Homeಮುಖಪುಟಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಪ್ರಶ್ನಿಸುತ್ತಿದ್ದಾರೆ ಹೈ.ಕ ದ ಹೋರಾಟಗಾರರಾದ ಡಾ.ರಝಾಕ ಉಸ್ತಾದ್‌..

- Advertisement -
- Advertisement -

ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಜ್ಯದ ಈಶಾನ್ಯ ಭಾಗದಲ್ಲಿದ್ದು, ಕನ್ನಡ ಭಾಷೆ ಮಾತನಾಡುವ ಜನರಿಂದ ಆವೃತವಾಗಿರುವ ಈ ಪ್ರದೇಶವು 1724 – 1948ರ ವರೆಗೆ ಹೈದ್ರಾಬಾದ ನಿಜಾಮರ ಆಳ್ವಿಕೆಯಲ್ಲಿ ಇತ್ತು. 1948 ರಲ್ಲಿ ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸಿದ ನಂತರ ಈ ಪ್ರದೇಶವು 1956ರ ವರೆಗೆ ಹೈದ್ರಾಬಾದ ರಾಜ್ಯದ ಭಾಗವಾಗಿತ್ತು. ಹೈದ್ರಾಬಾದ ಕರ್ನಾಟಕ ಪ್ರದೇಶವು ಬೀದರ್, ಕಲಬುರಗಿ, ಯಾದಗೀರ್, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳು ಹಾಗೂ ಬಳ್ಳಾರಿ ಜಿಲ್ಲೆ ಸೇರಿಕೊಂಡು ಇರುತ್ತದೆ. ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಷ್ಟ್ರದ ಎರಡನೆಯ ಅತೀ ದೊಡ್ಡ ಶುಷ್ಕ ಪ್ರದೇಶವಾಗಿರುತ್ತದೆ.

ಹೈದ್ರಾಬಾದ ಕರ್ನಾಟಕ ಪ್ರದೇಶದ ಭೌಗೋಳಿಕ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಭೌಗೋಳಿಕ ವಿಸ್ತೀರ್ಣದ ಪ್ರತಿಶತ 23 ರಷ್ಟಿರುತ್ತದೆ. ಪ್ರದೇಶದ ಸಾಗುವಳಿಯಾಗದ ಕೇತ್ರದ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಸಾಗುವಳಿಯಾಗದ ವಿಸ್ತೀರ್ಣದ ಪ್ರತಿಶತ 23 ರಷ್ಟಿದೆ. ಪ್ರದೇಶದ ಜನಸಂಖ್ಯೆಯು ರಾಜ್ಯದ ಜನಸಂಖ್ಯೆಯ ಪ್ರತಿಶತ 18 ರಷ್ಟಿರುತ್ತದೆ, ರಾಜ್ಯದ ಪರಿಶಿಷ್ಟ ಜಾತಿಯವರ ಜನಸಂಖ್ಯೆಯ ಪೈಕಿ ಪ್ರತಿಶತ 24 ರಷ್ಟಿದೆ, ಪರಿಶಿಷ್ಟ ವರ್ಗದವರ ಜನಸಂಖ್ಯೆಯ ಪೈಕಿ ಪ್ರತಿಶತ 34 ರಷ್ಟಿದೆ, ರಾಜ್ಯದ ಸಾಕ್ಷರತೆ ಪ್ರಮಾಣ ಪ್ರತಿಶತ 75.36 ರ ಎದುರು ಪ್ರದೇಶದ ಸಾಕ್ಷರತಾ ಪ್ರಮಾಣವು ಪ್ರತಿಶತ 64.45 ರಷ್ಟಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ರ ತಿದ್ದುಪಡಿಗಾಗಿ ಹಲವು ದಶಕಗಳ ಕಾಲ ಈ ಪ್ರದೇಶದ ಜನತೆ ನಿರಂತರ ಹೋರಾಟ ಮಾಡಿದ್ದು ಈಗ ಇತಿಹಾಸ. ದಶಕಗಳ ಬೇಡಿಕೆಗೆ ಸ್ಪಂದಿಸಿದ ಅಂದಿನ ಯುಪಿಎ ಸರಕಾರ 2012ರ ಡಿಸೆಂಬರ್ ತಿಂಗಳಲ್ಲಿ ಸಂವಿಧಾನದ ಅನುಚ್ಛೇದ 371ಕ್ಕೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಅನುಚ್ಛೇದ 371ಜೆ ಅಡಿಯಲ್ಲಿ ಸೇರಿಸಲಾಗಿದೆ. ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಜನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆಯಲ್ಲದೇ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಮಂಡಳಿ ರಚಿಸಲು ಅವಕಾಶ ಮಾಡಿಕೊಡಲಾಗಿದೆ.

