Homeಮುಖಪುಟಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ...

ಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ…

- Advertisement -
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ತುಮಕೂರಿನಲ್ಲಿ 200ಕ್ಕೂ ಹೆಚ್ಚು ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಲಾಕ್‌ಡೌನ್‌ ಆಗಿದೆ. ಸಚಿವರು ಇತ್ತ ಗಮನಹರಿಸಿದಂತೆ ಕಾಣುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಸಭೆ ನಡೆಸುತ್ತಿದ್ದಾರೆಯೇ ಹೊರತು ಸಚಿವರು ಸಭೆಗಳಿಗೆ ಹಾಜರಾಗಿ ಅಧಿಕಾರಿಗಳಲ್ಲಿ ಉತ್ಸಾಹ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 63 ವೆಂಟಿಲೇಟರ್ ಗಳಿವೆ. ಈ ವೆಂಟಿಲೇಟರ್ ಬಳಸಿಕೊಳ್ಳುವ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಆರೋಗ್ಯ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಇದುವರೆಗೂ ಅಂತಹ ಯಾವುದೇ ಬೆಳೆವಣಿಗೆಗಳೂ ನಡೆದಿಲ್ಲ. ಜೆ.ಸಿ.ಮಾಧುಸ್ವಾಮಿ ಅವರು ಕೊರೊನ ವೈರಸ್ ನಿಯಂತ್ರಣದ ಬಗ್ಗೆ ಒಂದು ಸಭೆಯನ್ನು ಮಾಡಿಲ್ಲ. ಆದರೆ ಜಿಲ್ಲಾಧಿಕಾರಿಗಳು ನಿರಂತರ ಸಭೆಗಳನ್ನು ಮಾಡುತ್ತ ಪ್ರಸಕ್ತ ಸನ್ನಿವೇಶದ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಇರುವ ಎರಡು ವೆಂಟಿಲೇಟರ್‌ಗಳು ಬೇರೆ ರೋಗಿಗಳನ್ನು ಇಡಲು ಅವಕಾಶವಿದೆ. ಬೇರೆ ಆಸ್ಪತ್ರೆಗಳಲ್ಲೂ ಸಾಮಾನ್ಯ ರೋಗಿಗಳು ಬಂದರೆ ಮಾತ್ರ ಇರಿಸಲು ವೆಂಟಿಲೇಟರ್‌ಗಳು ಇವೆ. ವಿಶೇಷವಾಗಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್‌ಗಳ ಕೊರತೆ ಇದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿ ಕ್ರಮಕೈಗೊಂಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ಜಿಲ್ಲೆಯಾದ್ಯಂತ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ 63 ವೆಂಟಿಲೇಟರ್್‌ಗಳು ಕೂಡ ಖಾಸಗಿ ನರ್ಸಿಂಗ್ ಹೋಂಗಳಲ್ಲಿಯೇ ಇವೆ. ತುರ್ತು ಸಂದರ್ಭದಲ್ಲಿ ಅವಗಳನ್ನು ರೋಗಿಗಳಿಗಾಗಿ ಬಳಸಿಕೊಳ್ಳಲು ಮುಂದಾಗಬೇಕು. ಇದುವೆರೆಗೆ ಸಿದ್ದಗಂಗಾ ಆಸ್ಪತ್ರೆ ಮತ್ತು ಸಿದ್ದಾರ್ಥ ಮತ್ತು ಶ್ರೀದೇವಿ ವೈದ್ಯಕೀಯ ಕಾಲೇಜುಗಳಲ್ಲಿ ಕೆಲವು ಹಾಸಿಗೆಗಳನ್ನು ಮಾತ್ರ ಕೊರೊನಾ ಸೋಂಕು ಪೀಡಿತರನ್ನು ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಸರಿಯಾದ ಕ್ರಮ. ಆದರೆ ವೆಂಟಿಲೇಟರ್‌ಗಳ ಕೊರತೆ ಇದ್ದು ಜಿಲ್ಲೆಯ ಜನರ ಆರೋಗ್ಯದ ಕುರಿತು ಸಚಿವ ಮಾಧುಸ್ವಾಮಿ ಹೆಚ್ಚು ಕಾಳಜಿ ವಹಿಸಬೇಕಿತ್ತು. ಸಚಿವರು ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತರಾಗಿದ್ದಾರೆಯೇ ಹೊರತು ಜಿಲ್ಲೆಯ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಎಂದು ಜನತೆ ಪ್ರಶ್ನಿಸತೊಡಗಿದ್ದಾರೆ.
