Homeಮುಖಪುಟಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

- Advertisement -
- Advertisement -

ಬಿದಿಕಲ್ಲು ಕಾರ ಕಾವಲಿಯಂತೆ ರಣಗುಡುತ್ತಿದ್ದವು. ಸರಿಯಾಗಿ ಒಂದು ಶತಮಾನದ ಹಿಂದಕ್ಕೆ ಊರು ನೆಗೆದಿತ್ತು. ಆಗಲೂ ಅಷ್ಟೇ, ಇಡೀ ಊರು ಕೆರೆಯ ಸಮೀಪಕ್ಕೆ ಸ್ಥಳಾಂತರಗೊಂಡು, ಊರು ಬಿಕೋ ಎನ್ನುತ್ತಿತ್ತು. ಅದಕ್ಕೆ ಕಾರಣ ಮಾರಿ ಭೀತಿ ಹುಟ್ಟಿಸಿದ್ದಳು. ಕೊರೊನಾ ಗುಂಗಿನಲ್ಲೇ ವಾಟಿಸ್ಸೆ ಜುಮ್ಮಿ ಮನೆಗೆ ಬಂದಾಗ, ಉಗ್ರಿಯೂ ಅಲ್ಲಿದ್ದ.

“ಯಕ್ಕಾ, ಯಕ್ಕವ್ ಯಂಗಿದ್ದಯಕ್ಕಾ.”

“ಅಲ್ಲೆ ನಿಂತಗಂಡು ಮಾತಾಡ್ಳ.”

“ಇದೇನಕ್ಕ ಹಿಂಗಂತಿ ಮತ್ತೆ ಉಗ್ರಿ ವಳಿಕೆ ಬಂದವುನೆ.”

“ಅವುನು ಕೈಕಾಲು ತೊಳಕಂಡು ಬಂದವುನೆ.”

“ಕೊಡು ಮತ್ತೆ ನೀರ.”

“ಅಲ್ಲೆ ಅವೆ ತ್ವಳಕಂಡು ಬಾರ್ಲ.”

“ಓಹೋ, ಯಲ್ಲಾ ಕಲ್ಚರ್ರು ರಿಟನ್ ಆಯ್ತಲ್ಲಪ್ಪಾ ಎಂದುಕೊಂಡ ವಾಟಿಸ್ಸೆ ತಾತ್ಸಾರದಿಂದ ನೀರು ಚುಟುಕಿಸಿಕೊಂಡು ಬಂದ.”

“ಅದೇನ್ಲ ಗ್ವಣಗತಿದ್ಯಲ್ಲ” ಎಂದಳು ಜುಮ್ಮಿ.

“ಅದೇ ಕಣಕ್ಕ ಹಿಂದ್ಲ ಕಾಲ್ದಲ್ಲಿ ಬಂದೋರ್ನ ಬಾಗಲಲ್ಲಿ ನಿಲ್ಲಿಸಿ, ನೀರುಕೊಟ್ಟು ಕೈಕಾಲು ಮಖ ತ್ವಳಕಂಡ ಮ್ಯಾಲೆ ವಳಿಕ್ಕರದು, ಚ್ಯಾಪೆ ಹಾಸಿ ಕುಂಡ್ರುಸಿ, ಕ್ವಾಣೆ ಬಾಗಲಲ್ಲಿ ನಿಂತಗಂಡು ಮಾತಾಡರು, ಅಂದ. ಆಗ ಉಗ್ರಿ,

“ಅಷ್ಟೇ ಅಲ್ಲ ಕಣಯ್ಯ, ಕೈಕಾಲು ತ್ವಳಿಯಕ್ಕೆ ನೀರು ಕೊಡೊರು ಕೂಡ ಸೆರಗಲ್ಲಿ ಚೊಂಬಿಡಕಂಡು, ಅದರಲ್ಲೇ ಕೈಗೆ ನೀರಾಯ್ಕಂಡು, ತ್ವಳಕಂಡು ನಂತರ ನಿನಿಗೆ ನೀರು ಕೊಡೊರು” ಎಂದ.

“ನಮ್ಮತ್ತೆ ನಮ್ಮವ್ವ ಯಲ್ಲ ಕಡಿಗಂಟ ಅಂಗೆ ಮಾಡಿದ್ರು ಕಂಡ್ಳ.”

“ನಿಜ ಕಣಕ್ಕ, ನಾನು ನೋಡಿದ್ದೆ. ಇದೇನು ಮಡಿ ಮೈಲಿಗೆ ಜನವಪ್ಪ ಅನ್ಸಿತ್ತು. ಇವತ್ತು ನೋಡಿದ್ರೆ, ನಮ್ಮ ಹಳೆ ಜನ ಇವುರಿಗಿಂತ ಎಚ್ಚರಾಗಿದ್ದುದ್ದು ಯಂಗೆ, ಅನ್ನಸ್ತದೆ.”

