Homeಮುಖಪುಟಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

ಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

- Advertisement -
- Advertisement -

ಭಾನುವಾರ ಸಂಜೆ 5 ಗಂಟೆಗೆ ದೇಶದ ಜನರೆಲ್ಲರೂ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ತಮ್ಮ ಮನೆಗಳಲ್ಲಿನ ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ನಿಂತು ಪ್ರತಿಭಟನೆ ನಡೆಸಬೇಕೆಂದು ನಾಗರಿಕ ಸಮಾಜ ಗುಂಪು ಯುನೈಟೆಡ್ ಎಗೇನ್ಸ್ಟ್ ಹೇಟ್ ಕರೆ ನೀಡಿದೆ.

ಮಾರ್ಚ್‌ 22 ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಲ್ಲಿಯೇ ಉಳಿದು, ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ಚಪ್ಪಾಳೆ ತಟ್ಟುವ ಮೂಲಕ ಜನತಾ ಕರ್ಫ್ಯೂ ಆಚರಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ಕೊಟ್ಟ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಕರೆ ಕೇಳಿಬಂದಿದೆ.

ಆರೋಗ್ಯ ರಕ್ಷಣೆ ನೀಡುತ್ತಿರುವ ವೈದ್ಯಸಿಬ್ಬಂದಿಗೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಿಸುತ್ತಿರುವವರಿಗೆ ಜನರು ಭಾನುವಾರ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಿ, ಗಂಟೆ ಬಾರಿಸುವ ಮೂಲಕ ಗೌರವ ಸಲ್ಲಿಸುತ್ತಾರೆ ಎಂದು ಮೋದಿ ಹೇಳಿದ್ದರು. ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಎನ್‌ಪಿಆರ್ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರಜ್ಞಾವಂತರೆಲ್ಲವೂ ತಮ್ಮ ಮನೆಗಳಿಂದ ಘೋಷಣೆಗಳನ್ನು ಕೂಗುತ್ತಾರೆ ಎಂದು ಯುನೈಟೈಡ್‌ ಎಗೇನ್ಸ್ಟ್ ಹೇಟ್ ಹೇಳಿಕೆಯಲ್ಲಿ ತಿಳಿಸಿದೆ.

“ಮೊದಲು ನಾವು ಸೋಂಕಿತರನ್ನು ನೋಡಿಕೊಳ್ಳುವ, ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡುತ್ತಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಧನ್ಯವಾದ ಹೇಳುತ್ತೇವೆ … ತದನಂತರ ನಾವು ನಮ್ಮ ಬಾಲ್ಕನಿಗಳು ಮತ್ತು ಕಿಟಕಿಗಳಲ್ಲಿ ಎನ್ಆರ್‌ಸಿ, ಎನ್‌ಪಿಆರ್‌, ಸಿಎಎ ವಿರೋಧಿ ಫಲಕಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಏಪ್ರಿಲ್ 1 ರಿಂದ ಎನ್‌ಪಿಆರ್‌ ಪ್ರಾರಂಭಿಸುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಯುನೈಟೆಡ್ ಎಗೇನ್ಸ್ಟ್ ಹೇಟ್‌ ಸಂಘಟನೆಯ ನದೀಮ್ ಖಾನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರದ ಬದ್ಧತೆಗೆ ನಾವೆಲ್ಲರೂ ಜೊತೆಯಾಗಿದ್ದೇವೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ ಒತ್ತಾಯಿಸುತ್ತಿದ್ದರೆ, “ಈಶಾನ್ಯ ದೆಹಲಿಯಲ್ಲಿನ ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ಇರುವ ಜನರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡ ಸುಮಾರು 1,200 ಜನರು ಮುಸ್ತಾಬಾದ್‌ನಲ್ಲಿ ಅನೈರ್ಮಲ್ಯದ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನೆಯ ಭಾಗವಾಗಲಿರುವ ಇರ್ಕಾನ್ ಚೌಧರಿ ದೂರಿದ್ದಾರೆ.

“ಪ್ರಧಾನ ಮಂತ್ರಿ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ನಮ್ಮ ಮನೆಗಳನ್ನು ಸುಟ್ಟು ಲೂಟಿ ಮಾಡಿದವರ ಬಗ್ಗೆ ಏನು ಹೇಳುವುದು? ಇಕ್ಕಟ್ಟಾದ, ಆರೋಗ್ಯಕರವಲ್ಲದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ. ಸೋಂಕು ತಗುಲುವ ತೀವ್ರ ಅಪಾಯಗಳಿರುವ ಈ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಾದರೂ ಹೇಗೆ ಎಂದು ಚೌಧರಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮೊದಲು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸಮಾಜ ಸೇವಕ ಪರ್ವೇಜ್ ಆಲಂ ಹೇಳಿದ್ದಾರೆ. “ನಾನು ಪ್ರಧಾನ ಮಂತ್ರಿಯ ಜನತಾ ಕರ್ಫ್ಯೂ ಕರೆಯನ್ನು ಸ್ವಾಗತಿಸಿ, ಅನುಸರಿಸುತ್ತೇನೆ. ಆದರೆ ನಾವು ಪಾತ್ರೆಗಳನ್ನು ಬಡಿದು ಎನ್‌ಪಿಆರ್ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕೃಪೆ: ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...