Homeಮುಖಪುಟಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

- Advertisement -
- Advertisement -

ಜಗತ್ತನ್ನೇ ನಿಬ್ಬೆರಗುಗೊಳಿಸಿರುವ ಕೊರೊನಾ ವೈರಸ್, ಶೇರು ಮಾರುಕಟ್ಟೆಯ ಗೂಳಿಯನ್ನೇ ಅಲುಗಾಡಿಸಿದೆ. ದಿನ ಕಳೆದಂತೆ ಕೊರೊನಾ ವೈರಸ್ ಮೇಲಿನ ಆತಂಕ ಹೆಚ್ಚಾಗುತ್ತಲೇ ಇದೆ. ಭಾರತದಲ್ಲೂ ಅಘೋಷಿತ ತುರ್ತುಪರಿಸ್ಥಿತಿ ರೀತಿಯ ಸಂದರ್ಭ ನಿರ್ಮಾಣವಾಗಿದೆ. ಮಾಲ್‍ಗಳು, ಥಿಯೇಟರ್‍ಗಳು, ಹೋಟೆಲ್‍ಗಳನ್ನು ಬಂದ್ ಮಾಡಲಾಗಿದ್ದು, ಸಭೆ-ಸಮಾರಂಭಗಳುನ್ನು ರದ್ದುಗೊಳಿಸಲಾಗಿದೆ. ಔದ್ಯೋಗಿಕ ಕ್ಷೇತ್ರವೂ ಕುಸಿದಿದ್ದು, ಕೆಲವೆಡೆ ರಜೆ ಘೋಷಿಸಲಾಗಿದ್ದರೆ, ಕೆಲವೆಡೆ ಹಲವರು ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ದಿನಗೂಲಿ ಕೆಲಸ ಮಾಡುವವರಿಗೆ ತಮ್ಮ ಬದುಕನ್ನೇ ಕಳೆದುಕೊಂಡಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಕೆಲವು ರಾಜ್ಯಗಳ ಸರ್ಕಾರಗಳು ಅಂತಹ ಜನರಿಗೆ ಪಡಿತರ ಆಹಾರ, ಉಚಿತ ಊಟಗಳಂತಹ ಕೆಲವು ತುರ್ತು ಕೆಲಸಗಳನ್ನು ಮಾಡುತ್ತಿವೆ.

ಕೊರೊನಾ ವೈರಸ್ ಪ್ರಭಾವ ಸಿನಿಮಾ ಕ್ಷೇತ್ರವನ್ನೇನೂ ಬಿಟ್ಟಿಲ್ಲ. ಸಿನಿಮಾ ಚಿತ್ರೀಕರಣದ ಮೇಲೆ ನಿರ್ಬಂಧ ಹೇರಲಾಗಿದೆ. ಮಾಲ್/ಥಿಯೇಟರ್‍ಗಳು ಬಂದ್ ಆಗಿರುವುದರಿಂದ ಸಿನಿಮಾ ಪ್ರದರ್ಶನಗಳು ನಿಂತಿವೆ. ಹೊರ ದೇಶಗಳಲ್ಲಿ ಚಿತ್ರೀಕರಣಕ್ಕೆ ಹೋಗಿದ್ದ ಹಲವಾರು ಸ್ಟಾರ್‍ಗಳು ದೇಶಕ್ಕೆ ಹಿಂದಿರುಗಿದ್ದಾರೆ. ಕೆಲವರು ಸ್ವಗೃಹ ಬಂಧನಕ್ಕೆ ಒಳಗಾಗಿದ್ದಾರೆ.ಆದರೆ, ಬಾಲಿವುಡ್‍ನ ಗಾಯಕಿ ಕನಿಕಾ ಕಪೂರ್ ಅವರು ಲಂಡನ್‍ನಿಂದ ಹಿಂದಿರುಗಿದ್ದು, ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆಗೂ ಒಳಪಡದೆ ಕೆಲವು ಕಾರ್ಯಕ್ರಮಗಳಲ್ಲಿ ಓಡಾಡಿ ಜನರನ್ನು ಮತ್ತಷ್ಟು ಪೀಕಲಾಟಕ್ಕೆ ಸಿಕ್ಕಿಸಿದ್ದಾರೆ. ಕನಿಕಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ್ದರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಯವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.

