Homeಎಕಾನಮಿ3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

3 ತಿಂಗಳ ಸಾಲ ಮರುಪಾವತಿಗೆ ವಿನಾಯಿತಿ : ರೆಪೋ ದರದ ಮೂಲಾಂಕ ಇಳಿಕೆ ಮಾಡಿದ RBI

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಉದ್ಭವಿಸುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರದಲ್ಲಿ ಭಾರೀ ಮಟ್ಟದ ಕಡಿತಕ್ಕೆ ಮುಂದಾಗಿದೆ. ಅಲ್ಲದೆ, ಬ್ಯಾಂಕ್ ಸಾಲದ ಕಂತುಗಳಿಗೆ (ಇಎಂಐ) 3 ತಿಂಗಳ ವಿನಾಯಿತಿ ಘೋಷಿಸಿದೆ.

ಆರ್‌ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಆರ್‌ಬಿಐ ಮೂರನೇ ಬಾರಿಗೆ ರೆಪೋ ದರ ಇಳಿಕೆ ಮಾಡಿದೆ.

ಸಿಆರ್‌ಆರ್‌ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್‌ಆರ್‌ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ಆರ್‌ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

3 ತಿಂಗಳು ಇಎಂಐಗೆ ವಿನಾಯಿತಿ

ಆರ್‌ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ.

ಏನಿದು ರೆಪೋ ದರ?

ರೆಪೋ ದರ ಎಂಬುದು ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ಅಂದರೆ ವಾಣಿಜ್ಯ ಬ್ಯಾಂಕುಗಳು ಹಣದ ಕೊರತೆ ಎದುರಿಸಿದರೆ ಆರ್‌ಬಿಐನಿಂದ ಸಾಲ ಪಡೆದುಕೊಳ್ಳುತ್ತವೆ. ಆ ಹಣಕ್ಕೆ ನಿಗದಿಯಾಗಿರುವ ಬಡ್ಡಿ ದರವೇ ರೆಪೋ ರೇಟ್. ಈಗ ಅದು ಶೇ. 4.4 ಕ್ಕೆ ಇಳಿದಿದೆ.

ರಿವರ್ಸ್ ರೆಪೋ ದರ:

ಇದು ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿ ಹಣದ ಮೇಲೆ ನೀಡಲಾಗುವ ಬಡ್ಡಿ ದರವಾಗಿದೆ. ಅಂದರೆ ಆರ್‌ಬಿಐ ಈ ಠೇವಣಿ ಮೇಲೆ ಇಂತಿಷ್ಟು ಬಡ್ಡಿ ನೀಡುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...