Homeಮುಖಪುಟಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ...

ಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಆದರೆ ಇಂದು??

- Advertisement -
- Advertisement -

ಮಾರ್ಚ್ ಇಪ್ಪತ್ತನೇ ದಿನಾಂಕವನ್ನು ವಿಶ್ವ ಗುಬ್ಬಚ್ಚಿಗಳ ದಿನವನ್ನಾಗಿ‌ ಆಚರಿಸಲಾಗುತ್ತದೆ.‌ (World house sparrow day) ಪಕ್ಷಿ ಪ್ರೇಮಿಗಳ ಹೊರತಾಗಿ ಹೆಚ್ಚಿನವರು ಇದರ ಬಗ್ಗೆ ಆಸ್ಥೆ ತೋರುವುದೂ ಇಲ್ಲ.

‌ನಿಸ್ಸಂಶಯವಾಗಿಯೂ ಅತ್ಯಂತ ಕ್ಷಿಪ್ರಗತಿಯಲ್ಲಿ ಅಳಿವಿನಂಚಿಗೆ ಸರಿಯುತ್ತಿರುವ ಪ್ರಮುಖ ಪಕ್ಷಿಗಳಲ್ಲಿ ಗುಬ್ಬಚ್ಚಿ ಪ್ರಮುಖವಾದುದು. ಸಾಮಾನ್ಯವಾಗಿ ಚಿಕ್ಕದಾದ ಶರೀರವಿರುವವರ ಬಗ್ಗೆ ಬರೆಯುವಾಗ
ಗುಬ್ಬಚ್ಚಿ ದೇಹದವನು/ಳು ಎಂಬ ಉಪಮೆ ಬಳಸಲಾಗುತ್ತದೆ. ಅದಕ್ಕೆ ಕಾರಣ ಗುಬ್ಬಚ್ಚಿಯ ಪುಟ್ಟ ದೇಹ.
ಗುಬ್ಬಚ್ಚಿಗಳು ಸಾಮಾನ್ಯವಾಗಿ ಜನರ ನಡುವೆಯೇ ಗೂಡು ಕಟ್ಟುವುದರಿಂದಲೇ ಅವನ್ನು ಮನೆ ಗುಬ್ಬಚ್ಚಿ ಎನ್ನುತ್ತಾರೆ.

ಗುಬ್ಬಚ್ಚಿಗಳನ್ನು ಹುಡುಕಲು ಗುಡ್ಡ, ಬೆಟ್ಟ, ತೋಟ, ಕಾಡು,ಹಳ್ಳಿಗಳಿಗೆ ಹೋಗಬೇಕಾಗಿದ್ದಿರಲಿಲ್ಲ. ಅದು ಅತ್ಯಂತ ಸರಳ ಮತ್ತು ಕಲಾತ್ಮಕ ಗೂಡುಗಳನ್ನು ಹಂಚಿನ ಕಟ್ಟಡದ ಮೇಲ್ಚಾವಣಿಯ ಒಳಭಾಗದ ಪಕ್ಕಾಸು, ರೀಪುಗಳನ್ನು ಆಧಾರವಾಗಿಟ್ಟುಕೊಂಡು ಕಟ್ಟುತ್ತವೆ. ಅವು ಕಸಗಳ ರಾಶಿಯನ್ನೇ ತಂದು ಹಾಕುತ್ತವೆಂದು, ಹಿಕ್ಕೆ ಹಾಕುತ್ತವೆಂದೂ ನಾವೆಲ್ಲಾ ಅವುಗಳನ್ನು ಓಡಿಸುತ್ತೇವೆ. ನಾವೆಷ್ಟೇ ಓಡಿಸಿದರೂ ಅದು ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದು ಅಷ್ಟು ಸುಲಭವಾಗಿ ಆ ಸ್ಥಳವನ್ನು ಬಿಟ್ಟು ಹೋಗುವುದಿಲ್ಲ. ನಾವು ಮತ್ತೆ ಮತ್ತೆ ಅದರ ಗೂಡನ್ನು ಕಿತ್ತೆಸೆದರೆ ಅಪಾಯದ ಮುನ್ಸೂಚನೆಯರಿತು ಅದು ಬೇರೆ ಸ್ಥಳ ಹುಡುಕುತ್ತದೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಅದು ಮನುಷ್ಯನಿಂದ ತನಗೆ ಮತ್ತು ತನ್ನ ಸಂತಾನಕ್ಕೆ ಅಪಾಯವಿಲ್ಲ ಎಂಬ ಕಾರಣಕ್ಕೂ ಮನುಷ್ಯನ ವಾಸಸ್ಥಾನವನ್ನೇ ಹೆಚ್ಚು ಇಷ್ಟಪಡುತ್ತದೆ. ಆದರೆ ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಪ್ರಸ್ತುತ ಗುಬ್ಬಚ್ಚಿಗಳ ಸಂತಾನ ಶೀಘ್ರಗತಿಯಲ್ಲಿ ಅಳಿವಿನಂಚಿಗೆ ಸಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಗುಬ್ಬಚ್ಚಿಗಳನ್ನು ಚಿತ್ರದಲ್ಲೋ, ಟಿ.ವಿ.ಪರದೆಯ ಮೇಲೋ ನಮ್ಮ ಮಕ್ಕಳಿಗೆ ತೋರಿಸಬೇಕಾದ ದಿನಗಳು ಬೇಗನೇ ಬರಬಹುದು.