“ಊ ಕಣೋ ವಾಟಿಸ್ಸೆ, ಉಣ್ಣುವಾಗ ಯಾರಾರ ಬಂದ್ರೆ ಕಾಲ್ದೂಳಾಯ್ತದೆ ಅಲ್ಲೇ ಇರಿ ಅಂತಿದ್ರು. ಅವುನ್ಯಂಥಾ ದ್ವಡ್ಡ ಮನುಸ್ನೆ ಆಗ್ಲಿ, ಮುಚ್ಕಂಡು ಕುಂತಿದ್ದು ಅಮ್ಯಾಲೆ ವಳಿಕೆ ಬರೋನು.”

“ನಾನು ನೋಡಿದ್ದೆ ಕಣೋ ಉಗ್ರಿ, ಆಗೊಂದು ಸತಿ ಮಂಡೇವುದತ್ರ ಅಳ್ಳಕ್ಯರಿಗೋಗಿದ್ದಾಗ ದಳ್ಳಾಳಿ ತಮ್ಮಣ್ಣಗೌಡನ ಮನೆ ಉಣತಾಯಿದ್ದೊ, ಆಗ ತಮ್ಮಣ್ಣಗೌಡ ಬಂದ ಅವುನೆಂಡ್ತಿ ‘ಅಯ್ಯವ್ ಅಲ್ಲೆ ಇರು ವಳಿಕೆ ಬರಬ್ಯಾಡ ಉಣತಾ ಅವುರೆ’ ಅಂದ್ಲು ತಮ್ಮಣ್ಣಗೌಡ ಉಸುರು ಬುಡದಂಗೆ ಅಲ್ಲೇ ಕುತಗಂಡ ಅವ್ಯಲ್ಲ ಇವತ್ತು ಜ್ಞಾಪುಕಕ್ಕೆ ಬತ್ತಾ ಅವೆ” ಎಂದು ವಾಟಿಸ್ಸೆ ಹೇಳುವಾಗ ಜುಮ್ಮಿ ಕೆಮ್ಮಿದಳು.

“ಇದ್ಯಾಕಕ್ಕ ಕೆಮ್ತಿ.”

“ಸುಮ್ಮನೆ ಕಂಡ್ಳ.”

“ಸುಮ್ಮನೆ ಕೆಮ್ಮೊ ಸಿಚುಯೇಷನ್ ಅಲ್ಲ ಇದು. ಯಾವುದ್ಕು ತೋರಿಸಿಗಂಡುಬುಡದು ವಳ್ಳೇದು.”

“ಲೈ ಹಿಟ್ಲಕ್ಕ ಕರಾನ ಬರದಕ್ಕಿಂತ ಮದ್ಲಿಂದ ಕೆಮ್ಮುತಿದ್ದೆ ಕಂಡ್ಳ ಅದೊಂತರ ವಣಕೆಮ್ಮುಗ.”

“ಅಯ್ಯೋ ಚೆಕಪ್ ಮಾಡಸಕ್ಕೊದ್ರೆ ಜುಮ್ಮಿ ಬುಟ್ಟರೇನೊ ವಾಟಿಸ್ಸೆ. ಅಲ್ಲೆ ಕುಂಡ್ರಿಸಿಗತ್ತರೆ, ಜ್ವತಿಗೆ ಅವುಳ ಮನೆಲಿದ್ದ ನಮ್ಮನ್ನೂ ಅಲ್ಲೆ ಇರಿ ನಿಮಿಗೂ ಚೆಕಪ್ ಮಾಡ್ತಿವಿ ಅಂತರೆ ಇದು ಬೇರೆ ನಿಂಗೆ.”

“ಅಂಗಲ್ಲ ಕಣೊ ಉಗ್ರಿ, ಈ ನಮ್ಮ ಜುಮ್ಮಕ್ಕ ಪಂಚಾತಿ ಮಂಬ್ರು ಕಾಂಟ್ಯಾಕ್ಟವುಳೆ, ಅದ್ರಿಂದ ಸಣ್ಣ ಕೆಮ್ಮುಗೂ ನೆಗ್ಲೆಟ್ ಮಾಡಂಗಿಲ್ಲ ಚೆಕಪ್ ಮಾಡುಸಬೇಕು.”

“ಇವತ್ತು ದೇಶ ಇಂಗಾಗಿರದೆ ನಿನ್ನಂಥೋನಿಂದ ಕಣೊ. ಆ ಟಿವಿ ಮುಂಡೆಮಕ್ಕಳಿಗೆ ಮದ್ಲು ಕೊರೊನ ಬಂದ್ರು ನೀಟಾಗ್ಯದೆ.”

“ಅವುರ ಬಂಬಾಯಿ ನಿಲ್ಲುಸಬೇಕಾದ್ರೆ, ಯಾವನಾರ ಕೊರೊನಾ ರೋಗಿಯ ಕಳಿಸಿ, ಒಂದು ರವುಂಡ್ ವಡಕಂಡು ಬಾ ಅನ್ನಬೇಕು ಕಣೊ. ಆಗ ಆ ನನ್ನ ಮಕ್ಕಳ ಬಾಯಿ ಬಂದಾಯ್ತದೆ.”

