Homeಮುಖಪುಟಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಸುದೀಪ್‌ ಸರ್‌ ನಾನು ನಿಮ್ಮ ಅಭಿಮಾನಿ. ಆದರೆ ನೀವು ಮಾಡಿದ ಈ ಕೆಲಸ ಮಾತ್ರ ಜನರನ್ನು ತಪ್ಪು ದಾರಿಗೆ ಎಳೆಯುವಂತದ್ದು...

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್‌ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕರ್ಫೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಭಕ್ತರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ಕೊಲ್ಲುತ್ತದೆ. ಅದೇ ರೀತಿ 132ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದುರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರೀಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್‌ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್‌ ಹಿಂದು ಮುಂದು ನೋಡದೇ ತನ್ನ ಟ್ವಿಟ್ಟರ್‌ನಲ್ಲಿ ಷೇರ್‌ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್‌ ದಯವಿಟ್ಟು ಡಿಲೀಟ್‌ ಮಾಡಿ ಎಂದು ಕಮೆಂಟ್‌ ಹಾಕಿದರು.

 

ಅಲ್ಲ ಸುದೀಪ್‌ ಸರ್‌ “ವೈಜ್ಞಾನಿಕ ತಳಹದಿಯೇ ಇಲ್ಲದೇ ಬೇಕಾದಂತೆ ಹೇಳಿಕೆ ಕೊಟ್ಟಿರೋ ಈ ವ್ಯಕ್ತಿಯ ವಿಡಿಯೋವನ್ನು ಪ್ರಚಾರ ಮಾಡುತ್ತಿರಲ್ಲ ನಿಮಗೇನಾಗಿದೆ ಹೇಳಿ.. ನಮಗೆ ಬೇಕಿರೋದು True Science.. Psuedo Science ಅಲ್ಲ.. ಇಂತಹ ಬೂಟಾಟಿಕೆಯನ್ನು ಮೌಡ್ಯವನ್ನು ದೂರ ತಳ್ಳಿ.. ಅರಿಮೆಯ ಕಡೆ ಸಾಗಿ.. ಎಂದು ಮಲ್ಲಿಕಾರ್ಜುನ್‌ ಬಿ ಕಮೆಂಟ್‌ ಮಾಡಿದ್ದರು.

ಹೆಚ್ಚು ಹಿಂಬಾಲಕರಿರುವ ವ್ಯಕ್ತಿಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು! ನೋಡಿ, ಮೋದಿಯವರು ಹೇಳಿದಂತೆ ಆರೋಗ್ಯ ಕಾರ್ಯಕರ್ತರಿಗೋಸ್ಕರ 5 ದಲ್ಲ 10 ನಿಮಿಷ ಚಪ್ಪಾಳೆ ತಟ್ಟುವ ಬೇಕಾದರೆ! ಆದರೆ ಅದರಿಂದ ವೈರಾಣು ಸಾಯುತ್ತದೆ ಎಂಬುದು ಬುರಡೆ. ದೇವಾಲಯದಲ್ಲಿ ಘಂಟೆ ಬಾರಿಸುವುದು, ಸೇರಿರುವ ಜನರ ಗಮನವನ್ನು ಮಂಗಳಾರತಿಯತ್ತ ಸೆಳೆಯಲು! ಎಂದು ಪ್ರಹ್ಲಾದ ಕೆ ಹನುಮಂತಯ್ಯ ಎಂಬುವವರು ಕಿಡಿಕಾರಿದ್ದಾರೆ.

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎನ್ನುವ ಗಾದೆ ನೆನಪಿಗೆ ಬರುತ್ತಿದೆ ಈ ನಿಮ್ಮ ಮಾತು ಕೇಳಿ… ಹಾಗಾದರೆ ಆಸ್ಪತ್ರೆಯಲ್ಲಿ ಡಾಕ್ಟರ್ ಗಳ ಕೈಯಲ್ಲಿ ಗಂಟೆ ಕೊಟ್ಟುಬಿಡೋಣ, ನರ್ಸ್ ಗಳ ಕೈಯಲ್ಲಿ ಶಂಖಗಳನ್ನು ಕೊಟ್ಟು ಬರೋಣ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

ಮಾನ್ಯ ಸುದೀಪ ಅವರೇ, ನೀವು ನಿಮ್ಮದೇ ಒಂದು ವಿಡಿಯೋ ತುಣುಕು ಮಾಡಿ ಪ್ರಧಾನಿಗಳ ಬೆಂಬಲಕ್ಕೆ ನಿಲ್ಲಬಹುದಿತ್ತು. ಬದಲಿಗೆ ಅವೈಜ್ಞಾನಿಕವಾಗಿ ಎಲ್ಲರ ದಾರಿ ತಪ್ಪಿಸುತ್ತಿರುವ ಇಂತಹವರ ತುಣುಕು ಹಾಕಿ ಅವರನ್ನು ಮುಖ್ಯವಾಹಿನಿಗೆ ತರುವುದಲ್ಲದೇ, ಗಂಟೆಗಳು ಕಳೆದರೂ ಇದನ್ನು ತೆಗೆಯದಿರುವುದು ವಿಪರ್ಯಾಸ. ದಯವಿಟ್ಟು ಇನ್ನೊಮ್ಮೆ ಯೋಚಿಸಿ ವೈಶಾಖ್‌ ಭಾಗೀ ಹೇಳಿದ್ದಾರೆ.

