Homeಮುಖಪುಟಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಪ್ರಶ್ನಿಸುತ್ತಿದ್ದಾರೆ ಹೈ.ಕ ದ ಹೋರಾಟಗಾರರಾದ ಡಾ.ರಝಾಕ ಉಸ್ತಾದ್‌..

- Advertisement -
- Advertisement -

ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಜ್ಯದ ಈಶಾನ್ಯ ಭಾಗದಲ್ಲಿದ್ದು, ಕನ್ನಡ ಭಾಷೆ ಮಾತನಾಡುವ ಜನರಿಂದ ಆವೃತವಾಗಿರುವ ಈ ಪ್ರದೇಶವು 1724 – 1948ರ ವರೆಗೆ ಹೈದ್ರಾಬಾದ ನಿಜಾಮರ ಆಳ್ವಿಕೆಯಲ್ಲಿ ಇತ್ತು. 1948 ರಲ್ಲಿ ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸಿದ ನಂತರ ಈ ಪ್ರದೇಶವು 1956ರ ವರೆಗೆ ಹೈದ್ರಾಬಾದ ರಾಜ್ಯದ ಭಾಗವಾಗಿತ್ತು. ಹೈದ್ರಾಬಾದ ಕರ್ನಾಟಕ ಪ್ರದೇಶವು ಬೀದರ್, ಕಲಬುರಗಿ, ಯಾದಗೀರ್, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳು ಹಾಗೂ ಬಳ್ಳಾರಿ ಜಿಲ್ಲೆ ಸೇರಿಕೊಂಡು ಇರುತ್ತದೆ. ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಷ್ಟ್ರದ ಎರಡನೆಯ ಅತೀ ದೊಡ್ಡ ಶುಷ್ಕ ಪ್ರದೇಶವಾಗಿರುತ್ತದೆ.

ಹೈದ್ರಾಬಾದ ಕರ್ನಾಟಕ ಪ್ರದೇಶದ ಭೌಗೋಳಿಕ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಭೌಗೋಳಿಕ ವಿಸ್ತೀರ್ಣದ ಪ್ರತಿಶತ 23 ರಷ್ಟಿರುತ್ತದೆ. ಪ್ರದೇಶದ ಸಾಗುವಳಿಯಾಗದ ಕೇತ್ರದ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಸಾಗುವಳಿಯಾಗದ ವಿಸ್ತೀರ್ಣದ ಪ್ರತಿಶತ 23 ರಷ್ಟಿದೆ. ಪ್ರದೇಶದ ಜನಸಂಖ್ಯೆಯು ರಾಜ್ಯದ ಜನಸಂಖ್ಯೆಯ ಪ್ರತಿಶತ 18 ರಷ್ಟಿರುತ್ತದೆ, ರಾಜ್ಯದ ಪರಿಶಿಷ್ಟ ಜಾತಿಯವರ ಜನಸಂಖ್ಯೆಯ ಪೈಕಿ ಪ್ರತಿಶತ 24 ರಷ್ಟಿದೆ, ಪರಿಶಿಷ್ಟ ವರ್ಗದವರ ಜನಸಂಖ್ಯೆಯ ಪೈಕಿ ಪ್ರತಿಶತ 34 ರಷ್ಟಿದೆ, ರಾಜ್ಯದ ಸಾಕ್ಷರತೆ ಪ್ರಮಾಣ ಪ್ರತಿಶತ 75.36 ರ ಎದುರು ಪ್ರದೇಶದ ಸಾಕ್ಷರತಾ ಪ್ರಮಾಣವು ಪ್ರತಿಶತ 64.45 ರಷ್ಟಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ರ ತಿದ್ದುಪಡಿಗಾಗಿ ಹಲವು ದಶಕಗಳ ಕಾಲ ಈ ಪ್ರದೇಶದ ಜನತೆ ನಿರಂತರ ಹೋರಾಟ ಮಾಡಿದ್ದು ಈಗ ಇತಿಹಾಸ. ದಶಕಗಳ ಬೇಡಿಕೆಗೆ ಸ್ಪಂದಿಸಿದ ಅಂದಿನ ಯುಪಿಎ ಸರಕಾರ 2012ರ ಡಿಸೆಂಬರ್ ತಿಂಗಳಲ್ಲಿ ಸಂವಿಧಾನದ ಅನುಚ್ಛೇದ 371ಕ್ಕೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಅನುಚ್ಛೇದ 371ಜೆ ಅಡಿಯಲ್ಲಿ ಸೇರಿಸಲಾಗಿದೆ. ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಜನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆಯಲ್ಲದೇ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಮಂಡಳಿ ರಚಿಸಲು ಅವಕಾಶ ಮಾಡಿಕೊಡಲಾಗಿದೆ.

