Homeಮುಖಪುಟನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಸೋಂಕಿಗೆ ಈವರೆಗೆ ನಾನಾ ದೇಶಗಳಲ್ಲಿ 10,000 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದರೆ, ಸುಮಾರು 2 ಲಕ್ಷ ಜನರಿಗೆ ಸೋಂಕು ತಗುಲಿದೆ. ಭಾರತದಲ್ಲೂ ಸ್ಟೇಜ್-2 ರಲ್ಲಿರುವ ಈ ಸೋಂಕು ಈವರೆಗೆ 5 ಜನರನ್ನು ಬಲಿ ಪಡೆದಿದೆ. ಅಲ್ಲದೆ, ಇದು ಸ್ಟೇಜ್-3 ಪ್ರವೇಶಿಸಿದರೆ ಚೀನಾ-ಇಟಲಿಯಂತೆ ಇಲ್ಲೂ ಸಹ ಸಾಲು ಸಾಲು ಹೆಣಗಳು ಉರುಳುವುದು ಖಚಿತ ಎನ್ನಲಾಗುತ್ತಿದೆ. ಪರಿಣಾಮ ಇಡೀ ದೇಶ ಇಂದು ಭಯದಲ್ಲಿರುವುದು ಸುಳ್ಳಲ್ಲ.

ಇಂತಹ ಸಂದರ್ಭದಲ್ಲಿ ಇಡೀ ದೇಶದ ಜನರಿಗೆ ಧೈರ್ಯ ತುಂಬಬೇಕಾದದ್ದು ಹಾಗೂ ತನ್ನ ಸರ್ಕಾರ ಭವಿಷ್ಯದಲ್ಲಿ ಎದುರಾಗಬಹುದಾದ ಮಾರಕ ದಾಳಿಗೆ ಹೇಗೆ ಸಜ್ಜಾಗಿದೆ? ಜನರಿಗೆ ಎಂತಹ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ? ಎಂದು ಯೋಜನೆ ರೂಪಿಸಿ ಅದನ್ನು ಜನರಿಗೆ ತಿಳಿಸಬೇಕಾದದ್ದು ದೇಶವನ್ನಾಳುವ ಪ್ರಧಾನಿಯ ಜವಾಬ್ದಾರಿಯೂ ಹೌದು.

ಭಾರತದ ಹಳ್ಳಿಗಾಡು ಪ್ರದೇಶದಲ್ಲಿ ಈಗಲೂ ಸುಮಾರು 80 ಕಿಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆಗಳಿಲ್ಲ. ಇದ್ದರೂ ಅಗತ್ಯವಿದ್ದಷ್ಟು ಬೆಡ್ ವ್ಯವಸ್ಥೆ ಇಲ್ಲ ಎನ್ನುತ್ತಿವೆ ಅಂಕಿಅಂಶಗಳು. ಇನ್ನು ನಗರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಯ ರೇಟಿಗೆ ಹೆದರಿ ಎಷ್ಟೋ ಜನ ಖಾಯಿಲೆ ಬಂದರೂ ಆಸ್ಪತ್ರೆಗೆ ಹೋಗಲೇ ಹೆದರುವಂತಹ ಸ್ಥಿತಿ ಇದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವೈರಸ್ ಪೀಡಿತರಿಗೆ ಸರ್ಕಾರ ಎಂತಹ ಚಿಕಿತ್ಸೆ ನೀಡಲಿದೆ? ಅದರ ಗುಣಮಟ್ಟ ಏನು? ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ವೈರಸ್ ಎದುರಿಸಲು ಕೈಗೊಂಡಿರುವ ಕ್ರಮ ಏನು? ಎಂಬ ಕುರಿತು ಪ್ರಧಾನಿ ಜನರಿಗೆ ತಿಳಿಸುವುದು ಅಗತ್ಯವಾಗಿತ್ತು ಮತ್ತು ಅನಿವಾರ್ಯವೂ ಆಗಿತ್ತು.