ಸಿನಿಮಾ ಶೂಟಿಂಗ್ ಇಲ್ಲದೆ ಖಾಲಿ ಕುಳಿತಿರುವ ಕೆಲವು ಸ್ಟಾರ್‍ಗಳು ಕೊರೊನಾ ಸುತ್ತಾ ಆರೆಸ್ಸೆಸ್ ಫೇಕ್ ಫ್ಯಾಕ್ಟರಿಯಿಂದ ಹರಿಬಿಡಲಾಗಿದ್ದ ಸುಳ್ಳು ಮಾಹಿತಿಗಳನ್ನು ವಿಶ್ಲೇಷಣೆಯನ್ನೂ ಮಾಡದೇ ಶೇರ್ ಮಾಡಿದ್ದಾರೆ. ಅವರಲ್ಲಿ ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಎಂದು ಖ್ಯಾತಿ ಪಡೆದಿರುವ ಸುದೀಪ್ ಕೂಡ ಒಬ್ಬರು. ಸುದೀಪ್ ಫೇಕ್‍ನ್ಯೂಸ್ ಶೇರ್ ಮಾಡಿರುವುದನ್ನು ಅಭಿಮಾನಿಗಳೂ ತೀಕ್ಷ್ಣವಾಗಿ ವಿರೋಧಿಸಿದ್ದಾರೆ. ಮತ್ತೆ ಕೆಲವರು ಗಂಟೆ-ಜಾಗಟೆ-ಚಪ್ಪಾಳೆ ಬಾರಿಸಿಕೊಂಡು ಕುಳಿತಿದ್ದಾರೆ. ಚಪ್ಪಾಳೆ ಬಾರಿಸುವುದರಿಂದ ಕೊರೊನಾ ನಾಶವಾಗುವುದಿಲ್ಲ ಹಾಗೂ ವೈದ್ಯರಿಗಾಗಿ ಚಪ್ಪಾಳೆ ಬಾರಿಸುವ ಸಮಯವೂ ಇದಲ್ಲ, ವೈದ್ಯರು ಕಾರ್ಯನಿರ್ವಹಿಸಲು ಬೇಕಿರುವ ಅಗತ್ಯ ಮೆಡಿಕಲ್ ಮೆಟಿರಿಯಲ್‍ಗಳನ್ನು ಒದಗಿಸಬೇಕು. ಇದಕ್ಕಾಗಿ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಥವಾ ತಾವೂ ನೆರವಾಗಬೇಕು ಎಂಬ ಸಾಮಾನ್ಯ ಜ್ಞಾನವೂ ಇವರಿಗಿಲ್ಲದಿರುವುದು ಅಭಿಮಾನಿಗಳ ದೌರ್ಭಾಗ್ಯ.

ಸಿನಿಮಾ ಸ್ಟಾರ್‍ಗಳ ಇಂತಹ ಹುಚ್ಚಾಟ-ಪೀಕಲಾಟಗಳ ನಡುವೆ ಸಿನಿಮಾ ನಿರ್ಮಾಪಕರು ಕಂಗಾಲಾಗಿ ಕುಳಿತಿದ್ದಾರೆ. ಅಪಾರ ದುಡ್ಡು ಸುರಿದು ಸಿನಿಮಾ ಮಾಡಿ, ಬಿಡುಗಡೆ ಮಾಡಿದ್ದ ಸಿನಿಮಾಗಳು ಬಿಡುಗಡೆಯಾದ ಎರಡು ಮೂರು ದಿನಕ್ಕೆ ಥಿಯೇಟರ್‍ಗಳ ಮೇಲಿನ ನಿರ್ಬಂಧದಿಂದಾಗಿ ಪ್ರದರ್ಶನವಾಗದೇ ಉಳಿದುಹೋಗಿವೆ. ಕಳೆದ ಎರಡು ವಾರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದ ಸಿನಿಮಾಗಳ ಬಿಡುಗಡೆಯ ದಿನಾಂಕ ಮುಂದೆ ಹೋಗಿವೆ. ಆದರೂ ಒಂದು ವಾರಕ್ಕೆ ಒಂದೇ ಇಂಡಸ್ಟ್ರಿಯ 10 ರಿಂದ 20 ಸಿನಿಮಾಗಳು ಥಿಯೇಟರ್ ಮುಂದೆ ಸಾಲುಗಟ್ಟಿ ನಿಲ್ಲುವ ಇಂದಿನ ವರ್ಷಗಳಲ್ಲಿ ರಿಲೀಸಿಂಗ್ ಡೇಟ್ ಮುಂದೂಡಲಾಗಿರುವ ಸಿನಿಮಾಗಳು ಬಿಡುಗಡೆಯ ನಂತರದ ದಿನಗಳ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ.