ಸುಮಾರು ಹದಿನೈದಿಪ್ಪತ್ತು ವರ್ಷಗಳ ಹಿಂದೆ ಸಾಮಾನ್ಯರಲ್ಲಿ ಸಾಮಾನ್ಯರಿಗೆ, ಎಳೆಯ ಮಕ್ಕಳಿಗೆಲ್ಲಾ ಗುಬ್ಬಚ್ಚಿಗಳ ಬಗ್ಗೆ ಒಳ್ಳೆಯ ತಿಳುವಳಿಕೆ ಇತ್ತು. ಇಂದು ಗುಬ್ಬಚ್ಚಿಗಳ ಬಗ್ಗೆ ಪಕ್ಷಿ ಶಾಸ್ತ್ರಜ್ಞರು, ಪರಿಸರ ತಜ್ಞರು ಮಾತ್ರ ಅಧಿಕೃತವಾಗಿ ಮಾತನಾಡಬಲ್ಲರೇನೋ ಎಂಬಷ್ಟರ ಮಟ್ಟಿಗೆ ಅದರ ಸಂತತಿಯೂ ವಿರಳವಾಗುತ್ತಿದೆ ಮತ್ತು ಸ್ವತಃ ಅದೂ ಮಾನವನಿಂದ ದೂರವಾಗುತ್ತಿದೆ.

ಗುಬ್ಬಚ್ಚಿ, ಪಾರಿವಾಳ, ಕಾಗೆಗಳ ಹೊರತಾದ ಹೆಚ್ಚಿನೆಲ್ಲಾ ಪಕ್ಷಿಗಳ ಜೀವನ ಶೈಲಿಯ ಬಗ್ಗೆ ಆಳವಾದ ಮಾಹಿತಿಯಿರುವುದು ಪಕ್ಷಿ ತಜ್ಞರಿಗೆ ಮತ್ತು ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಮಾತ್ರ. ಆದರೆ ಗುಬ್ಬಚ್ಚಿಯ ಜೀವನ ಶೈಲಿ, ಮೊಟ್ಟೆ ಇಡುವ ಸಮಯ ಮತ್ತು ಕ್ರಮ, ಮೊಟ್ಟೆಗೆ ಕಾವು ಕೊಡಲು ಬೇಕಾಗುವ ಸಮಯ, ಅವುಗಳ ಆಹಾರ, ಗೂಡು ಕಟ್ಟುವ ಕ್ರಮ ಇತ್ಯಾದಿಗಳ ಬಗೆಗೆಲ್ಲಾ ನಮ್ಮ ಹಿರಿಯರು ಅಧಿಕೃತವಾಗಿ ಮಾತನಾಡಬಲ್ಲಷ್ಟು ಮಾಹಿತಿ ಕೊಡುತ್ತಿದ್ದರು.ಅಷ್ಟರ ಮಟ್ಟಿಗೆ ಗುಬ್ಬಚ್ಚಿಗಳು ಮನುಷ್ಯರೊಂದಿಗೆ ನಿಕಟ ಸಂಪರ್ಕ ಹೊಂದಿತ್ತು.

