Homeಕರ್ನಾಟಕಮಧ್ಯಾಹ್ನ ಕಾರ್ಮಿಕ ಸಚಿವರ ಜೊತೆ ಸಭೆ : ಫ್ಯಾಕ್ಟರಿಗಳ ಲಾಕ್‌ಡೌನ್ ಬಹುತೇಕ ಖಚಿತ

ಮಧ್ಯಾಹ್ನ ಕಾರ್ಮಿಕ ಸಚಿವರ ಜೊತೆ ಸಭೆ : ಫ್ಯಾಕ್ಟರಿಗಳ ಲಾಕ್‌ಡೌನ್ ಬಹುತೇಕ ಖಚಿತ

- Advertisement -
- Advertisement -

ರಾಜ್ಯದಲ್ಲಿ ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಲಕ್ಷಣಗಳು ಗೋಚರಿಸತೊಡಗಿವೆ. ಕೊರೊನ ಪೀಡಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ.  ಕೊರೊನ ವ್ಯಾಪಕತೆ ಪಡೆಯುತ್ತಿರುವ ಪರಿಣಾಮ ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್ ಗಳಿಗೆ ರಜೆ ನೀಡುವ ಸಂಬಂಧ ಸರ್ಕಾರ ಮಧ್ಯಾಹ್ನ 2.15ಕ್ಕೆ ಬೆಂಗಳೂರಿನ ಕೌಶಲ್ಯ ಭವನದಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಿದೆ.

ಈ ನಡುವೆ ಮಾರ್ಚ್‌ 19ರಂದು ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ತದನಂತರ ಫ್ಯಾಕ್ಟರಿ ಮ್ಯಾನೇಜರ್‌ಗಳು ಒತ್ತಡ ತಂದು ರಜೆಯನ್ನು ರದ್ದುಗೊಳಿಸಿದ್ದರು.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!


ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಟಿಯುಸಿ, ಎಐಯುಟಿಯುಸಿ ಸೇರಿದಂತೆ ಎಲ್ಲಾ ಕರ್ಮಿಕ ಸಂಘಟನೆಗಳ ಮುಖಂಡರು ಕಾರ್ಮಿಕ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ಕೌಶಲ್ಯ ಭವನದಲ್ಲಿ ಮಾತುಕತೆ ನಡೆಯಲಿದ್ದು ಇಡೀ ರಾಜ್ಯದ್ಯಾಂತ ಇರುವ ಎಲ್ಲಾ ಫ್ಯಾಕ್ಟರಿಗಳು, ಗಾರ್ಮೆಂಟ್ಸ್ ಗಳು ಲಾಕ್‌ಡೌನ್ ಆಗಲಿವೆ. ಮಾತುಕತೆಯ ವೇಳೆ ವೇತನ ಸಹಿತ ರಜೆ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಒತ್ತಾಯಿಸಲಿವೆ.

ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಸೇವೆ ಸ್ಥಗಿತಗೊಳಿಸಿದೆ.  ಅಂತರರಾಜ್ಯ ಬಸ್ ಗಳ ಸೇವೆ ರದ್ದುಪಡಿಸಲಾಗಿದೆ.. ಎಲ್ಲಾ ಹೋಟೆಲ್ ಗಳಲ್ಲೂ ಜನರು ಕೂರದಂತೆ ಛೇರ್ ಗಳನ್ನು ತೆಗೆದಿರಿಸಲಾಗಿದೆ. ಹೊಟೆಲ್ ಗಳಲ್ಲಿ ಸ್ವಚ್ಚತೆಗೆ ಆದ್ಯತೆ ವಹಿಸುವಂತೆ ಸೂಚಿಸಲಾಗಿದೆ. ಆರೋಗ್ಯಾಧಿಕಾರಿಗಳು ದಿನಕ್ಕೆ ಮೂರು ಬಾರಿ ಹೋಟೆಲ್ ಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಜನರು ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಹೋಟೆಲ್ ನ ಎಲ್ಲಾ ಸಿಬ್ಬಂದಿಯೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಇದರ ನಡುವೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಐ.ಪಿ.ಸಿ ಸೆಕ್ಷನ್ 144ರಡಿ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಸೇರದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಹೀಗಾಗಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಕೊರೊನ ಹರಡುತ್ತಿರುವ ನಡುವೆಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕೂಡ ಭೀತಿಯಿಂದಲೇ ಕೆಲಸ ಮಾಡುತ್ತಿದ್ದು, ಅವರಿಗೂ ರಜೆ ನೀಡುವ ಬಗ್ಗೆ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು. ಕಾರ್ಮಿಕ ಸಂಘಟನೆಗಳು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಒತ್ತಾಯಿಸಲಿದ್ದು ಇದಕ್ಕೆ ಕಾರ್ಮಿಕ ಸಚಿವರು ಯಾವ ತೀರ್ಮಾನ ಕೈಗೊಳ್ಳುವರು ಎಂಬುದನ್ನು ಕಾದುನೋಡಬೇಕಾಗಿದೆ.

ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗೂ ವೇತನಸಹಿತ ರಜೆ ನೀಡಬೇಕು. ಕಾರ್ಮಿಕರಿಗೆ ವೇತನ ನೀಡದೆ ರಜೆ ಕೊಟ್ಟರೆ ಅವರ ಜೀವನ ತುಂಬ ಕಷ್ಟಕರವಾಗುತ್ತದೆ. ಕಾರ್ಮಿಕರಿಗೆ ಬೇರೆ ದುಡಿಮೆ ಇಲ್ಲ. ಕಾರ್ಮಿಕರು ಪ್ರಾಣವನ್ನು ಪಣವಿಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ವೇತನ ಸಹಿತ ರಜೆ ನೀಡಬೇಕು ಎಂದು ಕಾರ್ಮಿಕ ಮುಖಂಡರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....