Homeಅಂತರಾಷ್ಟ್ರೀಯಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

"ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು"

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾವು ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡವನ್ನು ಕಳುಹಿಸಿ ಕೊಟ್ಟಿದೆ.

ವೈರಸಿನಿಂದಾಗಿ ಅತ್ಯಂತ ಹಾನಿಗೊಳಗಾದ ಇಟಲಿಯ ಲೊಂಬಾರ್ಡಿಗೆ ಕೊರೊನ ವೈರಸ್‌ ವಿರುದ್ದ ಹೋರಾಡಲು ವೈದ್ಯರು ಮತ್ತು ದಾದಿಯರ ತಂಡವನ್ನು ತಕ್ಷಣ ಕಳಿಸಿಕೊಟ್ಟು ಸಹಾಯ ಮಾಡುವಂತೆ ಕೇಳಿದೆ ಎಂದು ಕ್ಯೂಬಾ ಭಾನುವಾರ ಪ್ರಕಟಿಸಿದೆ.

“ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ. 52 ವೈದ್ಯರ ಬಲಿಷ್ಠ ತಂಡದೊಂದಿಗೆ, ಕ್ಯೂಬಾ ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲು.

ಕ್ಯೂಬಾ ತನ್ನ “ಬಿಳಿ ನಿಲುವಂಗಿಗಳ ಸೈನ್ಯವನ್ನು” 1959 ರ ಕ್ರಾಂತಿಯ ನಂತರ ಪ್ರಪಂಚದಾದ್ಯಂತದ ಹೆಚ್ಚಾಗಿ ಬಡ ದೇಶಗಳಲ್ಲಿ ವಿಪತ್ತು ಸ್ಥಳಗಳಿಗೆ ಕಳುಹಿಸಿದೆ. ಹೈಟಿಯಲ್ಲಿ ಕಾಲರಾ ವಿರುದ್ಧ ಮತ್ತು 2010 ರಲ್ಲಿ ಪಶ್ಚಿಮ ಆಫ್ರಿಕಾದ ಎಬೋಲಾ ವಿರುದ್ಧದ ಹೋರಾಟದಲ್ಲಿ ಕ್ಯೂಬಾದ ವೈದ್ಯರು ಮುಂಚೂಣಿಯಲ್ಲಿದ್ದರು.

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...