Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...