Homeಮುಖಪುಟದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

"ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ" ಎಂದು ಅಂಬೇಡ್ಕರ್‌ ಹೇಳಿದ್ದರು.

- Advertisement -
- Advertisement -

ಅನುವಾದ: ನಿಖಿಲ್ ಕೋಲ್ಪೆ

ಪೌರತ್ವ ತಿದ್ದುಪಡಿ ಕಾಯಿದೆ(CAA)ಯು ಪಾಕಿಸ್ತಾನ ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಬಯಸಿದೆ. ಇಲ್ಲಿ ಧಾರ್ಮಿಕ ನೆಲೆಯನ್ನು ಅನುಸರಿಸಲಾಗಿದೆ. ಆದರೆ, ಇದೇ ಹೊತ್ತಿಗೆ ಮೂಲತಃ ಭಾರತೀಯರಾಗಿದ್ದು ರಬ್ಬರ್, ಚಹಾತೋಟಗಳಲ್ಲಿ ಕೆಲಸ ಮಾಡಲು ಬ್ರಿಟಿಷರು ಕೊಂಡೊಯ್ದು, ನಂತರ ಅಲ್ಲಿಯೇ ನೆಲೆನಿಂತ ಹಿಂದೂ ತಮಿಳರನ್ನು ಈ ಕಾಯಿದೆಯಿಂದ ಹೊರಗಿಡಲಾಗಿದೆ. ದೇಶ ವಿಭಜನೆಯ ಕಾಲದಲ್ಲಿ ಸಾವಿರಾರು ಮಂದಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಅಂತೆಯೇ ಸಾವಿರಾರು ಮಂದಿ ಭಾರತಕ್ಕೆ ವಲಸೆ ಬಂದಿದ್ದರು. (ಆಗ ಬಾಂಗ್ಲಾದೇಶವು ಪೂರ್ವ ಪಾಕಿಸ್ತಾನವಾಗಿತ್ತು.) ಆಗಲೂ ಸಂವಿಧಾನ ಸಭೆಯು ವಲಸಿಗರ ಕುರಿತು ಈಗ ಎತ್ತಲಾಗುತ್ತಿರುವ ಪ್ರಶ್ನೆಗಳನ್ನೂ ಚರ್ಚಿಸಿತ್ತು. ಆ ಕುರಿತ ಕೆಲವು ಕುತೂಹಲಕಾರಿ ವಿವರಗಳು ಇಲ್ಲಿವೆ.

ಕೇವಲ ಹಿಂದೂಗಳು ಮತ್ತು ಸಿಕ್ಖ್ ವಲಸಿಗರಿಗೆ ಮಾತ್ರ ಭಾರತೀಯ ಪೌರತ್ವ ನೀಡಬೇಕು ಎಂದು ಬಲಪಂಥೀಯರು ಬಯಸಿದ್ದರು. ಆದೆ, ಈ ರೀತಿ ಧರ್ಮಾಧರಿತ ಆಯ್ಕೆಗಳನ್ನು ಮಾಡುವುದು ಅನ್ಯಾಯ ಎಂದು ಇನ್ನೂ ಕೆಲವರು ಬಯಸಿದ್ದರು. ಅಷ್ಟಕ್ಕೂ ವಿಭಜನೆಯ ಬಳಿಕ ನಡೆದ ರಕ್ತಸಿಕ್ತ ಹಿಂಸಾಚಾರದಿಂದ ಭಯಗೊಂಡಷ್ಟೇ ವಲಸೆಹೋದ ಮುಸ್ಲಿಮರಿರಬಹುದು. ಅವರು ಎಲ್ಲಾ ಶಾಂತವಾದ ಮೇಲೆ ಮರಳಿ ಬಂದು ಭಾರತೀಯ ಪೌರರಾಗಲು ಬಯಸಿರಬಹುದು.