“ಏ ಪಾಪ ಅವುರ ವಟ್ಟಿಪಾಡ್ಯಂಗದೆ. ಅಂದ್ರೆ ಕೊರೊನಾಕ್ಕೂ ಹೆದರದಂಗಾಗ್ಯವುರೆ, ಬಟ್ಟೆ ಕಟಿಗಂಡೆ ಮಾತಾಡ್ತರೆ, ನಿಮಸಕ್ಕೊಂದು ಸತಿ ಮೋದಿ ಪೋಟಾ ಹಾಕಿ ಹೆದರಬ್ಯಾಡಿ ಪ್ರಧಾನಿ ಅವುನೆ ಅಂತರೆ, ಅವುನೇನು ಮಾಡ್ತನೆ ಅಂತ ಅಂಗಂತವೆ.”

“ಅವುರೇನು ಮಾಡಲ್ಲ, ಇಂತವುಕ್ಯಲ್ಲ ಹೆದರದೂ ಇಲ್ಲ ಅವುನು. ಗುಜರಾತಲ್ಲಿ ತಾನೇ ಆಜ್ಞೆ ಮಾಡಿ ಸಾವುರಾರು ಜನ ಸಾಬರ ಕೊಲ್ಲಿಸಿದೋನು, ಇನ್ನ ಕೊರೊನಾದಿಂದ ಜನ ಸತ್ರೆ ಹೆದರತನೇನೊ.”

“ಮತ್ತೆ ಜನಗಳಿಗೆ ಭಾರಿ ಎಚ್ಚರಿಕೆ ಹೇಳ್ತ ಕುಂತವುನೆ.”

“ಹೇಳ್ತನೆ, ಅವುರು ಬಳಸಿಗಳದ್ಯಲ್ಲ ಇಂತ ಸಿಚುಯೇಶನ್ನೇ ಅಲವೆ. ಜನಕ್ಕೆ ಆಗಬಾರದ್ದಾಬೇಕು. ಅಲ್ಲಿ ಆರೆಸ್ಸಿಸ್ಸಿನೋರು ಕಾಣಿಸಿಗಬೇಕು, ಚಿತ್ರಾನ್ನ ಮೊಸರನ್ನ ಹಂಚಬೇಕು, ನಮ್ಮ ಬುಟ್ರೆ ದೇಶಭಕ್ತರು ಇಲವೇಯಿಲ್ಲ ಅನ್ನಬೇಕು. ಇದರಲ್ಲೇ ಬಂದೋರವರು. ಇನ್ನ ಕೊರೊನಾ ಬುಡ್ತರೆನೋ. ನಮ್ಮ ಅವುತಾರ ಪುರುಸ ಮೋದಿ ಯದೆಕೊಟ್ಟು ನಿಂತಗಂಡು ಕೊರೊನಾ ಓಡಿಸಿದಾ ಅಂತ ಕೂಗತ್ತ ತಿರಗ್ತವೆ.”

“ಅದೇನೊ ಸಾಬರಮ್ಯಾಲೆ ಕಾನೂನು ತಂದ್ರಿದ್ರಂತಲ್ಲ ಏನಾಯಿತ್ಲ” ಎಂದಳು ಜುಮ್ಮಿ.

“ಅದು ಸಿಎಎ ಅಂತ ಕಣಕ್ಕ. ಸಾಬರನ್ಯಲ್ಲ ಸೊಸಿ ಅತ್ತಗೆ ಯಸಿಯೋ ಕಾನೂನು ತಂದಿದ್ರು. ಸಾಬರು ಎಲ್ಲ ಸೇರಿಕಂಡು ಅದ್ಯಂಗೆ ನಮ್ಮ ಬ್ಯಾರೆ ಮಾಡ್ತಿರಿ ನೋಡನ ಅಂತ ಎದ್ದು ನಿಂತಗಂಡ್ರು. ಅಷ್ಟರಲ್ಲಿ ಕೊರೊನಾ ಬಂದು ಯಲ್ಲಾರ್ನು ಅಮರಿಕತ್ತಾ ಅದೆ ಕಣಕ್ಕ.’’

“ಯಲ್ಲಾರ್ನು ಅಂದ್ರೆ ಚಪ್ಪನ್ನೈವತ್ತಾರು ದೇಸನೂ ಆವರಿಸಿಗಂಡದೆ ಕಣೆ. ಇಟಲಿದೇಸಕೆ ಜಾಸ್ತಿ ಅಮರಿಕಂಡದೆ.”

“ಸೋನಿಯಾಗಾಂಧಿ ಆ ಊರೊಳೆ ಅದ್ರವೆ.”

“ಆ ಊರೊಳೆಯ, ಅವುಳೇನಾರ ಅಲ್ಲಿಗೋಗಿ ಬಂದಿದ್ರೆ ಅವುಳೆ ಕೊರೊನಾ ತಂದ್ಲು ಅಂತ ಬಿಜೆಪಿಗಳು ಬಬ್ಬೆ ಹೊಡಿಯವು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...