ಇನ್ನು ಮತ್ತೊರ್ವ ಸಾಮಾಜಿಕ ಕಾಳಜಿಯ ನಟ ಚೇತನ್‌, “ಸುದೀಪ್ ಸರ್, ಚಿತ್ರರಂಗದಲ್ಲಿ ನೀವು ಮಾಡಿರುವ ಕೆಲಸಗಳನ್ನು ಮತ್ತು ಸಾಧನೆಗಳನ್ನು ನಾನು ಗೌರವಿಸುತ್ತೇನೆ.. ಅಪ್ಪ, ಅಮ್ಮ ಇಬ್ಬರು ವೈದ್ಯರ ಮಗನಾಗಿ, ವೈದ್ಯರಿಗೆ ಪ್ರತಿಯೊಬ್ಬರು ಗೌರವವನ್ನು ನೀಡಬೇಕಾಗುತ್ತದೆ ಅದನ್ನ ನಾನು ಒಪ್ಪುತ್ತೇನೆ. ಆದರೆ ಈ ರೀತಿಯ ಅವೈಜ್ಞಾನಿಕವಾದಂತಹ ವಿಚಾರಗಳು (‘energy medicine’) ನಮ್ಮನ್ನು ತಪ್ಪುದಾರಿಗೆ ಕರೆದೊಯ್ಯುವುದಲ್ಲದೆ, ಮೌಢ್ಯವನ್ನು ಬಿತ್ತುತ್ತವೆ.. ಕೊರೋನ ವೈರಸ್ ನ ವಿರುದ್ಧ ಹೋರಾಡೋಣ, ವೈಜ್ಞಾನಿಕವಾಗಿ”.. ಎಂದು ಪ್ರತಿಕ್ರಿಯೆ ನೀಡಿದ್ದರು.

ನಂತರ ಚೇತನ್‌ ಮೇಲೂ ಕೆಲವು ಸುದೀಪ್‌ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು. ಇಷ್ಟೆಲ್ಲಾ ಬೆಳವಣಿಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್‌ ಅಭಿಮಾನಿಗಳು ತಮ್ಮ ಸ್ಟಾರ್‌ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‌ ಗೈಡ್‌ ಮಾಡುತ್ತದೆ. ಹಲವಾರು ಜನರು ಸಿನಿಮಾ ಸ್ಟಾರ್‌ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್‌ಗಳನ್ನು ಸ್ಟಾರ್‌ಗಳು ಹಾಕುವುದು ತಪ್ಪು ಎಂದು ಸುದೀಪ್‌ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್‌ ಖಾತೆಯಲ್ಲೇ ರಿಪ್ಲೇ ಟ್ವೀಟ್‌ ಮಾಡಿದ್ದಾರೆ. ಸಧ್ಯಕ್ಕೆ ಸುದೀಪ್‌ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ಇನ್ನು ಸುದೀಪ್‌ ತಮ್ಮ ಟ್ವೀಟ್‌ ಅನ್ನು ಅಳಿಸಿಲ್ಲ. ಆದರೆ ಆ ಟ್ವೀಟ್‌ನಲ್ಲಿ ಆ ಹುಡುಗಿ ಮಾತನಾಡಿರುವ ಕೊನೆಯ 44 ಸೆಕೆಂಡ್‌ ವಿಡಿಯೋ ಮಾತ್ರ ಕಾಣುತ್ತಿದೆ. ಆ ಹುಡುಗಿ ಮಾತನಾಡಿರುವುದು 2.12 ನಿಮಿಷವಾಗಿದೆ. ಒಟ್ಟಿನಲ್ಲಿ ಈ ಫೇಕ್‌ ಸುದ್ದಿಗಳ ಮಾಯಾಜಾಲಕ್ಕೆ ಸ್ಟಾರ್‌ ನಟರು ಬಲಿಯಾಗುವುದು ದುರಂತವಾಗಿದೆ.

ಆಕೆಯ ಪೂರ್ತಿ ಸುಳ್ಳು ಭಾಷಣ ಇಲ್ಲಿದೆ ನೋಡಿ.

ಇದನ್ನು ಕೇಳಿದ ತಕ್ಷಣವೇ ಕೊರೊನಾ‌ ಓಡಿ ಹೋಗಿದೆ. ಅಜ್ಞಾನವೇ ಆಳುತ್ತಿರುವಾಗ ವಿಜ್ಞಾನದ ಚರ್ಚೆ‌ ಅಪರಾಧ..

Posted by Vasu Hv on Friday, March 20, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...