ಇನ್ನು ಈಗಾಗಲೇ ಬಿಡುಗಡೆಯಾಗಿರುವ ದೊಡ್ಡ ಬಜೆಟ್‍ನ ಸಿನಿಮಾಗಳಾದ ಭಾಗಿ-3, ತಪ್ಪಡ್, ಅಂಗ್ರೈಸ್, ದ್ರೋಣ, ಶಿವಾರ್ಜುನಗಳಂತಹ ಸಿನಿಮಾಗಳು ರಿಲೀಸ್‍ಆದ ಮೂರ್ನಾಲ್ಕು ದಿನಗಳಿಗೆ ಥಿಯೇಟರ್‍ಗಳು ಮುಚ್ಚಿದ್ದರಿಂದ ಭಾರಿ ಹೊಡೆತಕ್ಕೆ ಸಿಕ್ಕಿಕೊಂಡಿವೆ. ಸಿನಿಮಾ ನಿರ್ಮಾಣಕ್ಕೆ ಹಾಕಿದ್ದ ಬಂಡವಾಳವೂ ವಾಪಸ್ ಬರುವಂತೆ ಕಾಣುತ್ತಿಲ್ಲ. ಥಿಯೇಟರ್‍ಗಳ ಮೇಲಿನ ಬಂದ್ ತೆರವುಗೊಳಿಸಿದ ನಂತರವೂ ಹೊಸ ಸಿನಿಮಾಗಳು ಥಿಯೇಟರ್‍ಗಳ ಬಾಗಿಲು ಬಡಿಯುವುದರಿಂದ ಈಗಾಗಲೇ ರಿಲೀಸ್ ಆಗಿರುವ ಸಿನಿಮಾಗಳು ಮತ್ತೆ ಹಿಟ್ ಲಿಸ್ಟ್‍ನಲ್ಲಿ ಓಡುತ್ತವೆ ಎಂಬ ನಿರೀಕ್ಷೆಯನ್ನು ನಿರ್ಮಾಪಕರೂ ಇಟ್ಟುಕೊಂಡಿಲ್ಲ.

ಕಳೆದ 15 ದಿನಗಳಿಂದ ಚಿತ್ರೋದ್ಯಮ ಕಂಪ್ಲೀಟ್ ಲಾಕ್‍ಡೌನ್ ಆಗಿದೆ. ಸಿನಿಮಾಕ್ಷೇತ್ರದ ವಹಿವಾಟು ಸ್ತಬ್ಧಗೊಂಡಿದೆ. ಅಲ್ಲದೆ, ಕಿರುತೆರೆಯ ಸೀರಿಯಲ್‍ಗಳ ಕಥೆಗಳು ವ್ಯಥೆಗಳಾಗಿವೆ. ಎಪಿಸೋಡ್‍ಗಳಿಗೆ ಬೇಕಿರುವಷ್ಟು ಚಿತ್ರೀಕರಣವನ್ನು ಕೆಲವು ಸೀರಿಯಲ್‍ಗಳ ನಿರ್ಮಾಪಕ-ನಿರ್ದೇಶಕರು ಸಿದ್ಧತೆ ಮಾಡಿಕೊಳ್ಳದ ಕಾರಣದಿಂದಾಗಿ ಕಣ್-ಕಣ್ ಬಿಡುತ್ತಿದ್ದಾರೆ. ಕೆಲವು ಸೀರಿಯಲ್ ಎಪಿಸೋಡ್‍ಗಳಲ್ಲಿ ಧಾರಾವಾಹಿಗಿಂತ ಹೆಚ್ಚು ಸಮಯ ಜಾಹೀರಾತುಗಳೇ ರಾರಾಜಿಸುತ್ತಿವೆ. ಜಾಹಿರಾತುಗಳನ್ನು ತುಂಬಿಸಿ ಸೀರಿಯಲ್‍ಗಳನ್ನು ಒಂದಷ್ಟು ದಿನಗಳ ಮಟ್ಟಿಗೆ ಎಳೆಯಲು ಶುರುಮಾಡಿಕೊಂಡಿದ್ದಾರೆ.

