Homeಮುಖಪುಟಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

- Advertisement -
- Advertisement -

ಒಂದಾನೊಂದು ಕಾಲದಾಗ ಜಾನ್ ಕೆನಡಿ ಅಂತ ಒಬ್ಬರು ಇದ್ದರು. ಅವರು ಅಮೆರಿಕದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಸಣ್ಣ ಜೀವನ ಕಾಲದಾಗ ಅನೇಕ ಒಳ್ಳೆ ಕೆಲಸ ಮಾಡಿದರು.

ಅವರು 1960ರೊಳಗ ತಮ್ಮ 43ನೇ ವಯಸ್ಸಿಗೆ ಅಧ್ಯಕ್ಷೀಯ ಚುನಾವಣೆ ಗೆದ್ದು ಅತಿಕಮ್ಮಿ ವಯಸ್ಸಿನ ಅಧ್ಯಕ್ಷ ಅಂತ ಅಮೆರಿಕದ ಇತಿಹಾಸದಾಗ ದಾಖಲು ಮಾಡಿದರು. ಆರ್ಥಿಕ ಹಿಂಜರಿಕೆಯಿಂದ ಹೊಡೆತ ತಿಂದಿದ್ದ ಅಮೆರಿಕಾವನ್ನು ಬೆಳವಣಿಗೆಯ ದಾರಿಯೊಳಗ ದೂಡಿದರು. ವಿಶ್ವಾದ್ಯಂತ ಶಾಂತಿ ಹಾಗೂ ಅಭಿವೃದ್ಧಿ ಸ್ಥಾಪಿಸಲಿಕ್ಕೆ ಪೀಸ್‍ಕೋರ್ ಅನ್ನೋ ಸಂಸ್ಥೆ ಸುರು ಮಾಡಿದರು. ರಷಿಯಾ ಒಕ್ಕೂಟದ ಅಧ್ಯಕ್ಷ ಕ್ರುಷೇವ ಅವರ ಜೊತೆಗೆ ಶಾಂತಿ ಒಪ್ಪಂದ ಸಹಿ ಮಾಡಿ ಪರಮಾಣು ಯುದ್ಧ ತಪ್ಪಿಸಿದರು. ನಿರುದ್ಯೋಗಿಗಳಿಗೆ ಭತ್ಯೆ, ಕೌಶಲ್ಯ ತರಬೇತಿ ಮುಂತಾದ ಯೋಜನೆಗಳನ್ನು ಆರಂಭ ಮಾಡಿದರು. ಕರಿಯರು ಹೆಚ್ಚಾಗಿ ಇದ್ದ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು, ಕರಿಯರ ಶಿಕ್ಷಣದ ಸಲುವಾಗಿ ತೆರೆಯಲಾದ ವಿಶೇಷ ಕಾಲೇಜುಗಳನ್ನು ಬೆಳೆಸಲು ಅನುದಾನ ನೀಡಿದರು. ಮಹಿಳಾ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯ ಅನುವಾಗಿ ಹೆಚ್ಚಿನ ಕೂಲಿ ಸಿಗುವಂತೆ ಕಾನೂನು ಮಾಡಿದರು, ಇತ್ಯಾದಿ.

ಜಾನ್ ಕೆನಡಿ

ತಮ್ಮ ಚುನಾವಣೆಯ ಗೆಲುವನ್ನು ಅವರು ಇದು `ಒಂದು ಪಕ್ಷದ ಗೆಲುವು ಅಲ್ಲ. ಸ್ವಾತಂತ್ರ್ಯದ ಉತ್ಸವ’ ಅಂತ ಬಣ್ಣಿಸಿದರು. ಇದು ಮನುಷ್ಯರೆಲ್ಲರ ಉತ್ಥಾನದ ಅವಕಾಶದ ದಾರಿ. ಎಲ್ಲ ರೀತಿಯ ಬಡತನವನ್ನೂ, ಗುಲಾಮಗಿರಿಯನ್ನು ತೊಡೆದುಹಾಕುವ ಅವಕಾಶ ಈಗ ನಮ್ಮ ಮುಂದೆ ಇದೆ ಎಂದವರು. ಆದರ ಅವರ ಒಂದು ಮಾತು ಭಾಳ ಫೇಮಸ್ಸು. ಅದು ನಮಗೆಲ್ಲರಿಗೂ ಗೊತ್ತು. ನಿಮಗಾಗಿ ಈ ದೇಶ ಏನು ಮಾಡುತ್ತದೆ ಎಂದು ಕೇಳಬೇಡಿ. ನೀವು ನಿಮ್ಮ ದೇಶಕ್ಕಾಗಿ ಏನು ನೀಡಬಲ್ಲಿರಿ ಎನ್ನುವುದನ್ನು ಕೇಳಿಕೊಳ್ಳಿರಿ.

