Homeಮುಖಪುಟ144 ಸೆಕ್ಷನ್‌ ಹಾಕಿ ಬೀದಿಗೆ ಬಂದವರನ್ನೆಲ್ಲಾ ಪೊಲೀಸರು ಹೊಡೆಯೋದು ಸರಿಯಲ್ಲ: ಸಿದ್ದರಾಮಯ್ಯ

144 ಸೆಕ್ಷನ್‌ ಹಾಕಿ ಬೀದಿಗೆ ಬಂದವರನ್ನೆಲ್ಲಾ ಪೊಲೀಸರು ಹೊಡೆಯೋದು ಸರಿಯಲ್ಲ: ಸಿದ್ದರಾಮಯ್ಯ

- Advertisement -
- Advertisement -

144 ಸೆಕ್ಷನ್‌ ಹಾಕಿ ಬೀದಿಗೆ ಬಂದವರನ್ನೆಲ್ಲಾ ಪೊಲೀಸರು ಹೊಡೆಯೋದು ಸರಿಯಲ್ಲ, ಜನರ ಮೇಲೆ ಲಾಠಿ ಚಾರ್ಜ್ ಮಾಡೋದು ಸರಿಯಲ್ಲ. ಹಬ್ಬ ಇದೆ, ಅಗತ್ಯ ವಸ್ತುಗಳನ್ನ ಮಾರಾಟ ಮಾಡಲು ಮತ್ತು ಖರೀದಿ ಮಾಡಲು ಅವಕಾಶ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯನವರು, ನಾನು‌ ಪೊಲೀಸ್ ಆಯುಕ್ತರ ಜೊತೆ ಮಾತಾಡಿದ್ದೇನೆ ಎಂದಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ದೇಶದಲ್ಲಿ ಹಾಗೂ ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕಾರಣ ವಿಧಾನಸಭೆ ಅಧಿವೇಶನ ಮುಂದೂಡಬೇಕು, ಸದನ ನಡೆಸುವುದು ಸಾದುವಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪರೀಕ್ಷಾ ಕೇಂದ್ರಗಳನ್ನ ತೆರೆದಿಲ್ಲ.. ಕ್ವಾರಂಟೈನ್ ಕೇಂದ್ರಗಳನ್ನು ತೆರೆದೇ ಇಲ್ಲ. ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವೆ ಹೊಂದಾಣಿಕೆ ಇಲ್ಲ. ಕೊರೊನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕ್ವಾರಂಟೈನ್ ಮಾಡೋ ಕೆಲಸವನ್ನ ಪೊಲೀಸ್ ಇಲಾಖೆಗೆ ನೀಡಿದ್ರೆ ಹೇಗೆ? ಪೊಲೀಸ್ ಇಲಾಖೆ ಇದನ್ನೆಲ್ಲಾ ಮಾಡೊಕ್ಕಾಗುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂಸತ್ತನ್ನು ಮುಂದೂಡಿದ್ದಾರೆ. ಹಾಗಾಗಿ ಇಲ್ಲಿಯೂ ಮುಂದೂಡಿ ಅಂತಾ ಸದನ ಸಲಹಾ ಸಮಿತಿಲಿ ಹೇಳಿದ್ದೇವೆ ಆದರೆ ಇದೇ 27,28ರವರೆಗೂ ನಡೆಸಬೇಕು ಅಂತಾ ಸರ್ಕಾರ ವಾದಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲೂ ಕೊರೊನಾ ವ್ಯಾಪಕವಾಗಿ ಹಬ್ತಾ ಇದೆ. ಸಾಮಾಜಿಕ ಕಳಕಳಿಯೂ ಬಹಳ‌ಮುಖ್ಯ. ಆದ್ದರಿಂದ ಬಜೆಟ್ ಮೇಲೆ ಚರ್ಚೆ ಆಗದಿದ್ದರೂ ಪರವಾಗಿಲ್ಲ. ಒಪ್ಪಿಗೆ ನೀಡ್ತೇವೆ, ಎಲ್ಲದಕ್ಕೂ ಸಹಕಾರ ಕೊಡ್ತೇವೆ ಎಂದು ತಿಳಿಸಿದ್ದಾರೆ.

ಫೈನಾನ್ಸ್ ಬಿಲ್ ಬಿಟ್ಟು ಯಾವ ಬಿಲ್ ನ್ನು ಎತ್ತಿಕೊಳ್ಳೋದು ಬೇಡ ಅಂತಾನೂ ಹೇಳಿದ್ವಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನ ದುರ್ಬಲ ಮಾಡಲು ಒಂದು ವಿಧೇಯಕ ತಂದ್ರು. ಅಂತಹ ಬಿಲ್ ಗಳ ಬಗ್ಗೆ ಚರ್ಚೆ ಆಗ್ಲಿ ಅನ್ನೊದು ನಮ್ಮ ವಾದ. ಹಾಗಾಗಿ ಹಣಕಾಸು‌ ಬಿಲ್ ಬಿಟ್ಟು ಬೇರಾವ ಬಿಲ್ ತರೋದು ಬೇಡ ಅಂತಾ ಹೇಳಿದ್ವಿ. ಸಿಎಂಗೆ ನಾವು ಇಷ್ಟೊಂದು ಸಪೋರ್ಡ್ ಮಾಡಿದ್ದೀವಿ. ಸದನ ಮುಂದೂಡಿ ಅಂತಾ ಹೇಳಿದ್ದಿವಿ. ಹಣಕಾಸು ಬಿಲ್ ಗೆ ಒಪ್ಪಿಗೆ ನೀಡ್ತಿವಿ ಅಂದಿದ್ದೀವಿ. ಅಗತ್ಯ ಬಿದ್ರೆ ಸುಗ್ರೀವಾಜ್ಞೆ ಹೊರಡಿಸಿ ಅಂತಾ ಹೇಳಿದ್ದೀವಿ, ಸಿಎಂ ಕೂಡ ಇದಕ್ಕೆ ಒಪ್ಪಿದ್ರು. ಇಷ್ಟೆಲ್ಲಾ ಆದ್ಮೇಲೆಯೂ ಕಲಾಪ ಆರಂಭವಾಗುತ್ತಿದ್ದಂತೆ ಕಾನೂನು ಸಚಿವರು ಸದನದ ಮುಂದೆ ಬಿಲ್ ತಂದೇ ಬಿಟ್ರು. ನಾವು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ವಿ. ಮಾನಗೆಟ್ಟ ಸರ್ಕಾರ ಇದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಹಣಕಾಸು ಸ್ಥಿತಿ ದಿವಾಳಿಯಾಗಿದೆ. ಜನ ನಮಗೆ‌ ಫುಲ್ ಮೆಜಾರಿಟಿ ಕೊಟ್ಟಿದ್ದಾರೆ ಅಂತಾ ಅನ್ಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದ ನಾವು ಕಲಾಪವನ್ನ ಬಹಿಷ್ಕರಿಸಿದ್ದೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...