Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...