ಇಂತಹ ಜನಸ್ನೇಹಿ ಯೋಜನೆಗಳನ್ನು ರೂಪಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಾರ್ಚ್ 22 ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ 14 ಗಂಟೆಗಳ ಕಾಲ ʼಜನತಾ ಕರ್ಫ್ಯೂʼ ಹೇರುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅದೇ ದಿನ ಸಂಜೆ 5 ಗಂಟೆಗೆ ಕರೋನಾ ವಿರುದ್ಧ ಹಗಲಿರುಳು ದುಡಿಯುತ್ತಿರುವ ವರ್ಗಗಳಿಗೆ ಧನ್ಯವಾದ ಕೋರುವ ನಿಟ್ಟಿನಲ್ಲಿ ಮನೆ ಬಾಗಿಲು, ಕಿಟಕಿ ಅಥವಾ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಿ ಎಂದು ಕಿವಿಮಾತು ಹೇಳಿದ್ದಾರೆ. ಅದಾಗಿ ಹತ್ತು ನಿಮಿಷದಲ್ಲೇ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ಅದನ್ನು ಗ್ರಾಫಿಕ್ಸ್ ಪೇಜ್ ಮೂಲಕ ವ್ಯಾಪಕವಾಗಿ ಸುದ್ದಿ ಪಸರಿಸುವಂತೆ ಮಾಡಿದೆ.

ಸರಿಸುಮಾರು ಅದೇ ಹೊತ್ತಿಗೆ ನೆರೆಯ ಕೇರಳ ರಾಜ್ಯದಲ್ಲಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸುದ್ದಿಗೋಷ್ಟಿ ಕರೆದು ಕರೋನಾ ವಿರುದ್ಧದ ಹೋರಾಟಕ್ಕೆ 20 ಸಾವಿರ ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೊಷಣೆ ಮಾಡುತ್ತಾರೆ. ಅಲ್ಲದೇ ತೆರಿಗೆ ವಿನಾಯಿತಿ, ವಿದ್ಯುತ್, ನೀರಿನ ಬಿಲ್ ಪಾವತಿಗೆ ಹೆಚ್ಚುವರಿ ಸಮಯ ನೀಡುವ ಭರವಸೆ ನೀಡುತ್ತಾರೆ. ಆರೋಗ್ಯ ಕ್ಷೇತ್ರಕ್ಕಾಗಿ 500 ಕೋಟಿ ರೂಪಾಯಿ ಮೀಸಲಿಡುವ ಜೊತೆಗೆ ಮುಂಚಿತವಾಗಿಯೇ ವಿಧವಾ ವೇತನ, ವೃದ್ಧಾಪ್ಯ ವೇತನ ಬಿಡುಗಡೆ, ಬಡ ಕುಟುಂಬಗಳಿಗೆ ಸಾಲ ಯೋಜನೆ, ವೈರಸ್ ಹಾವಳಿ ಕಡಿಮೆಯಾಗುವವರೆಗೆ 10 ಕೆಜಿ ಅಕ್ಕಿ ವಿತರಣೆ ಈ ರೀತಿಯ ಹತ್ತು ಹಲವು ಕಾರ್ಯಕ್ರಮಗಳನ್ನು ಘೋಷಿಸುತ್ತಾರೆ.

ಕೇರಳ ಸರ್ಕಾರದ ಜನಸ್ನೇಹಿ ಕಾರ್ಯ ವಿಧಾನವನ್ನು ನರೇಂದ್ರ ಮೋದಿ ಸರ್ಕಾರದ ಕಾರ್ಯ ವಿಧಾನಕ್ಕೆ ಹೋಲಿಕೆ ಮಾಡಲಾಗದಷ್ಟು ವ್ಯತ್ಯಾಸ ಎರಡರ ನಡುವೆ ಇದೆ.