ಯಾವುದೇ ವೈವಿಧ್ಯಮಯ ಪಕ್ಷಿ ಸಂಕುಲವನ್ನು ನೋಡಬೇಕಾದರೆ ಹಳ್ಳಿಗಳಿಗೆ ಹೋಗಬೇಕಾಗುತ್ತದೆ. ಬೆಟ್ಟ, ಗುಡ್ಡ, ತೋಟ, ಕಾಡು ಮುಂತಾದ ಹಸಿರಾಗಿರುವ ಪ್ರಕೃತಿಯ ಮಡಿಲನ್ನೇ ಹೆಚ್ಚಿನ ಪಕ್ಷಿ ಸಂಕುಲ ಆಯ್ದುಕೊಳ್ಳುತ್ತವೆ. ಆದರೆ ಗುಬ್ಬಚ್ಚಿ ಮಾತ್ರ ಸರ್ವವ್ಯಾಪಿ. ಅವು ನಗರ,ಪಟ್ಟಣ, ಹಳ್ಳಿಗಳ ಗಡಿಗಳಿಲ್ಲದೇ ಎಲ್ಲೆಂದರಲ್ಲಿ ಕಾಣಸಿಗುತ್ತಿತ್ತು. ಗುಬ್ಬಚ್ಚಿ ಸಂತತಿ ವಿನಾಶದಂಚಿಗೆ ಸರಿದುದರ ಹಿಂದಿನ ಕಾರಣಗಳನ್ನು ಪಕ್ಷಿ-ಪರಿಸರ ತಜ್ಞರಷ್ಟೇ ಕರಾರುವಾಕ್ಕಾಗಿ ನಮ್ಮ ಹಿರಿಯರೂ ನೀಡಬಲ್ಲರು. ಅದಕ್ಕೆ ಕಾರಣ ಗುಬ್ಬಚ್ಚಿ ಮತ್ತು ಮನುಷ್ಯನ ನಿಕಟತೆ.

ಕಾರಣಗಳು 

ಹೆಂಚಿನ ಮನೆ-ಕಟ್ಟಡಗಳು ಕಡಿಮೆಯಾಗಿ ಆರ್.ಸಿ.ಸಿ. ಕಟ್ಟಡಗಳು ಹೆಚ್ಚಿದ್ದರಿಂದ ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಅನನುಕೂಲವುಂಟಾಗಿದೆ. ಆರ್.ಸಿ.ಸಿ. ಮನೆಗಳಲ್ಲಿ ಪಕ್ಕಾಸು, ರೀಪುಗಳು ಇಲ್ಲದ್ದರಿಂದ ಅವುಗಳಲ್ಲಿ ಗೂಡು ಕಟ್ಟಲು ಆಧಾರಗಳಿಲ್ಲ.

-ಹೆಂಚಿನ ಮನೆಗಳಲ್ಲಾದರೂ ಹದಿನೈದಿಪ್ಪತ್ತು ವರ್ಷಗಳ ಹಿಂದೆ ಇಂದಿನಂತೆ ಫ್ಯಾನ್‌ಗಳ ಬಳಕೆ ವ್ಯಾಪಕವಾಗಿರಲಿಲ್ಲ. ಗುಬ್ಬಚ್ಚಿ ಸದಾ ಚಟುವಟಿಕೆಯಲ್ಲಿರುವ ಪಕ್ಷಿಯಾದ್ದರಿಂದ ಒಂದೇ ಕಡೆ ಹೆಚ್ಚು ಹೊತ್ತು ನಿಲ್ಲುವುದಿಲ್ಲ. ಸಹಜ ಸ್ವಭಾವದಂತೆ ಆಚೀಚೆ ಹಾರಾಡುತ್ತಿರುತ್ತದೆ. ಫ್ಯಾನ್‌ಗಳು ಚಾಲೂ ಇದ್ದಾಗೆಲ್ಲಾ ಫ್ಯಾನ್ ರೆಕ್ಕೆಗಳಿಗೆ ಸಿಕ್ಕಿ ಗುಬ್ಬಚ್ಚಿಗಳು ಸಾಯುವುದು ಹೆಚ್ಚಾಯಿತು.

-ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಬೇಕಾಗುವ ಅನುಕೂಲತೆಗಳು ಕ್ಷೀಣಿಸಿದುದರ ಪರಿಣಾಮ ಅವುಗಳ ಮೊಟ್ಟೆಗಳು ನಾಶವಾಗಿ ಗುಬ್ಬಚ್ಚಿ ಸಂತಾನ ಕ್ಷೀಣಿಸಲಾರಂಭವಾಯಿತು.

-ಮಾನವ ಪರಿಸರದಲ್ಲಿರುವ ಗುಬ್ಬಚ್ಚಿ ಗೂಡುಗಳ ಮೇಲೆ ಮಾನವನ ಕ್ರೌರ್ಯದಿಂದ ಮೊಟ್ಟೆಗಳು ನಾಶಗೊಂಡು ಸಂತತಿ ಕ್ಷೀಣಿಸುತ್ತಿದೆ.

-ಮೊಬೈಲ್ ಫೋನ್ ಬಳಕೆ ವ್ಯಾಪಕವಾದುದರ ಪರಿಣಾಮ ನೆಟ್‌ವರ್ಕ್ ಕವರೇಜ್‌ಗಾಗಿ ಹಳ್ಳಿ ಹಳ್ಳಿಗಳಲ್ಲೂ, ಅರಣ್ಯ ಪ್ರದೇಶಗಳ ಮಧ್ಯೆಯೂ ಮೊಬೈಲ್ ಗೋಪುರಗಳು ಹೆಚ್ಚಾಗುತ್ತಾ ಅದರ ಪರಿಣಾಮ ಗುಬ್ಬಚ್ಚಿ ಸಂತತಿಗಳ ಮೇಲೆ ಬೀರುತ್ತಿದೆ. ಒಟ್ಟಿನಲ್ಲಿ ಹೆಚ್ಚುತ್ತಿರುವ ಸೂಕ್ಷ್ಮ ತರಂಗ ಗೋಪುರಗಳು ಗುಬ್ಬಚ್ಚಿ ಸಂತಾನಗಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ.

-ಗುಬ್ಬಚ್ಚಿಗಳ ಮುಖ್ಯ ಆಹಾರ ಹೊಲಗದ್ದೆಗಳಲ್ಲಿರುವ ಚಿಕ್ಕ ಪುಟ್ಟ ಕ್ರಿಮಿ ಕೀಟಗಳು ಮತ್ತು ಕಾಳುಗಳು. ಹೊಲಗದ್ದೆಗಳು ಕಡಿಮೆಯಾಗುತ್ತಾ ಅವುಗಳ ಆಹಾರ ಮೂಲಗಳ ಮೇಲೂ ಪರಿಣಾಮವುಂಟಾಯಿತು.

– ಗುಬ್ಬಚ್ಚಿಗಳು ತಮ್ಮ ಆಹಾರವನ್ನು ಹೊಲಗದ್ದೆಗಳಲ್ಲಿ ಹುಡುಕುವುದರಿಂದ ಹೊಲಗದ್ದೆಗಳಿಗೆ ಸಿಂಪಡಿಸುವ ಕ್ರಿಮಿ, ಕೀಟ ನಾಶಕಗಳು ಗುಬ್ಬಚ್ಚಿಗಳ ಪ್ರಾಣಕ್ಕೂ ಎರವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...