ಅದರಂತೆ, 2013 ನವೆಂಬರ್ ತಿಂಗಳಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಆದೇಶ, 2013ರ ಕಾಯ್ದೆಯ ಮೂಲಕ ಈ ಪ್ರದೇಶದಲ್ಲಿ ಮಂಡಳಿ ರಚಿಸಲಾಗಿದೆ. 2013-14ನೇ ಸಾಲಿನ ಸೀಮಿತ ಅವಧಿಗೆ 150 ಕೋ.ರೂ. ಅನುದಾನ ನೀಡಿ ಮಂಡಳಿ ಪ್ರಾರಂಭಿಸಲಾಗಿದೆ. 2014-15ನೇ ಸಾಲಿನಲ್ಲಿ ಬಜೆಟ್ ಮೂಲಕ 600 ಕೋ.ರೂ. ಅನುದಾನ ನಿಗದಿಗೊಳಿಸಲಾಗಿದೆ ಮತ್ತು 24-11-2014ರಂದು ಗುಲ್ಬರ್ಗಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷವಾಗಿ 400 ಕೋ.ರೂ. ಅನುದಾನ ಒದಗಿಸಲಾಗಿದೆ, ಅಂದರೆ 2014-15 ನೇ ಸಾಲಿಗೆ ಒಟ್ಟು 1000 ಕೋ.ರೂ. ಅನುದಾನ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಲಾಗಿದೆ. ಅದರಂತೆ 2015-16 ಹಾಗೂ 2016-17ನೇ ಸಾಲಿನ ಬಜೆಟ್‍ನಲ್ಲಿ 1000 ಕೋ.ರೂ. ಅನುದಾನ ಮಂಡಳಿಗೆ ನೀಡಲಾಗಿದೆ. ನಂತರ 2017-18ನೇ ಸಾಲಿನಿಂದ 2019-20ರ ವರೆಗೆ ಪ್ರತಿ ಬಜೆಟ್‍ನಲ್ಲಿ ಸುಮಾರು 1500 ಕೋ.ರೂ. ಅನುದಾನ ಘೋಷಣೆ ಮಾಡಲಾಗಿದೆ.