ಅದರಂತೆ, 2013 ನವೆಂಬರ್ ತಿಂಗಳಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಆದೇಶ, 2013ರ ಕಾಯ್ದೆಯ ಮೂಲಕ ಈ ಪ್ರದೇಶದಲ್ಲಿ ಮಂಡಳಿ ರಚಿಸಲಾಗಿದೆ. 2013-14ನೇ ಸಾಲಿನ ಸೀಮಿತ ಅವಧಿಗೆ 150 ಕೋ.ರೂ. ಅನುದಾನ ನೀಡಿ ಮಂಡಳಿ ಪ್ರಾರಂಭಿಸಲಾಗಿದೆ. 2014-15ನೇ ಸಾಲಿನಲ್ಲಿ ಬಜೆಟ್ ಮೂಲಕ 600 ಕೋ.ರೂ. ಅನುದಾನ ನಿಗದಿಗೊಳಿಸಲಾಗಿದೆ ಮತ್ತು 24-11-2014ರಂದು ಗುಲ್ಬರ್ಗಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷವಾಗಿ 400 ಕೋ.ರೂ. ಅನುದಾನ ಒದಗಿಸಲಾಗಿದೆ, ಅಂದರೆ 2014-15 ನೇ ಸಾಲಿಗೆ ಒಟ್ಟು 1000 ಕೋ.ರೂ. ಅನುದಾನ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಲಾಗಿದೆ. ಅದರಂತೆ 2015-16 ಹಾಗೂ 2016-17ನೇ ಸಾಲಿನ ಬಜೆಟ್‍ನಲ್ಲಿ 1000 ಕೋ.ರೂ. ಅನುದಾನ ಮಂಡಳಿಗೆ ನೀಡಲಾಗಿದೆ. ನಂತರ 2017-18ನೇ ಸಾಲಿನಿಂದ 2019-20ರ ವರೆಗೆ ಪ್ರತಿ ಬಜೆಟ್‍ನಲ್ಲಿ ಸುಮಾರು 1500 ಕೋ.ರೂ. ಅನುದಾನ ಘೋಷಣೆ ಮಾಡಲಾಗಿದೆ.

