Homeಮುಖಪುಟಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

ಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

- Advertisement -
- Advertisement -

ಪೀಪಲ್ಸ್ ಕಫ್ರ್ಯೂ ಕಾನ್ಸೆಪ್ಟನ್ನು ಮೊಟ್ಟಮೊದಲ ಬಾರಿಗೆ ಕೊಟ್ಟವರು ಅಸ್ಸಾಮಿನ ವಿದ್ಯಾರ್ಥಿ ಗಣಪರಿಷತ್ ನಾಯಕರು. ಅಸ್ಸಾಮಿಗಳಿಗೆ ವಂಚನೆ ಮಾಡಿ ಬೆಂಗಾಳಿ ಬಾಬುಗಳಿಗೆ ಅಸ್ಸಾಂ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟುದುದರ ವಿರುದ್ಧ ಮೊದಲ ಬಾರಿಗೆ ಸೆಟೆದು ನಿಂತದ್ದು ಅಸ್ಸಾಂ ವಿದ್ಯಾರ್ಥಿ ಗಣಪರಿಷತ್. ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಬಂತು. ಯಾವ ಅಸ್ಸಾಮಿ ಪ್ರಜೆಯೂ ಈ ಚುನಾವಣೆಯಲ್ಲಿ ಮತಹಾಕಲು ಮತಗಟ್ಟೆಗೆ ಹೋಗಬಾರದೆಂದು ಕರೆನೀಡಿ Peoples Curfew ಘೋಷಿಸಿತು.

Peoples Curfew ಒಂದು ಹೊಸ ಪ್ರಯೋಗ. ಸರ್ಕಾರ ಕಫ್ರ್ಯೂ ಹಾಕುವುದು ಬ್ರಿಟಿಷರ ಕಾಲದಿಂದ ಜಾರಿಯಲ್ಲಿರುವ ಕರಾಳ ಶಾಸನ. ಹೋರಾಟಗಾರರು ಐದು ಜನ ಒಟ್ಟಿಗೆ ಸೇರಿದರೆ ಅವರ ಮೇಲೆ ಗುಂಡು ಹಾರಿಸಲು ಪೊಲೀಸರಿಗೆ ಅನುಮತಿ ನೀಡುವ ಶಾಸನ ಅದು.

ಅಸ್ಸಾಂ ವಿದ್ಯಾರ್ಥಿ ಗಣಪರಿಷತ್ತಿನ Peoples curgfew ಸರ್ಕಾರ ಹಾಕುವ ಕಫ್ರ್ಯೂ ಅಲ್ಲ. ಜನತೆ ಹಾಕುವ ಕಫ್ರ್ಯೂ. ಆಶ್ಚರ್ಯವೆಂದರೆ ಜನತೆ, ತಮ್ಮ ಮೇಲೆ ತಾವೇ ಹಾಕಿಕೊಳ್ಳುವ ಪ್ರತಿಬಂಧಕ. ಆ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ಜನ ಮನೆಬಿಟ್ಟು ಹೊರಬೀಳಲೇ ಇಲ್ಲ. ಚುನಾವಣೆ ಪ್ರಕ್ರಿಯೆಯಲ್ಲಿ ಅಸ್ಸಾಮಿನ ಜನ ಭಾಗವಹಿಸಲಿಲ್ಲ. ಶೇ.10ರಷ್ಟು ಮಾತ್ರ ಮತದಾನ ನಡೆಯಿತು. ಆದರೂ ಆಡಳಿತ ಪಕ್ಷ ಆ ಚುನಾವಣೆಯ ಫಲಿತಾಂಶವನ್ನು ಘೋಷಿಸಿತು.

ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬಂದಿದ್ದು, ಕಾಂಗ್ರೆಸ್ ಪಕ್ಷ ಸರ್ಕಾರವನ್ನು ರಚಿಸಿತು. ಆದರೆ ಆ ಸರ್ಕಾರ ಬಹಳ ದಿನ ಉಳಿಯಲಿಲ್ಲ. ರಾಷ್ಟ್ರಾಧ್ಯಕ್ಷರ ಆಳ್ವಿಕೆಯನ್ನು ಅಸ್ಸಾಮಿನ ಮೇಲೆ ಹೇರಲಾಯಿತು. ಆರು ತಿಂಗಳೊಳಗೆ ಮತ್ತೆ ಚುನಾವಣೆ ನಡೆದು ವಿದ್ಯಾರ್ಥಿ ಗಣಪರಿಷತ್ ಅಭೂತಪೂರ್ವ ಜಯಗಳಿಸಿ ಆಡಳಿತಕ್ಕೆ ಬಂತು. ಜನ ಮನಸ್ಸು ಮಾಡಿದರೆ ಜನರೇ ಕಫ್ರ್ಯೂ ಹಾಕುವುದು ಸಾಧ್ಯ. ಅದು ಯಶಸ್ವಿಯಾಗಿ ಜಾರಿಗೆ ಬರುವುದೂ ಸಾಧ್ಯ.

