Homeಮುಖಪುಟಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ - ಆತಂಕದಲ್ಲಿ ಪೌರಕಾರ್ಮಿಕರು

ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ. 

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ನಡುವೆಯೇ ಕೊರೊನ ವೈರಸ್ ನಿಯಂತ್ರಣಕ್ಕೆ ಹಲವು ಕೈಗಳು ದುಡಿಯುತ್ತಿವೆ. ಅವರಲ್ಲಿ ನಗರದ ಸ್ವಚ್ಚತೆ ಕಾಪಾಡುತ್ತಿರುವ ಪೌರಕಾರ್ಮಿಕರು ಪಾತ್ರ ಶ್ಲಾಘನೀಯವಾದುದ್ದು. ಆದರೆ ಅವರು ಯಾವುದೇ ಸುರಕ್ಷ ಸಲಕರಣೆಗಳಲ್ಲಿದೆ ದುಡಿಯುತ್ತಿದ್ದಾರೆ. ನಗರದ ಹೊಲಸನ್ನು ಶುಚಿಗೊಳಿಸುವ ಈ ಕೈಗಳಿಗೆ ಒಂದು ಗ್ಲೌಸ್ ಇಲ್ಲ. ಮುಖ ಮುಚ್ಚಿಕೊಳ್ಳಲು ಮಾಸ್ಕ್ ಕೊಟ್ಟಿಲ್ಲ. ಆದರೂ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಮಾಸ್ಕ್ ಗಳನ್ನು ಖರೀದಿಸಿದ್ದರೂ ಪೌರಕಾರ್ಮಿಕರಿಗೆ ವಿತರಣೆ ಮಾಡಿಲ್ಲ ಎಂದು ತುಮಕೂರಿನಲ್ಲಿ ದೂರು ಕೇಳಿಬಂದಿದೆ.

ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ದೇಶ ಲಾಕ್ ಡೌನ್ ಆಗಿದೆ. ಕೊರೊನ ವೈರಸ್ ಹರಡಿರುವುದರ ಸಂಕೇತ ಇದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನೇ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ತುಮಕೂರಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ಆರೋಗ್ಯದ ಬಗ್ಗೆ ಗುತ್ತಿಗೆದಾರರು ಮತ್ತು ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಪೌರಕಾರ್ಮಿಕರು, ವಾಟರ್ ಮನ್‌ಗಳು, ಕಸಸಂಗ್ರಹ ಗಾಡಿ ಕಾರ್ಮಿಕರು ಬರಿಗೈಯಲ್ಲೇ ಕಸ ತೆಗೆದುಕೊಳ್ಳುವಂತಹ ಸ್ಥಿತಿ ಇದ್ದರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರೇ ಇಲ್ಲವಾಗಿದೆ.

ಖಾಯಂ, ನೇರಪಾವತಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ  500 ಪೌರಕಾರ್ಮಿಕರು ಬೆಳಗಿನಿಂದ ಸಂಜೆ ತನಕ ದುಡಿಯುತ್ತಾರೆ. ಕೆಲಸ ಮಾಡಿ ನೇರ ಮನೆಗೆ ಹೋಗುತ್ತಾರೆ. ಹೀಗೆ ಮನೆಗೆ ಹೋಗುವುದರಿಂದ ರೋಗ ಕೂಡ ಅವರೊಂದಿಗೆ ಮನೆಯವರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಮುನ್ನೆಚ್ಚರಿಕೆಯ ಸಾಧನಗಳನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಸ್ನಾನ ಮಾಡಿಕೊಂಡೇ ಮನೆಗೆ ಹೋಗುವಂತಹ ವಾತಾವರಣ ಕಲ್ಪಿಸಬೇಕಿದೆ. ನಗರದಲ್ಲಿ ಇರುವ ಎರಡು ಸ್ನಾನ ಗೃಹಗಳು ಇದ್ದರೂ ಅವುಗಳಿಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ಎಂದರೆ ಏನು ಮಾಡೋದು?

