Homeಮುಖಪುಟಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು...!!

ಕೊರೊನಾ ಸೋಂಕಿತ ಗಾಯಕಿ ಕನಿಕಾ ಕಫೂರ್ ಮೇಲೆ ಎಫ್ಐಆರ್ ದಾಖಲು…!!

- Advertisement -
- Advertisement -

ತಾನು ಕೊರೊನಾ ವೈರಸ್ ಸೋಂಕಿತಳಾಗಿದ್ದೇನೆ ಎಂದು ಗಾಯಕಿ ಕನಿಕಾ ಕಫೂರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೇಲೆ, “ನಿರ್ಲಕ್ಷ್ಯ” ಆರೋಪದಲ್ಲಿ ಲಕ್ನೋ ಮುಖ್ಯ ವೈಧ್ಯಾಧಿಕಾರಿಯವರ ದೂರಿನ ಆಧಾರದಲ್ಲಿ ಪೊಲೀಸರು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಮಾರ್ಚ್ 14 ರಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷಿಸಿದಾಗ ಹೆಚ್ಚಿನ ವೈರಲ್ ಲೋಡ್ ಪತ್ತೆಯಾಗಿದ್ದು ಅವರನ್ನು ಮನೆಯಲ್ಲೆ ಸಂಪರ್ಕತಡೆಯಲ್ಲಿರಲು ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೂ ಅವರು ಅದನ್ನು ಉಲ್ಲಂಘಿಸಿ ಲಖನೌದಲ್ಲಿ ಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ದೆಹಲಿಯ ಸಂಸತ್ತು ಮತ್ತು ರಾಷ್ಟ್ರಪತಿ ಭವನದ ಹಲವಾರು ಹಿರಿಯ ರಾಜಕಾರಣಿಗಳು ಭಾಗವಹಿಸಿದ್ದರು. ಹಾಗಾಗಿ ಕನಿಕಾ ಕಫೂರ್ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269, ಮತ್ತು 270 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆದರೆ ಕನಿಕಾ ಕಫೂರ್ ತಾನು ಮಾರ್ಚ್ 11 ರಂದು ಲಕ್ನೋಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ 9 ತಿಂಗಳಿನಿಂದ ಲಂಡನಿನಲ್ಲಿದ್ದು, ಮಾರ್ಚ್ 9 ರಂದು ಮುಂಬೈ ವಿಮಾನ ನಿಲ್ದಾಣದಿಂದ ಪ್ರವೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈಗ ಲಕ್ನೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು “ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಯಿತು, ಆದರೆ ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ ಹಾಗೂ ಕರೋನವೈರಸ್ ಇತ್ತು ಎಂಬುವುದು ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಾಗುವ ಮೊದಲು ಕನಿಕಾ ಕಫೂರ್ ಭಾಗವಹಿಸಿದ ಭೋಜನಕೂಟದಲ್ಲಿ ಅತಿಥಿಯಾಗಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ “ನಮ್ಮ ಕಡೆಯಿಂದ ತಪ್ಪುಗಳಾಗಿದೆ. ಸೋಂಕು ಇರುವ ಬಗ್ಗೆ ಪತ್ತೆ ಹಚ್ಚದೆ ಕನಿಕಾ ಕಫೂರ್ ವಿಮಾನ ನಿಲ್ದಾಣದಿಂದ ಹೇಗೆ ಹೊರ ಹೋದರು ಎಂಬುದರ ಬಗ್ಗೆ ಅಧಿಕಾರಿಗಳನ್ನು ಕೇಳಲಿದ್ದೇನೆ” ಎಂದು ಹೇಳಿದ್ದಾರೆ. ಸಚಿವರು ಸಹ ಈಗ ಸ್ವಯಂ ಸಂಪರ್ಕತಡೆಯಲ್ಲಿದ್ದಾರೆ.

ಶುಕ್ರವಾರ ಗಾಯಕಿ ಸೋಶಿಯಲ್ ಮೀಡಿಯಾದಲ್ಲಿ ತನಗೆ ಸೋಂಕು ಇರುವುದನ್ನು ಹಾಗೂ ಪ್ರತ್ಯೇಕವಾಗಿರುವುದನ್ನು ಹಂಚಿಕೊಂಡಿದ್ದರು. ಇದರ ನಂತರ ಬಿಜೆಪಿ ಮುಖಂಡೆ ವಸುಂಧರಾ ರಾಜೆ ಟ್ವೀಟ್ ಮಾಡಿ “ತಾನೂ ಕನಿಕಾ ಕಫೂರ್ ಭಾಗವಹಿಸಿದ್ದ ಭೋಜನ ಕೂಟದಲ್ಲಿ ತನ್ನ ಮಗ ದುಷ್ಯಂತ್ ಜೊತೆ ಭಾಗವಹಿಸಿದ್ದೆ. ಮುನ್ನಚ್ಚರಿಕಾ ಕ್ರಮವಾಗಿ ನಾನು ಸ್ವಯಂ ಸಂಪರ್ಕತಡೆಯನ್ನು ಮಾಡಲಿದ್ದೇನೆ” ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ದುಶ್ಯಂತ್ ಸಿಂಗ್ ಅವರನ್ನು ಭೇಟಿಯಾದ್ದರು. ಈಗ ರಾಷ್ಟ್ರಪತಿಗಳು ತಮ್ಮ ಎಲ್ಲಾ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ. ಉತ್ತರಪ್ರದೇಶ ಸರ್ಕಾರವು ಕಳೆದ ಒಂದು ವಾರದಲ್ಲಿ ಕನಿಕಾ ಕಫೂರ್ ಭಾಗವಹಿಸಿದ ಸಾಮಾಜಿಕ ಕೂಟಗಳ ಬಗ್ಗೆ ತನಿಖೆಗೆ ಆದೇಶಿಸಿದೆ.

ಈ ಪ್ರಕರಣದ ಕುರಿತು ಸರಕಾರದ ಆದೇಶದ ಹೊರತಾಗಿಯೂ ದೊಡ್ಡ ಸಭೆಗಳಲ್ಲಿ ಹಿರಿಯ ರಾಜಕಾರಣಿಗಳು ಈ ರೀತಿಯ ಭೋಜನಕೂಟವನ್ನು ನಡೆಸುವ ಅಗತ್ಯವೇನಿತ್ತು? ಸೆಲೆಬ್ರಿಟಿಗಳು ಸಹ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಒಟ್ಟಿನಲ್ಲಿ ಕನಿಕಾ ಪ್ರಕರಣ ಉಳಿದ ಎಲ್ಲರಿಗೂ ಎಚ್ಚರಿಕೆಯ ಪಾಠವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...