ಆದರೆ, ಮರಳಿ ಬರಲು ಬಯಸುವ ಮುಸ್ಲಿಮರನ್ನು ಹೊರಗಿಡಬೇಕು ಎಂದು ಕೆಲವರು ಬಯಸಿದ್ದರೆ, ಇಲ್ಲಿ ಬದುಕಲು ಬಯಸುವ ಎಲ್ಲರಿಗೂ ಭಾರತದ ಗಡಿಗಳು ತೆರೆದಿರಬೇಕೆಂದು ಕಾಂಗ್ರೆಸ್ ನಾಯಕ ಬ್ರಿಜೇಶ್ವರ ಪ್ರಸಾದ್ ಅವರಂತವರು ವಾದಿಸಿದ್ದರು. ಮುಸ್ಲಿಮ್ ನಿರಾಶ್ರಿತರು ವಾಸ್ತವದಲ್ಲಿ “ಗೂಢಚಾರ”ರಾಗಿದ್ದು, “ರಾಷ್ಟ್ರೀಯ ಭದ್ರತೆ”ಗೆ ಅಪಾಯವಾಗಬಹುದು ಎಂದು ವಾದಿಸಿದವರೂ ಇದ್ದರು. ಮುಸ್ಲಿಮರ ದೇಶಪ್ರೇಮದ ಮೇಲೆ ಆಗಲೇ ಸಂಶಯದ ಲೇಬಲ್ ಅಂಟಿಸಲಾಗಿತ್ತು.

ಹಿಂದೂ ಬಹುಸಂಖ್ಯಾತವಾದವು ತಲೆಯೆತ್ತಿದರೆ, ಅದು ಭಾರತಕ್ಕೆ ಯಾವುದೇ ಅಲ್ಪಸಂಖ್ಯಾತ ಗುಂಪಿಗಿಂತ ಹೆಚ್ಚಿನ ಅಪಾಯ ಒಡ್ಡಬಹುದು ಎಂಬ ಜವಾಹರಲಾಲ್ ನೆಹರೂ ಅವರ ವಾದನ್ನು ಬ್ರಿಜೇಶ್ವರ ಪ್ರಸಾದ್ ಬೆಂಬಲಿಸಿದ್ದರು. ಮತ್ತೆ ಕೆಲವರು ಮರಳಿ ಬರಬಯಸುವ ಮುಸ್ಲಿಮರನ್ನು ಹಿಂದಕ್ಕೆ ಪಡೆಯುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದೂ ವಾದಿಸಿದ್ದರು.

ಆದರೆ, ಬ್ರಿಜೇಶ್ವರ ಪ್ರಸಾದ್ ಅವರು ಮಾರ್ಮಿಕ ಉತ್ತರ ನೀಡಿ. “ನಾವು ಒಂದು ಅಂಗಡಿ ವ್ಯಾಪಾರಿಗಳ ದೇಶವಲ್ಲ…ಆರ್ಥಿಕ ಪರಿಣಾಮ ಏನೇ ಇದ್ದರೂ, ನಾವು ಕೆಲವು ಕೆಲವು ಆದರ್ಶಗಳ ಮೇಲೆ ನಿಲ್ಲಬಯಸುತ್ತೇವೆ. ಕೆಲವು ನೈತಿಕ ತತ್ವಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಮೂಲಕ ಮಾತ್ರ ದೇಶಗಳು ಪ್ರಗತಿ ಸಾಧಿಸುತ್ತವೆ. ಜೀವನದ ಭೌತಿಕ ಅಭಿವೃದ್ಧಿಯು ಪ್ರಗತಿ ಮತ್ತು ನಾಗರಿಕತೆಯ ಮಾನದಂಡವಲ್ಲ. ಅಗ್ಗದ ಆರ್ಥಿಕತೆಗೆ ಭದ್ರವಾದ ರಾಜಕೀಯ ತತ್ವಗಳನ್ನು ಅಡಿಯಾಳಾಗಿಸುವುದು ರಾಜಕೀಯ ಅಥವಾ ಮುತ್ಸದ್ದಿತನವೆಂದು ನಾನು ಭಾವಿಸುವುದಿಲ್ಲ. ಭಾರತೀಯ ಪ್ರಜೆಯಾಗಿರುವ ಒಬ್ಬ ಮುಸ್ಲಿಮನನ್ನು ಈ ಸಂವಿಧಾನದ ಆರಂಭದೊಂದಿಗೆ ಆತನ ಪೌರತ್ವದಿಂದ ವಂಚಿತಗೊಳಿಸಲು ಯಾವುದೇ ಕಾರಣವೂ ನನಗೆ ಕಾಣುವುದಿಲ್ಲ. ಅದೂ ಕೂಡಾ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳಿಗೆ ಭಾರತೀಯ ಪೌರತ್ವ ಪಡೆಯಲು ನಾವು ಆಹ್ವಾನಿಸುತ್ತಿರುವಾಗ” ಎಂದು ಹೇಳಿದ್ದರು.

