Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...