Homeಮುಖಪುಟಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ಈ ಕಂಪನಿ ತಾಕೀತು ಮಾಡಿದೆ.

- Advertisement -
- Advertisement -

ಸಿದ್ಧ ಉಡುಪು ತಯಾರಿಕಾ (ಗಾರ್ಮೆಂಟ್ಸ್) ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು ಸರಕಾರದ ಆದೇಶವನ್ನೇ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್ ಆರೋಪಿಸಿದೆ.

ರಾಜ್ಯ ಸರ್ಕಾರವು ಸಾಂಕ್ರಾಮಿಕ ಕಾಯಿಲೆ ಕೊರೊನಾ ತಡೆಯುವ ಉದ್ದೇಶದಿಂದ ದಿನಾಂಕ 23.03.2020 ರಂದು ಆದೇಶ ಹೊರಡಿಸಿ ರಾಜ್ಯಾದ್ಯಂತ ಇರುವ ಎಲ್ಲಾ ಕಾರ್ಖಾನೆಗಳಿಗೆ 31.03.2020 ರವರೆಗೆ ಸಂಬಳ ಸಹಿತ ರಜೆ ಘೋಷಿಸಿದೆ. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನವನ್ನು ಕಡಿತಗೊಳಿಸಬಾರದೆಂದು ಮತ್ತು ಕಾರ್ಮಿಕರನ್ನು ಯಾವುದೇ ಕಾರಣಕ್ಕೆ ಕೆಲಸದಿಂದ ವಜಾ ಮಾಡಬಾರದೆಂದೂ ಆದೇಶಿಸಿದೆ.

ಆದರೆ ಸರಕಾರದ ಆದೇಶವನ್ನು ಕಡೆಗಣಿಸಿ, ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು, ಸ್ವಾರ್ಥ, ಸರ್ವಾಧಿಕಾರಿ ಧೋರಣೆಯನ್ನು ಮುಂದುವರಿಸಿ ದಿನಾಂಕ 28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ತಾಕೀತು ಮಾಡಿದೆ.

ಈ ಮೊದಲು ಇದೇ ಕಂಪನಿಯು ಮಾರ್ಚ್‌ 19ರಂದು ಮಂಡ್ಯದ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ರಜೆ ಘೋಷಿಸಿದ್ದನ್ನು ವಿರೋಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹಿಂಪಡೆಯುವಂತೆ ಒತ್ತಾಯಿಸಿತ್ತು.

ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗದ ಈ ನಡೆ, ಕಾರ್ಮಿಕರ ಆರೋಗ್ಯದ ಬಗೆಗಿನ ನಿಷ್ಕಾಳಜಿ, ಬೇಜವಾಬ್ದಾರಿತನ ಮತ್ತು ಅತಿ ಲಾಭದ ದುರಾಸೆಯನ್ನಷ್ಟೇ ತೋರಿಸುತ್ತದೆ.

ಕಾರ್ಮಿಕರ ಹಿತ ಕಾಪಾಡಬೇಕಾದ ಸದರಿ ಕಂಪನಿಗೆ ತನ್ನ ಲಾಭವೇ ಮುಖ್ಯ ಆಗಿದೆಯೇ ಹೊರತು ಕಾರ್ಮಿಕರ ಆರೋಗ್ಯ ಮತ್ತು ಜೀವದ ಬಗ್ಗೆ ಕಿಂಚಿತ್ತು ಗೌರವ ಇಲ್ಲದಿರುವುದನ್ನು ಸೂಚಿಸುತ್ತದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮುರವರು ಕಿಡಿಕಾರಿದ್ದಾರೆ.

ಸರಕಾರದ ಆದೇಶವನ್ನೇ ಧಿಕ್ಕರಿಸಿ, ಬಡ ಕಾರ್ಮಿಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ವಿರುದ್ಧ ಸಂಬಂಧಪಟ್ಟವರು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಕಾರ್ಮಿಕರ ಹಿತ ಕಾಪಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

    • Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...