ಅವರ ವಿಚಾರಗಳನ್ನು, ಸಿದ್ಧಾಂತಗಳನ್ನು ಮನಸೋ ಇಚ್ಛೆ ಪಾಲಿಸುವವರಿಗೆ ಕೆನಡಿಯನ್ ಅಂತ ಕರೀತಾರ. ಹಂಗಂದರ ಕೆನಡಾದಿಂದ ಬಂದವರು ಅಂತ ಅಲ್ಲ. ಜಾನ್ ಕೆನಡಿಯವರ ವಿಚಾರಗಳನ್ನ, ಕಾರ್ಯಕ್ರಮ- ಯೋಜನೆಗಳನ್ನು ಒಪ್ಪಿಕೊಂಡು ನಡೆಯುವವರು ಅಂತ. ಈಗಿನ ನಮ್ಮ ನಾಯಕರನ್ನು ಕೆನೆಡಿಯನ್ ಅಂತ ಕರೀಬಹುದು ಅಂತೀರೇನು?

ಒಂದು ರೀತಿಯಿಂದ ಅನಬಹುದೋ ಏನೋ. ಅದು ಏನಪಾ ಅಂದರ `ನೀವು ದೇಶಕ್ಕೆ ಏನು ಮಾಡಬಲ್ಲಿರಿ’ ಅನ್ನೋ ಮಾತು. ಇಡೀ ಜಗತ್ತಿನ 177 ದೇಶಗಳಲ್ಲಿ ಈ ಕೊರೊನಾ ವ್ಯಾಧಿ ಹೊಡಕೊಂಡದ. ದೊಡ್ಡ ಸಾಹುಕಾರ ಟ್ರಂಪಣ್ಣನವರಿಂದಾ ಹಿಡಕೊಂಡು ಸಣ್ಣಂಗಡಿ ಶೆಟ್ಟರಾದ ಉಗಾಂಡಾದ ಯಾವೋರಿ ಮುಸೇವಿನಿ ಅವರ ತನಕಾ ಎಲ್ಲಾರೂ ಜನರಿಗೆ `ಹಿಂಗ ಮಾಡರಿ, ಹಂಗ ಮಾಡರಿ, ಹಂಗಂತ ಹಂಗ ಮಾಡಬ್ಯಾಡ್ರಿ’ ಅಂತ ಹೇಳಲಿಕ್ಕೆ ಹತ್ಯಾರ. ಯಾರೂ ನಿಮ್ಮ ಸಲುವಾಗಿ ನಾವು ಏನು ಮಾಡತೇವಿ ಅನ್ನೋದನ್ನ ಹೇಳಲಿಕ್ಕೆ ಒಲ್ಲರು. ಊರು ಮುಂದಿನ ಹಣಮಂತನದೇವರ ಗುಡಿ ಸ್ವಾಮಿ ವಾರಕ್ಕೊಮ್ಮೆ ನೀತಿಪಾಠ ಹೇಳಿದಂಗ ಅವರು ಹೇಳಲಿಕ್ಕೆ ಹತ್ಯಾರ.

ಅವರು ಹೇಳಿದ್ದನ್ನ ನಾವು ಜೀ ಹುಜೂರ್ ಅಂತ ಕೇಳಲಿಕ್ಕೆ ಹತ್ತೇವಿ. ತಿರುಗಿ ಮಾತನಾಡಲಿಕ್ಕೆ ಹತ್ತಿಲ್ಲ. ಪ್ರಶ್ನೆ ಕೇಳಲಿಕ್ಕೆ ನಮಗ ಬರಂಗಿಲ್ಲ.

