Homeಮುಖಪುಟಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.”

ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ?

ಭಗತ್ ಸಿಂಗ್…!!

ಭಾರತದ ಇತಿಹಾಸದಲ್ಲಿ ಎಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನವೇ ಭಗತ್ ಸಿಂಗ್. ಕೇವಲ 23 ವಯಸ್ಸಿನಲ್ಲಿ ದೇಶಕ್ಕಾಗಿ ನೇಣುಗಂಬ ಏರಿದ ಏಕೈಕ ಸ್ವಾತಂತ್ರ್ಯ ಸಂಗ್ರಾಮದ ವೀರ ಭಗತ್ ಸಿಂಗ್ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿದ್ದಾನೆ. ಭಗತ ‌ಸಿಂಗ್ ನ ಆದರ್ಶಗಳನ್ನು ಕೇವಲ ಹುತಾತ್ಮ ‌ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೀಮಿತಗೊಳಿಸುವ ಬದಲು ಆತನು ಪ್ರತಿಪಾದಿಸಿದ ಸಿದ್ಧಾಂತವನ್ನು ಇಂದಿನ ಸಮಾಜ ಅರ್ಥೈಸಿಕೊಳ್ಳಬೇಕಿದೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದು ನುಡಿದ ಭಗತ್‍ಸಿಂಗ್‍ ಮಾತಿನಂತೆ  ಭಗತ್ ಸಿಂಗ್ ಇಂದು ನಮ್ಮೊಂದಿಗೆ ಇಲ್ಲ. ಆದರೆ ಆತನ ವಿಚಾರ, ಆದರ್ಶ ಸಿದ್ಧಾಂತ, ಕ್ರಾಂತಿಯ ಕಿಡಿಗಳು ಇಂದಿಗೂ ಜೀವಂತವಾಗಿವೆ. ಭಗತ್ ಸಿಂಗ್ ನನ್ನು ನಾವು ಕೇವಲ ‘ದೇಶಪ್ರೇಮಿ’ ‘ಹುತಾತ್ಮ’ ಎಂದು ಬಿಂಬಿಸುವ ಮೂಲಕ ಆರಾಧನೆವಷ್ಟೇ ಮಾಡುವುದಲ್ಲ. ಭಗತ್ ಸಿಂಗ್ ಎಂದರೆ ಅದೊಂದು ಕ್ರಾಂತಿಯ ಚಿಲುಮೆ, ಅಮೋಘ ಶಕ್ತಿ ಎಂದು ಅರಿಯಬೇಕು. ಭಗತ್ ಸಿಂಗ್‌ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿವೆ. ಆತನ ಕ್ರಾಂತಿಕಾರಿ ಚಿಂತನೆಗಳನ್ನು ಮನಗಂಡು ನಾವೆಲ್ಲರೂ ಮುನ್ನಡೆಯಬೇಕಿದೆ.

ಶಾಹಿದ್ ಭಗತ್ ಸಿಂಗ್, 28ನೆಯ ಸೆಪ್ಟೆಂಬರ್ 1907ರಂದು ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ. ಜನಿಸಿದನು. ದೇಶಪ್ರೇಮದ ಹಿನ್ನೆಲೆಯುಳ್ಳ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಹುಟ್ಟಿದ ಭಗತನಿಗೆ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆಯಿತು. ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿತ್ತು.
ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟದ ನಾಯಕನಾಗಿ ರೂಪಿಸಿದ್ದು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ಮುಕ್ತ ಸಮಾಜಕ್ಕಾಗಿ ಭಗತ್ ಸಿಂಗ್ ಮಿಡಿದಿರುವುದು ಸ್ಪಷ್ಟವಾಗಿ ತೋರುತ್ತದೆ.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟೀಷರ ವಿರುದ್ಧ ಸಮರ ಸಾರಿರುವ ಭಗತ್‍ಸಿಂಗ್, ಮತ್ತು ಆತನ ಸಂಗಾತಿಗಳಾದ ರಾಜಗುರು ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಹೋರಾಡಲಿಲ್ಲ.ಶಾಂತಿ ಮತ್ತು ಸೌಹಾರ್ದತೆಗಾಗಿ ಹೋರಾಡಿದ ಭಗತ್ ಸಿಂಗ್ “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎಂದು ಹೇಳುವ ಮೂಲಕ ಮೌಲಿಕ ಚಿಂತನೆಗಳು ಮಂಡಿಸಿದನು.

ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ಕ್ರಾಂತಿ ಎಂದರೆ ಕ್ರಿಯೆ , ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ ಎಂದು ಹೇಳಿದನು. ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು ಎಂದು ಎಚ್ಚರಿಸುತ್ತಾನೆ.

ಇನ್ನೂ ಭಗತ್ ಸಿಂಗ್ ಒಬ್ಬ ನಾಸ್ತಿಕವಾದಿಯೇ? ಎಂಬುದು ನಾವು ತಿಳಿದುಕೊಳ್ಳಬೇಕಿದೆ. ನಾನು ಆಸ್ತಿಕ ಹಾಗೂ ನಾಸ್ತಿಕ ಎಂಬ ಎರಡು ಗುಂಪಿಗೂ ಸೇರಿದವನಲ್ಲ. ನಾನು ಸರ್ವವ್ಯಾಪಿ, ಸರ್ವಶಕ್ತ, ಸ್ವರ್ವಾಂತರ್ಯಾಮಿ, ಸರ್ವಗ್ರಾಹಿ ದೇವರ ಅಸ್ತಿತ್ವವನ್ನೆ ನಿರಾಕರಿಸುತ್ತೇನೆಂದು ಹೇಳುತ್ತಾನೆ. ಮನುಷ್ಯ ಜೀವನದಲ್ಲಿ ದೇವರ ಶಿಕ್ಷೆ ಅಥವಾ ಉಡುಗೊರೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ನಮಗೆ ಬದುಕು ಮತ್ತು ಸಾವು ಭೌತಿಕ ನೆಲೆಯಲ್ಲಿ ಮಾತ್ರವೇ ಪ್ರಸ್ತುತ ಎನಿಸುತ್ತದೆ. “ದೇವರ ಸಾಮ್ರಾಜ್ಯದಲ್ಲಿ ಎಲ್ಲವೂ ಸೌಖ್ಯವಿದೆಯೇ?” ಎಂದು ಪ್ರಶ್ನಿಸುತ್ತಾ ನಾನು ನಾಸ್ತಿಕವಾದಿ ಹಾಗೂ ವಾಸ್ತವವಾದಿಯೂ ಹೌದು ಎನ್ನುವ ನಿರ್ಧಾರಕ್ಕೆ ಬರುತ್ತಾನೆ.

“ನಾನು ನನ್ನ ಅಂತಿಮ ಕ್ಷಣಗಳು ಎದುರಾದಾಗ ನಾನು ದೇವರನ್ನು ನಂಬಲು ಆರಂಭಿಸಿದರೆ ನನ್ನ ನೈತಿಕ ಅಧಃಪತನ ಹಾಗೂ ಅವಮಾನದ ಸಂಕೇತವಾಗುತ್ತದೆ. ಇಂತಹ ಕ್ಷುಲ್ಲಕ ಸ್ವಾರ್ಥ ಉದ್ದೇಶಗಳಿಗೆ ನಾನು ದೇವರಿಗೆ ಪ್ರಾರ್ಥಿಸಲಾರೆ” ಎಂದು ಹೇಳುವ ಭಗತ್ ಸಿಂಗ್ ತಾನು ನಂಬಿರುವ ಸಿದ್ಧಾಂತಕ್ಕೆ ಅಂತಿಮವರೆಗೂ ಬದ್ಧನಾಗಿರುವುದು ಇಲ್ಲಿ ಗಮನಿಸಬಹುದು.

