Homeಮುಖಪುಟಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

- Advertisement -
- Advertisement -

ಕೊರೋನಾ ನಿಯಂತ್ರಣಕ್ಕೆ ಅಮೆರಿಕ 1.2 ಟ್ರಿಲಿಯನ್ ಡಾಲರ್, ಇಂಗ್ಲೆಂಡ್ 39 ಬಿಲಿಯನ್ ಡಾಲರ್, ಫ್ರಾನ್ಸ್ 45 ಬಿಲಿಯನ್ ಡಾಲರ್, ನ್ಯೂಜಿಲ್ಯಾಂಡ್ 8 ಬಿಲಿಯನ್ ಡಾಲರ್, ಇಟಲಿ 28 ಬಿಲಿಯನ್ ಡಾಲರ್, ಕೆನಡಾ 56 ಬಿಲಿಯನ್ ಡಾಲರ್, ದ,ಕೋರಿಯಾ 10 ಬಿಲಿಯನ್ ಡಾಲರ್ ಹಣ ಮೀಸಲಿಟ್ಟಿವೆ.

ಪಕ್ಕದ ಪುಟ್ಟ ರಾಜ್ಯ ಕೇರಳ 20 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದೆ. ಖಜಾನೆಯಲ್ಲಿ ಸಾಕಷ್ಟು ದುಡ್ಡಿಲ್ಲದಿದ್ದರೂ ಯಡಿಯೂರಪ್ಪ ಎರಡು ತಿಂಗಳ ರೇಷನ್ ಕೊಡುವುದಾಗಿ ಹೇಳಿದ್ದಾರೆ.
ಆದರೆ, ಮೋದಿಯವರು ಯಾವ ಪ್ಯಾಕೇಜನ್ನೂ ಘೋಷಣೆ ಮಾಡಿಲ್ಲ. ನಿಮ್ಮ ಕೈ ಬಳಸಿ ಚಪ್ಪಾಳೆ ಹೊಡೆಯಿರಿ, ನಿಮ್ಮ ಮನೆ ಗಂಟೆ ಮತ್ತು ಗಂಗಾಳ (ಪ್ಲೇಟು) ಬಾರಿಸಿ ಎಂದಷ್ಟೇ ಹೇಳಿದ್ದಾರೆ. ಪರೋಕ್ಷವಾಗಿ ಅವರು ಬಡವರಿಗೆ ಶಂಖಾ ಹೊಡಿರಿ ಎಂದಿದ್ದಾರಷ್ಟೆ.

ಯಾಕೆ ಹಣ ಬಿಚ್ಚುತ್ತಿಲ್ಲ? ಹಣ ಇದ್ದರೆ ತಾನೇ? ಪುಟ್ಟಾಪೂರಾ ದೋಸ್ತ್‌ಗಳಾದ ಅಂಬಾನಿ, ಅದಾನಿಗಳಿಗೆ, ಯೆಸ್ ಬ್ಯಾಂಕಿನ ಮಿತ್ರ ಕಪೂರ್‌ಗಳಿಗೆಲ್ಲ ಮೋದಿ ಗಳಿಸಲು ಬಿಟ್ಟು ಖಜಾನೆ ಖಾಲಿ ಮಾಡುತ್ತ ಹೊರಟಿದ್ದಾರೆ. ಹೀಗಾಗಿ ಅವರ ಬಳಿ ಈಗ ಉಳಿದಿರುವುದು ಬಿಟ್ಟಿ ಬೋಧನೆಯಷ್ಟೇ!

20 ದಿನದ ಜನತಾ ಕರ್ಫ್ಯೂ

ನಿಜಕ್ಕೂ ಕಾಳಜಿ ಇದ್ದಿದ್ದರೆ, 20 ದಿನಗಳ ಜನತಾ ಕರ್ಫ್ಯೂ ಘೋಷಿಸಿ, ಸಂಬಳ ಪಡೆಯದ ಜನರಿಗೆಲ್ಲ ಕೇರಳದಂತೆ ಪ್ಯಾಕೇಜ್ ಘೋಷಿಸಬಹುದಿತ್ತು. ಅದು ಬಿಟ್ಟು ಗಂಟೆ ಬಾರಿಸಿ ಎಂದು ಹೇಳಲು ಪ್ರಧಾನಿಯೇ ಬೇಕಿತ್ತಾ? ಭಕ್ತರು ಆ ಕೆಲಸವನ್ನು ನಿರಂತರವಾಗಿ ಮಾತಾಡ್ತಾನೇ ಇದ್ದಾರಲ್ಲ?

ಜನತಾ ಕರ್ಫ್ಯೂ ಉಲ್ಲಂಘಿಸಿದ ಮೋದಿ ಭಕ್ತರು!

ಒಂದು ದಿನದ ಮಟ್ಟಿಗಾದರೂ ಹೊರಬರದೇ ಮನೆಯಲ್ಲಿಯೇ ಇದ್ದು ಚಪ್ಪಾಳೆ ಹೊಡೆಯಿರಿ ಎಂದು ಮೋದಿ ಹೇಳಿದರೆ ಹಲವು ಮೋದಿ ಭಕ್ತರು ಗುಂಪು ಗುಂಪಾಗಿ ಬೀದಿಗೆ ಬಂದು ಚಪ್ಪಾಳೆ ಹೊಡೆಯುವ ಮೂಲಕ ಮೋದಿಯವರ ಉದ್ದೇಶವನ್ನೇ ಹಾಳುಗೆಡವಿರುವ ವಿಡಿಯೋಗಳು ವೈರಲ್‌ ಆಗಿವೆ.

ಕೊರೋನಾದ ಬಗ್ಗೆ ಇಷ್ಟು ಲಘುವಾದ ಧೋರಣೆ ಬೆಳೆಸಿಕೊಂಡರೆ, ಅಪಾಯಕ್ಕೆ ಈಡಾಗುವವರು ಈ ದೇಶದ ಬಡವರು ಅಲ್ಲವೇ? ಹೀಗಾಗಿ ಶ್ರೀಮಂತರು, ಮೇಲ್ ಮಧ್ಯಮ ಮತ್ತು ಮಧ್ಯಮ ವರ್ಗಗಳ ಜನ ಒಂಥರಾ ರೋಮ್ಯಾಂಟಿಕ್ ಆಗಿ ಇದನ್ನೆಲ್ಲ ಅನುಭವಿಸುತ್ತಿರಬಹುದೇ ಎಂಬ ಸಂಶಯ ಕಾಡತೊಡಗಿದೆ.
-ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...