಬಲ್ಲರೇನೋ ಎಂಬಷ್ಟರ ಮಟ್ಟಿಗೆ ಅದರ ಸಂತತಿಯೂ ವಿರಳವಾಗುತ್ತಿದೆ ಮತ್ತು ಸ್ವತಃ ಅದೂ ಮಾನವನಿಂದ ದೂರವಾಗುತ್ತಿದೆ.

ಗುಬ್ಬಚ್ಚಿ, ಪಾರಿವಾಳ, ಕಾಗೆಗಳ ಹೊರತಾದ ಹೆಚ್ಚಿನೆಲ್ಲಾ ಪಕ್ಷಿಗಳ ಜೀವನ ಶೈಲಿಯ ಬಗ್ಗೆ ಆಳವಾದ ಮಾಹಿತಿಯಿರುವುದು ಪಕ್ಷಿ ತಜ್ಞರಿಗೆ ಮತ್ತು ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಮಾತ್ರ. ಆದರೆ ಗುಬ್ಬಚ್ಚಿಯ ಜೀವನ ಶೈಲಿ, ಮೊಟ್ಟೆ ಇಡುವ ಸಮಯ ಮತ್ತು ಕ್ರಮ, ಮೊಟ್ಟೆಗೆ ಕಾವು ಕೊಡಲು ಬೇಕಾಗುವ ಸಮಯ, ಅವುಗಳ ಆಹಾರ, ಗೂಡು ಕಟ್ಟುವ ಕ್ರಮ ಇತ್ಯಾದಿಗಳ ಬಗೆಗೆಲ್ಲಾ ನಮ್ಮ ಹಿರಿಯರು ಅಧಿಕೃತವಾಗಿ ಮಾತನಾಡಬಲ್ಲಷ್ಟು ಮಾಹಿತಿ ಕೊಡುತ್ತಿದ್ದರು.ಅಷ್ಟರ ಮಟ್ಟಿಗೆ ಗುಬ್ಬಚ್ಚಿಗಳು ಮನುಷ್ಯರೊಂದಿಗೆ ನಿಕಟ ಸಂಪರ್ಕ ಹೊಂದಿತ್ತು.

ಯಾವುದೇ ವೈವಿಧ್ಯಮಯ ಪಕ್ಷಿ ಸಂಕುಲವನ್ನು ನೋಡಬೇಕಾದರೆ ಹಳ್ಳಿಗಳಿಗೆ ಹೋಗಬೇಕಾಗುತ್ತದೆ. ಬೆಟ್ಟ, ಗುಡ್ಡ, ತೋಟ, ಕಾಡು ಮುಂತಾದ ಹಸಿರಾಗಿರುವ ಪ್ರಕೃತಿಯ ಮಡಿಲನ್ನೇ ಹೆಚ್ಚಿನ ಪಕ್ಷಿ ಸಂಕುಲ ಆಯ್ದುಕೊಳ್ಳುತ್ತವೆ. ಆದರೆ ಗುಬ್ಬಚ್ಚಿ ಮಾತ್ರ ಸರ್ವವ್ಯಾಪಿ. ಅವು ನಗರ,ಪಟ್ಟಣ, ಹಳ್ಳಿಗಳ ಗಡಿಗಳಿಲ್ಲದೇ ಎಲ್ಲೆಂದರಲ್ಲಿ ಕಾಣಸಿಗುತ್ತಿತ್ತು. ಗುಬ್ಬಚ್ಚಿ ಸಂತತಿ ವಿನಾಶದಂಚಿಗೆ ಸರಿದುದರ ಹಿಂದಿನ ಕಾರಣಗಳನ್ನು ಪಕ್ಷಿ-ಪರಿಸರ ತಜ್ಞರಷ್ಟೇ ಕರಾರುವಾಕ್ಕಾಗಿ ನಮ್ಮ ಹಿರಿಯರೂ ನೀಡಬಲ್ಲರು. ಅದಕ್ಕೆ ಕಾರಣ ಗುಬ್ಬಚ್ಚಿ ಮತ್ತು ಮನುಷ್ಯನ ನಿಕಟತೆ.

ಕಾರಣಗಳು 

ಹೆಂಚಿನ ಮನೆ-ಕಟ್ಟಡಗಳು ಕಡಿಮೆಯಾಗಿ ಆರ್.ಸಿ.ಸಿ. ಕಟ್ಟಡಗಳು ಹೆಚ್ಚಿದ್ದರಿಂದ ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಅನನುಕೂಲವುಂಟಾಗಿದೆ. ಆರ್.ಸಿ.ಸಿ. ಮನೆಗಳಲ್ಲಿ ಪಕ್ಕಾಸು, ರೀಪುಗಳು ಇಲ್ಲದ್ದರಿಂದ ಅವುಗಳಲ್ಲಿ ಗೂಡು ಕಟ್ಟಲು ಆಧಾರಗಳಿಲ್ಲ.

