Homeಮುಖಪುಟಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

ಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

- Advertisement -
- Advertisement -

ಭಾನುವಾರ ಸಂಜೆ 5 ಗಂಟೆಗೆ ದೇಶದ ಜನರೆಲ್ಲರೂ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ತಮ್ಮ ಮನೆಗಳಲ್ಲಿನ ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ನಿಂತು ಪ್ರತಿಭಟನೆ ನಡೆಸಬೇಕೆಂದು ನಾಗರಿಕ ಸಮಾಜ ಗುಂಪು ಯುನೈಟೆಡ್ ಎಗೇನ್ಸ್ಟ್ ಹೇಟ್ ಕರೆ ನೀಡಿದೆ.

ಮಾರ್ಚ್‌ 22 ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಲ್ಲಿಯೇ ಉಳಿದು, ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ಚಪ್ಪಾಳೆ ತಟ್ಟುವ ಮೂಲಕ ಜನತಾ ಕರ್ಫ್ಯೂ ಆಚರಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ಕೊಟ್ಟ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಕರೆ ಕೇಳಿಬಂದಿದೆ.

ಆರೋಗ್ಯ ರಕ್ಷಣೆ ನೀಡುತ್ತಿರುವ ವೈದ್ಯಸಿಬ್ಬಂದಿಗೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಿಸುತ್ತಿರುವವರಿಗೆ ಜನರು ಭಾನುವಾರ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಿ, ಗಂಟೆ ಬಾರಿಸುವ ಮೂಲಕ ಗೌರವ ಸಲ್ಲಿಸುತ್ತಾರೆ ಎಂದು ಮೋದಿ ಹೇಳಿದ್ದರು. ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಎನ್‌ಪಿಆರ್ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರಜ್ಞಾವಂತರೆಲ್ಲವೂ ತಮ್ಮ ಮನೆಗಳಿಂದ ಘೋಷಣೆಗಳನ್ನು ಕೂಗುತ್ತಾರೆ ಎಂದು ಯುನೈಟೈಡ್‌ ಎಗೇನ್ಸ್ಟ್ ಹೇಟ್ ಹೇಳಿಕೆಯಲ್ಲಿ ತಿಳಿಸಿದೆ.

“ಮೊದಲು ನಾವು ಸೋಂಕಿತರನ್ನು ನೋಡಿಕೊಳ್ಳುವ, ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡುತ್ತಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಧನ್ಯವಾದ ಹೇಳುತ್ತೇವೆ … ತದನಂತರ ನಾವು ನಮ್ಮ ಬಾಲ್ಕನಿಗಳು ಮತ್ತು ಕಿಟಕಿಗಳಲ್ಲಿ ಎನ್ಆರ್‌ಸಿ, ಎನ್‌ಪಿಆರ್‌, ಸಿಎಎ ವಿರೋಧಿ ಫಲಕಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಏಪ್ರಿಲ್ 1 ರಿಂದ ಎನ್‌ಪಿಆರ್‌ ಪ್ರಾರಂಭಿಸುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಯುನೈಟೆಡ್ ಎಗೇನ್ಸ್ಟ್ ಹೇಟ್‌ ಸಂಘಟನೆಯ ನದೀಮ್ ಖಾನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರದ ಬದ್ಧತೆಗೆ ನಾವೆಲ್ಲರೂ ಜೊತೆಯಾಗಿದ್ದೇವೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ ಒತ್ತಾಯಿಸುತ್ತಿದ್ದರೆ, “ಈಶಾನ್ಯ ದೆಹಲಿಯಲ್ಲಿನ ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ಇರುವ ಜನರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡ ಸುಮಾರು 1,200 ಜನರು ಮುಸ್ತಾಬಾದ್‌ನಲ್ಲಿ ಅನೈರ್ಮಲ್ಯದ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನೆಯ ಭಾಗವಾಗಲಿರುವ ಇರ್ಕಾನ್ ಚೌಧರಿ ದೂರಿದ್ದಾರೆ.

“ಪ್ರಧಾನ ಮಂತ್ರಿ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ನಮ್ಮ ಮನೆಗಳನ್ನು ಸುಟ್ಟು ಲೂಟಿ ಮಾಡಿದವರ ಬಗ್ಗೆ ಏನು ಹೇಳುವುದು? ಇಕ್ಕಟ್ಟಾದ, ಆರೋಗ್ಯಕರವಲ್ಲದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ. ಸೋಂಕು ತಗುಲುವ ತೀವ್ರ ಅಪಾಯಗಳಿರುವ ಈ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಾದರೂ ಹೇಗೆ ಎಂದು ಚೌಧರಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮೊದಲು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸಮಾಜ ಸೇವಕ ಪರ್ವೇಜ್ ಆಲಂ ಹೇಳಿದ್ದಾರೆ. “ನಾನು ಪ್ರಧಾನ ಮಂತ್ರಿಯ ಜನತಾ ಕರ್ಫ್ಯೂ ಕರೆಯನ್ನು ಸ್ವಾಗತಿಸಿ, ಅನುಸರಿಸುತ್ತೇನೆ. ಆದರೆ ನಾವು ಪಾತ್ರೆಗಳನ್ನು ಬಡಿದು ಎನ್‌ಪಿಆರ್ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕೃಪೆ: ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...