ಭಗತ್ ಸಿಂಗ್ ಹುತಾತ್ಮನಾಗಿ 89 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಭಗತ್ ಸಿಂಗ್ ನನ್ನು ನಾವು ಕೇವಲ ಹುತಾತ್ಮ ದೇಶಭಕ್ತ ಎಂದೇ ಬಿಂಬಿಸಿದ್ದೇವೆ. “ಸಮಾಜವನ್ನು ನೂತನ ನೆಲೆಯಲ್ಲಿ,. ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದು ಹೇಳಿದ ಭಗತ್ ಸಿಂಗ್ ಚಿಂತನೆಗಳು ಇಲ್ಲವಾಗುತ್ತಿವೆ. ಆತನ ಮೂಲ ತ್ವತ್ವಾದರ್ಶ ಸಿದ್ಧಾಂತಗಳು ಮೂಲೆಗುಂಪು ಮಾಡುವ ಹುನ್ನಾರದಿಂದ ಕೇವಲ ದೇಶಭಕ್ತಿಯ ಚೌಕಟ್ಟಿನಲ್ಲಿ ಪೂಜಿಸುತ್ತಿರುವುದು ವಿಪರ್ಯಾಸವೇ ಸರಿ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ  ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಇಷ್ಟಪಡುತ್ತಿದ್ದನು. ಹಾಗಾಗಿ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದಾದರು. ತನ್ನ ಅಂತಿಮ ಕ್ಷಣಗಳವರೆಗೂ ಓದುವ ಹವ್ಯಾಸ ಮೈಗೂಡಿಸಿಕೊಂಡ ಭಗತ್ ಸಿಂಗ್ ಒಬ್ಬ ಉತ್ತಮ ಓದುಗ, ಬರಹಗಾರ ಕೂಡ ಹೌದು.

‘ಈ ಸಾವು ಸಹ ಬಹಳ ಸುಂದರವಾಗಿರುತ್ತದೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ ‘ ನೋವಿನ ಹೋರಾಟದ ಬದುಕಿನ ಸಂದರ್ಭದಲ್ಲಿ ಸಾವು ಆದರ್ಶಮಯವಾಗಿ ಜೀವಂತಿಕೆ ಪಡೆಯುವುದು ಎಂದು ನುಡಿದ ಭಗತರು ಅಪ್ರತಿಮ ಧೈರ್ಯಶಾಲಿ ಆಗಿದ್ದರು.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಉಳಿದಿದ್ದಾನೆ, ಹೊರತು ಅವನು ಪ್ರತಿಪಾದಿಸಿದ ಸಿದ್ಧಾಂತ ಮಾತ್ರ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ.
ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ ನನ್ನನ್ನು ಗುಂಡಿಕ್ಕಿ ಕೊಲ್ಲಲು ವಿನಂತಿಸಿದ ಭಾರತದ ಏಕೈಕ ದೇಶಪ್ರೇಮಿ ಭಗತ್ ಸಿಂಗ್ ನನ್ನು ‘ಭಾರತ ರತ್ನ’ ನೀಡಲು ಅರ್ಹತೆ ಅಳೆಯುತ್ತಾರೆ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಇರುವುದು ಭಗತ್ ಸಿಂಗ್ ಚಿಂತನೆಗಳಲ್ಲಿ ಮಾತ್ರ. ಅಂದಿನ ‘ರಿಯಲ್ ಹೀರೋ’ ಗಳೇ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ. ಕಿರಿಯ ವಯಸ್ಸಲ್ಲೇ ಭಾರತದ ಭವಿಷ್ಯಕ್ಕಾಗಿ ಗಲ್ಲುಶಿಕ್ಷೆಗೆ ಗುರಿಯಾದ ಭಗತ್ ಸಿಂಗ್ ಮಾನವ ‌ಸಮಾಜಕ್ಕೆ ಆದಷ್ಟು ಹೆಚ್ಚಿನ ಸೇವೆ ಮಾಡಲು ಬಯಸಿದನು. ಭಗತ್ ಸಿಂಗ್ ಧೋರಣೆಯನ್ನು ನಮ್ಮೆಲ್ಲರ ಮನಸ್ಸಿನ ಮೇಲೆ ಅಚ್ಚಳಿಯದೆ ಪ್ರಭಾವ ಬೀರಿವೆ. ಇನ್ನೂ ನಾವು ಬಯಸಿದ ಭವಿಷ್ಯ ಭಾರತಕ್ಕೆ ಭಗತ್ ಸಿಂಗ್ ಆದರ್ಶ, ಚಿಂತನೆಗಳು ಮುನ್ನೆಲೆಗೆ ತರಲು ಪ್ರಯತ್ನಿಸೋಣ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿ ನಮ್ಮದಾಗಿಸೋಣ.‌

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....