ಆದರೆ, ಇದರ ಹೊರತಾಗಿಯೂ ಜನ ಒಂದು ದಿನ ರಸ್ತೆಗೆ ಇಳಿಯದೆ ಪ್ರಧಾನಿ ಮಾತು ಕೇಳಿ ಮನೆಯಲ್ಲೇ ಇದ್ದರೇ ಈ ವೈರಸ್ ತಹಬಂದಿಗೆ ಬರುತ್ತಾ? ಎಂದು ಪ್ರಶ್ನೆ ಮಾಡಿದರೆ, ಹಾಗೆ ಆಗಲು ಸಾಧ್ಯವೇ ಇಲ್ಲಾ ಎನ್ನುತ್ತಾರೆ ನುರಿತ ವೈದ್ಯರು. ಹಾಗಾದರೆ ಈ ಕೊರೋನಾ ವೈರಸ್ ಹೇಗೆ ಹರಡುತ್ತೆ? ಮತ್ತೆ ಈ ಸೋಂಕು ಎಷ್ಟು ದಿನದಲ್ಲಿ ನಿಮ್ಮ ದೇಹದಲ್ಲಿ ಕಾಣಿಸಿಕೊಳ್ಳುತ್ತೆ ಎಂಬುದಕ್ಕೆ ಇಲ್ಲಿದೆ ಉತ್ತರ.

ಕೊರೋನಾ ಸೋಂಕು ಹರಡುವುದು ಹೇಗೆ ಗೊತ್ತಾ?

ಎಲ್ಲರಿಗೂ ತಿಳಿದಿರುವಂತೆ ಕೊರೋನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಂಟು ರೋಗ. ಸೋಂಕು ಪೀಡಿತ ವ್ಯಕ್ತಿ ಸೀನಿದರೆ, ಕೆಮ್ಮಿದರೆ ಅಥವಾ ನಮ್ಮನ್ನು ಸ್ಪರ್ಶಿಸಿದರೆ ಆ ಸೋಂಕು ನಮಗೂ ತಗುಲುವ ಸಾಧ್ಯತೆ ಹೆಚ್ಚು. ಒಂದು ವೇಳೆ ನಿಮಗೆ ಆ ಸೋಂಕು ತಗುಲಿದರೂ ಸಹ ಅದು ಕಾಣಿಸಿಕೊಳ್ಳಲು 5 ದಿನಗಳೇ ಬೇಕಾಗಬಹುದು.

5 ದಿನದ ನಂತರ ನಿಮಗೆ ಕೆಮ್ಮು, ಷೀನು, ಸಿಂಬಳ ಸೇರಿದಂತೆ ರೋಗದ ಗುಣ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಾದ ನಂತರ 14 ದಿನಗಳಲ್ಲಿ ಈ ಸೋಂಕು ಗಂಟಲು ಮತ್ತು ಶ್ವಾಸಕೋಶಕ್ಕೆ ವ್ಯಾಪಿಸಿ ಉಸಿರಾಟದ ತೊಂದರೆ ಉಂಟಾಗಿ ಸಾವು ಸಂಭವಿಸುತ್ತದೆ. ಇದೇ ಕಾರಣಕ್ಕೆ ಸೋಂಕಿಗೆ ಒಳಗಾದ ವ್ಯಕ್ತಿಯನ್ನು 14 ದಿನ ಐಸೋಲೇಷನ್ ಅಂದರೆ ತೀವ್ರ ನಿಗಾ ಘಟಕದಲ್ಲಿ ಇಟ್ಟಿರುವುದು. ಹೀಗಾಗಿ ಈ ಸೋಂಕು ಅಕಸ್ಮಾತ್ ನಿಮ್ಮಲ್ಲಿದ್ದರೆ ಅದು 19 ರಿಂದ 20 ದಿನ ಜೀವಂತವಾಗಿರುತ್ತದೆ. ಹಾಗೆ ನೋಡಿದರೆ ಇಡೀ ದೇಶಕ್ಕೆ 20 ದಿನ ಕರ್ಫ್ಯೂ ಹೇರಬೇಕು. ಹೀಗಾಗಿ ಕೇವಲ ಒಂದು ದಿನ ಕರ್ಫ್ಯೂ ಹೇರಿ ಏನುಪಯೋಗ? ಎಂಬುದು ನುರಿತ ವೈದ್ಯರ ಪ್ರಶ್ನೆ.

