Homeಮುಖಪುಟಒರಿಸ್ಸಾ ಸಿಎಂ ಪಟ್ನಾಯಕ್‌ ಪತ್ರ : NPR ಮುಂದೂಡಲು ಕೇಂದ್ರದ ಚಿಂತನೆ?

ಒರಿಸ್ಸಾ ಸಿಎಂ ಪಟ್ನಾಯಕ್‌ ಪತ್ರ : NPR ಮುಂದೂಡಲು ಕೇಂದ್ರದ ಚಿಂತನೆ?

ಎನ್‌ಪಿಆರ್‌ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವೇ ನವೀನ್‌ ಪಟ್ನಾಯಕ್‌ರವರಿಗೆ ಹೇಳಿ ಪತ್ರ ಬರೆಸಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಸಮಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೊಂದಣಿಯನ್ನು ನಿಲ್ಲಿಸಬೇಕು ಎಂಬ ಕೂಗು ದಿನೇ ದಿನೇ ಜೋರಾಗುತ್ತಿದೆ. ಇದೇ ವಿಷಯವಾಗಿ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದು ಎನ್‌ಪಿಆರ್‌ ಮುಂದೂಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ, ಏಪ್ರಿಲ್ 1 ರಿಂದ ಹಲವು ರಾಜ್ಯಗಳಲ್ಲಿ ಪ್ರಾರಂಭವಾಗಬೇಕಿದ್ದ, ಎನ್‌ಪಿಆರ್ ಪ್ರಕ್ರಿಯೆಯನ್ನು ಅನಿರ್ಧಿಷ್ಟಾವಧಿ ಕಾಲ ಮುಂದೂಡಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಪ್ರಧಾನಿಯವರಿಗೆ ಪತ್ರ ಬರೆದಿದ್ದ ನವೀನ್ ಪಟ್ನಾಯಕ್ ಅವರು “ಸದ್ಯಕ್ಕೆ ನಾವೆಲ್ಲ ಕೊರೊನಾ ಸಾಂಕ್ರಾಮಿಕವನ್ನು ತಡೆಯುವುದಕ್ಕೆ ಹೋರಾಟದಲ್ಲಿ ನಿರತರಾಗಿದ್ದೇವೆ. ಈ ಸಮಯದಲ್ಲಿ ಜನಗಣತಿ ಮತ್ತು ಅದರ ಜೊತೆಗಿನ ಎಲ್ಲ ಚಟುವಟಿಕೆಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸುವುದು ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಜನಗಣತಿ ಮತ್ತು ಅದರ ಜೊತೆಗಿನ ಚಟುವಟಿಕೆಗಳನ್ನು ಮುಂದೂಡಬೇಕು” ಎಂದು ಹೇಳಿದ್ದರು.

ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರ ಹೊಸ ನಾಗರಿಕ ತಿದ್ದುಪಡಿ ಕಾಯ್ದೆಗೆ (ಸಿಎಎ)  ಒಪ್ಪಿಗೆ ಸೂಚಿಸಿದ್ದರೂ, 2020ರ ಎನ್‌ಪಿಆರ್ ಪ್ರಕ್ರಿಯೆಯಲ್ಲಿ, ಕೇಳಲಿದ್ದ ತಂದೆ-ತಾಯಿಯರ ಹುಟ್ಟಿದ ದಿನಾಂಕ ಮತ್ತು ಜನ್ಮ ಸ್ಥಳಗಳ ಮಾಹಿತಿ ಬಗೆಗಿನ ಪ್ರಶ್ನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು.

2020ನೇ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆ ನಡೆಸಲು ಜನಸಂಪನ್ಮೂಲವನ್ನು ರಾಜ್ಯ ಸರ್ಕಾರಗಳೇ ಒದಗಿಸಬೇಕಾಗಿರುವ ಸಂದರ್ಭ ಇರುವುದರಿಂದ, ಕೊರೊನ ಭೀತಿಯ ಈ ಸಮಯದಲ್ಲಿ ಇದು ಹೆಚ್ಚಿನ ಸಮಸ್ಯೆ ಒಡ್ಡಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಸಾಮಾನ್ಯವಾಗಿ ಜನಗಣತಿ ಮಾಡಲು ಶಾಲಾಶಿಕ್ಷಕರನ್ನು ನೇಮಿಸಲಾಗುತ್ತದೆ. ಈ ಶಾಲಾ ಶಿಕ್ಷಕ ಶಿಕ್ಷಕಿಯರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹ ಮಾಡುವುದು ವಾಡಿಕೆ. ಈಗ ಕೊರೊನಾ ಸಾಂಕ್ರಾಮಿಕ ಭೀತಿಯಲ್ಲಿ ಶಿಕ್ಷಕರು ಮನೆಮನೆಗೆ ತೆರಳಿ ಈ ಕೆಲಸ ಮಾಡುವುದರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಯಲಾಗಿದೆ.

ಪಟ್ನಾಯಕ್ ಅವರು ಬರೆದ ಪತ್ರದಲ್ಲಿ “ದೇಶದ ಮೊದಲ ಹಂತದ ಜನಗಣತಿಯಲ್ಲಿ ಸುಮಾರು 30 ಲಕ್ಷ ಜನ ಮನೆ ಮನೆಗೆ ತೆರಳಬೇಕಿದೆ. ಅವರಿಗೆಲ್ಲಾ ವಿಸ್ತೃತ ತರಬೇತಿ ನೀಡಬೇಕಿದೆ” ಆದುದರಿಂದ ಈ ಸಮಯದಲ್ಲಿ ಈ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಹೇಳಿದ್ದಾರೆ.

ಜನಗಣತಿಗೆ ಎಲ್ಲ ರಾಜ್ಯಗಳು ಸಹಕರಿಸಲೇಬೆಕಿದೆ. ಆದರೆ ಎನ್‌ಪಿಆರ್‌ಗೆ ಆ ನಿರ್ಬಂಧ ಇಲ್ಲ. ಈಗಾಗಲೇ ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶ, ಚತ್ತೀಸ್ ಘಡ ಮತ್ತು ಪುದುಚೆರಿ ವಿಧಾನಸಭೆಗಳಲ್ಲಿ ಎನ್‌ಪಿಆರ್ ಪ್ರಕ್ರಿಯೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಎನ್‌ಪಿಆರ್ ಪ್ರಕ್ರಿಯೆ ಅನಿರ್ಧಿಷ್ಟ ಕಾಲಾವಧಿಯವರೆಗೆ ಮುಂದೂಡುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಇನ್ನೊಂದೆಡೆ ಎನ್‌ಪಿಆರ್‌ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವೇ ನವೀನ್‌ ಪಟ್ನಾಯಕ್‌ರವರಿಗೆ ಹೇಳಿ ಪತ್ರ ಬರೆಸಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...