ನಗರದ ಬನಶಂಕರಿ ಪಂಪ್ ಹೌಸ್ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾರ್ಮಿಕರಿಗಾಗಿ ಸ್ನಾನಗೃಹ ನಿರ್ಮಾಣ ಮಾಡಿದೆ. ಶೆಟ್ಟಿಹಳ್ಳಿಯ ಅಂಗನವಾಡಿ ಕೇಂದ್ರದ ಅವರಣದಲ್ಲಿ ಒಂದು ಸ್ನಾನಗೃಹವಿದೆ ಇವೆರಡೂ ಸ್ನಾನಗೃಹಗಳ ಬಳಕೆಯಾಗುತ್ತಿಲ್ಲ. ಒಂದು ನಗರಕ್ಕೆ ನಾಲ್ಕು ಕಿಲೋ ಮೀಟರ್ ದೂರದಲ್ಲಿದ್ದರೆ, ಇನ್ನೊಂದು ಮಹಾನಗರ ಪಾಲಿಕೆಯಿಂದ ಒಂದು ಕಿಲೋಮೀಟರ್ ದೂರದಲ್ಲಿದೆ. ಬನಶಂಕರಿಯಲ್ಲಿರುವ ಸ್ನಾನಗೃಹ ಮಧ್ಯದಲ್ಲಿದ್ದರು ಯಾರೂ ಅದನ್ನು ಬಳಸುತ್ತಿಲ್ಲ. ಶೆಟ್ಟಿಹಳ್ಳಿಯಲ್ಲಿರುವ ಸ್ನಾನಗೃಹ ಯಾರಿಗೆ ಕಟ್ಟಿದ್ದಾರೆಂಬುದೇ ಅರ್ಥವಾಗುತ್ತಿಲ್ಲ. ಪೌರಕಾರ್ಮಿಕರಿಗೆ ಅವುಗಳನ್ನು ಬಳಸಿಕೊಳ್ಳುವಂತೆ ಯಾರೂ ಅರಿವು ಮೂಡಿಸಿಲ್ಲ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪೌರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ “ಪೌರ ಕಾರ್ಮಿಕರು, ವಾಟರ್ ಮ್ಯಾನ್‍ಗಳು, ಕಸ ಸಂಗ್ರಹ ಗಾಡಿ ಕಾರ್ಮಿಕರು ಅಗತ್ಯ ಸೇವೆಗಳಡಿ ಕೆಲಸ ಮಾಡುತ್ತಿದ್ದು ಯೋಗ್ಯ ಗುಣಮಟ್ಟದ ಸುರಕ್ಷತಾ ಸಲಕರಣೆಗಳನ್ನು ನೀಡಿಲ್ಲ. ಲಾಕ್‍ಡೌನ್ ನಿಂದಾಗಿ ಸ್ವಚ್ಛತೆಯ ಸಂಗ್ರಹ, ಯುಜಿಡಿ, ನೀರು ಸರಬರಾಜು ಕೆಲಸಗಳಲ್ಲಿ ಇರುವ ಪೌರಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ಕೊಡುತ್ತಿಲ್ಲ. ಇದರಿಂದ ಅವರು ಉಪವಾಸವೇ ಇರಬೇಕಾಗುತ್ತದೆ.  ಎಲ್ಲಾ ಕಾರ್ಮಿಕರು ಮನೆಗಳಿಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ಸ್ನಾನ ಮಾಡಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಅವರ ಅವಲಂಬಿತರು ತಂದೆ-ತಾಯಿ, ಹೆಂಡತಿ-ಮಕ್ಕಳಿಗೆ ಸೋಂಕು ಹರಡದಂತೆ ತಡೆಯಬಹುದು. ಆದರೆ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ  ಕ್ರಮ ಕೈಗೊಂಡಿಲ್ಲ” ಎಂದೂ ದೂರಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಮಿಕರನ್ನು ಓಡಾಡದಂತೆ ಪ್ರಶ್ನಿಸುತ್ತಿದ್ದಾರೆ. ಇವರ ರಕ್ಷಣೆಗೆ ಎಲ್ಲ ಕಾರ್ಮಿಕರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು. ಎಲ್ಲ ಕಾರ್ಮಿಕರಿಗೆ ವಿಶೇಷ ಭತ್ಯೆ ಮತ್ತು ಒಂದು ತಿಂಗಳ ಸಂಬಳವನ್ನು ಮುಂಗಡವಾಗಿ ತಕ್ಷಣವೇ ನೀಡಬೇಕು. ಬೇಸಿಗೆಯ ಬಿಸಿಲು ಹೆಚ್ಚಿದ್ದು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲು ಮತ್ತು ಶಿಫ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂಬುದು ಪೌರಕಾರ್ಮಿಕರ ಒತ್ತಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....