ಉದಾಹರಣೆಗೆ ಮಹಾಮಹಿಮ ಪ್ರಧಾನಿಗಳು ನೀವು ಕಫ್ರ್ಯೂ ಪಾಲಿಸಿರಿ, 14 ತಾಸು ಹೊರಗ ಬರಬ್ಯಾಡ್ರಿ, ಗಾಡಿ ಓಡಸಬ್ಯಾಡ್ರಿ, ಏನೂ ಖರೀದಿ ಮಾಡಬ್ಯಾಡ್ರಿ, ಒಬ್ಬರಿಗೊಬ್ಬರು ಮಾತು ಆಡಬ್ಯಾಡ್ರಿ, ಇತ್ಯಾದಿ ಇತ್ಯಾದಿ ಅಂತ ಫರಮಾನು ಹೊರಡಿಸಿದಾಗ, ನಾವು ಸುಮ್ಮನೇ ಇದ್ದಿವಿ. ಬೆಂದಕಾಳೂರಿನ ದಂಡಾಧಿಕಾರಿಗಳು ಹೊರಗ ಬಂದರ ಕೇಸು ಹಾಕತೇವಿ ಅಂದರು. ಅವಾಗನೂ ಸುಮ್ಮನೇ ಇದ್ದೆವಿ. ಸಂಜೀಕೆ ಐದಕ್ಕ ಮನೀ ಬಾಲ್ಕನಿಯೊಳಗ ಹೋಗಿ ಚಪ್ಪಾಳೆ ಹೊಡಿಯಿರಿ ಅಂದರ ನಾವು ಶಂಖ, ಜಾಗಟೆ, ತಾಳ, ಡಮರು, ತಾಟು, ತಂಬಿಗಿ ಎಲ್ಲಾನೂ ಬಾರಿಸಿದಿವಿ. ಗುಂಪು ಕಟಿಗೋಬ್ಯಾಡ್ರಿ ಅಂತ ಅವರು ಹೇಳಿದರ ನಾವು ಚಪ್ಪಾಳೆ ಹೊಡೆಯೋ ಪವಿತ್ರ ಕಾರ್ಯಕ್ಕಾಗಿ ಗುಂಪು ಕಟ್ಟಿಕೊಂಡು ಬಿಟ್ಟಿವಿ. ಅದು ಬ್ಯಾರೆ ಮಾತು.

ನಮ್ಮ ಪಂತ ಪ್ರಧಾನರು ನೀವು ಹಿಂಗ ಮಾಡ್ರಿ ಅಂದರು ಆದರ ನಾವು ಏನು ಮಾಡತೇವಿ ಅಂತ ಹೇಳಲಿಲ್ಲ. ಒಂದು ತಾಸು ಭಾಷಣ ಮಾಡಿದರೂ ಸಹಿತ ಕೊರೊನಾ ವಿರುದ್ಧ ಸರಕಾರದ ಯೋಜನೆಗಳು ಏನು ಅನ್ನೋದು ಬಾಯಿ ಬಿಡಲಿಲ್ಲ.

ಹಂಗಾರ ಅವರು ಏನು ಹೇಳಬಹುದಿತ್ತು?-
ಈ ವಿಪತ್ತನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಅದರ ಪರಿಹಾರಕ್ಕ ಏನೇನು ಮಾಡಬಹುದು ಅಂತ ತಿಳಿಸಬಹುದಿತ್ತು. ಆದರ ಅವರು ಅದನ್ನು ಹೇಳಲಿಲ್ಲ. ಚುನಾವಣೆ ರಣತಂತ್ರಜ್ಞ ಪ್ರಶಾಂತ ಕಿಶೋರ ಅವರು ಮೋದಿ ಅವರು ಯಾವ ಕೆಟ್ಟ ಸುದ್ದಿಯನ್ನೂ ಕೊಡಬಾರದು. ಅವರು ಯಾವಾಗಲೂ ಬರೇ ಒಳ್ಳೆ ಸುದ್ದಿ ಕೊಡಬೇಕು ಅಂತ ಹೇಳಿಕೊಟ್ಟಿದ್ದರಂತ. ಇವರು ಅದನ್ನು ಚುನಾವಣೆ ಮುಗದ ಮ್ಯಾಲನೂ ಪಾಲಸಲಿಕ್ಕೆ ಹತ್ಯಾರ.

ಇದಕ್ಕ ಎಷ್ಟು ರೊಕ್ಕ ಇಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಗಿಂತ ಮುಂಚೆ ಹಣಕಾಸಿನ ಮಾತು ಹಗಲೆಲ್ಲಾ ಆಡಿದ ಮೋದಿ ಅವರು ಈಗ ಮಾತಾಡವಲ್ಲರು.