ಆದರೆ ಸರಕಾರದ ಆರ್ಥಿಕ ವರದಿ 2019-20ನೇ ಸಾಲಿನ ವರದಿಯಲ್ಲಿ 2017-18, 2018-19 ನೇ ಸಾಲಿನಲ್ಲಿ ಕೇವಲ 1000 ಕೋ.ರೂ. ಅನುದಾನ ನೀಡಿರುವ ಮಾಹಿತಿ ನೀಡಿದ್ದು, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವದು ತಿಳಿಯದಂತ ಪರಿಸ್ಥಿತಿ ಒದಗಿಬಂದಿದೆ. ಸಿದ್ದರಾಮಯ್ಯ ಸರಕಾರ ಹಾಗೂ ಕುಮಾರಸ್ವಾಮಿಯವರ ಸರಕಾರ ಈ ಭಾಗದಲ್ಲಿ ಇಂದಿಗೂ ನಾವು 1500 ಕೋ.ರೂ ಅನುದಾನ ನೀಡಿದ್ದೇವೆ ಎಂದೆ ಪ್ರತಿಪಾದಿಸುತ್ತ ಬಂದಿದ್ದಾರೆ. ಆದರೆ, ಅವರದೇ ಸರಕಾರದ ವರದಿ ಬೇರೆಯದ್ದೇ ಮಾಹಿತಿ ನೀಡುತ್ತಿದೆ. ಇದು ಹೈದ್ರಾಬಾದ ಕರ್ನಾಟಕದ ಜನತೆಗೆ ಮಾಡಿದ ವಂಚನೆ ಎಂದೇ ಹೇಳಬಹುದು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಿದ ಮಾಹಿತಿಯಂತೆ ಕಳೆದ ಆರು ವರ್ಷಗಳಲ್ಲಿ ಮಂಡಳಿಗೆ ಹಂಚಿಕೆಯಾದ ಅನುದಾನ 6612.63 ಕೋ.ರೂ., ಸರಕಾರ ತನ್ನ ಆರ್ಥಿಕ ವರದಿಯಲ್ಲಿ ನೀಡಿದ ಅನುದಾನ ಒಟ್ಟು 6253.50 ಕೋ.ರೂ. ಅನುದಾನ ಮಂಜೂರು ಮಾಡಲಾಗಿದೆ. ಆದರೆ, ಕಳೆದ 6 ವರ್ಷಗಳಿಂದ ಬಜೆಟ್‍ನಲ್ಲಿ ಘೋಷಿಸಿದಂತೆ ಮತ್ತು ಗುಲ್ಬರ್ಗಾದಲ್ಲಿ ನಡೆದ 24-11-2014ರ ಸಚಿವಸಂಪುಟದ ನಿರ್ಣಯದ 400 ಕೋ.ರೂ. ಅನುದಾನ ಸೇರಿದಂತೆ ಸುಮಾರು 7650 ಕೋ.ರೂ ಅನುದಾನ ಮಂಡಳಿಗೆ ಹಂಚಿಕೆಯಾಗಬೇಕು. ಆದರೆ, ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಕೇಳಬೇಕೆನಿಸಿದೆ.

ಮಂಡಳಿ ನೀಡುತ್ತಿರುವ ಮಾಹಿತಿಗೂ ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಮಾಹಿತಿಗೂ ಸಾಕಷ್ಟು ವ್ಯತ್ಯಾಸ ಈಗಾಗಲೇ ಗೊಂದಲ ಮೂಡಿಸಿದ ನಡುವೆ ಸರಕಾರದ ಆರ್ಥಿಕ ವರದಿ ಇನ್ನೂ ಅಚ್ಚರಿ ಮೂಡಿಸುವ ಅಂಶವನ್ನು ಗಮನಿಸಿದಲ್ಲಿ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸಲಾಗಿದೆ.

ಕೋಷ್ಠಕದಲ್ಲಿ ವಿವರಿಸಿರುವಂತೆ ರೀತಿ ಸರಕಾರವೇ ಇಷ್ಟೊಂದು ಮೋಸ ಮಾಡುತ್ತಿರುವದರ ಜೊತೆಗೆ ಕಳೆದ ಜುಲೈ 2019ರಿಂದ ಇಲ್ಲಿಯವರೆಗೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸದೇ ಇಲ್ಲಿಯವರೆಗೆ ಮಂಡಳಿಯ ಯಾವುದೇ ಸಭೆ ನಡೆಯಲು ಸಾದ್ಯವಾಗದ ರೀತಿ ಸರಕಾರ ನಡೆದುಕೊಂಡಿದೆ, ಈ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿರುವದರಿಂದ ಸರಕಾರ ಕಾಗದದಲ್ಲಿ ಮಾತ್ರ ಕಲ್ಯಾಣ ಮಾಡಲು ಹೋಗುತ್ತಿರುವದು ನಾಚಿಕೆಗೇಡಿನ ಸಂಗತಿ. ಒಂದು ಇಡೀ ಆರ್ಥಿಕ ವರ್ಷಕ್ಕೆ ಮಂಡಳಿಗೆ ಅಧ್ಯಕ್ಷರಿಲ್ಲದಂತಾಗಿ ಅಭಿವೃದ್ಧಿ ವೇಗ ಕುಂಠಿತಗೊಂಡಿದೆ. ಇದರ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರನ್ನು ಆ ಭಾಗದ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಇರುವದನ್ನು ತಿದ್ದುಪಡಿ ಮಾಡಿ ಮಂಡಳಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಆ ಭಾಗದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಒಬ್ಬರು ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಎಂಟು ಜನ ಶಾಸಕರು ಹಾಗೂ ರಾಜ್ಯ ಹಿರಿಯ ಅಧಿಕಾರಿಗಳು ಆ ಮಂಡಳಿಗೆ ಸದಸ್ಯರಾಗಿರುತ್ತಾರೆ. ಇಂತಹ ಮಂಡಳಿಗೆ ಸಾಕಷ್ಟು ಚರ್ಚಿಸಿ, ಈ ಭಾಗದ ಜನರೊಂದಿಗೆ ಸಭೆ-ಚರ್ಚೆ-ಸಂವಾದ ನಡೆಸಿ, ಸಂಘ ಸಂಸ್ಥೆಗಳೊಂದಿಗೆ, ಹೋರಾಟಗಾರರ ಜೊತೆಗೆ ಚರ್ಚಿಸಿ ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧ್ದಿ ಮಂಡಳಿ ಕಾಯ್ದೆಯಲ್ಲಿ ಅವಕಾಶ ಮಾಡಲಾಗಿದೆ. ಯಾರೊಂದಿಗೂ ಚರ್ಚಿಸದೇ ಏಕಾಏಕೀ ಯಾರೊಂದಿಗೂ ಚರ್ಚಿಸದೇ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವದು ಈ ಪ್ರದೇಶದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮಂಡಳಿ ದುರ್ಬಲವಾಗಿ 1991 ರಿಂದ 2013 ರ ವರೆಗೆ ಇದ್ದಂತಹ ಮಂಡಳಿಯ ತರಹ ಇದೂ ಕೂಡ ಆಗುತ್ತದೆ ಎನ್ನುವ ಭಾವನೆ ಜನರಲ್ಲಿ ಮೂಡಿದೆ.

