Homeಮುಖಪುಟಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

- Advertisement -
- Advertisement -

ಕೊರೋನಾ ನಿಯಂತ್ರಣಕ್ಕೆ ಅಮೆರಿಕ 1.2 ಟ್ರಿಲಿಯನ್ ಡಾಲರ್, ಇಂಗ್ಲೆಂಡ್ 39 ಬಿಲಿಯನ್ ಡಾಲರ್, ಫ್ರಾನ್ಸ್ 45 ಬಿಲಿಯನ್ ಡಾಲರ್, ನ್ಯೂಜಿಲ್ಯಾಂಡ್ 8 ಬಿಲಿಯನ್ ಡಾಲರ್, ಇಟಲಿ 28 ಬಿಲಿಯನ್ ಡಾಲರ್, ಕೆನಡಾ 56 ಬಿಲಿಯನ್ ಡಾಲರ್, ದ,ಕೋರಿಯಾ 10 ಬಿಲಿಯನ್ ಡಾಲರ್ ಹಣ ಮೀಸಲಿಟ್ಟಿವೆ.

ಪಕ್ಕದ ಪುಟ್ಟ ರಾಜ್ಯ ಕೇರಳ 20 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದೆ. ಖಜಾನೆಯಲ್ಲಿ ಸಾಕಷ್ಟು ದುಡ್ಡಿಲ್ಲದಿದ್ದರೂ ಯಡಿಯೂರಪ್ಪ ಎರಡು ತಿಂಗಳ ರೇಷನ್ ಕೊಡುವುದಾಗಿ ಹೇಳಿದ್ದಾರೆ.
ಆದರೆ, ಮೋದಿಯವರು ಯಾವ ಪ್ಯಾಕೇಜನ್ನೂ ಘೋಷಣೆ ಮಾಡಿಲ್ಲ. ನಿಮ್ಮ ಕೈ ಬಳಸಿ ಚಪ್ಪಾಳೆ ಹೊಡೆಯಿರಿ, ನಿಮ್ಮ ಮನೆ ಗಂಟೆ ಮತ್ತು ಗಂಗಾಳ (ಪ್ಲೇಟು) ಬಾರಿಸಿ ಎಂದಷ್ಟೇ ಹೇಳಿದ್ದಾರೆ. ಪರೋಕ್ಷವಾಗಿ ಅವರು ಬಡವರಿಗೆ ಶಂಖಾ ಹೊಡಿರಿ ಎಂದಿದ್ದಾರಷ್ಟೆ.

ಯಾಕೆ ಹಣ ಬಿಚ್ಚುತ್ತಿಲ್ಲ? ಹಣ ಇದ್ದರೆ ತಾನೇ? ಪುಟ್ಟಾಪೂರಾ ದೋಸ್ತ್‌ಗಳಾದ ಅಂಬಾನಿ, ಅದಾನಿಗಳಿಗೆ, ಯೆಸ್ ಬ್ಯಾಂಕಿನ ಮಿತ್ರ ಕಪೂರ್‌ಗಳಿಗೆಲ್ಲ ಮೋದಿ ಗಳಿಸಲು ಬಿಟ್ಟು ಖಜಾನೆ ಖಾಲಿ ಮಾಡುತ್ತ ಹೊರಟಿದ್ದಾರೆ. ಹೀಗಾಗಿ ಅವರ ಬಳಿ ಈಗ ಉಳಿದಿರುವುದು ಬಿಟ್ಟಿ ಬೋಧನೆಯಷ್ಟೇ!

20 ದಿನದ ಜನತಾ ಕರ್ಫ್ಯೂ

ನಿಜಕ್ಕೂ ಕಾಳಜಿ ಇದ್ದಿದ್ದರೆ, 20 ದಿನಗಳ ಜನತಾ ಕರ್ಫ್ಯೂ ಘೋಷಿಸಿ, ಸಂಬಳ ಪಡೆಯದ ಜನರಿಗೆಲ್ಲ ಕೇರಳದಂತೆ ಪ್ಯಾಕೇಜ್ ಘೋಷಿಸಬಹುದಿತ್ತು. ಅದು ಬಿಟ್ಟು ಗಂಟೆ ಬಾರಿಸಿ ಎಂದು ಹೇಳಲು ಪ್ರಧಾನಿಯೇ ಬೇಕಿತ್ತಾ? ಭಕ್ತರು ಆ ಕೆಲಸವನ್ನು ನಿರಂತರವಾಗಿ ಮಾತಾಡ್ತಾನೇ ಇದ್ದಾರಲ್ಲ?

ಜನತಾ ಕರ್ಫ್ಯೂ ಉಲ್ಲಂಘಿಸಿದ ಮೋದಿ ಭಕ್ತರು!

ಒಂದು ದಿನದ ಮಟ್ಟಿಗಾದರೂ ಹೊರಬರದೇ ಮನೆಯಲ್ಲಿಯೇ ಇದ್ದು ಚಪ್ಪಾಳೆ ಹೊಡೆಯಿರಿ ಎಂದು ಮೋದಿ ಹೇಳಿದರೆ ಹಲವು ಮೋದಿ ಭಕ್ತರು ಗುಂಪು ಗುಂಪಾಗಿ ಬೀದಿಗೆ ಬಂದು ಚಪ್ಪಾಳೆ ಹೊಡೆಯುವ ಮೂಲಕ ಮೋದಿಯವರ ಉದ್ದೇಶವನ್ನೇ ಹಾಳುಗೆಡವಿರುವ ವಿಡಿಯೋಗಳು ವೈರಲ್‌ ಆಗಿವೆ.

ಕೊರೋನಾದ ಬಗ್ಗೆ ಇಷ್ಟು ಲಘುವಾದ ಧೋರಣೆ ಬೆಳೆಸಿಕೊಂಡರೆ, ಅಪಾಯಕ್ಕೆ ಈಡಾಗುವವರು ಈ ದೇಶದ ಬಡವರು ಅಲ್ಲವೇ? ಹೀಗಾಗಿ ಶ್ರೀಮಂತರು, ಮೇಲ್ ಮಧ್ಯಮ ಮತ್ತು ಮಧ್ಯಮ ವರ್ಗಗಳ ಜನ ಒಂಥರಾ ರೋಮ್ಯಾಂಟಿಕ್ ಆಗಿ ಇದನ್ನೆಲ್ಲ ಅನುಭವಿಸುತ್ತಿರಬಹುದೇ ಎಂಬ ಸಂಶಯ ಕಾಡತೊಡಗಿದೆ.
-ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...