ಆದರೆ ಇಂದು ಜನತಾ ಕಫ್ರ್ಯೂ ಹೇರಿರುವುದು ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರ! ಇದೊಂದು ವಿರೋಧಾಭಾಸವೇ ಸರಿ. ಮೋದಿಗೆ ಶಾಸನಾನುಸಾರ ಸರ್ಕಾರದಿಂದ ಜಾರಿಯಾಗುವ ಕಫ್ರ್ಯೂ ಹಾಕುವ ಅಧಿಕಾರವಿದೆ. ಜನತಾ ಕಫ್ರ್ಯೂ ಹಾಕುವ ಅಧಿಕಾರವಿಲ್ಲ. ಅದು ಇರುವುದು ಜನರಿಗೆ ಮತ್ತು ಜನರನ್ನು ಪ್ರತಿನಿಧಿಸುವ ಪ್ರಭುತ್ವೇತರ ವೇದಿಕೆಗೆ. ಸರ್ಕಾರಿ ಕಾಯಿದೆ ಪ್ರಕಾರ ಕಫ್ರ್ಯೂ ಹೇರಿದರೆ ಜನ ಎದುರುಬಿದ್ದಾರೆಂದು ಮೋದಿಯವರು ಜನತಾ ಕಫ್ರ್ಯೂ ಹೇರಿದ್ದಾರೆ.

ಅಸ್ಸಾಂನಲ್ಲಿ ವಿದ್ಯಾರ್ಥಿ ಗಣಪರಿಷತ್ ಕಫ್ರ್ಯೂವನ್ನು ಜನತೆ ಮಾತ್ರ ಪಾಲನೆ ಮಾಡಿತು. ಸರ್ಕಾರ ಜನತಾ ಕಫ್ರ್ಯೂವನ್ನು ಮನ್ನಣೆ ಮಾಡಲಿಲ್ಲ. ಈಗ ಮೋದಿ ಸರ್ಕಾರ ಜನತಾ ಕಫ್ರ್ಯೂ ಹೇರಿ ಈ ಜನತಾ ಕಫ್ರ್ಯೂವನ್ನು ಸರ್ಕಾರವೂ ಪಾಲಿಸಬೇಕು, ಪ್ರಜೆಗಳೂ ಪಾಲಿಸಬೇಕು ಎಂದು ಫರ್ಮಾನ್ ನೀಡಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ?

ಏಕೆಂದರೆ ಸರ್ಕಾರಕ್ಕೆ ಜನತಾ ಕಫ್ರ್ಯೂ ಹಾಕಲು ಬರುವುದಿಲ್ಲ. ಅದು ಜನತೆಯ ಹಕ್ಕು. ಜನತೆಯ ಹಕ್ಕನ್ನು ಸರ್ಕಾರ ಕಿತ್ತುಕೊಂಡು ಆ ಹಕ್ಕನ್ನು ಸರ್ಕಾರ ಚಲಾಯಿಸುವುದು ವಿಪರ್ಯಾಸ.

ಕೊರೊನಾ ಭೂತ ನಮ್ಮನ್ನು ಕಾಡುತ್ತಿರುವಾಗ, ಜನರು ಯಾರೂ ಒಂದು ಭಾನುವಾರ ದಯವಿಟ್ಟು ಮನೆಬಿಟ್ಟು ಬರಬೇಡಿ ಎಂದು ಹೇಳುವ ಮತ್ತು ಅದಕ್ಕಾಗಿ ಸರ್ಕಾರಿ ಕಫ್ರ್ಯೂ ಹೇರುವ ಅಧಿಕಾರ ಮೋದಿ ಸರ್ಕಾರಕ್ಕೆ ಇದೆ. ಇದರ ಅವಶ್ಯಕತೆಯನ್ನು ಅರಿತು ಸರ್ಕಾರದೊಡನೆ ಜನ ಸಹಕರಿಸುವುದೂ ಅಗತ್ಯ. ಆದರೆ ಜನತೆಯ ಕಫ್ರ್ಯೂವನ್ನು ಮೋದಿ ಸರ್ಕಾರ ಜಾರಿ ಮಾಡಲು ಹೊರಟಿರುವುದು ವಿರೋಧಾಭಾಸ ಎಂದು ಹೇಳಬೇಕಾಗುತ್ತದೆ. ಇದರ ಬಗೆಗೆ ಮೋದಿಯವರು ಒಂದು ವಿವರಣೆ ನೀಡಬೇಕೆಂದು ಕೇಳಬಯಸುತ್ತೇನೆ. ಸರ್ಕಾರ ತನಗಿಲ್ಲದ ಅಧಿಕಾರ ಬಳಸಿಕೊಂಡು ಜನತಾ ಕಫ್ರ್ಯೂ ಹಾಕಿತು. ಜನ ಇದಕ್ಕೆ ಚೆನ್ನಾಗಿ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಜನಕ್ಕಿರುವ ಪ್ರಾಣಭಯ. ಜನತಾ ಕಫ್ರ್ಯೂವನ್ನು ಒಳ್ಳೇಕಾರಣಕ್ಕೆ ಈಗ ಮೋದಿ ಬಳಸಿದ್ದಾರೆ. ಜನ ಚೆನ್ನಾಗಿಯೂ ಸ್ಪಂದಿಸಿದ್ದಾರೆ. ಮೋದಿಯವರ ಸರ್ಕಾರ ಮುಂದೆ ಜನತಾ ಕಫ್ರ್ಯೂವನ್ನು ಸ್ವಾರ್ಥಕ್ಕೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಅದರ ಬಗೆಗೆ ಜನ ಎಚ್ಚರಿಕೆಯಿಂದಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...