ಈ ಮಂಡಳಿ ಕಳೆದ ಏಳು ವರ್ಷಗಳಲ್ಲಿ ಶಿಕ್ಷಣಕ್ಕಾಗಿ 1519.00 ಕೋ.ರೂ, ಆರೋಗ್ಯ ಕ್ಷೇತ್ರಕ್ಕೆ 316.00 ಕೋ.ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಕ್ಕೆ 87.00 ಕೋ.ರೂ, ರಸ್ತೆ ಮತ್ತು ಸೇತುವೆಗಳಿಗೆ 3650.00 ಕೋ.ರೂ ಹಾಗೂ ಸಾಮಾಜಿಕ ಕ್ಷೇತ್ರದ ಅಭಿವೃದ್ಧಿಗೆ 253.00 ಕೋ.ರೂ ಅನುದಾನ ಖರ್ಚು ಮಾಡಲಾಗಿದೆ. ವಿಶೇಷವೆನೆಂದರೆ, ಕಲ್ಯಾಣ ಕರ್ನಾಟಕ ಪ್ರದೇಶವು ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ಮಕ್ಕಳು ಅಪೌಷ್ಟಿಕತೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಹಿಂದುಳಿದಿರುವದರಿಂದ ಅಂತಹ ಕ್ಷೇತ್ರಗಳನ್ನು ಗುರುತಿಸಿ ಮಂಡಳಿಯು ಯೋಜನೆ ರೂಪಿಸಬೇಕಿತ್ತು, ಆದರೆ ಮಂಡಳಿಯ ಕಾರ್ಯಕ್ರಮಗಳು ಈ ಭಾಗದಲ್ಲಿ ಕಾಂಕ್ರೀಟ ರಸ್ತೆ ನಿರ್ಮಿಸುವದರಲ್ಲಿಯೇ ಆಸಕ್ತಿವಹಿಸಿರುವದು ಅತ್ಯಂತ ಚಿಂತೆಗೀಡುಮಾಡುತ್ತಿದೆ. ಈ ಭಾಗದ ಪ್ರಗತಿಪರರು, ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಈ ಪ್ರದೇಶದ ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸದೇ ಇದ್ದರೆ ಖಂಡಿತವಾಗಿಯೂ ಮಂಡಳಿಯು ಈ ಭಾಗದ ಅಭಿವೃದ್ದಿ ಶ್ರಮಿಸುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಮೂಡಿಸುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...