-ಹೆಂಚಿನ ಮನೆಗಳಲ್ಲಾದರೂ ಹದಿನೈದಿಪ್ಪತ್ತು ವರ್ಷಗಳ ಹಿಂದೆ ಇಂದಿನಂತೆ ಫ್ಯಾನ್‌ಗಳ ಬಳಕೆ ವ್ಯಾಪಕವಾಗಿರಲಿಲ್ಲ. ಗುಬ್ಬಚ್ಚಿ ಸದಾ ಚಟುವಟಿಕೆಯಲ್ಲಿರುವ ಪಕ್ಷಿಯಾದ್ದರಿಂದ ಒಂದೇ ಕಡೆ ಹೆಚ್ಚು ಹೊತ್ತು ನಿಲ್ಲುವುದಿಲ್ಲ. ಸಹಜ ಸ್ವಭಾವದಂತೆ ಆಚೀಚೆ ಹಾರಾಡುತ್ತಿರುತ್ತದೆ. ಫ್ಯಾನ್‌ಗಳು ಚಾಲೂ ಇದ್ದಾಗೆಲ್ಲಾ ಫ್ಯಾನ್ ರೆಕ್ಕೆಗಳಿಗೆ ಸಿಕ್ಕಿ ಗುಬ್ಬಚ್ಚಿಗಳು ಸಾಯುವುದು ಹೆಚ್ಚಾಯಿತು.

-ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಬೇಕಾಗುವ ಅನುಕೂಲತೆಗಳು ಕ್ಷೀಣಿಸಿದುದರ ಪರಿಣಾಮ ಅವುಗಳ ಮೊಟ್ಟೆಗಳು ನಾಶವಾಗಿ ಗುಬ್ಬಚ್ಚಿ ಸಂತಾನ ಕ್ಷೀಣಿಸಲಾರಂಭವಾಯಿತು.

-ಮಾನವ ಪರಿಸರದಲ್ಲಿರುವ ಗುಬ್ಬಚ್ಚಿ ಗೂಡುಗಳ ಮೇಲೆ ಮಾನವನ ಕ್ರೌರ್ಯದಿಂದ ಮೊಟ್ಟೆಗಳು ನಾಶಗೊಂಡು ಸಂತತಿ ಕ್ಷೀಣಿಸುತ್ತಿದೆ.

-ಮೊಬೈಲ್ ಫೋನ್ ಬಳಕೆ ವ್ಯಾಪಕವಾದುದರ ಪರಿಣಾಮ ನೆಟ್‌ವರ್ಕ್ ಕವರೇಜ್‌ಗಾಗಿ ಹಳ್ಳಿ ಹಳ್ಳಿಗಳಲ್ಲೂ, ಅರಣ್ಯ ಪ್ರದೇಶಗಳ ಮಧ್ಯೆಯೂ ಮೊಬೈಲ್ ಗೋಪುರಗಳು ಹೆಚ್ಚಾಗುತ್ತಾ ಅದರ ಪರಿಣಾಮ ಗುಬ್ಬಚ್ಚಿ ಸಂತತಿಗಳ ಮೇಲೆ ಬೀರುತ್ತಿದೆ. ಒಟ್ಟಿನಲ್ಲಿ ಹೆಚ್ಚುತ್ತಿರುವ ಸೂಕ್ಷ್ಮ ತರಂಗ ಗೋಪುರಗಳು ಗುಬ್ಬಚ್ಚಿ ಸಂತಾನಗಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ.

-ಗುಬ್ಬಚ್ಚಿಗಳ ಮುಖ್ಯ ಆಹಾರ ಹೊಲಗದ್ದೆಗಳಲ್ಲಿರುವ ಚಿಕ್ಕ ಪುಟ್ಟ ಕ್ರಿಮಿ ಕೀಟಗಳು ಮತ್ತು ಕಾಳುಗಳು. ಹೊಲಗದ್ದೆಗಳು ಕಡಿಮೆಯಾಗುತ್ತಾ ಅವುಗಳ ಆಹಾರ ಮೂಲಗಳ ಮೇಲೂ ಪರಿಣಾಮವುಂಟಾಯಿತು.

– ಗುಬ್ಬಚ್ಚಿಗಳು ತಮ್ಮ ಆಹಾರವನ್ನು ಹೊಲಗದ್ದೆಗಳಲ್ಲಿ ಹುಡುಕುವುದರಿಂದ ಹೊಲಗದ್ದೆಗಳಿಗೆ ಸಿಂಪಡಿಸುವ ಕ್ರಿಮಿ, ಕೀಟ ನಾಶಕಗಳು ಗುಬ್ಬಚ್ಚಿಗಳ ಪ್ರಾಣಕ್ಕೂ ಎರವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...