ಖಾಸಗಿ ನರ್ಸಿಂಗ್ ಹೋಂನಲ್ಲಿ ಕೊರೊನಾ ಸೋಂಕಿತರನ್ನು ಇಟ್ಟುಕೊಳ್ಳುವುದು ಅಪರೂಪ. ಯಾಕೆಂದರೆ ಎಲ್ಲವನ್ನೂ ಲಾಭದ ದೃಷ್ಟಿಯಿಂದಲೇ ನೋಡುವ ನರ್ಸಿಂಗ್ ಹೋಂಗಳು ಅಷ್ಟು ಸುಲಭವಾಗಿ ವೆಂಟಿಲೇಟರ್ ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಕೊರೊನಾ ಸೋಂಕಿತರನ್ನು ನರ್ಸಿಂಗ್ ಹೋಂನಲ್ಲಿಟ್ಟರೆ ಅಲ್ಲಿಗೆ ಬರುವ ರೋಗಿಗಳು ಬರದಂತಾಗುತ್ತಾರೆ ಎಂಬ ಮಾತುಗಳು ಇವೆ. ಜೊತೆಗೆ ನರ್ಸಿಂಗ್ ಹೋಂಗಳಲ್ಲಿ ಒಂದು ದಿನ ವೆಂಟಿಲೇಟರ್್‌ನಲ್ಲಿಡಲು ಕನಿಷ್ಠ 10 ರಿಂದ 20 ಸಾವಿರ ರೂಪಾಯಿ ನಿಗದಿ ಮಾಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ಸಚಿವರು ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕಿತ್ತು.
ತುಮಕೂರು ಜಿಲ್ಲೆಯ ಮೂಲಕ ರಾಜ್ಯದ 23 ಜಿಲ್ಲೆಗಳಿಗೆ ಜನರು ಪ್ರಯಾಣಿಸುತ್ತಾರೆ. ಇದು ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂಬ ಮಾತೂ ಇದೆ.. ಜೊತೆಗೆ ತುಮಕೂರು ನಗರದ ಬಹುತೇಕರು ಬೆಂಗಳೂರು ನಗರವನ್ನು ಕೆಲಸಕ್ಕಾಗಿ ಆಶ್ರಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಂಡು ಬಂದಿದ್ದು, ಅಲ್ಲಿನ ಸಂಪರ್ಕ ಹೊಂದಿರುವ ತುಮಕೂರು ನಗರದ ಜನತೆಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲಿದ್ದ ಜನರು ತುಮಕೂರಿಗೆ ಆಗಮಿಸಿದ್ದಾರೆ ಮತ್ತು ವಿದೇಶಗಳಿಂದಲೂ ತುಮಕೂರಿಗೆ ಬಂದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಸಮನ್ವಯತೆ ಸಾಧಿಸುವಂತಹ ಕೆಲಸ ಮಾಡಬೇಕಿತ್ತು. ಅಂತಹ ಕೆಲಸ ಇದುವರೆಗೂ ನಡೆದಿಲ್ಲ.
ಎಲ್ಲವನ್ನೂ ಅಧಿಕಾರಿಗಳೇ ನಿಭಾಯಿಸುತ್ತಿದ್ದಾರೆ. ಕೊರೊನಾ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಯ ವಹಿಸುತ್ತಿಲ್ಲ. ಈಗಾಗಲೇ ಜಿಲ್ಲಾಸ್ಪತ್ರೆಗೆ 10 ಮಂದಿ ಶಂಕಿತ ಕೊರೊನ ವೈರಸ್ ಸೋಂಕಿತರು ದಾಖಲಾಗಿದ್ದು ಅವರ ರಕ್ತ ಮತ್ತು ಕಫಾ ಮಾದರಿಗಳನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ. ಇನ್ನು ವರದಿ ಬಂದಿಲ್ಲ. ಈ ವರದಿ ಬರುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೊರೊನಾ ಹರಡದಂತೆ ಕ್ರಮ ವಹಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...