ಅದಕ್ಕೊಂದು ವಿಶೇಷ ತಂಡ ಕಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಕಾರ್ಯಕ್ಕೆ, ಪಕ್ಕದ ಕೆಲಸಕ್ಕೆ ತಂಡ ಕಟ್ಟೋರು ವಿಪತ್ತಿನ ನಿರ್ವಹಣೆಗೆ ಕಟ್ಟತಾರೋ ಇಲ್ಲವೋ, ಗೊತ್ತಿಲ್ಲ.

ಅದರ ಸಲುವಾಗಿ ಒಂದು ಆಸ್ಪತ್ರೆ, ಸಂಶೋಧನಾ ಕೇಂದ್ರ, ಪ್ರಯೋಗಾಲಯ ಇತ್ಯಾದಿ ಮೀಸಲು ಇಡತೇವಿ, ಹೊಸದಾಗಿ ಆರಂಭ ಮಾಡತೇವಿ ಅಂತ ಅನ್ನಬಹುದಿತ್ತು. ಅದನ್ನು ಅನ್ನಲಿಲ್ಲ. ರವಾಂಡಾ, ಸಿಯಾರಾ ಲಿಯೋನ್ ಮುಂತಾದ ಸಣ್ಣಸಣ್ಣ ದೇಶಗಳು ಮಾಡಲಿಕ್ಕೆ ಹತ್ಯಾವು.

ಚೀನಾದವರು ಹತ್ತು ದಿನದಾಗ ಹೊಸಾ ಆಸ್ಪತ್ರೆ ಕಟ್ಟಿದ್ದು ನಾವೆಲ್ಲಾ ನೋಡಿ ಚಪ್ಪಾಳೆ ತಟ್ಟೇವಿ. ಆದರ ಈಗ ನಾಯಕರು ಹೇಳಿದರು ಅಂತ ಚಪ್ಪಾಳೆ ತಟ್ಟಿದಿವಿ. ಅದಕ್ಕೂ ಇದಕ್ಕೂ ನಮಗ ವ್ಯತ್ಯಾಸ ಗೊತ್ತಿಲ್ಲ.

ಚೀನಾದ ಕೊರೊನಾ ಆಸ್ಪತ್ರೆ

ಈಗ ನಮ್ಮ ಮುಂದ ಇರೋದು ಏನು-ಯುದ್ಧನೋ? ಸರ್ಜಿಕಲ್ ಸ್ಟ್ರೈಕೋ? ಹೋರಾಟನೋ? ಅಥವಾ ವಿಪತ್ತೋ? ಕೊರೊನಾ ರೋಗದ ಜೊತೆ ಹೊಡೆದಾಟ ಅಂದರ ಜನರ ಹತ್ತರ ಮುಚ್ಚಿ-ಮುಚ್ಚಿ ಇಡುವಂಥಾ ಸೀಕ್ರೆಟ್ ಏನರ ಅದ ಏನು? ಇದನ್ನ ತಿಳಕೋಬೇಕಾರ ನೀವು ಏನು ಸೈನ್ಯದ ಅಧಿಕಾರಿ ಆಗಿರಬೇಕಿಲ್ಲ. ನಿಮಗ ಕನಿಷ್ಠ ಸಾಮಾನ್ಯ ಜ್ಞಾನ ಇದ್ದರ ಸಾಕು. ಆದರ ಈಗಿನ ಕಾಲ ಹೆಂಗಂದ ಅಂದರ ಬ್ಯಾರೆ ಬೇಕಾದ್ದು ಸಿಗತದ, ಸಾಮಾನ್ಯ ಜ್ಞಾನ ಸಿಗಂಗಿಲ್ಲ. ಅದು ಎಷ್ಟು ಅಪರೂಪ ಅಂದರ ರೊಕ್ಕ ಅಲ್ಲಾ, ಜೀವಾ ಕೊಟ್ಟರೂ ಸಿಗಂಗಿಲ್ಲ. ಇದನ್ನು ಸರಿಮಾಡುವುದು ಘಟಾನುಘಟಿ ನಾಯಕರ ಕಡೆನೂ ಸಾಧ್ಯ ಇಲ್ಲ, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...