ಆದರೆ ಸರಕಾರದ ಆರ್ಥಿಕ ವರದಿ 2019-20ನೇ ಸಾಲಿನ ವರದಿಯಲ್ಲಿ 2017-18, 2018-19 ನೇ ಸಾಲಿನಲ್ಲಿ ಕೇವಲ 1000 ಕೋ.ರೂ. ಅನುದಾನ ನೀಡಿರುವ ಮಾಹಿತಿ ನೀಡಿದ್ದು, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವದು ತಿಳಿಯದಂತ ಪರಿಸ್ಥಿತಿ ಒದಗಿಬಂದಿದೆ. ಸಿದ್ದರಾಮಯ್ಯ ಸರಕಾರ ಹಾಗೂ ಕುಮಾರಸ್ವಾಮಿಯವರ ಸರಕಾರ ಈ ಭಾಗದಲ್ಲಿ ಇಂದಿಗೂ ನಾವು 1500 ಕೋ.ರೂ ಅನುದಾನ ನೀಡಿದ್ದೇವೆ ಎಂದೆ ಪ್ರತಿಪಾದಿಸುತ್ತ ಬಂದಿದ್ದಾರೆ. ಆದರೆ, ಅವರದೇ ಸರಕಾರದ ವರದಿ ಬೇರೆಯದ್ದೇ ಮಾಹಿತಿ ನೀಡುತ್ತಿದೆ. ಇದು ಹೈದ್ರಾಬಾದ ಕರ್ನಾಟಕದ ಜನತೆಗೆ ಮಾಡಿದ ವಂಚನೆ ಎಂದೇ ಹೇಳಬಹುದು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಿದ ಮಾಹಿತಿಯಂತೆ ಕಳೆದ ಆರು ವರ್ಷಗಳಲ್ಲಿ ಮಂಡಳಿಗೆ ಹಂಚಿಕೆಯಾದ ಅನುದಾನ 6612.63 ಕೋ.ರೂ., ಸರಕಾರ ತನ್ನ ಆರ್ಥಿಕ ವರದಿಯಲ್ಲಿ ನೀಡಿದ ಅನುದಾನ ಒಟ್ಟು 6253.50 ಕೋ.ರೂ. ಅನುದಾನ ಮಂಜೂರು ಮಾಡಲಾಗಿದೆ. ಆದರೆ, ಕಳೆದ 6 ವರ್ಷಗಳಿಂದ ಬಜೆಟ್‍ನಲ್ಲಿ ಘೋಷಿಸಿದಂತೆ ಮತ್ತು ಗುಲ್ಬರ್ಗಾದಲ್ಲಿ ನಡೆದ 24-11-2014ರ ಸಚಿವಸಂಪುಟದ ನಿರ್ಣಯದ 400 ಕೋ.ರೂ. ಅನುದಾನ ಸೇರಿದಂತೆ ಸುಮಾರು 7650 ಕೋ.ರೂ ಅನುದಾನ ಮಂಡಳಿಗೆ ಹಂಚಿಕೆಯಾಗಬೇಕು. ಆದರೆ, ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಕೇಳಬೇಕೆನಿಸಿದೆ.

ಮಂಡಳಿ ನೀಡುತ್ತಿರುವ ಮಾಹಿತಿಗೂ ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಮಾಹಿತಿಗೂ ಸಾಕಷ್ಟು ವ್ಯತ್ಯಾಸ ಈಗಾಗಲೇ ಗೊಂದಲ ಮೂಡಿಸಿದ ನಡುವೆ ಸರಕಾರದ ಆರ್ಥಿಕ ವರದಿ ಇನ್ನೂ ಅಚ್ಚರಿ ಮೂಡಿಸುವ ಅಂಶವನ್ನು ಗಮನಿಸಿದಲ್ಲಿ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸಲಾಗಿದೆ.

ಕೋಷ್ಠಕದಲ್ಲಿ ವಿವರಿಸಿರುವಂತೆ ರೀತಿ ಸರಕಾರವೇ ಇಷ್ಟೊಂದು ಮೋಸ ಮಾಡುತ್ತಿರುವದರ ಜೊತೆಗೆ ಕಳೆದ ಜುಲೈ 2019ರಿಂದ ಇಲ್ಲಿಯವರೆಗೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸದೇ ಇಲ್ಲಿಯವರೆಗೆ ಮಂಡಳಿಯ ಯಾವುದೇ ಸಭೆ ನಡೆಯಲು ಸಾದ್ಯವಾಗದ ರೀತಿ ಸರಕಾರ ನಡೆದುಕೊಂಡಿದೆ, ಈ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿರುವದರಿಂದ ಸರಕಾರ ಕಾಗದದಲ್ಲಿ ಮಾತ್ರ ಕಲ್ಯಾಣ ಮಾಡಲು ಹೋಗುತ್ತಿರುವದು ನಾಚಿಕೆಗೇಡಿನ ಸಂಗತಿ. ಒಂದು ಇಡೀ ಆರ್ಥಿಕ ವರ್ಷಕ್ಕೆ ಮಂಡಳಿಗೆ ಅಧ್ಯಕ್ಷರಿಲ್ಲದಂತಾಗಿ ಅಭಿವೃದ್ಧಿ ವೇಗ ಕುಂಠಿತಗೊಂಡಿದೆ. ಇದರ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರನ್ನು ಆ ಭಾಗದ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಇರುವದನ್ನು ತಿದ್ದುಪಡಿ ಮಾಡಿ ಮಂಡಳಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಆ ಭಾಗದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಒಬ್ಬರು ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಎಂಟು ಜನ ಶಾಸಕರು ಹಾಗೂ ರಾಜ್ಯ ಹಿರಿಯ ಅಧಿಕಾರಿಗಳು ಆ ಮಂಡಳಿಗೆ ಸದಸ್ಯರಾಗಿರುತ್ತಾರೆ. ಇಂತಹ ಮಂಡಳಿಗೆ ಸಾಕಷ್ಟು ಚರ್ಚಿಸಿ, ಈ ಭಾಗದ ಜನರೊಂದಿಗೆ ಸಭೆ-ಚರ್ಚೆ-ಸಂವಾದ ನಡೆಸಿ, ಸಂಘ ಸಂಸ್ಥೆಗಳೊಂದಿಗೆ, ಹೋರಾಟಗಾರರ ಜೊತೆಗೆ ಚರ್ಚಿಸಿ ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧ್ದಿ ಮಂಡಳಿ ಕಾಯ್ದೆಯಲ್ಲಿ ಅವಕಾಶ ಮಾಡಲಾಗಿದೆ. ಯಾರೊಂದಿಗೂ ಚರ್ಚಿಸದೇ ಏಕಾಏಕೀ ಯಾರೊಂದಿಗೂ ಚರ್ಚಿಸದೇ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವದು ಈ ಪ್ರದೇಶದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮಂಡಳಿ ದುರ್ಬಲವಾಗಿ 1991 ರಿಂದ 2013 ರ ವರೆಗೆ ಇದ್ದಂತಹ ಮಂಡಳಿಯ ತರಹ ಇದೂ ಕೂಡ ಆಗುತ್ತದೆ ಎನ್ನುವ ಭಾವನೆ ಜನರಲ್ಲಿ ಮೂಡಿದೆ.

