Homeಮುಖಪುಟಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!

ಗಾರ್ಮೆಂಟ್ಸ್‌ ಮಾಲೀಕರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತದ ವಿರುದ್ಧ ಕಾರ್ಮಿಕರ ಅಸಮಾಧಾನ...

- Advertisement -
- Advertisement -

ಸಾಮುದಾಯಿಕವಾಗಿ ಕೊರೊನಾ ಹರಡದಂತೆ ತಡೆಯಲು ಎಲ್ಲೆಲ್ಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಐಟಿ ಕಂಪನಿಗಳು ಈಗಾಗಲೇ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಕರ್ನಾಟಕ ಸರ್ಕಾರವೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಪರಿಸ್ಥಿತಿ ಘೋಷಿಸಿದೆ. ಪ್ರಧಾನಿ ಮೋದಿಯವರು ಮಾರ್ಚ್‌ 22ರಂದು ಮನೆಯಲ್ಲಿಯೇ ಇದ್ದು ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಹರಡುವಿಕೆ ಭಾರತದಲ್ಲಿ ಮೊದಲ ಹಂತದಲ್ಲಿದ್ದ ಅದು ಎರಡು ಮತ್ತು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ತೀವ್ರ ಎಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೆಲವು ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್‌ಗಳು ಮಾತ್ರ ಇನ್ನು ಲಾಭದ ಹಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.

ಮಾರ್ಚ್‌ 19ರಂದು ಮಂಡ್ಯದ ಜಿಲ್ಲಾಧಿಕಾರಿಗಳಾದ ಎಂ.ವಿ ವೆಂಕಟೇಶ್‌ರವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ಮಾರ್ಚ್‌ 31ರವರೆಗೆ ರಜೆ ಘೋಷಿಸಿದ್ದರು. ಅವರು ಹೊರಡಿಸಿದ್ದ ಆದೇಶದಲ್ಲಿ ಅದು ಸಂಬಳಸಹಿತ ರಜೆಯೊ, ಸಂಬಳ ರಹಿತ ರಜೆಯೊ ಅದನ್ನು ಕೂಡ ಕಾರ್ಮಿಕರಿಗೆ ತಿಳಿಸಿರಲಿಲ್ಲ. ಆದರೆ ಪತ್ರಿಕೆಗಳ ಜೊತೆ ಮಾತನಾಡಿದಾಗ ಸಂಬಳ ಸಹಿತ ರಜೆ ಎಂದು ತಿಳಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಕೆಲಸ ಮಾಡುವ ಸುಮಾರು 20 ಸಾವಿರ ಗಾರ್ಮೆಂಟ್ಸ್‌ ನೌಕರರು ನಿಟ್ಟುಸಿರು ಬಿಟ್ಟು ಮಾರ್ಚ್‌ 20ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಉಳಿದರು.

ಆದರೆ ಅದೇ ದಿನ ಗಾರ್ಮೆಂಟ್ಸ್‌ಗಳ ಮ್ಯಾನೇಜರ್‌ಗಳು ಈ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಈ ನಿರ್ಧಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಬೇಕಾಗುತ್ತದೆ. ಇದರಿಂದ ಕಂಪನಿಗೆ ನಷ್ಟವುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಡನೆ ಸಭೆ ನಡೆಸಿ, ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದಲೇ ಜಿಲ್ಲಾಧಿಕಾರಿಗೆ ಫೋನ್‌ ಮಾಡಿಸಲಾಗಿದೆ ಎನ್ನಲಾಗಿದೆ. ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿಗಳು ರಜೆ ರದ್ದುಗೊಳಿಸಿದ್ದಾರೆ. ಗಾರ್ಮೆಂಟ್ಸ್‌ನಿಂದ ಎಲ್ಲಾ ಕಾರ್ಮಿಕರಿಗೆ ಕರೆ ಮಾಡಿ ಮಾರ್ಚ್‌ 21ರಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮ್ ಎ. ಹೆಚ್ ರವರನ್ನು ಮಾತನಾಡಿಸಿತು. ಅವರು “ಒಟ್ಟು ಮಂಡ್ಯ ಜಿಲ್ಲೆಯಲ್ಲಿ 10-15 ಸಾವಿರ ಮಹಿಳಾ ಕಾರ್ಮಿಕರು ಹಲವು ಗಾರ್ಮೆಂಟ್ಸ್‌‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 30ಜನರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ. ಅಪ್ಪಿ ತಪ್ಪಿ ಸೋಂಕು ಹರಡಿದರೆ ಬಹಳ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸಂಬಳ ಸಹಿತ ರಜೆ ನೀಡಿ ಈ ಕಾರ್ಮಿಕರ ಹಿತಕಾಯಬೇಕಾಗಿರುವುದು ಸರ್ಕಾರ ಮತ್ತು ಜಿಲ್ಲಾಢಳಿತದ ಕೆಲಸ. ಆದರೆ ರಜೆ ರದ್ದುಗೊಳಿಸಿವುದು ದೊಡ್ಡ ಪ್ರಮಾದವಾಗಿದೆ. ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನ ಆಡಳಿತ ಮಂಡಳಿಯೇ ಇದಕ್ಕೆಲ್ಲಾ ನೇತೃತ್ವ ವಹಿಸಿದ್ದಾರೆ. ತಮ್ಮ ಲಾಭದ ದುರಾಸೆಗಾಗಿ ತಾವೇ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿ ರಜೆಯನ್ನು ರದ್ದುಗೊಳಿಸಲು ಕಾರಣರಾಗಿದ್ದಾರೆ ಎಂದು ದೂರಿದರು.

