Homeಮುಖಪುಟಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ...!!

ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!

- Advertisement -
- Advertisement -

ಖಾಸಗಿ ಪ್ರಯೋಗಾಲಯಗಳಲ್ಲಿ ಕೊರೊನ ವೈರಸ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಪ್ರತೀ ಕೊರೊನ ಪರೀಕ್ಷೆಗೆ ಗರಿಷ್ಠ ಶುಲ್ಕ 4,500 ರೂ ಮೀರಬಾರದು ಎಂದು ಸರ್ಕಾರ ಶಿಫಾರಸು ಮಾಡಿದೆ.

PCR SA ಗೆ NABL ಮಾನ್ಯತೆ ಹೊಂದಿರುವ ಎಲ್ಲಾ ಖಾಸಗಿ ಪ್ರಯೋಗಾಲಯಗಳಿಗೆ ಕೊರೊನ ವೈರಸ್ ಪರೀಕ್ಷೆಗಳನ್ನು ನಡೆಸಲು ಅನುಮತಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಪರೀಕ್ಷೆಗೆ ಗರಿಷ್ಠ ವೆಚ್ಚ 4,500 ರೂ ಮೀರಬಾರದು ಎಂದು ರಾಷ್ಟ್ರೀಯ ಕಾರ್ಯಪಡೆ ಶಿಫಾರಸು ಮಾಡಿದೆ. ಇದರಲ್ಲಿ ಶಂಕಿತ ಪ್ರಕರಣಗಳಿಗೆ ಸ್ಕ್ರೀನಿಂಗ್ ಪರೀಕ್ಷೆಯಾಗಿ 1,500 ರೂ. ಮತ್ತು ದೃಡೀಕರಣ ಪರೀಕ್ಷೆಗೆ ಹೆಚ್ಚುವರಿ 3,000 ರೂಗಳನ್ನು ಒಳಗೊಂಡಿರಬಹುದು ಎಂದು ಮಾರ್ಗಸೂಚಿಗಳು ತಿಳಿಸಿವೆ. ಆದರೂ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಉಚಿತ ಅಥವಾ ಸಬ್ಸಿಡಿ ಪರೀಕ್ಷೆಯನ್ನು ಪ್ರೋತ್ಸಾಹಿಸುತ್ತದೆ ಎಂದು ಮಾರ್ಗಸೂಚಿಗಳು ತಿಳಿಸಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸಲು ವಿಫಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮಾದರಿ ಸಂಗ್ರಹಣೆ ಮತ್ತು ಪರೀಕ್ಷೆಯ ಮಾರ್ಗಸೂಚಿಗಳ ಪ್ರಕಾರ, ರೋಗಿಯಿಂದ ಉಸಿರಾಟದ ಮಾದರಿಗಳನ್ನು ಸಂಗ್ರಹಿಸುವಾಗ ಸೂಕ್ತವಾದ ಜೈವಿಕ ಸುರಕ್ಷತೆ ಮುನ್ನೆಚ್ಚರಿಕೆಗಳನ್ನು ಖಚಿತಪಡಿಸಿಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಕರೆ ನೀಡಿದೆ.

ಕೊರೊನ ವೈರಸ್ ಪರೀಕ್ಷೆಯಲ್ಲಿ ತೊಡಗಿರುವ ಎಲ್ಲಾ ಪ್ರಯೋಗಾಲಯ ಸಿಬ್ಬಂದಿಗೆ ಉತ್ತಮ ಪ್ರಯೋಗಾಲಯಗಳಲ್ಲಿ ಸೂಕ್ತ ತರಬೇತಿ ನೀಡಬೇಕು ಮತ್ತು ನೈಜ-ಸಮಯದ PCR ನಿರ್ವಹಿಸಬೇಕು. ಎಲ್ಲಾ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ರಾಷ್ಟ್ರೀಯ ಮಾರ್ಗಸೂಚಿಗಳ ಪ್ರಕಾರ ವಿಲೇವಾರಿ ಮಾಡಬೇಕು. ಕೊರೊನ ವೈರಸ್ ಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾರ್ಗಸೂಚಿಗಳ ಪ್ರಕಾರ ಅರ್ಹ ವೈದ್ಯರಿಂದ ಶಿಫಾರಸು ಮಾಡಿದಾಗ ಮಾತ್ರ ಪ್ರಯೋಗಾಲಯ ಪರೀಕ್ಷೆಯನ್ನು ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವರದಿ ಮಾಡುವ ಪ್ರೋಟೋಕಾಲ್‌ಗಳಿಗೆ ಸಂಬಂಧಿಸಿದಂತೆ, ಯಾವುದೇ ಪ್ರಯೋಗಾಲಯವು ತನ್ನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ಪರೀಕ್ಷಾ ಫಲಿತಾಂಶಗಳ ತಕ್ಷಣದ/ನೈಜ-ಸಮಯದ ವರದಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಪ್ರಧಾನ ಕಚೇರಿಯ ದತ್ತಾಂಶ ನೆಲೆಗೆ ಸಂಪರ್ಕ ವಿವರಗಳೊಂದಿಗೆ ಖಚಿತಪಡಿಸಿಕೊಳ್ಳಬೇಕು ಎಂದು ಮಾರ್ಗಸೂಚಿಗಳು ತಿಳಿಸಿವೆ.

ಪ್ರತಿ ಪ್ರಯೋಗಾಲಯಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನೋಂದಣಿ ಸಂಖ್ಯೆಯನ್ನು ನೀಡಲಾಗುವುದು, ಯಾವುದೇ ಜಾಹೀರಾತು ನೀಡಿದರೆ ಅದಲ್ಲಿಯೂ ಅದನ್ನು ಪ್ರಮುಖವಾಗಿ ಪ್ರದರ್ಶಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...