ಯುದ್ಧವಿನ್ನೂ ಮುಗಿದಿಲ್ಲ

ಬಹುಸಂಖ್ಯಾತವಾದದ ಪರವಿದ್ದವರು 1948ರಲ್ಲಿ ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ಸೋತಿದ್ದರು. ಆದರೆ, ಜಾತ್ಯತೀತವಾದಿಗಳು ಕೆಲವು ರಾಜಿಗಳನ್ನು ಒಪ್ಪುವಂತೆ ಮಾಡಲು ಅವರು ಸಫಲರಾಗಿದ್ದರು. ಹೀಗಿದ್ದರೂ, ಜನಾಂಗೀಯವಾದದ ವಿಚಾರ ಮತ್ತು ಹೆಚ್ಚು ಪ್ರಜಾಪ್ರಭುತ್ವವಾದಿ ವಿಚಾರಗಳ ನಡುವಿನ ಯುದ್ಧವು ಇನ್ನೂ ಮುಗಿದಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಅಂಗಸಂಸ್ಥೆಗಳಾದ ಭಾರತೀಯ ಜನತಾ ಪಕ್ಷ ಮುಂತಾದವು ಈ ಚರ್ಚೆಯನ್ನು ತಮ್ಮ ಪರವಾಗಿ ಮುಗಿಸಲು ಶ್ರಮಿಸುತ್ತಿವೆ.

ಕೊನೆಗೂ ಪೌರತ್ವ ತಿದ್ದುಪಡಿ ಕಾಯಿದೆಯು ಕೇವಲ ಊರು ದೇಶಗಳ ಮುಸ್ಲಿಮೇತರರಿಗೆ ಪೌರತ್ವ ನೀಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ.  ಅದನ್ನು ಈ ಕಾಯಿದೆ ಇಲ್ಲದೆಯೇ ಮಾಡಬಹುದು. ಭಾರತವು ಕೆಲವರಿಗೆ ಸಹಜ ಮನೆಯಾಗಿದ್ದು, ಮತ್ತೆ ಕೆಲವರು ಇನ್ನೂ ಹೊರಗಿನವರಾಗಿದ್ದಾರೆ ಎಂಬ ಚಿಂತನೆಗೆ ಕಾನೂನು ಮಾನ್ಯತೆ ಒದಗಿಸುವ ಉದ್ದೇಶವನ್ನು ಈ ಕಾಯಿದೆ ಹೊಂದಿದೆ.

ಬಿ.ಆರ್. ಅಂಬೇಡ್ಕರ್ ಅವರ ಭಯವು ನಿಜವಾಗಿದೆ. “ಭಾರತದಲ್ಲಿ ಪ್ರಜಾಪ್ರಭುತ್ವವು ಭಾರತದ ಮಣ್ಣಿನ ಮೇಲಿನ ಮೇಲುಡುಪು ಮಾತ್ರವಾಗಿದೆ‌; ಅದು ಮೂಲಭೂತವಾಗಿ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಅವರು ಹೇಳಿದ್ದರು. “ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ” ಎಂದೂ ಅವರು ಹೇಳಿದ್ದರು.

ಇವತ್ತು ಭವಿಷ್ಯಕ್ಕಾಗಿನ ಹೋರಾಟವನ್ನು ಬೀದಿಗಳಲ್ಲಿ- ದೇಶದಾದ್ಯಂತ ಅನೇಕ ಶಾಹೀನ್‌ ಬಾಗ್‌ಗಳಲ್ಲಿ ನಡೆಸಲಾಗುತ್ತಿದೆ. ಸಂಗೀತ, ಕವಿತೆ, ಚಿತ್ರಗಳು, ಫಲಕಗಳು ಮತ್ತು ಘೋಷಣೆಗಳಿಂದ ಸಜ್ಜಿತ ಮಹಿಳೆಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ಪ್ರತಿಯೊಂದು ಸ್ಥಳವೂ ನಾವು ಸಾಂವಿಧಾನಿಕ ನೈತಿಕತೆಯನ್ನು ಕಲಿಯುವ ಶಾಲೆಯಾಗಿದೆ. ಸಂವಿಧಾನದ ಪೀಠಿಕೆಯನ್ನು ಉಚ್ಛರಿಸುವ, ಪುನರುಚ್ಛರಿಸುವ ಮತ್ತು ವಿಶ್ಲೇಷಿಸುವ ಮೂಲಕ ನಾವು ಸಂವಿಧಾನವು ನಮಗೆ ನೀಡಿರುವುದನ್ನು ಗಳಿಸುತ್ತಿದ್ದೇವೆ. ಅಷ್ಟಕ್ಕೂ ರಸ್ತೆಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುವುದರ ಹೊರತಾಗಿ ಈ ನಿಟ್ಟಿನಲ್ಲಿ ನಿಜವಾದ ಕಲಿಕೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...