ಅದಿರಲಿ ಪ್ರಧಾನಿ ನರೇಂದ್ರ ಮೋದಿ ಅವರ ಇಂತಹ ರಾತ್ರಿ ೮ರ ಘೋಷಣೆಗೆ ಬೇರೆ ರೀತಿಯ ಇತಿಹಾಸವಿದೆ. ಆದರೂ, ಪ್ರಧಾನಿ ದಯವಿಟ್ಟು ಜನ ರಸ್ತೆಗೆ ಇಳಿಯಬೇಡಿ ಎಂದು ಮನವಿ ಮಾಡಿದ್ದಾರೆಯೇ ವಿನಃ ಆದೇಶ ಹೊರಡಿಸಿಲ್ಲ. ಹಾಗೆ ಆದೇಶ ಹೊರಡಿಸುವ ಹಕ್ಕು ಅವರಿಗೂ ಇಲ್ಲ ಎಂಬುದು ಬೇರೆ ವಿಚಾರ. ಆದರೆ, ಅವರ ಮನವಿಯೇ ಶಾಸನ ಎಂಬಂತಹ ಭ್ರಮೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಇಡೀ ದೇಶದಲ್ಲಿ ಯಾವ ಪೊಲೀಸ್ ಅಧಿಕಾರಿಯೂ ಮಾಡಲು ಮುಂದಾಗದ ಕೆಲಸಕ್ಕೆ ಮುಂದಾಗಿ ಇದೀಗ ಪೇಚಿಗೆ ಮತ್ತು ನಗೆಪಾಟಲಿಗೆ ಸಿಲುಕಿದ್ದಾರೆ.

ರಸ್ತೆಗಿಳಿದರೆ ಕೇಸ್ ಹಾಕ್ತಾರಂತೆ ಭಾಸ್ಕರ್ ರಾವ್!

ಮಾರ್ಚ್ 22 ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಿಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ನಾಗರೀಕರಿಗೆ ಎಚ್ಚರಿಕೆ ನೀಡಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, “ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಇರುವ ಹಿನ್ನೆಲೆ ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಪ್ರವಾಸ, ವಾಕಿಂಗ್, ಕಾರ್ಯಕ್ರಮ ಅಂತ ಓಡಾಡುವಂತಿಲ್ಲ. ಅಕಸ್ಮಾತ್ ರಸ್ತೆ ಮೇಲೆ ತಿರುಗಾಡಿದ್ರೆ act 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತೆ. ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾಸ್ಕರ್ ರಾವ್ ಮಾಧ್ಯಮಗಳ ಎದುರು ಹೀಗೊಂದು ಹೇಳಿಕೆ ನೀಡುತ್ತಿದ್ದಂತೆ ಎಚ್ಚೆತ್ತಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸರಿಯಾಗಿಯೇ ಕ್ಲಾಸ್ ತಗೊಂಡಿದ್ದಾರೆ, “ಭಾನುವಾರ ರಸ್ತೆ ಮೇಲೆ ಓಡಾಡಿದ್ರೆ ಕೇಸ್ ಹಾಕ್ತೀರ? ನಿಮಗೆ ಯಾರು ಇಂತಹ ಅಧಿಕಾರ ಕೊಟ್ಟದ್ದು? ಕೇಸ್ ಹಾಕೋದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ?

ಏಕೆ ಆ ರೀತಿ ಹೆದರಿಸುವ ಹೇಳಿಕೆ ಕೊಡ್ತೀರಾ..? ಜನರು ಸ್ವಯಂಪ್ರೇರಿತರಾಗಿ ಮನೆಯಲ್ಲಿ ಇರೋದೆ ಜನತಾ ಕರ್ಫ್ಯೂ. ಹೀಗೆ ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ ಮೂಡಿಸಬೇಡಿ ಎಂದು ಎಂದು ತಾಕೀತು ಮಾಡಿದ್ದಾರೆ. ಈ ಕುರಿತು ವಿವರಣೆ ಕೇಳಿ ನೊಟೀಸ್ ಸಹ ನೀಡಿದ್ದಾರೆ. ಅಲ್ಲದೆ, ಸಭೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರಿಯಾಗಿಯೇ ಜಾಡಿಸಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...