ಇದೆಲ್ಲದರ ಮಧ್ಯೆ, ರಿಯಾಲಿಟಿ ಶೋಗಳು ನಮಗೂ-ಕೊರೊನಾಗೂ ಸಂಬಂಧವೇ ಇಲ್ಲ. ಅದರಿಂದ ನಮಗಾವ ಸಮಸ್ಯೆಯೂ ಇಲ್ಲವೆಂಬಂತೆ ತಮ್ಮ ಶೋ, ಶೂಟಿಂಗ್‍ಗಳನ್ನು ಆರಾಮಾಗಿ ಮಾಡಿಕೊಂಡು ಹೋಗುತ್ತಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 22ರಂದು ದೇಶದಾದ್ಯಂತ ಜನತಾಕಫ್ರ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕಫ್ರ್ಯೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‍ಗಳನ್ನು ಕೊಲ್ಲುತ್ತದೆ. ಅದೇರೀತಿ 132 ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರಿಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್ ಹಿಂದುಮುಂದು ನೋಡದೇ ತನ್ನ ಟ್ವಿಟ್ಟರ್‍ನಲ್ಲಿ ಶೇರ್ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್ ದಯವಿಟ್ಟು ಡಿಲೀಟ್ ಮಾಡಿ ಎಂದು ಕಮೆಂಟ್ ಹಾಕಿದರು.

ನಟ ಚೇತನ್, ಇದು ಸುಳ್ಳುಸುದ್ದಿ, ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ನಾನು ವೈದ್ಯರ ಮಗನಾಗಿದ್ದು, ವೈದ್ಯ ಸಮೂಹದ ಮೇಲೆ ಗೌರವವಿದೆ. ಆದರೆ ಇಂತಹ ಅವೈಜ್ಞಾನಿಕ ಮಾಹಿತಿಯನ್ನು ಹಂಚಿಕೊಳ್ಳುವುದು ಜನರನ್ನು ಮೌಢ್ಯಕ್ಕೆ ತಳ್ಳಿದಂತಾಗುತ್ತದೆ ಎಂದು ರಿಪ್ಲೇ ಮಾಡಿದ್ದರು.

ನಂತರ ಚೇತನ್ ಮೇಲೂ ಕೆಲವು ಸುದೀಪ್ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು.ಇಷ್ಟೆಲ್ಲಾ ಬೆಳವಣಿಗೆಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್ ಅಭಿಮಾನಿಗಳು ತಮ್ಮ ಸ್ಟಾರ್ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‍ಗೈಡ್ ಮಾಡುತ್ತದೆ. ಹಲವಾರು ಜನರು ಸಿನಿಮಾಸ್ಟಾರ್‍ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್ಗಳನ್ನು ಸ್ಟಾರ್‍ಗಳು ಹಾಕುವುದು ತಪ್ಪು ಎಂದು ಸುದೀಪ್‍ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್ ಖಾತೆಯಲ್ಲೇ ರಿಪ್ಲೇಟ್ವೀಟ್ ಮಾಡಿದ್ದಾರೆ.ಸದ್ಯಕ್ಕೆ ಸುದೀಪ್ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...