ಈ ಮಂಡಳಿ ಕಳೆದ ಏಳು ವರ್ಷಗಳಲ್ಲಿ ಶಿಕ್ಷಣಕ್ಕಾಗಿ 1519.00 ಕೋ.ರೂ, ಆರೋಗ್ಯ ಕ್ಷೇತ್ರಕ್ಕೆ 316.00 ಕೋ.ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಕ್ಕೆ 87.00 ಕೋ.ರೂ, ರಸ್ತೆ ಮತ್ತು ಸೇತುವೆಗಳಿಗೆ 3650.00 ಕೋ.ರೂ ಹಾಗೂ ಸಾಮಾಜಿಕ ಕ್ಷೇತ್ರದ ಅಭಿವೃದ್ಧಿಗೆ 253.00 ಕೋ.ರೂ ಅನುದಾನ ಖರ್ಚು ಮಾಡಲಾಗಿದೆ. ವಿಶೇಷವೆನೆಂದರೆ, ಕಲ್ಯಾಣ ಕರ್ನಾಟಕ ಪ್ರದೇಶವು ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ಮಕ್ಕಳು ಅಪೌಷ್ಟಿಕತೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಹಿಂದುಳಿದಿರುವದರಿಂದ ಅಂತಹ ಕ್ಷೇತ್ರಗಳನ್ನು ಗುರುತಿಸಿ ಮಂಡಳಿಯು ಯೋಜನೆ ರೂಪಿಸಬೇಕಿತ್ತು, ಆದರೆ ಮಂಡಳಿಯ ಕಾರ್ಯಕ್ರಮಗಳು ಈ ಭಾಗದಲ್ಲಿ ಕಾಂಕ್ರೀಟ ರಸ್ತೆ ನಿರ್ಮಿಸುವದರಲ್ಲಿಯೇ ಆಸಕ್ತಿವಹಿಸಿರುವದು ಅತ್ಯಂತ ಚಿಂತೆಗೀಡುಮಾಡುತ್ತಿದೆ. ಈ ಭಾಗದ ಪ್ರಗತಿಪರರು, ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಈ ಪ್ರದೇಶದ ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸದೇ ಇದ್ದರೆ ಖಂಡಿತವಾಗಿಯೂ ಮಂಡಳಿಯು ಈ ಭಾಗದ ಅಭಿವೃದ್ದಿ ಶ್ರಮಿಸುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಮೂಡಿಸುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...