Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...