Homeಮುಖಪುಟಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

ಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

- Advertisement -
- Advertisement -

ಭಾನುವಾರ ಸಂಜೆ 5 ಗಂಟೆಗೆ ದೇಶದ ಜನರೆಲ್ಲರೂ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ತಮ್ಮ ಮನೆಗಳಲ್ಲಿನ ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ನಿಂತು ಪ್ರತಿಭಟನೆ ನಡೆಸಬೇಕೆಂದು ನಾಗರಿಕ ಸಮಾಜ ಗುಂಪು ಯುನೈಟೆಡ್ ಎಗೇನ್ಸ್ಟ್ ಹೇಟ್ ಕರೆ ನೀಡಿದೆ.

ಮಾರ್ಚ್‌ 22 ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಲ್ಲಿಯೇ ಉಳಿದು, ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ಚಪ್ಪಾಳೆ ತಟ್ಟುವ ಮೂಲಕ ಜನತಾ ಕರ್ಫ್ಯೂ ಆಚರಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ಕೊಟ್ಟ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಕರೆ ಕೇಳಿಬಂದಿದೆ.

ಆರೋಗ್ಯ ರಕ್ಷಣೆ ನೀಡುತ್ತಿರುವ ವೈದ್ಯಸಿಬ್ಬಂದಿಗೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಿಸುತ್ತಿರುವವರಿಗೆ ಜನರು ಭಾನುವಾರ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಿ, ಗಂಟೆ ಬಾರಿಸುವ ಮೂಲಕ ಗೌರವ ಸಲ್ಲಿಸುತ್ತಾರೆ ಎಂದು ಮೋದಿ ಹೇಳಿದ್ದರು. ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಎನ್‌ಪಿಆರ್ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರಜ್ಞಾವಂತರೆಲ್ಲವೂ ತಮ್ಮ ಮನೆಗಳಿಂದ ಘೋಷಣೆಗಳನ್ನು ಕೂಗುತ್ತಾರೆ ಎಂದು ಯುನೈಟೈಡ್‌ ಎಗೇನ್ಸ್ಟ್ ಹೇಟ್ ಹೇಳಿಕೆಯಲ್ಲಿ ತಿಳಿಸಿದೆ.

“ಮೊದಲು ನಾವು ಸೋಂಕಿತರನ್ನು ನೋಡಿಕೊಳ್ಳುವ, ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡುತ್ತಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಧನ್ಯವಾದ ಹೇಳುತ್ತೇವೆ … ತದನಂತರ ನಾವು ನಮ್ಮ ಬಾಲ್ಕನಿಗಳು ಮತ್ತು ಕಿಟಕಿಗಳಲ್ಲಿ ಎನ್ಆರ್‌ಸಿ, ಎನ್‌ಪಿಆರ್‌, ಸಿಎಎ ವಿರೋಧಿ ಫಲಕಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಏಪ್ರಿಲ್ 1 ರಿಂದ ಎನ್‌ಪಿಆರ್‌ ಪ್ರಾರಂಭಿಸುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಯುನೈಟೆಡ್ ಎಗೇನ್ಸ್ಟ್ ಹೇಟ್‌ ಸಂಘಟನೆಯ ನದೀಮ್ ಖಾನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರದ ಬದ್ಧತೆಗೆ ನಾವೆಲ್ಲರೂ ಜೊತೆಯಾಗಿದ್ದೇವೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ ಒತ್ತಾಯಿಸುತ್ತಿದ್ದರೆ, “ಈಶಾನ್ಯ ದೆಹಲಿಯಲ್ಲಿನ ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ಇರುವ ಜನರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡ ಸುಮಾರು 1,200 ಜನರು ಮುಸ್ತಾಬಾದ್‌ನಲ್ಲಿ ಅನೈರ್ಮಲ್ಯದ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನೆಯ ಭಾಗವಾಗಲಿರುವ ಇರ್ಕಾನ್ ಚೌಧರಿ ದೂರಿದ್ದಾರೆ.

“ಪ್ರಧಾನ ಮಂತ್ರಿ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ನಮ್ಮ ಮನೆಗಳನ್ನು ಸುಟ್ಟು ಲೂಟಿ ಮಾಡಿದವರ ಬಗ್ಗೆ ಏನು ಹೇಳುವುದು? ಇಕ್ಕಟ್ಟಾದ, ಆರೋಗ್ಯಕರವಲ್ಲದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ. ಸೋಂಕು ತಗುಲುವ ತೀವ್ರ ಅಪಾಯಗಳಿರುವ ಈ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಾದರೂ ಹೇಗೆ ಎಂದು ಚೌಧರಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮೊದಲು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸಮಾಜ ಸೇವಕ ಪರ್ವೇಜ್ ಆಲಂ ಹೇಳಿದ್ದಾರೆ. “ನಾನು ಪ್ರಧಾನ ಮಂತ್ರಿಯ ಜನತಾ ಕರ್ಫ್ಯೂ ಕರೆಯನ್ನು ಸ್ವಾಗತಿಸಿ, ಅನುಸರಿಸುತ್ತೇನೆ. ಆದರೆ ನಾವು ಪಾತ್ರೆಗಳನ್ನು ಬಡಿದು ಎನ್‌ಪಿಆರ್ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕೃಪೆ: ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...