ಜಿಲ್ಲಾಧಿಕಾರಿಗಳು ರಜೆಯ ಆದೇಶವನ್ನು ಹಿಂಪಡೆಯುವ ಮೂಲಕ ತಾನೆಂಥ ಜನ ವಿರೋಧಿ, ಮಹಿಳಾ ಕಾರ್ಮಿಕ ವಿರೋಧಿ, ಹೊಣೆಗೇಡಿ ಮತ್ತು ಬಂಡವಾಳ ಶಾಹಿ ಮಾಲೀಕರ ಪರ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾರೆ. ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬಡ, ಮಹಿಳಾ ಕಾರ್ಮಿಕರು ಗಾರ್ಮೆಂಟ್ಸ್ ಗಳಲ್ಲಿ ಕನಿಷ್ಠ ವೇತನ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಜೆ ಹಿಂಪಡೆದಿರುವುದು ಸರಿಯಲ್ಲ. ಸರಕಾರ ಈಗ ಹೊರಡಿಸಿರುವ ಆದೇಶ ಪತ್ರವನ್ನು ಮರುಪರಿಶೀಲಿಸಿ ಕೊರೊನಾ ವೈರಸ್ ತಹಬಂದಿಗೆ ಬರುವವರೆಗೆ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಮುಚ್ಚುವಂತೆ ಆದೇಶಿಸಿ ಗಾರ್ಮೆಂಟ್ಸ್ ನೌಕರರ ಅರೋಗ್ಯ ಮತ್ತು ಪ್ರಾಣ ಕಾಪಾಡಲಿ ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಅವರ ಕಚೇರಿಗೆ ಸಂಪರ್ಕಿಸಿದರೂ ಸಹ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಕೊರೊನಾದಂತಹ ಸಾಮುದಾಯಿಕವಾಗಿ ಹಬ್ಬುವ ವೈರಸ್‌ಗಳನ್ನು ತಡೆಯುವುದು ಇಡೀ ದೇಶದ ನಾಗರಿಕರ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ದೂರ ಇದ್ದು, ಮನೆಗಳಲ್ಲಿಯೇ ಉಳಿದು ಪ್ರತಿಯೊಬ್ಬರೂ ಅದರ ವಿರುದ್ಧ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕೇವಲ ಗಾರ್ಮೆಂಟ್ಸ್‌ಗಳ ಲಾಭದ ದುರಾಸೆಗಾಗಿ ರಜೆ ರದ್ದುಗೊಳಿಸಿ ಅವರಿಂದ ದುಡಿಸಿಕೊಳ್ಳಲು ಹೊರಟಿರುವುದು ಅಪಾಯಕಾರಿ ನಡೆಯಾಗಿದೆ. ಇನ್ನು ಭಾನುವಾರ ಮೋದಿಯವರೇ ಮನೆಯಿಂದ ಹೊರಬರಬೇಡಿ ಎಂದರೆ ಬೆಂಗಳೂರಿನ ಶಾಹಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್ಸ್‌ನಲ್ಲಿ ತನ್ನ ಕಾರ್ಮಿಕರಿಗೆ ಕೆಲಸಕ್ಕೆ ಹಾಜರಾಗಬೇಕೆಂದು ತಾಕೀತು ಮಾಡಿದೆ. ಇದೆಂತೆಹ ದ್ವಂದ್ವ?

ಸರ್ಕಾರ ಈ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಂಬಳ ಸಹಿತ ರಜೆ ನೀಡಿ ಕಾರ್ಮಿಕರ ಹಿತ ಕಾಯಬೇಕಾಗಿದೆ. ಇಲ್ಲದಿದ್ದಲ್ಲಿ ಮುಂದೆ ಒದಗುವ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ : ಸಾವಿರಾರು ಜನ ಸೇರುವ ಗಾರ್ಮೆಂಟ್ಸ್, ಕಂಪನಿಗಳಿಗೆ ರಜೆ ಇಲ್ಲ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...